Homeಸಿನಿಮಾಸಿನಿ ಸುದ್ದಿಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

ಜಯನಗರದ ಅಖಾಡಕ್ಕೆ ಲೋಟಸ್ ತಾರಕ್ಕ?

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ಬಿ.ಎನ್.ವಿಜಯ ಕುಮಾರ್

ಕರ್ನಾಟಕದ ಮಹಾಸಮರ ಈಗಷ್ಟೇ ಮುಗಿದು ಪೊಲಿಟಿಕಲ್ ನಾಟಕಗಳು ಒಂದೊಂದಾಗಿ ಪರದೆ ಎತ್ತಿಕೊಳ್ಳುತ್ತಿವೆ. ಜನರೆಲ್ಲ ಒಂದು ಕಣ್ಣು ಕುಮಾರಣ್ಣನತ್ತ, ಮತ್ತೊಂದು ಕಣ್ಣನ್ನು ಯಡ್ಯೂರಪ್ಪನತ್ತ ಹಿಗ್ಗಲಿಸಿ ಕೂತಿರುವ ಹೊತ್ತಲ್ಲೇ ಇತ್ತ ಜಯನಗರದಿಂದ ತಾಜಾತಾಜಾ ತಾರಕ್ಕನ ಸುದ್ದಿಯೊಂದು ಹೊರಬಿದ್ದಿದೆ. ಎಲೆಕ್ಷನ್ ಇನ್ನೇನು ಕೆಲ ದಿನ ಇದೆ ಅನ್ನೋವಾಗ ಜಯನಗರ ಕ್ಷೇತ್ರದ ಬಿಜೆಪಿ ಕ್ಯಾಂಡಿಡೇಟಾಗಿದ್ದ ವಿಜಯಕುಮಾರ್ ಎದೆ ಹಿಡಿದುಕೊಂಡು ನೆಲಕ್ಕೆ ಬಿದ್ದವರು ಮತ್ತೆ ಮೇಲಕ್ಕೆ ಏಳಲೇ ಇಲ್ಲ. ಬಿಜೆಪಿಯೊಳಗಿರುವ ಕೆಲವೇ ಕೆಲವು ಮಂದಿ ಸೀದಾಸಾದಾ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ವಿಜಯ್‍ಕುಮಾರ್‍ರ ಹಠಾತ್ ಅಗಲಿಕೆಯಿಂದಾಗಿ ಜಯನಗರದ ಎಲೆಕ್ಷನ್ನೇ ಮುಂದಕ್ಕೋಯ್ತು. ಮುಂದೆ ನಡೆಯಲಿರುವ ಈ ಕ್ಷೇತ್ರದ ಚುನಾವಣೆಗೆ ವಿಜಯ್‍ಕುಮಾರ್ ಜಾಗದಲ್ಲಿ ನಟಿ ತಾರಾ ಅವರನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ ಅನ್ನೋ ವರ್ತಮಾನ ಬರುತ್ತಿದೆ. ಸುಮಾರು ವರ್ಷದಿಂದ ಜಯನಗರ ವ್ಯಾಪ್ತಿಯಲ್ಲೇ ನೆಲೆಸಿರುವ ತಾರಮ್ಮನಿಗೆ ವಿಜಯ್‍ಕುಮಾರ್ ಪರವಾಗಿ ಇಲ್ಲಿ ಕ್ಯಾನ್ವಾಸ್ ಮಾಡಿದ `ಪೊಲಿಟಿಕಲ್’ ಅನುಭವವೂ ಇದೆ. ಕಾಂಗ್ರೆಸ್‍ನಿಂದ ಮಾಜಿ ಮಂತ್ರಿ ಕಂ ಪಕ್ಕದ ಬಿಟಿಎಂ ಶಾಸಕ ರಾಮಲಿಂಗಾರೆಡ್ಡಿ ಮಗಳು ಸೌಮ್ಯರೆಡ್ಡಿ ಅಭ್ಯರ್ಥಿಯಾಗಿ ಫಿಕ್ಸ್ ಆಗಿರೋದ್ರಿಂದ ಮಹಿಳೆ ಎದುರು ಮಹಿಳೆಯನ್ನೇ ಕಾದಾಟಕ್ಕಿಳಿಸೋದು ಬಿಜೆಪಿಯ ಲೆಕ್ಕಾಚಾರ.

ತೇಜಸ್ವಿನಿ ಅನಂತ್ ಕುಮಾರ್

ಈ ಸುದ್ದಿ ಕೇಳಿ ತಾರಕ್ಕ ಹಿರಿಹಿರಿ ಹಿಗ್ಗಬೇಕೆನ್ನುವಷ್ಟರಲ್ಲಿ ಅದೇ `ಲೋಟಸ್ ಮಹಲ್’ನಿಂದ ಹೊರಬಿದ್ದ ಮತ್ತೊಂದು ಸುದ್ದಿ ತಾರಕ್ಕನಿಗೆ ಕಸಿವಿಸಿ ಮಾಡುತ್ತಿದೆಯಂತೆ. ಏನೆಂದ್ರೆ, ಕೇಂದ್ರ ಗೊಬ್ಬರದ ಮಂತ್ರಿ ಅನಂತ್ ಕುಮಾರ್ ಮಡದಿ ತೇಜಸ್ವಿನಿಯವರನ್ನು ಅಭ್ಯರ್ಥಿಯಾಗಿಸಿದರೆ ಹೇಗೆ ಅನ್ನೊ ಸಾಧ್ಯತೆಯನ್ನೂ ಬಿಜೆಪಿ ಅಳೆದು ತೂಗುತ್ತಿದೆಯಂತೆ. ಬ್ರಾಹ್ಮಣ ಮತಗಳು ಸ್ಟ್ರಾಂಗಾಗಿರುವ ಇಲ್ಲಿ ತೇಜಸ್ವಿನಿ ಮೇಡಮ್ಮು ಅದಮ್ಯ ಚೇತನ ಎಂಬ ಎನ್‍ಜಿಒ ಕಟ್ಟಿ ಓಡಾಡಿಕೊಂಡಿರುವುದರಿಂದ ಒಂದಷ್ಟು ಜನಪರಿಚಯವೂ ಅವರಿಗಿದೆ. ಸಾಲದ್ದಕ್ಕೆ ಅವರ ಪತಿಯೇ ಈ ಭಾಗದ ಸಂಸದ. ಜಾತಿ ಕೆಮಿಸ್ಟ್ರಿ ಪ್ಲಸ್ ಫ್ಯಾಮಿಲಿ ಕೆಮಿಸ್ಟ್ರಿ ಎರಡೂ ಮ್ಯಾಚ್ ಆಗೋದ್ರಿಂದ ಅವರನ್ನೇ ಕಣಕ್ಕಿಳಿಸಬೇಕೆಂಬ ಬಿಜೆಪಿಗರ ಒಲವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಯಂತೆ. ಹಾಗೇನಾದರು ಆದಲ್ಲಿ ತಾರಕ್ಕನ ಖುಷಿ ಠುಸ್ ಆಗಬಹುದು. ಫ್ಯಾಮಿಲಿ ಪೊಲಿಟಿಕ್ಸ್ ನೆಪವಿಟ್ಟುಕೊಂಡು ಮೈಸೂರಿನಲ್ಲಿ ಯಡ್ಯೂರಪ್ಪನ ಮಗ ವಿಜಯೇಂದ್ರನಿಗೆ ಟಿಕೇಟ್ ತಪ್ಪಿಸಿದ್ದ ಸೇಡು ಏನಾದ್ರು ಮುನ್ನೆಲೆಗೆ ಬಂದು, ಒಂದು ಕುಟುಂಬದ ಇಬ್ಬರಿಗೆ ಟಿಕೆಟ್ ಯಾಕೆ? ಅನ್ನೊ ಕಾಲೆಳೆದಾಟವೇನಾದ್ರು ಶುರುವಾದ್ರೆ ತಾರಕ್ಕನೇ ಅಭ್ಯರ್ಥಿಯಾದ್ರು ಅಚ್ಚರಿಯಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...