Homeರಾಜಕೀಯಜಯಮಾಲ ಮೇಡಂಗೆ ಮಂತ್ರಿಗಿರಿ ಒಲಿದ ಮರ್ಮವೇನು?

ಜಯಮಾಲ ಮೇಡಂಗೆ ಮಂತ್ರಿಗಿರಿ ಒಲಿದ ಮರ್ಮವೇನು?

- Advertisement -
- Advertisement -

ಸಿಕ್ಕಾಪಟ್ಟೆ ಸರ್ಕಸ್ ತರುವಾಯ ಸಮ್ಮಿಶ್ರ ಸರ್ಕಾರದ ಅರೆಬೆಂದ ಸಚಿವ ಸಂಪುಟ ಅಣಿಯಾಗಿದೆ. ಸಚಿವಗಿರಿ ಸಿಗದೆ ಬಂಡಾಯದ ಬಾವುಟ ಹಾರಾಡಿಸಿಕೊಂಡು ದಿಲ್ಲಿಗೂ, ಬೆಂಗ್ಳೂರಿಗೂ ಅಲೆದಾಡಿದ ಪುಣ್ಯಾತ್ಮರೂ ದಿನದಿಂದ ದಿನಕ್ಕೆ ತಣ್ಣಗಾಗುತ್ತಿದ್ದಾರೆ. ಇನ್ನು ಸಿಕ್ಕ ಖಾತೆಗಳ ಬಗ್ಗೆ ಕ್ಯಾತೆ ತೆಗೆದವರೂ, ಪಾಲಿಗೆ ಬಂದ ಪಂಚಾಮೃತದ ಮುಂದೆ ಚಕ್ಕಮಕ್ಕಳ ಹಾಕಿ ಕೂತು, ಕೈ-ಬಾಯಿ ಅಣಿಯಾಗಿಸಿಕೊಳ್ಳುತ್ತಿರುವ ಹೊತ್ತಿನಲ್ಲೇ ಕುಮಾರಣ್ಣನ ಸಂಪುಟದ ರೈಲು ನಿಧಾನಕ್ಕೆ ಹಳಿಗಳಿಗೆ ಕುದುರಿಕೊಳ್ಳಲು ಶುರುವಾಗಿದೆ. ಒಂದು ಸರ್ಕಾರ ಅಂತ ರಚನೆಯಾದಾಗ, ಅದರಲ್ಲೂ ಬಣ್ಣಬಣ್ಣದ ಕೌದಿಯಂತಹ ಸಮ್ಮಿಶ್ರ ಸರ್ಕಾರ ಅಂದಮೇಲೆ ಇಂತದ್ದೆಲ್ಲ ಮಾಮೂಲಿ. ಈ ಸಲದ ಸಂಪುಟ ಕಸರತ್ತಿನಲ್ಲಿ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಬಸವರಾಜ್ ಹೊರಟ್ಟಿಯಂತಹ ಘಟಾನುಘಟಿಗಳಿಗೆ ಮಂತ್ರಿಗಿರಿ ಮಿಸ್ ಆಗಿರೋದು ಎಷ್ಟು ಶಾಕ್‍ನ ಸಂಗತಿಯೋ, ಗಿರಿಕನ್ಯೆ ಜಯಮಾಲಾ ಮೇಡಂಗೆ ಮಂತ್ರಿಗಿರಿ ಸಿಕ್ಕಿರೋದೂ ಅಷ್ಟೇ ದಿಗ್ಬ್ರಾಂತಿಯ ವಿಷಯವಾಗಿದೆ. ಯಾಕೆಂದರೆ ಯಾರೊಬ್ಬರೂ ಜಯಮಾಲಾ ಮಿನಿಸ್ಟರ್ ಆಗಲಿದ್ದಾರೆ ಅಂತ ಎಣಿಸಿರಲಿಲ್ಲ. ಮಹಿಳಾ ಕೋಟಾದ ಪ್ರಶ್ನೆ ಬಂದಾಗಲೂ ಡಿಕೇಶಿ ಬಳಗದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಮರಾಠಾ ಬ್ರ್ಯಾಂಡಿನ ಖಾನಾಪುರದ ಅಂಜಲಿ ನಿಂಬಾಳ್ಕರ್ ನಡುವೆಯೇ ಹಗ್ಗಜಗ್ಗಾಟ ನಡೆದಿತ್ತು. ಪಾಪದ ಮೋಟಮ್ಮ ನನ್ನನ್ನ ಮಂತ್ರಿ ಮಾಡಿ ಅಂತ ಕೇಳಿದಾಗಲೂ `ಏಯ್ ಸುಮ್ನೇ ಇರಮ್ಮ, ಗೆದ್ದ ಶಾಸಕರನ್ನೇ ಬಿಜೆಪಿಯವರ ಬಕಾಸುರ ಬಾಯಿಂದ ಕಾಪಾಡಿಕೊಳ್ಳಲು ಹೆಣಗಾಡ್ತಿದೀವಿ. ಹಾಗಾಗಿ ಅವ್ರನ್ನ ತೃಪ್ತಿ ಪಡಿಸ್ಲಿಕ್ಕೇ ಸಾಕುಸಾಕಾಗಿ ಹೋಗ್ತಿದೆ. ಅದಕ್ಕೋಸ್ಕರ ಈ ಸಲ ಎಂಎಲ್‍ಸಿಗಳಿಗೆ ಮಂತ್ರಿ ಮಾಡುವ ಪ್ರಸ್ತಾಪ ನಮ್ಮ ಮುಂದಿಲ್ಲ. ನಂತ್ರ ನೋಡೋಣ’ ಅನ್ನೋ ಉತ್ತರ ಬಿಸಾಕಿದ ದಿಲ್ಲಿ ದಲ್ಲಾಳಿಗಳು ಆಯಮ್ಮನನ್ನು ಗದರಿಕೊಂಡಿದ್ದರಂತೆ.
ಆದರೆ ಕೊನೇ ಘಳಿಗೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‍ರನ್ನು ಹಿಂದಿಕ್ಕಿದ್ದಲ್ಲದೇ, ಎಂಎಲ್‍ಸಿಗಳಿಗೆ ಮಂತ್ರಿಭಾಗ್ಯ ಇಲ್ಲ ಎಂಬ ಅಡ್ಡಗೋಡೆಯನ್ನೂ ಜಿಗಿದುಬಂದ ಜಯಮಾಲ ಮೇಡಂ ಮಂತ್ರಿಣಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಮಂತ್ರಿಗಿರಿ ಮಿಸ್ ಮಾಡಿಕೊಂಡ `ಪುಣ್ಯಾತ್ಮ’ರು ಅಂಟಿಸುವ `ನಿಷ್ಠಾವಂತರಿಗೆ ಬೆಲೆ ಇಲ್ಲದಂತಾಗಿದೆ. ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡದೆ, ಬಕೇಟು ಹಿಡಿದ ಲಾಬಿ ಗಿರಾಕಿಗಳನ್ನು ಮಂತ್ರಿ ಮಾಡಿದ್ದಾರೆ. ನನ್ನ ಬೆಂಬಲಿಗರ ಜೊತೆ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರ್ತೀನಿ’ ಅನ್ನೋ ಠುಸ್ ಪಟಾಕಿಗೆ ಪ್ರತಿಯಾಗಿ ಮಂತ್ರಿಗಿರಿ ಸಿಕ್ಕ `ಮಹಾತ್ಮ’ರು `ನನ್ನ ನಿಷ್ಠೆ ನೋಡಿ ಪಕ್ಷ ಈ ಸ್ಥಾನ ನೀಡಿದೆ. ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡಿದವನೇ/ಳೇ ಅಲ್ಲ. ನನ್ನ ಗೆಲ್ಲಿಸಿದ ಜನರ ಸೇವೆಗೆ ಇದನ್ನು ಸದುಪಯೋಗ ಮಾಡಿಕೊಳ್ತೀನಿ’ ಅನ್ನೋ ಢಂಢಂ ಪಟಾಕಿ ಅಂಟಿಸೋದು ಸಹಜ. ಜಮಯಾಲ ಮೇಡಂ ಕೂಡಾ ಅಂತದ್ದೇ ಒಂದು ಢಂಢಂ ಪಟಾಕಿ ಅಂಟಿಸಿದ್ದಾರಾದರು ಅವರ ಮಂತ್ರಿಗಿರಿಯ ಹಿಂದೆ ಒಂದು ಪೊಲಿಟಿಕಲ್ ಲಾಬಿ ಇದ್ದೇ ಇದೆ ಅನ್ನೋದು ಮಾತ್ರ ಸುಳ್ಳಲ್ಲ.
ಬಣ್ಣದ ಲೋಕದಿಂದ ಬಂದ ಬೇರೆಬೇರೆ ಪಾರ್ಟ್‍ಟೈಂ ರಾಜಕಾರಣಿಗಳಿಗೆ ಹೋಲಿಸಿದರೆ ಜಯಮಾಲ ಮೇಡಮ್ಮು ಹೆಚ್ಚು ದಕ್ಷ, ದಿಟ್ಟ ರಾಜಕಾರಣಿ ಅನ್ನೋದ್ರಲ್ಲಿ ಸಂಶಯವಿಲ್ಲ. ಆದರೆ, ಇರೋ ಒಂದು ರೊಟ್ಟಿಯನ್ನೇ ಹರಿದು, ಹಸಿವಿನಿಂದ ರಂಪಾಟ ಮಾಡುತ್ತಿರುವ ತನ್ನ ಸಂತಾನ ಸೈನ್ಯಕ್ಕೆ ಹಂಚಬೇಕಾದ ನಿಕೃಷ್ಟ ಬರಗಾಲಕ್ಕೆ ಸಿಲುಕಿರುವ ಕಾಂಗ್ರೆಸ್ ಅನ್ನೋ ಶತಮಾನದ ಪಾರ್ಟಿ ಯಾವ ಲಾಬಿಯೂ ಇಲ್ಲದೆ, ದಕ್ಷತೆಯ ಮೈಲೇಜಿನ ಮೇಲೆ ಜಯಮಾಲರನ್ನು ಮಂತ್ರಿ ಮಾಡುತ್ತೆ ಅನ್ನೋದನ್ನು ನಂಬಲು ಕಷ್ಟ; ಅದೂ, ಮ್ಯಾನ್ ಆಫ್ ದಿ ಮ್ಯಾಚ್ ಡಿಕೇಶಿ ಬೆಟಾಲಿಯನ್ನಿನ ವಿಕೆಟನ್ನೇ ರನ್‍ಔಟ್ ಮಾಡಿಸಿ! ಜಯಮಾಲರನ್ನು ಮಂತ್ರಿ ಮಾಡಲೇಬೇಕು ಅಂತ ಪಟ್ಟು ಹಿಡಿದು, ಲಾಬಿ ಮಾಡಿದ್ದು ಮಾಜಿ ಸಿಎಂ ಸಿದ್ರಾಮಯ್ಯನವರು ಅನ್ನೋ ಮಾತುಗಳು ಕಾಂಗ್ರೆಸ್ ಪಡಸಾಲೆಯಿಂದಲೇ ಕೇಳಿಬರುತ್ತಿವೆ. ಜಯಮಾಲ ಮೊದಲಿನಿಂದಲೂ ಸಿದ್ರಾಮಯ್ಯನವರ ಅತ್ಯಾಪ್ತ ವಲಯದ ರಾಜಕೀಯ ಪಟು. ಸಿದ್ದು ಸಿಎಂ ಆಗಿದ್ದಾಗ, ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಲು 16 ಜನರ ಒಂದು ಸಮಿತಿ ರಚಿಸಿದ್ದರು. ಆ ಸಮಿತಿಗೆ ಅಧ್ಯಕ್ಷೆಯನ್ನಾಗಿ ಸಿದ್ದು ಆಯ್ಕೆ ಮಾಡಿದ್ದು ಇದೇ ಜಯಮಾಲ ಮೇಡಂರನ್ನು. ಇನ್ನು ಮೊನ್ನೆಯ ಎಲೆಕ್ಷನ್ ವೇಳೆ, ಸಿದ್ದುವಿಗೆ ಚಾಮುಂಡೇಶ್ವರಿಯಲ್ಲಿ ಕಂಟಕವಿರುವ ಮುನ್ಸೂಚನೆ ಸಿಕ್ಕಾಗ ಜಯಮಾಲ ಮೇಡಂ, ಒಂದು ಕಾಲದ ಬಿಜೆಪಿ ಒಡನಾಡಿ ಮುಖ್ಯಮಂತ್ರಿ ಚಂದ್ರುರಂತಹ ಸಹೋದ್ಯೋಗಿಯನ್ನೇ ಕರಕೊಂಡು ಬಂದು ಸಿದ್ದು ಪರ ಅದ್ದೂರಿ ಪ್ರಚಾರ ಮಾಡಿದ್ದರು. ಅಷ್ಟರಮಟ್ಟಿಗೆ ಅವರಿಬ್ಬರ ನಡುವೆ ಆಪ್ತತೆ ಇದೆ, ಅಭಿಮಾನವಿದೆ. ಸಿದ್ದು, ಜಯಮಾಲರ ಮೇಲಿಟ್ಟಿರುವ ಆ ಅಭಿಮಾನವೇ ಇವತ್ತು ಅವರನ್ನು ಮಂತ್ರಿ ಮಾಡಿದೆ. ಅಂದಹಾಗೆ, ಸಿದ್ದು ಬಗ್ಗೆ ಜಯಮಾಲ ಮೇಡಂಗೆ ಅಭಿಮಾನ ತುಂಬಿ ಬಂದು, ಅಂತರಾಳದಿಂದ ಹೆಮ್ಮೆ ಎನಿಸಿದಾಗ ಏನಂತ ಹೊಗಳ್ತಾರೆ ಗೊತ್ತುಂಟಾ, `ನಂ ಸಿದ್ರಾಮಯ್ಯನೋರು ಗಂಡು ಹುಲಿ ಕಣ್ರೀ!’.
ಸಂಪುಟ ರಚನೆಯಲ್ಲಿ ಸಿದ್ರಾಮಯ್ಯರನ್ನು ಹೈಕಮಾಂಡ್ ಮೂಲೆಗುಂಪು ಮಾಡಿದೆ, ಅವರ ಆಪ್ತರಿಗೆ ಸಚಿವಗಿರಿ ತಪ್ಪಿಸಲಾಗಿದೆ ಅಂತ ಬೊಬ್ಬಿಡುವ ಖಾಲಿ ಡಬ್ಬಗಳಿಗೆ ಜಯಮಾಲ ಆಯ್ಕೆಯೇ ಒಂದು ದೊಡ್ಡ ಉತ್ತರ. ಕಾಂಗ್ರೆಸ್‍ನೊಳಗೆ ಸಿದ್ದು ಈಗಲೂ ಡಿಗ್ನಿಫೈಡ್ ರೋಲ್ ನಿಭಾಯಿಸುತ್ತಿದ್ದಾರೆ ಅನ್ನೋದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್‍ರನ್ನ ಓವರ್‍ಟೇಕ್ ಮಾಡಿ ಜಯಮಾಲ ಮಂತ್ರಿಯಾಗಿರೋದು ಸಾಕ್ಷಿ. ಇದೆಲ್ಲ ಆಯ್ಕೆ ಹಿಂದಿನ ಕಸರತ್ತಾಯ್ತು. ಇನ್ನು ದಕ್ಷತೆ ವಿಚಾರಕ್ಕೆ ಬಂದರೆ, ಈ ಸಮ್ಮಿಶ್ರ ಸಂಪುಟದಲ್ಲಿರುವ ಕೆಲವೇ ಕೆಲವು ಅರ್ಹ ಮಂತ್ರಿಗಳಲ್ಲಿ ಜಯಮಾಲ ಕೂಡಾ ಒಬ್ಬರು ಅನ್ನೋದ್ರಲ್ಲಿ ತಪ್ಪಿಲ್ಲ. ಸಿದ್ದು ಲಾಬಿಯಿಂದ ಸಿಕ್ಕಿದೆಯೋ, ಬಿಲ್ಲವ ಕೋಟಾದಡಿ ದಕ್ಕಿದೆಯೋ, ಒಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಬ್ಬ ಸಮರ್ಥ ಸಾರಥಿಯೇ ಸಿಕ್ಕಂತಾಗಿದೆ. ಯಾಕೆಂದರೆ ಜಯಮಾಲ ಗ್ರಾಮೀಣ ಮಹಿಳೆಯರ ಪುನರ್ವಸತಿ ವಿಷಯದ ಮೇಲೆ ಅಧ್ಯಯನ ಮಾಡಿಯೇ ಡಾಕ್ಟರೇಟ್ ಪದವಿ ಪಡೆದುಕೊಂಡಂತವರು. ಮೊದಲೇ ಹೇಳಿದಂತೆ ಕಳೆದ ಸರ್ಕಾರದಲ್ಲಿ ಲೈಂಗಿಕ ಕಾರ್ಯಕರ್ತೆಯರ ಸ್ಥಿತಿಗತಿ ಕುರಿತು ಅಧ್ಯಯನ ನಡೆಸಿದ ಸಮಿತಿಯ ಅಧ್ಯಕ್ಷೆಯಾಗಿಯೂ ಮಹಿಳಾ ಸವಾಲುಗಳನ್ನು ಕಂಡ ಅನುಭವವಿದೆ. ಈ ಹಿಂದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾಗಿ ಕನ್ನಡ ಸಿನಿರಂಗದ ಬಿಕ್ಕಟ್ಟುಗಳನ್ನು ಬಗೆಹರಿಸಿದ ಗಟ್ಟಿತನವಿರುವ ಜಯಮಾಲರಿಗೆ ಮಂತ್ರಿಯಾಗುವ ಸಾಮಥ್ರ್ಯ ಉಳಿದ ಬಣ್ಣದ ಮಂದಿಗಿಂತ ಹೆಚ್ಚಿದೆ ಅನ್ನೋದ್ರಲ್ಲಿ ತಪ್ಪಿಲ್ಲ. ಅಂದಹಾಗೆ, 1993ರಲ್ಲಿ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಘಳಿಗೆಯಿಂದ ಇಲ್ಲಿಯವರೆಗು ಕಾಂಗ್ರೆಸ್‍ನಲ್ಲೇ ಗುರುತಿಸಿಕೊಂಡು ಬಂದಿದ್ದಾರೆ. ಇತರರಂತೆ ಪಕ್ಷಾಂತರ ಮಾಡಿದವರಲ್ಲ.
ತನ್ನ 13ನೇ ವಯಸ್ಸಿಗೇ ಬಣ್ಣ ಹಚ್ಚಿ, 16ನೇ ವಯಸ್ಸಿಗೆ ಡಾ.ರಾಜ್ ಎದುರು ಪ್ರೇಮದ ಕಾಣಿಕೆಯಲ್ಲಿ ನಾಯಕಿಯಾಗಿ ಮಿಂಚಿದ ಈ ಗಿರಿಕನ್ಯೆ ತನ್ನ ವೈಯಕ್ತಿಕ ಬದುಕಿನಲ್ಲಿ ಸಾಕಷ್ಟು ಏಳುಬೀಳು ಕಂಡುಬಂದಂತವರು. ಪ್ರತಿಭಾವಂತ ನಟನಾಗಿದ್ದರೂ, ತನ್ನ ಚಟಗಳಿಗೆ ಮಿತಿ ಹೇರಿಕೊಳ್ಳದೆ ಮರೆಯಾಗಿ ಹೋದ ಟೈಗರ್ ಪ್ರಭಾಕರ್ ಜೊತೆ ಜಯಮಾಲ ಇಟ್ಟ ಮೊದಲ ದಾಂಪತ್ಯ ದೀರ್ಘಕಾಲ ಉಳಿಯಲಿಲ್ಲ. ಯಾವ ಮುಲಾಜುಗಳಿಗೂ ಕಟ್ಟುಬೀಳದೆ ಡೈವೋರ್ಸ್ ಪಡೆದು ಆ ದಾಂಪತ್ಯದಿಂದ ಹೊರಬಂದ ಅವರು ನಂತರ ಛಾಯಾಗ್ರಾಹಕ ರಾಮಚಂದ್ರರವರನ್ನು ಮದುವೆಯಾಗಿ ಮತ್ತೊಮ್ಮೆ ದಿಟ್ಟತೆ ತೋರಿದ್ದರು. ಮಹಿಳೆಯರಿಗೆ ಪ್ರವೇಶವಿಲ್ಲದ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದ ವಿವಾದ ಭುಗಿಲೆದ್ದಾಗಲೂ ಜಯಮಾಲ ಬಲು ದಿಟ್ಟತೆಯಿಂದಲೇ ಎದುರಿಸಿದ್ದರು. ಕಮರ್ಷಿಯಲ್ ಚಿತ್ರಗಳಲ್ಲಿ ಹೀರೋಯಿನ್ ಆಗಿ ಮಿಂಚುತ್ತಲೇ `ತಾಯಿ ಸಾಹೇಬ’ದಂತಹ ರಾಷ್ಟ್ರಪ್ರಶಸ್ತಿ ವಿಜೇತ ಕಲಾತ್ಮಕ ಚಿತ್ರವನ್ನೂ ನಿರ್ಮಿಸಿ ಸೈ ಅನ್ನಿಸಿಕೊಂಡಿದ್ದ ಅವರು ಮಹಿಳಾ ಕಲ್ಯಾಣ ಹಾಗೂ ಕನ್ನಡ, ಸಂಸ್ಕøತಿ ಇಲಾಖೆಗಳಿಗೆ ನ್ಯಾಯ ಸಲ್ಲಿಸುತ್ತಾರೆಂಬ ವಿಶ್ವಾಸವಿದೆ. ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...