Homeಮುಖಪುಟಏನಾಗಿದೆ ಈ ಮಠಾಧಿಪತಿಗಳಿಗೆ!?

ಏನಾಗಿದೆ ಈ ಮಠಾಧಿಪತಿಗಳಿಗೆ!?

- Advertisement -
- Advertisement -

ತಮ್ಮ ಜಾತಿ ಮೀಸಲಾತಿಗಾಗಿ, ಸಚಿವ ಸ್ಥಾನಕ್ಕಾಗಿ, ಮಠದ ಅನುದಾನಕ್ಕಾಗಿ ಬಾಯಿಬಾಯಿ ಬಿಡುವ ಮಠಾಧಿಪತಿಗಳು ದೇಶದಲ್ಲಿ ಭುಗಿಲೆದ್ದಿರುವ ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಜನಪರವಾಗಿ ದನಿ ಎತ್ತದಿರುವುದು ಸಾಮಾಜಿಕ ದುರಂತವಲ್ಲವೇ?

ಧರ್ಮ ಮಾನವನನ್ನು ಸೃಷ್ಟಿಸಲಿಲ್ಲ. ಮಾನವ ಧರ್ಮವನ್ನು ಸೃಷ್ಟಿಸಿದ. ಧರ್ಮಗಳು ಬೆಳೆದಂತೆ ಧರ್ಮಗುರುಗಳು, ಮೌಲ್ವಿಗಳು, ಪಾದ್ರಿಗಳು, ಮೌಢ್ಯ ಕಂದಾಚಾರದ ಕಟ್ಟುಪಾಡುಗಳನ್ನು ಹೇರುತ್ತಾ ಬಂದರಲ್ಲದೆ ಯಾವಾಗ ಧರ್ಮ ರಾಜಕಾರಣದಲ್ಲಿ ಬೆರೆಯಿತೋ ಕೋಮುವಾದದ ರೂಪ ಪಡೆಯಿತು. ಏನಾಗಿದೆ ಕೆಲವು ಮಠಾಧೀಶರಿಗೆ? ತಮ್ಮ ಸ್ಥಾನಮಾನ ಪೀಠದ ಗೌರವವನ್ನು ಒತ್ತೆಯಿಟ್ಟು ತಮ್ಮ ತಮ್ಮ ಶಾಸಕರನ್ನು ಮಂತ್ರಿಗಳನ್ನಾಗಿ ಮಾಡಲು ಬಹಿರಂಗವಾಗಿಯೇ ಪ್ರಭಾವ ಬೀರುತ್ತಾ ಧಮಕಿಹಾಕುವ ಮಟ್ಟಕ್ಕೆ ಇಳಿದಿದ್ದಾರೆ. ತಮ್ಮ ಜಾತಿಗೆ ಇಷ್ಟೇ ಮೀಸಲಾತಿ ಕೊಡಬೇಕೆಂಬ ಹಕ್ಕೊತ್ತಾಯಕ್ಕಿಳಿಯುವುದು ಇಲ್ಲವಾದರೆ ನಮ್ಮ ಜಾತಿಯ ಮಂತ್ರಿಗಳು ಶಾಸಕರೆಲ್ಲರಿಂದ ರಾಜೀನಾಮೆ ಕೊಡಿಸಿದರೆ ಸರ್ಕಾರ ಉರುಳುತ್ತದೆಯೇ ಎಂಬ ಬಗ್ಗೆ ಅರಿವಿರಲಿ, ಎಂದೆಲ್ಲಾ ಪ್ರಶ್ನಿಸುವ ಅಧೋಗತಿಗೆ ಇಳಿಯುತ್ತಿದ್ದಾರೆ. ಯಾವುದೇ ಒಂದು ಜಾತಿಯಿಂದ ಯಾವ ರಾಜಕಾರಣಿಯೂ ಗೆಲ್ಲಲು ಸಾಧ್ಯವಿಲ್ಲವೆಂಬ ಪರಿವೇ ಇಲ್ಲದೆ ಗುಟುರುಹಾಕುವ ಇಂಥವರು ಮತದಾರರನ್ನು ಅಪಮಾನಿಸುತ್ತಿದ್ದಾರೆ. ಇದೆಲ್ಲಾ ಏಕೆ ಹೇಳಬೇಕಾಯಿತು ಎಂದರೆ ಇತ್ತೀಚೆಗೆ ಪಂಚಮಸಾಲಿ ಮಠಾಧೀಶರೊಬ್ಬರು ಬಹಿರಂಗವಾಗಿಯೇ ವೇದಿಕೆಯಲ್ಲಿ ನಮ್ಮವರು ಹದಿಮೂರು ಜನ ಶಾಸಕರಲ್ಲಿ ಮೂವರಿಗಾದರೂ ಸಚಿವ ಸ್ಥಾನ ಕೊಡಿ, ಇಲ್ಲವಾದರೆ ಕೆಳಗಿಳಿಯಬೇಕಾಗುತ್ತದೆಂದು ಮುಖ್ಯಮಂತ್ರಿಗೆ ಉರಿಗಣ್ಣು ಬಿಡುತ್ತಾ ಕೆಂಡಕಾರಿದ್ದನ್ನು ಮಾಧ್ಯಮಗಳು ತೋರಿಸಿವೆ. ಮರುದಿನದ ಸಭೆಯಲ್ಲಿ ವಾಲ್ಮೀಕಿ ಮಠದ ಸ್ವಾಮೀಜಿಯೊಬ್ಬರು ನಾವೂ ನಿಮ್ಮ ಬೆಂಬಲಕ್ಕಿದ್ದೇವೆಯೆಂದು ಬೆಂಬಲ ವ್ಯಕ್ತಪಡಿಸಿದರೆ, ಉಳಿದ ಮಠಾಧಿಪತಿಗಳು ಕಾವಿ ತೊಟ್ಟಿದ್ದೇವೆಂದು ಮರೆತು ಪರ ವಿರೋಧದ ಡಿಬೇಟ್‍ಗೆ ಇಳಿದಿರುವುದು ಧಾರ್ಮಿಕ ದುರಂತವಲ್ಲವೆ?

ಕುಂಚಿಟಿಗರ ಸ್ವಾಮಿಯ ನೇತೃತ್ವದಲ್ಲಿ ಕೆಲವು ಓಬಿಸಿಗಳ ಜೊತೆ ಮಾದಾರಪೀಠದ ಸ್ವಾಮಿಗಳು ಮುಖ್ಯಮಂತ್ರಿಗಳ ಧವಳಗಿರಿ ನಿವಾಸಕ್ಕೆ ತೆರಳಿ ಅವರ ಕಣ್ಣೊರೆಸಿ ಬೆಂಬಲಿಸಿ, ಸೆಡ್ಡು ಹೊಡೆದು ಹೊರ ಬಂದಿದ್ದಾರೆ. ಈ ಮಠಾಧಿಪತಿಗಳಿಗೇನಾಗಿದೆ? ಬಿಜೆಪಿ ಸರ್ಕಾರ ಬರುತ್ತಲೇ ಗುಂಪು ಕಟ್ಟಿಕೊಂಡು ಹೋಗಿ ನಮ್ಮ ಮಠಕ್ಕೆ ಇಷ್ಟೇ ಕೋಟಿ ಅನುದಾನ ಕೊಡಿರೆಂದು ವಸೂಲಿಗೆ ಇಳಿದು ಬಿಡುತ್ತಾರೆ. ಇದಕ್ಕೂ ಕಾರಣವಿಲ್ಲದಿಲ್ಲ ರಾಜಕಾರಣಿಗಳೂ ಅಷ್ಟೇ. ತಮ್ಮ ಗೆಲುವಿಗಾಗಿ ಜಾತಿ ಸ್ವಾಮಿಗಳ ಬೆನ್ನು ಬಿದ್ದು ಕೋಟಿಗಟ್ಟಲೆ ಕಾಣಿಕೆ ನೀಡಿ, ಮತಗಳನ್ನು ರಿಸರ್ವ್ ಮಾಡಿಸಿಕೊಳ್ಳಲು ಆರಂಭಿಸಿದ್ದರ ಫಲವೇ ಇದು. ನೀನನಗಿದ್ದರೆ ನಾನಿನಗೆ ಎಂಬಂತಹ ಒಡಂಬಡಿಕೆಯ ವ್ಯಾಪಾರ ನಡೆಯುತ್ತಿದೆ.

ಸಮ್ಮಿಶ್ರ ಸರ್ಕಾರವಿದ್ದಾಗಲೂ ಅಷ್ಟೇ. ನಮ್ಮ ಮುಖ್ಯಮಂತ್ರಿಯ ತಂಟೆಗೆ ಬಂದರೆ ಪರಿಣಾಮ ನೆಟ್ಟಗಿರಲ್ಲವೆಂದು ಆದಿಚುಂಚನಗಿರಿಯೇ ಗುಡುಗಿದ್ದುಂಟು. ಸಿದ್ಧರಾಮಯ್ಯನವರು ಸಿ.ಎಂ. ಆದಾಗ ಕಾಗಿನೆಲೆಯ ಮಠಾಧಿಪತಿಗಳು ರಕ್ಷಣೆಗೆ ಇಳಿದಿದ್ದುಂಟು. ರಾಜಕಾರಣದಲ್ಲಿ ಧರ್ಮಕಾರಣ ಬೆರೆತರೆ ಕೇಡಿಲ್ಲ. ಆದರೆ ಧರ್ಮದಲ್ಲಿ ರಾಜಕಾರಣ ಬೆರೆತರೆ ಒಳಿತಿಲ್ಲವೆಂಬುದು ಬಸವಣ್ಣನವರ ಕಾಲದಲ್ಲಿ ಸಾಬೀತಾಗಿದೆಯಾದರೂ ಅದರ ಬಗ್ಗೆ ರಾಜಕಾರಣಿಗಳು ಮಠಾಧೀಶರು ಮರೆತಂತೆ ಕಾಣುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮಠಾಧಿಪತಿಗಳ ಕೊಲೆಸ್ಟ್ರಾಲ್ ಹೆಚ್ಚುತ್ತದೆ. ಸ್ವಾಮಿಗಳಾದರೂ ಘನತೆ ಹೆಚ್ಚಿಸಿಕೊಂಡಿದ್ದಾರೆಯೇ ಎಂದಾಲೋಚಿಸಿದರೆ ಕೆಲವರು ಜೈಲಿಗೆ ಹೋಗಿದ್ದಾರೆ. ಕೆಲವರ ಮೇಲಿನ ಅತ್ಯಾಚಾರದ ಕೇಸುಗಳು ಕೋರ್ಟಿನಲ್ಲಿ ಕೊಳೆಯುತ್ತಿವೆ. ಕೆಲವರು ನೆಲವನ್ನೇ ನುಂಗಿದ್ದಾರೆ. ಸ್ವಾಮೀಜಿಯೊಬ್ಬ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಗೋದ್ರಾ ಪ್ರಕರಣವನ್ನು ಮರುಕಳಿಸುತ್ತಿದ್ದಾನೆ. ಉತ್ತರದಲ್ಲಿ ಯೋಗಪಟು ಬಾಬಾ ರಾಮ್‍ದೇವ್, ರವಿಶಂಕರ್ ಗುರೂಜಿ, ಜಗ್ಗಿ ವಾಸುದೇವ್ (ಇಲ್ಲಿನ ದಿವಂಗತ ಪೇಜಾವರಶ್ರೀಗಳಂತವರು) ಬಹಿರಂಗವಾಗಿಯೇ ಬಿಜೆಪಿಯ ಹಾಗೂ ಮೋದಿಯವರ ಬೆಂಬಲಕ್ಕೆ ನಿಂತವರು. ನೀವೆಲ್ಲಾ ರಾಜಕೀಯದಲ್ಲೇಕೆ ಮೂಗು ತೂರಿಸುವಿರಿ ಎಂದರೆ, ನನಗೊಬ್ಬರು ಸಮಜಾಯಿಷಿ ನೀಡಿದ್ದುಂಟು. ನಮ್ಮ ಸನಾತನ ಧರ್ಮ, ಪುರಾಣಗಳಲ್ಲೇ ಇದೆಲ್ಲಾ ನಡೆದು ಬಂದಿದೆ ಎನ್ನುತ್ತಾರೆ. ದೇವತೆಗಳಿಗೆ ವಸಿಷ್ಠ ಗುರುಗಳಾಗಿದ್ದರು, ರಾಕ್ಷಸರಿಗೆ ಶುಕ್ಲಾಚಾರ್ಯರು ಸಲಹೆ ನೀಡಿದ್ದುಂಟು. ಸಾಮಾನ್ಯ ಬಾಲಕ ಚಂದ್ರಗುಪ್ತನಿಗೆ ಚಾಣಕ್ಯ, ಸಳನನ್ನು ಹೋಯ್ಸಳನನ್ನಾಗಿಸಿದ್ದ ಸುದತ್ತ, ಹಕ್ಕಬುಕ್ಕರನ್ನು ಬೆಂಬಲಿಸಿದ ವಿದ್ಯಾರಣ್ಯ, ಗ್ರಾಮವಾಸಿ ಯುವಕ ಭರಮಣ್ಣನಾಯಕನಿಗೆ ಮಾರ್ಗದರ್ಶನವಿತ್ತು. ದೊರೆಪದವಿಗೇರಿಸಿದ ಮುರುಗೇಸ್ವಾಮಿಗಳನ್ನು ಉದಾಹರಿಸುತ್ತಾರೆ. ಇರಬಹುದು ಆದರೆ ಇವರೆಲ್ಲಾ ಗುರುಗಳಾಗಿ ಧರ್ಮಕಾರಣ ಮಾಡಿ ಪ್ರಜಾಹಿತ ಬಯಸಿದರೆ ವಿನಃ ರಾಜಕಾರಣ ಮಾಡಲಿಲ್ಲ. ಬಹುಮುಖ್ಯವಾಗಿ ಇವರಾರು ದೊರೆಯಾದವನ “ಜಾತಿಗೆ” ಸೇರಿದವರಲ್ಲವಾಗಿದ್ದರಿಂದಲೇ ಜಗದ್ಗುರುಗಳು ಎನಿಸಿಕೊಂಡರು. ಈಗಿರುವ ಎಲ್ಲರೂ ಜಾತಿ ಗುರುಗಳು, ಇರುವುವೆಲ್ಲಾ ಜಾತಿಮಠಗಳು ಎಂಬುದನ್ನು ಅವರುಗಳೇ ಸಾಬೀತು ಪಡಿಸುತ್ತಿದ್ದಾರೆ. ಹಿಂದಿನವರೆಲ್ಲಾ ಭಕ್ತಾಧಿಗಳ ನೆರವಿನಿಂದ ಮಠ ಕಟ್ಟಿ ಬೆಳೆಸಿದ್ದವರಾದ್ದರಿಂದ ಅವರಿಗೆ ಯಾರ ಹಂಗೂ ಇರಲಿಲ್ಲ. ಐಷಾರಾಮಿ ಮಠಗಳಲ್ಲಿದ್ದು, ಯಾವಾಗ ಸರ್ವ ಸಂಗ ಪರಿತ್ಯಾಗವನ್ನೇ ಮರೆತರೋ, ಕೋಟಿಗಟ್ಟಲೆ ಹಣಕ್ಕಾಗಿ ರಾಜಕಾರಣಿಗಳ ಎದುರು ಸಲಾಮ್ ಹೊಡೆದರೋ ಆಗಲೇ ಕಾವಿ ತನ್ನ ಕಿಮ್ಮತ್ತು ಕಳೆದುಕೊಂಡಿದೆ. ಖಾದಿಗಳ ಹಿಂದೆ ನಿಂತು ದರ್ಬಾರ್ ನಡೆಸುವ ಬದಲು, ತಮಗೆ ಬೇಕಾದವರನ್ನು ವಿವಿಧ ಪಕ್ಷಗಳಿಂದ ನಿಲ್ಲಿಸಿ, ಗೆಲ್ಲಿಸುವ ಪಡಿಪಾಟಲು ಬಿಟ್ಟು ಕಾವಿ ಕಿತ್ತೆಸೆದು ನೇರಾ ನೇರ ತಾವೇ ರಾಜಕೀಯಕ್ಕಿಳಿಯುವುದು ಇಬ್ಬಂದಿತನಕ್ಕಿಂತ ಮೇಲಲ್ಲವೇ? ತಮ್ಮ ಜಾತಿ ಮೀಸಲಾತಿಗಾಗಿ, ಸಚಿವಸ್ಥಾನಕ್ಕಾಗಿ, ಮಠದ ಅನುದಾನಕ್ಕಾಗಿ ಬಾಯಿ ಬಾಯಿ ಬಿಡುವ ಇವರುಗಳು ದೇಶದಲ್ಲಿ ಭುಗಿಲೆದ್ದಿರುವ ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ಜನಪರವಾಗಿ ದನಿ ಎತ್ತದಿರುವುದು ಸಾಮಾಜಿಕ ದುರಂತವಲ್ಲವೇ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...