Homeಅಂಕಣಗಳುಜಾತಿಜಾಡ್ಯದಿಂದ ನಾವು ಪಾರಾಗುವುದೆಂದು?

ಜಾತಿಜಾಡ್ಯದಿಂದ ನಾವು ಪಾರಾಗುವುದೆಂದು?

- Advertisement -
ತಿಜಾಡ್ಯದ ವಿರುದ್ಧ ಬಹುಕಾಲದಿಂದಲೂ ಸಂತರು, ಸಮಾಜಸುಧಾರಕರು ಎಷ್ಟೇ ಮಾತನಾಡಿದ್ದರೂ ಅವರುಗಳ ಜಾತಿ ಮೂಲವನ್ನೇ ಎತ್ತಿ ಹಿಡಿದು ಅವರನ್ನು ಅವರವರ ಜಾತಿಗಳ ಐಕಾನುಗಳನ್ನಾಗಿಸಿದ ಹಿರಿಮೆ ನಮ್ಮದು. ಈ ಮನೋಧರ್ಮದ ಬಲಿಪಶುಗಳಾಗಿರುವವರು ಇಲ್ಲಿನ ಅಸ್ಪøಶ್ಯರು. ಆರ್ಥಿಕವಾಗಿ ಸ್ವಲ್ಪ ಮಟ್ಟಿಗಾದರೂ ಸಬಲರಾದರೂ ಇವರನ್ನು ಸಾಮಾಜಿಕವಾಗಿ ತಮ್ಮ ಸಮಾನರೆಂದು ಒಪ್ಪಿಕೊಳ್ಳುವುದಕ್ಕೆ ಮೇಲ್ಜಾತಿ ಮನಸ್ಥಿತಿಯವರು ಸಿದ್ಧರಿಲ್ಲ. ಈ ಮನಸ್ಥಿತಿ ಆಗಾಗ ತನ್ನ ವಿಕೃತ ರೂಪವನ್ನು ಪ್ರದರ್ಶಿಸಿ ಸಮಾಜವನ್ನೇ ಕದಡುತ್ತದೆ.
ಈ ಮಾತಿಗೊಂದು ತಾಜಾ ಉದಾಹರಣೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೂಲೆಯಲ್ಲಿರುವ ಗೋನಾಳ ಗ್ರಾಮ. ಕುರುಬ ಸಮುದಾಯದ ಸುಮಾರು 70, ಮಾದಿಗ ಸಮುದಾಯದ ಸುಮಾರು 50, ಲಿಂಗಾಯತ, ನಾಯಕ, ಮುಸ್ಲಿಂ ಸಮುದಾಯದ ತಲಾ 10 – 15 ಮನೆಗಳಿರುವ ಈ ಹಳ್ಳಿ. ಇಲ್ಲಿ ಆರ್ಥಿಕವಾಗಿ ಹೇಳಿಕೊಳ್ಳುವಂಥ ಅಂತರ ಕಂಡು ಬರುವುದಿಲ್ಲ. ಕುರುಬರಲ್ಲಿರುವಂತೆಯೇ ಮಾದಿಗರಲ್ಲಿಯೂ ಸ್ಥಿತಿವಂತರು, ಸಣ್ಣ ಭೂಹಿಡುವಳಿದಾರರು, ಭೂಹೀನರು ಇದ್ದಾರೆ. ಎಲ್ಲ ಮನೆಗಳಲ್ಲಿಯೂ ಬಸವಣ್ಣನವರ ಪಟಗಳು ರಾರಾಜಿಸುತ್ತವೆ. ಆದರೆ ದೇವರ ಸ್ಥಾದಲ್ಲಿರುವ ಬಸವೇಶ್ವರರ ಬೋಧನೆಗಳು ಸಾಮಾಜಿಕವಾಗಿ ನೆಲೆನಿಂತಿರುವ ಸಂಬಂಧಗಳನ್ನು ಬದಲಾಯಿಸುವಷ್ಟು ಶಕ್ತನಾಗಿಲ್ಲದಿರುವುದೊಂದು ದುರಂತ.
ತಾವು ಮೇಲ್‍ಸ್ತರದವರು ಎಂದು ಕೊಳ್ಳುವ ಕುರುಬ ಸಮುದಾಯದವರು, ತಮ್ಮ ಕಣ್ಣ ಮುಂದೆಯೇ ಅಸ್ಪøಶ್ಯರೆನಿಸಿಕೊಂಡವರು ಬೆಳೆಯುವುದನ್ನು ಸಹಿಸಲಾರದೇ ಹೋದರು. ಆ ಊರಿನ ಬಹುತೇಕರು ಕಂಪ್ಲಿ, ಹೊಸಪೇಟೆಗಳಂಥಾ ಊರುಗಳಲ್ಲಿ ಶಿಕ್ಷಣವನ್ನು ಪಡೆದಿದ್ದರೂ ಆ ಶಿಕ್ಷಣ ಕೇವಲ ಸರ್ಟಿಫಿಕೇಟುಗಳಿಗೆ ಸೀಮಿತವಾಗಿದೆ. ಮನೋಭಾವಗಳಂತೂ ಹಳೆಯ ಮಾದರಿಯವೇ ಆಗಿವೆ. ಕೆಳಜಾತಿಗಳ ಬಗೆಗಿನ ಅಸಹನೆಯ ಕಿಚ್ಚು ಮೇಲ್ಜಾತಿ ಎನಿಸಿಕೊಂಡವರನ್ನು ಒಳಗೊಳಗೇ ಸುಡುತ್ತಿರುವುದನ್ನು ಕಾಣಬಹುದು.
ಜೂನ್ 19ರಂದು ಆ ಹಳ್ಳಿಗೆ ಬೇಟಿ ನೀಡಿದ ಸತ್ಯಶೋಧನ ಸಮಿತಿಗೆ ತಿಳಿದು ಬಂದಂತೆ 2012ರಿಂದ ಎರಡೂ ಸಮುದಾಯಗಳ ನಡುವೆ ಆಗಾಗ ಆಡಳಿತ ಕೈಗೊಳ್ಳುವ ಶಾಂತಿ ಸಭೆಗಳಂಥಾ ಕಾರ್ಯಕ್ರಮಗಳು ತೇಪೆ ಹಚ್ಚುವುದನ್ನು ಬಿಟ್ಟರೆ ಮತ್ತೇನೂ ಸಾಧಿಸಲಿಲ್ಲ. ಇಂಥ ತಿಕ್ಕಾಟಗಳು ಒಂದು ಕದನವಾಗಿ ಪ್ರಕಟಗೊಂಡಿದ್ದು 2018ರ ಮೇ 25ರಂದು. ಬನ್ನೆಪ್ಪ ಮಾದಿಗ ಸಮುದಾಯದ ಹಣವಂತನಾಗಿದ್ದು, ಆತನೇ ಸಮುದಾಯದ ನಾಯಕ. ಗ್ರಾಮಪಂಚಾಯತಿಯ ಸದಸ್ಯನೂ ಆಗಿರುವ ಈತನ ಮಾತೇ ಆ ಸಮುದಾಯದ ಇತರರಿಗೆ ಅಂತಿಮ. ಅದೇರೀತಿ ಹೊಸಕೆರಪ್ಪ ಎಂಬುವವನು ಕುರುಬರ ನಾಯಕನಾಗಿದ್ದು, ಇವರಿಬ್ಬರ ನಡುವಿನ ಜಗಳಗಳೇ ಎರಡು ಸಮುದಾಯಗಳ ಜಗಳಗಳಾಗಿ ಮಾರ್ಪಡುತ್ತವೆ. ಅಲ್ಲಿನ ಜನಕ್ಕೆ ರಾಜಕೀಯವಾಗಿಯೂ ಸ್ಪಷ್ಟ ನಿಲುವುಗಳೇನಿಲ್ಲ. ತಮ್ಮ ನಾಯಕರು ಕಾಂಗ್ರೇಸ್ಸಾದರೆ ಅವರೂ ಕಾಂಗ್ರೇಸ್, ಬಿಜೆಪಿಯಾದರೆ ಬಿಜೆಪಿ.
ಕೆಲವು ತಿಂಗಳುಗಳ ಕೆಳಗೆ ಪರಿಶಿಷ್ಟರು ಅಂಬೇಡ್ಕರ್ ಹಾಗೂ ಜಗಜೀವನ್‍ರಾಮ್‍ರವರ ಚಿತ್ರಗಳನ್ನೊಳಗೊಂಡ ಫಲಕವೊಂದನ್ನು ಊರಿನ ಮಧ್ಯಭಾಗದ ರಸ್ತೆಯ ಪಕ್ಕದಲ್ಲಿ ಸ್ಥಾಪಿಸಿದರು. 5*5 ಅಳತೆಯ ಆ ಜಾಗ ಕುರುಬ ಸಮುದಾಯದ ಕುಟುಂಬವೊಂದಕ್ಕೆ ಸೇರಿದ್ದು. ಶಿಕ್ಷಣವಿಲ್ಲದಿದ್ದರೂ ಇತರರಿಗಿಂತಲೂ ಭಿನ್ನವಾಗಿ ಯೋಚಿಸುವ ಈ ಕುಟುಂಬದವರು ತಮ್ಮ ಜಾಗದಲ್ಲಿ ಆ ಫಲಕವನ್ನು ನೆಡಲು ಪರಿಶಿಷ್ಟರಿಗೆ ಅನುಮತಿಯನ್ನೂ ನೀಡಿದ್ದರು. ಆರ್ಥಿಕವಾಗಿ ತಮಗಿಂತಲೂ ಕಡಿಮೆ ಇಲ್ಲವೆಂದು ತೋರಿಸಿಕೊಳ್ಳುವ ಪರಿಶಿಷ್ಟರು ಈಗ ತಮ್ಮ ಸಾಮಾಜಿಕ ಅಸ್ತಿತ್ವವನ್ನು ಗಟ್ಟಿಯಾಗಿ ನೆಲೆಗೊಳಿಸಲು ಮಾಡಿದ ಈ ಹೊಸ ಪ್ರಯತ್ನ ಮೇಲ್ಜಾತಿ ಎಂದುಕೊಳ್ಳುವ ಕುರುಬರಿಂದ ಸಹಿಸಲಾಗಲಿಲ್ಲ. ಈ ಫಲಕ ತಮಗೆ ಸವಾಲಾಗಿದೆಯೆಂದು ಭಾವಿಸಿದ ಕುರುಬ ಸಮಾಜದ ಇತರರು ಫಲಕದ ಬಗ್ಗೆ ತಗಾದೆ ತೆಗೆದು ಒಂದು ರೀತಿಯ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಗ್ರಾಮದಲ್ಲಿದ್ದ ಒಂದೇ ಒಂದು ಹೋಟಲಿನಲ್ಲಿ ಮತ್ತು ಬಸವಣ್ಣನವರ ದೇವಸ್ಥಾನದಲ್ಲಿ ಅಸ್ಪøಶ್ಯತೆಯ ಆಚರಣೆಯನ್ನು ಭಿನ್ನ ರೀತಿಯಲ್ಲಿ ಅವರ ಮೇಲೆ ಹೇರುವ ಪ್ರಯತ್ನ ನಡೆಯಿತು.
ಮೇ 24ರಂದು ಈ ಎರಡೂ ಸಮುದಾಯಗಳ ಇಬ್ಬರು ಊರ ಬದಿಯ ಕಾಲುದಾರಿಯಲ್ಲಿ ವಿರುದ್ಧ ದಿಕ್ಕುಗಳಿಂದ ನಡೆದು ಬಂದಿದ್ದು ಯಾರು ಯಾರಿಗೆ ದಾರಿ ಬಿಡಬೇಕೆಂಬ ಬಗ್ಗೆ ಸಣ್ಣ ಜಗಳ ನಡೆದಿದೆ. ಅಂದು ಸಂಜೆ ತನ್ನ ಸಮುದಾಯದವನ ಪರವಾಗಿ ಮೇಲ್ಜಾತಿಯವರನ್ನು ಪ್ರಶ್ನೆ ಮಾಡಿದ ಬನ್ನೆಪ್ಪನ ಮಾತುಗಳು ಮಾರನೆಯ ದಿನದ ಭಯಂಕರ ಆಗುಹೋಗುಗಳಿಗೆ ನೆಪವಾದವು. ಇಂತಹ ಸನ್ನಿವೇಶಗಳಲ್ಲಿ ಮೇಲ್ಜಾತಿ ಮನಸ್ಥಿತಿಗಳ ಸ್ಪಂದನೆ ಒಂದೇ ರೀತಿಯದ್ದು, ಅದು ತಮ್ಮ ಕಣ್‍ಕಿಚ್ಚಿಗೆ ಕಾರಣವಾದ ದಲಿತರ ಮೇಲೆ ದಾಳಿ ನಡೆಸುವುದು. ಮೇ 25ರಂದು ನಡೆದದ್ದು ಅದೇ. ಚುಂಡೂರು, ಕಾರಂಚೇಡು, ಕಂಬಾಲಪಲ್ಲಿಗಳಲ್ಲಿ ನಡೆದಿದ್ದೂ ಹೀಗೆಯೇ.
ಅಂದು ಯೋಜಿತ ರೀತಿಯಲ್ಲಿ ನಡೆದ ದಾಳಿಯನ್ನು ಎದುರಿಸಲಾಗದ ಮಾದಿಗ ಜನಾಂಗದವರು ತಿರುಗೇಟು ನೀಡಲು ಪ್ರಯತ್ನಿಸಿದರೂ, ಸಂಘಟಿತ ದಾಳಿಯನ್ನೆದುರಿಸಲಾರದೆ, ಬಹುತೇಕ ಜನ ದಾಳಿಯಿಂದ ತಪ್ಪಿಸಿಕೊಳ್ಳಲು ಊರು ಬಿಟ್ಟು ಓಡಿದರು. ಈ ನಡುವೆ ಬನ್ನೆಪ್ಪನ ಮಗ ದೊಡ್ಡದೇವಣ್ಣ ದಾಳಿಕೋರರಿಂದ ಪಾರಾಗಲು ಒಂದು ಮನೆಗೆ ನುಗ್ಗಿದ. ಅವನನ್ನು ಹಿಂಬಾಲಿಸಿದ ಐದಾರು ಜನರ ಗುಂಪೊಂದು ಆ ಮನೆಯಲ್ಲಿಯೇ ಅವನನ್ನು  ಮನಸೋಇಚ್ಚೆ ಚಚ್ಚಿದರು. ಕೊನೆಗೆ ಸತ್ತನೆಂದೇ ಭಾವಿಸಿ ದೇಹವನ್ನು ಒಂದು ಛಾಪೆಯಲ್ಲಿ ಸುತ್ತಿಟ್ಟು ಜಾಗ ಖಾಲಿ ಮಾಡಿದರು. ಆದರೆ ಸುಮಾರು 4 ಘಂಟೆಗಳ ಕಾಲ ನೆತ್ತರ ಮಡುವಿನಲ್ಲಿ ಬಿದ್ದಿದ್ದ ಆ ಯುವಕ ಜಾÐನ ತಪ್ಪಿದ ಸ್ಥಿತಿಯಲ್ಲಿದ್ದ. ಸಂಜೆ ಅವನನ್ನು ಕಂಡವರು ಆ ಹೊತ್ತಿಗೆ ಹಳ್ಳಿಗೆ ಬಂದಿದ್ದ ಪೊಲೀಸರಿಗೆ ತಿಳಿಸಿದ್ದರಿಂದ ಅವರು ದೇವಣ್ಣನನ್ನು ಮೊದಲು ಬಳ್ಳಾರಿಗೆ, ನಂತರ ಬೆಂಗಳೂರಿಗೆ ಚಿಕಿತ್ಸೆಗಾಗಿ ಕಳುಹಿಸಿದರು. ತನ್ನ ಎರಡೂ ಕೈಗಳಿಗೆ ಆದ ತೀವ್ರವಾದ ಗಾಯಗಳು ತಲೆಯ ಮೇಲೆ ಬಿದ್ದಿರುವ ಪೆಟ್ಟು ಮತ್ತು ಮಾತನಾಡಲಾಗದಂತೆ ನಾಲಗೆಗೂ ಪೆಟ್ಟುಗಳಿಂದ ಆಘಾತಕ್ಕೊಳಗಾಗಿರುವ ದೇವಣ್ಣ ತನ್ನ ಮನೆಯಲ್ಲಿ ಈಗಲೂ ಅಸಹಾಯಕನಾಗಿ ಮಲಗಿದ್ದಾನೆ. ಆವನ ತಂದೆಯೂ ಸೇರಿದಂತೆ ಹತ್ತಿರದ ಬಂಧುಗಳು ಜೈಲು ಪಾಲಾಗಿದ್ದು, ಈತನಿಗೆ ಸರಿಯಾದ ಚಿಕಿತ್ಸೆಯೂ ದೊರಕದೆ, ಆತನ ಮುಂದಿನ ಸ್ಥಿತಿ ಏನಾಗುತ್ತದೋ ಹೇಳಲಾಗದು.
ಪೊಲೀಸರು ಯಥಾಪ್ರಕಾರ ಎರಡು ಕಡೆಯವರ ಮೇಲೂ ಕೇಸು ಜಡಿದು ಅವರಲ್ಲಿ ಕೆಲವರನ್ನು ಬಂಧಿಸಿದ್ದಾರೆ. ಕೆಲವರು ಈಗ ಬಳ್ಳಾರಿಯ ಜೈಲಿನಲ್ಲಿದ್ದಾರೆ. ಹಳ್ಳಿಯಲ್ಲಿ ಕೇವಲ ಮುದುಕರು, ಹೆಂಗಸರು ಮತ್ತು ಮಕ್ಕಳು ಮಾತ್ರವಿದ್ದು ಕೃಷಿ ಚಟುವಟಿಕೆಗಳು ಭರದಿಂದ ಸಾಗಬೇಕಾದ ಈ ಕಾಲದಲ್ಲಿ ಗಂಡಸರು ಪೊಲೀಸರ ಭಯದಿಂದಾಗಿ ಊರಿನಿಂದ ದೂರವೇ ಉಳಿದಿದ್ದಾರೆ. ಹೆಚ್ಚಾಗಿ ಭಯ ಕಾಡುತ್ತಿರುವುದು ಮಾದಿಗ ಸಮುದಾಯದವರನ್ನು. ಇದರ ಪರಿಣಾಮವಾಗಿ ಈ ವರ್ಷದ ಬೆಳೆಹಾಳು.
ಮಾದಿಗ ಸುಮದಾಯದವರ ವಿರುದ್ಧ ಒಟ್ಟು ಸಮಾಜಕ್ಕೇ ಇರುವ ಪೂರ್ವಗ್ರಹ ಕಂಪ್ಲಿಯಲ್ಲಿನ ಪೊಲೀಸರ ಜತೆ ಮಾತನಾಡುವಾಗಲೂ ಕಂಡುಬಂತು. ಸಾಮಾಜಿಕ ವಾಸ್ತವಗಳನ್ನು ವಸ್ತುನಿಷ್ಠವಾಗಿ ಅರ್ಥಮಾಡಿಕೊಳ್ಳಲಾಗದ ಇಂಥ ಅಧಿಕಾರ ವರ್ಗದವರಿಂದ ನಿಜವಾದ ನ್ಯಾಯ ಸಿಗುವುದನ್ನು ನಿರೀಕ್ಷಿಸುವುದೂ ಕಷ್ಟ. ಸಮಾಜದ ವಿವಿಧ ಗುಂಪುಗಳ ನಡುವೆ ಏರ್ಪಟ್ಟಿರುವ ಕಂದಕವನ್ನು ಮುಚ್ಚುವ ಕೆಲಸ ಮಾಡಬೇಕಾದರೆ ಎಲ್ಲ ರೀತಿಯ ಸ್ವಾರ್ಥವನ್ನು, ಪೂರ್ವಗ್ರಹಗಳಿಂದ ದೂರವಿಟ್ಟು ಸಮಾಜದ ಸ್ವಾಸ್ಥ್ಯಯನ್ನು ಬಯಸುವ ಅದಕ್ಕಾಗಿ ಕಾಳಜಿ, ಬದ್ಧತೆಗಳಿಂದ ದುಡಿಯುವ ಮನಸ್ಸುಗಳು ಬೇಕು. ಆಗ ಮಾತ್ರ ದೇಶಕ್ಕಂಟಿದ ಜಾತಿಜಾಡ್ಯ ವಾಸಿಯಾಗಬಹುದು. ಇಂದಿನ ವ್ಯವಸ್ಥೆಯಲ್ಲಿ ಅದು ಸಾಧ್ಯವೇ ಎಂಬುದೇ ದೊಡ್ಡ ಪ್ರಶ್ನೆಯಾಗಿಯೇ ಕಾಡುತ್ತದೆ? ಇನ್ನೆಷ್ಟು ದಿನ ಹೀಗೆ…?
 – ನಗರಗೆರೆ ರಮೇಶ್ 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...