Homeಕರ್ನಾಟಕಜಿಂದಾಲ್ ವಿರುದ್ಧ ಲೋಕಲ್ ಫೈಟ್ ಹತ್ತಿಕ್ಕಿದ ಸರ್ಕಾರದ ಆಡಳಿತ ವ್ಯವಸ್ಥೆ

ಜಿಂದಾಲ್ ವಿರುದ್ಧ ಲೋಕಲ್ ಫೈಟ್ ಹತ್ತಿಕ್ಕಿದ ಸರ್ಕಾರದ ಆಡಳಿತ ವ್ಯವಸ್ಥೆ

ಅತ್ಯಂತ ಬೆಲೆಬಾಳುವ ಭೂಮಿಯನ್ನು ತೀರಾ ಕಡಿಮೆ ರೊಕ್ಕಕ್ಕೆ ಮಾರಿದ ಬಡ ರೈತರು ಇವತ್ತಿಗೂ ಸರಿಯಾದ ಬದುಕು ಕಟ್ಟಿಗೊಂಡಿಲ್ಲ.

- Advertisement -
- Advertisement -

| ನಾನುಗೌರಿ ಡೆಸ್ಕ್ |

2016ರ ಸಂದರ್ಭದಲ್ಲಿ ಸ್ಥಳೀಯರು ಜಿಂದಾಲ್ ವಿರುದ್ಧ ಕಟ್ಟಿದ ಹೋರಾಟವನ್ನು ಪೊಲೀಸ್ ಶಕ್ತಿಯನ್ನು ಬಳಸಿ ಹತ್ತಿಕ್ಕಿದ್ದು ಆಡಳಿತ ವ್ಯವಸ್ಥೆಯೇ. ಆಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಇತರ ಯಾವ ಪಕ್ಷವೂ ಹೋರಾಟ ರೂಪಿಸಿದ ಜನರ ನೆರವಿಗೆ ನಿಲ್ಲಲಿಲ್ಲ. ಇಲ್ಲಿ ಎಲ್ಲ ಪಕ್ಷಗಳನ್ನು, ಅಧಿಕಾರಿಗಳನ್ನು ಜಿಂದಾಲ್ ‘ಒಳ ಹಾಕಿಕೊಂಡಿದೆ’ ಎಂಬುದು ಸ್ಥಳೀಯರ ಆರೋಪ,,,,

‘ಎಲ್ಲ ಪಾರ್ಟಿದವರೂ ಅವ್ರ ಜೊತೆಗಿನ ಅದಾರ್ರಿ. ಈಗ 3,600 ಎಕರೆ ಭೂಮೀನಾ ಜುಜಬಿ ರೇಟಿಗೆ ಸರ್ಕಾರ ಮಾರಾಕ ಹೊಂಟೈತಿ. ಈಗ್ಲೂ ನಾವು ಜನರನ್ನ ಸೇರಿಸೋಕ್ ಟ್ರೈ ಮಾಡ್ತಿದ್ದೀವಿ, ಆದ್ರ 2016ರೊಳಗ ಪ್ರತಿಭಟನೆ ಮಾಡಿದಾಗ, ಪೊಲೀಸರು ಮಂದಿಗೆ ಬಾಳ ಕಾಟ ಕೊಟ್ರು. 42 ಜನರ ಮ್ಯಾಲ ಕೇಸು ಹಾಕಿ ಕೋರ್ಟು ಕಚೇರಿ ಅಡ್ಡಾಡಿಸಿ ಸುಸ್ತು ಮಾಡಿದ್ರು. ಈಗ ಹೋರಾಟಕ್ಕ ಕರೆದ್ರ ಜನ ಯಾಕ್ ಬೇಕಪ್ಪ, ಎಲ್ಲ ಅವ್ರ ಕಡಿಗೆ ಅದಾರ’ ಎನ್ನುವ ಪರಿಸ್ಥಿತಿಯಿದೆ.

2016ರಲ್ಲಿ ಜಿಂದಾಲ್‍ನ ಡಾಂಬರು ಪ್ಲಾಂಟ್ (ECPL ಘಟಕ) ವಿರೋಧಿಸಿ ತೋರಣಗಲ್ಲಿನಲ್ಲಿ ಬೃಹತ್ ಪ್ತತಿಭಟನೆ ಮತ್ತು ಸಭೆ ನಡೆಸಿದ್ದ ಮುಂದಾಳುಗಳ ಪೈಕಿ ಒಬ್ಬರಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಶರಣಪ್ಪ ಕೋಟಿಗನಾಳ 2016ರಲ್ಲಿ ನಡೆದ ಸರ್ಕಾರದ ದೌರ್ಜನ್ಯವನ್ನು ನೆನಪಿಸಿದರು.

‘ಆಗ ಜಿಂದಾಲ್ ಸಪೋರ್ಟು ಮಾಡಿದ್ದ ನಮ್ ಸರ್ಕಾರದ ವಿರುದ್ಧವೂ ನಾವು ನಿಂತಿದ್ದೀವಿ’ ಎನ್ನುತ್ತಾರೆ ಕಾಂಗ್ರೆಸ್‍ನಿಂದ ಆ ಭಾಗದಲ್ಲಿ 2011-15ರ ಅವಧಿಯಲ್ಲಿ ಜಿಪಂ ಸದಸ್ಯರಾಗಿದ್ದ ಶರಣಪ್ಪ. ‘ಜನರ ಬದುಕು, ಇಲ್ಲಿನ ಅಗ್ರಿಕಲ್ಚರ್ ಎಲ್ಲ ಎಕ್ಕುಟ್ಟಿ ಹೋಗುವಾಗ ಪಾರ್ಟಿ-ಗೀರ್ಟಿ ನೋಡಬಾರ್ದಲ್ಲರಿ?’ ಎನ್ನುತ್ತಾರೆ.

ಇನ್ಸುರನ್ಸ್ ಉದ್ಯೋಗಿಯಾಗಿದ್ದು ಆ ಹೋರಾಟದಲ್ಲಿ ಭಾಗವಹಿಸಿದ್ದ ಚನ್ನಬಸಯ್ಯ, ‘ಇವತ್ತು ಅದಾ ಪ್ರಾಬ್ಲಂ ಆಗೈತಿ. ಯಾವುದೋ ಪಕ್ಷದ ಸದಸ್ಯರು ಅಂತಾ ತಮಗ ತಾವ ಅನಕೊಂಡಿರುವ ಜನ್ರು ಕೂಡ ಪ್ರತಿಭಟನೆ ಅಂದ್ರ ಹಿಂದಕ್ಕ ಸರಿತಾರ…ಈ ಸಲ ನಾವು ಪ್ರೆಸ್‍ಗೆಲ್ಲ ಮಾಹಿತಿ ಕೊಟ್ಟೀವಿ…ಹೋರಾಟನೂ ಶುರು ಮಾಡ್ತೀವಿ…’ ಎಂದರು.

ಜಿಂದಾಲಿನ ಹೆಡ್ ಆಫೀಸ್ ಇರುವ ತೋರಣಗಲ್ಲಿನ ಈ ಇಬ್ಬರು ನಮ್ಮ ಪೋರ್ಟಲ್ ಮುಂದೆ ತೆರೆದಿಟ್ಟ ಜಿಂದಾಲಿನ ಕತೆ ಮತ್ತು ಜನರ ವ್ಯಥೆ ಇಲ್ಲಿದೆ. ಇಡೀ ರಾಜಕೀಯ ವ್ಯವಸ್ಥೆಯೇ ಹೇಗೆ ಜಿಂದಾಲ್ ಪರ ಎನ್ನುವುದರ ಒಳಸುಳಿಗಲೂ ಇವೆ:

“ತೋರಣಗಲ್ ಮತ್ತು ಸುತ್ತಮುತ್ತಲಿನ ಹಳ್ಳಿಗಳೆಲ್ಲ ಇವತ್ತು ಸ್ಲಮ್ ತರಹ ಆಗಿವೆ. ಜನರ ಆರೋಗ್ಯ ಮತ್ತು ಹಳ್ಳಿಗಳ ಬದುಕಿನ ಸ್ವಾಸ್ಥ್ಯವನ್ನೇ ಹಾಳು ಮಾಡುವ ಡಾಂಬರು ಪ್ಲಾಂಟು ಇಲ್ಲಿ ಬೇಡ. ಇಲ್ಲಿನ ಪರಿಸರಕ್ಕೆ ಇದು ಮಾರಕ. ಪ್ಲಾಂಟಿನ ಕಲ್ಮಷ ಅಂತರ್ಜಲಕ್ಕೆ ಸೇರಿದರೆ ದೊಡ್ಡ ಅಪಾಯ ಎಂದು ಹೋರಾಟ ಕಟ್ಟಿದ್ದೆವು. ತೋರಣಗಲ್, ಹಂಸಾಪುರ, ಕುಡತಿನಿ ಜನರೆಲ್ಲ ನಮಗೆ ಸಪೋರ್ಟು ಮಾಡಿದ್ದರು. ಆದರೆ ಈ ಪ್ರತಿಭಟನೆ ನೋಡಿ ದಂಗಾದ ಜಿಂದಾಲ್ ಜಿಲ್ಲೆಯ ಆಡಳಿತ ವ್ಯವಸ್ಥೆಯ ನೆರವು ಪಡೆದು ಜನರಲ್ಲಿ ಭೀತಿ ಉಂಟು ಮಾಡುವ ಮೂಲಕ ಹೋರಾಟವನ್ನು ಹತ್ತಿಕ್ಕಿತು. ಎಲ್ಲ ಪಕ್ಷಗಳ ಪ್ರಮುಖರೂ ಜಿಂದಾಲಿನ ಫಲಾನುಭವಿಗಳೇ ಆಗಿರುವುದರಿಂದ ಹೊರಗಿನ ಸಂಘಟನೆಗಳ ನೆರವನ್ನೂ ಪಡೆದು ಮತ್ತೆ ಹೋರಾಟ ಕಟ್ಟಬೇಕಿದೆ….

1971ರಲ್ಲಿ ಇಲ್ಲಿ ಸರ್ಕಾರಿ ಸ್ವಾಮ್ಯದ ಉಕ್ಕಿನ ಘಟಕ ಸ್ಥಾಪಿಸಲು ನಿರ್ಧರಿಸಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು 1972ರಲ್ಲಿ ನೋಟಿಫಿಕೆಷನ್ ಹೊರಡಿಸಿದರು. 1972ರಲ್ಲಿ ಇಲ್ಲಿ ಪ್ರತಿ ಎಕರೆಗೆ ಕೇವಲ 800ರಿಂದ 1,200 ರೂಗೆ ನೀಡಿ ಭೂಸ್ವಾಧಿನ ಮಾಡಿಕೊಳ್ಳಲಾಗಿತ್ತು. 1991-92ರಲ್ಲಿ ಮನಮೋಹನಸಿಂಗ್ ಸರ್ಕಾರದಲ್ಲಿ ಉಕ್ಕು ಖಾತೆಯ ಸಚಿವರಾಗಿದ್ದ ಇಲ್ಲಿನ ಸಂಸದ ಬಸವರಾಜ ಪಾಟೀಲ ಅನ್ವರಿಯವರು ದೆಹಲಿಯಲ್ಲಿ ಒಂದು ಪ್ರೆಸ್ ಮೀಟ್ ಮಾಡಿ, ನಷ್ಟದಲ್ಲಿರುವ ಸರ್ಕಾರಿ ಉಕ್ಕು ಉದ್ಯಮಗಳನ್ನು ಖಾಸಗಿಯವರಿಗೆ ಕೊಡುವ ನಿರ್ಧಾರ ಪ್ರಕಟಿಸಿದರು. ಅವರ ಮೂಲ ಉದ್ದೇಶವೇ ವಿಜಯನಗರ ಸ್ಟೀಲ್ಸ್ ಅನ್ನು ಜಿಂದಾಲ್ಗೆ ನೀಡೋದೇ ಆಗಿತ್ತು….ಕಾರ್ಮಿಕ ಸಂಘಟನೆಗಳ ಹೋರಾಟಗಳನ್ನೆಲ್ಲ ಮುರಿಯಲಾಗಿತು.

1994ರಲ್ಲಿ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದಾಗ ಜಿಂದಾಲ್‍ನ ಭೂಮಿಪೂಜೆ ನಡೆದೇ ಹೋಯ್ತು. ವಿಜಯನಗರ ಸ್ಟೀಲ್ಸ್‍ನ ಭೂಮಿಯೆಲ್ಲ ಜಿಂದಾಲ್ ಪಾಲಾಯಿತು. ಆಗ ರೈತರಿಗೆ ಎಕ್ಸಗ್ರೇಸಿಯಾ ಅಂತ 5 ಸಾವಿರ ಕೊಟ್ಟು ಮರಳು ಮಾಡಿದರು. ಲೀಸ್‍ನಲ್ಲಿರುವ ಈ ಭೂಮಿಯನ್ನು ಹತ್ತು ವರ್ಷಕ್ಕೊಮ್ಮೆ ರಿನೀವಲ್ ಮಾಡಬೇಕು. 2006ರಲ್ಲಿ ರಿನೀವಲ್ ಮಾಡುವಾಗ ಮತ್ತೆ ಭೂಮಿ ಕಳೆದುಕೊಂಡ ರೈತರಿಗೆ 5 ಸಾವಿರ ಎಕ್ಸ್‍ಗ್ರೇಸಿಯಾ ಕೊಟ್ಟು ಹಿಂದಕ್ಕೆ ತಳ್ಳಿದರು. ಫಲವತ್ತಾದ ಭೂಮಿ, ನೀರಿನ ಅನುಕೂಲವನ್ನು ಪಡೆದ ಭೂಮಿಯೂ ಉಕ್ಕಿಗಾಗಿ ನೆಗೆದು ಬಿದ್ದಂತಾಯಿತು…

ವ್ಯಾಪಾರದಲ್ಲಿ ಎಷ್ಟ ಕಿತ್ತಾಟ ಇರ್ಲಿ, ಅದಿರುಗಳ್ಳರೆಲ್ಲ ಇಂತಹಾ ವಿಷ್ಯದೊಳಗ ಒಂದಾಗ್ತಾರ..ಯಡಿಯೂರಪ್ಪ ಇದ್ದಾಗ ಇವರದೇ ಸಾಮ್ರಾಜ್ಯ ಮಾಡಿಕೊಂಡಿದ್ದರಲ್ಲ? ಅಕ್ರಮವಾಗಿ ಅದಿರು ಮಾರಿಕೊಂಡ ಆರೋಪವೂ ಜಿಂದಾಲ್ ಮ್ಯಾಲ ಇದೆ. ಸರ್ಕಾರ ವಶಪಡಿಸಿಕೊಂಡ ಅಕ್ರಮ ಅದಿರನ್ನು ಹರಾಜಿಗೆ ಹಾಕುವಾಗಲೂ ಇಲ್ಲಿ ದಂಧೆ ನಡೆತಾ ಇದೆ. ಉತ್ತಮ ದರ್ಜೇಯ ಅದಿರನ್ನು ಕಡಿಮೆ ದರ್ಜೆಯ ಅದಿರು ಎಂದು ನಮೂದಿಸುವ ಅಧಿಕಾರಿಗಳು ಜುಜುಬಿ ರೇಟಿಗೆ ಜಿಂದಾಲ್‍ನಂತಹ ಕಂಪನಿಗಳಿಗೆ ಮಾರಿ ತಾವೂ ದುಂಡಗಾಗ್ತಾರ…ಎಲ್ಲ ಪಾರ್ಟಿಗಳಿಗೂ ಇದೆಲ್ಲ ಗೊತ್ತು….

ಅತ್ಯಂತ ಬೆಲೆಬಾಳುವ ಭೂಮಿಯನ್ನು ತೀರಾ ಕಡಿಮೆ ರೊಕ್ಕಕ್ಕೆ ಮಾರಿದ ಬಡ ರೈತರು ಇವತ್ತಿಗೂ ಸರಿಯಾದ ಬದುಕು ಕಟ್ಟಿಗೊಂಡಿಲ್ಲ. ಈಗ ಮತ್ತೆ ಲೀಸ್ ಭೂಮಿಯನ್ನು ತೀರಾ ಕಡಿಮೆ ದರಕ್ಕೆ ಕ್ರಯಪತ್ರ ಮಾಡಾಕ್ ಹೊರಟ ಸರ್ಕಾರದ ವಿರುದ್ಧ ರಾಜ್ಯದ ತುಂಬ ದೊಡ್ಡ ದನಿ ಎತ್ತಬೇಕು. ರಾಜಕೀಯ ಪಕ್ಷಗಳನ್ನು ಈ ಹೋರಾಟದ ಸನಿಹಕ್ಕೂ ಬಿಡಬಾರದು. ಅವೂ ಬರೋದೂ ಇಲ್ಲ ಬಿಡ್ರಿ…

ಆಗೀಗ ಕೊಟ್ಟ ಭೂಮಿ ಲೆಕ್ಕ ಹಾಕಿದ್ರ ಜಿಂದಾಲ್ ಹತ್ರ ಈಗ ಸಾವಿರ ಎಕರೆ ಭೂಮಿನ ಇರಬಹುದು. ಡಾಂಬರು. ಪೇಂಟ್ಸ್ ಅಂತಾ ಕೆಮಿಕಲ್ ವ್ಯಹಾರಕ್ಕ ಅವ್ರು ಬ್ಯಾರೆದಾರ ಜತಿ ಒಪ್ಪಂದ ಮಾಡಿಕೊಂತ ಹೊಂಟಾರ,,,ಇದೂ ಒಂದ ತರಹ ರಿಯಲ್ ಎಸ್ಟೇಟ್ ದಂಧೇನಾ…ಸಿಎಸ್‍ಆರ್ ಯೋಜನೆ ಅಡಿ ಇಲ್ಲಿಯ ಹಳ್ಳಿಗಳ ಶಾಲೆಗಳನ್ನಾದರೂ ದತ್ತು ತಗೋಬಹುದಿತ್ತು.. ಆದರೆ ಪ್ರವಾಸಿಗರು ಬರುವ ಹೊಸಪೇಟೆ ಬಸ್‍ಸ್ಟ್ಯಾಂಡ್ ಸೌಂದರ್ಯೀಕರಣ ಮಾಡ್ಯಾರ…ಇಲ್ಲಿವರೆಗೆ ಇಪ್ಪಂದದಂತೆ ಜಿಂದಾಲ್ ನಡೆದುಕೊಂಡಿದೆಯಾ, ಸ್ಥಳಿಯರಿಗೆ ಎಷ್ಟು ಕೆಲಸ ನೀಡಿದೆ ಇವೆಲ್ಲವನ್ನೂ ಸಾರ್ವಜನಿಕರ ಮುಂದೆ ಇಡುವ ಕೆಲಸವನ್ನು ಸರ್ಕಾರ ಮೊದಲು ಮಾಡ್ಲಿ… ಆಮ್ಯಾಲ ಹ್ಯಂಗ ಭೂಮಿ ಕೊಡ್ತಾರ ನೋಡೋಣಂತ….”

ಇವು ಹೋರಾಟದ ಮುಂಚೂಣಿ ವಹಿಸಿದ್ದ ಹತ್ತಾರು ಮುಂದಾಳುಗಳಲ್ಲಿದ್ದ ಶರಣಪ್ಪ ಮತ್ತು ಚನ್ನಬಸಯ್ಯರ ಮಾತುಗಳು. ಬಳ್ಳಾರಿ ಜಿಲ್ಲೆಯ ಪ್ರಗತಿಪರ ಸಂಘಟನೆಗಳೆಲ್ಲ ಸೇರಿ ಒಂದು ದೊಡ್ಡ ಆಂದೋಲನ ಕಟ್ಟುತ್ತಿವೆ ಎಂಬ ಮಾತು ಕೇಳಿ ಬಂದಿವೆ. ಅದೂ ಆದಷ್ಟು ಬೇಗ ಶುರುವಾಗಲಿ… ಗಟ್ಟಿಗೊಳ್ಳಲಿ ಎಂಬುದು ನಮ್ಮ ಆಶಯ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...