Homeಸಾಮಾಜಿಕಜೀ ಕನ್ನಡದ ಟಿಆರ್‌ಪಿ ಬಲೆಯಲ್ಲಿ ಸಿಕ್ಕಿಬಿತ್ತೇ ಹಳ್ಳಿ ಹಕ್ಕಿ?

ಜೀ ಕನ್ನಡದ ಟಿಆರ್‌ಪಿ ಬಲೆಯಲ್ಲಿ ಸಿಕ್ಕಿಬಿತ್ತೇ ಹಳ್ಳಿ ಹಕ್ಕಿ?

- Advertisement -
- Advertisement -

ಸರೋವರ್ ಬೆಂಕಿಕೆರೆ |

ಸೆಲೆಬ್ರಿಟಿಗಳಿಗೆ ಮೀಸಲಾದ ಬಿಗ್‌ಬಾಸ್ ಅನ್ನು ಹೊರತುಪಡಿಸಿದರೆ ಕನ್ನಡದ ಬಹುತೇಕ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ ಹಳ್ಳಿಗಾಡಿನ ಪ್ರತಿಭೆಗಳು ಜನಪ್ರಿಯರಾಗಿ ಕನ್ನಡಿಗರ ಮನೆಮಾತಾಗಿರುವುದು ನಿಜಕ್ಕೂ ವಿಶೇಷ ಮತ್ತು ಅಭಿನಂದನಾರ್ಹ. ಇದೀಗ ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ 15ನೇ ಅವತರಣಿಕೆಯಲ್ಲಿ ಹಾವೇರಿ ಜಿಲ್ಲೆಯ ಕುರಿ ಕಾಯುವ ಯುವಕ ಹನುಮಂತು ಮನೆಮಾತಾಗಿದ್ದಾನೆ.

ಭಾರತದಂಥ ದೇಶದಲ್ಲಿ ಕೆಲವೇ ಕೆಲವು ಸಮುದಾಯಕ್ಕೆ ಸೀಮಿತವಾಗಿದ್ದ ಕಲೆಗಳನ್ನು ಶ್ರೇಷ್ಠವೆಂಬಂತೆ ಬಿಂಬಿಸಿದ್ದು ಅಲ್ಲದೆ ಅಂತಹ ಕಲೆಗಳಿಗೆ ವೇದಿಕೆಗಳ ಮೂಲಕ ಪ್ರಚಾರಗಳು ದೊರೆಯುತ್ತಾ ಬಂದಿದೆ. ಚಮ್ಮಾರಿಕೆ, ಕುಲುಮೆ, ಕುಂಬಾರಿಕೆ, ಬೇಟೆ ಇತ್ಯಾದಿ ತಳ ಸಮುದಾಯದ ಕಲೆಗಳ ಸ್ಪರ್ಧೆಯನ್ನು ಇವತ್ತಿನ ಟಿವಿ ಶೋಗಳಲ್ಲಿ ನಾವು ನೋಡಲು ಸಾಧ್ಯವಿಲ್ಲ. ಸಂಗೀತದ ವಿಚಾರಕ್ಕೆ ಬಂದರೆ ತಳಸಮುದಾಯದ ಕಲೆಗಳಾದ ಚರ್ಮದ ತಮಟೆ, ಉರ್ಮೆ, ಸೋಬಾನ, ಜೋಗತಿ ಜೋಗಪ್ಪರ ಹಾಡು, ಇದೇ ಹನುಮಂತನ ಲಂಬಾಣಿ ಸಮುದಾಯದ ಅತ್ತುಕೊಂಡು ಹಾಡುವ ಡಾವ್ಳೋ, ಮೇರಗಳು, ದೇವಸ್ಥಾನದ ಹೊರಗೇ ನಿಂತು ಒಂದಿಡೀ ದಿನ ಹಾಡುವ ಅಸಾದಿಗಳ ಹಾಡು…. ಇವೆಲ್ಲವಕ್ಕೆ ರಿಯಾಲಿಟಿ ಶೋಗಳಲ್ಲಿ ಸ್ಪರ್ಧೆ ನಡೆಸುವುದು ಹಾಗಿರಲಿ ಕಲ್ಪನೆ ಮಾಡಿಕೊಳ್ಳುವುದೂ ಅಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿಯೂ ಯಾವುದೇ ಸಾಂಪ್ರದಾಯಿಕ ತರಬೇತಿ ಪಡೆಯದ, ಹಳ್ಳಿಗಾಡು ಬಡ ಕುರಿಗಾಯಿ ಕುಟುಂಬದ ಹನುಮಂತು ಇಂದು ಸರಿಗಮಪ-15 ರಲ್ಲಿ ಫೈನಲ್‌ಗೆ ಆಯ್ಕೆ ಆದದ್ದು ನಿಜಕ್ಕೂ ದೊಡ್ಡ ಸಾಧನೆಯೇ ಎನ್ನಬಹುದು.

ಆದರೆ ಟಿವಿ ನಿರೂಪಕರು-ಚಾನೆಲ್‌ಗಳ ಜನರ ಮುಗ್ಧತೆಗಳನ್ನು ಬಂಡವಾಳವಾಗಿಸಿಕೊಂಡು ತಮ್ಮ ಟಿಆರ್‌ಪಿ ದಾಹವನ್ನು ತೀರಿಸಿಕೊಳ್ಳುವುದರಲ್ಲಿ ವಿಕೃತವಾಗಿ ಪಳಗಿದ್ದಾರೆ. ಹಳ್ಳಿ ಹೈದಾ ಪ್ಯಾಟೇಗ್ ಬಂದ ಖ್ಯಾತಿಯ ರಾಜೇಶ್ ಅನ್ನುವ ಸಿದ್ಧಿ ಜನಾಂಗದ ಕಾಡು ಹುಡುಗನ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡ ಇದೇ ಟಿವಿ ಸಿನೆಮಾ ರಂಗದವರು ಅವನನ್ನು ಆತ್ಮಹತ್ಯೆ ಎಂಬ ಕೂಪಕ್ಕೆ ತಳ್ಳಿ ಕೊಲೆ ಮಾಡಿದ್ದನ್ನು ಈ ಸಂದರ್ಭದಲ್ಲಿ ನೆನೆಯಬಹುದು.

ಇತ್ತೀಚೆಗೆ ಪ್ರಸಾರವಾದ ಸರಿಗಮಪ ಸೆಮಿಫೈನಲ್‌ನ ಸಂಚಿಕೆಯಲ್ಲಿ ಹನುಮಂತು ಹಾಡಿದ ನಂತರ ನಿರೂಪಕಿ ಬಂದು ತುಂಬಾ ಚೆನ್ನಾಗಿ ಹಾಡಿದೆ ಮತ್ತೊಮ್ಮೆ ನಮಗಾಗಿ ಹಾಡು ಎನ್ನುತ್ತಾಳೆ. ಅವನು ಹಾಡು ಶುರು ಮಾಡಿದ ಸ್ವಲ್ಪ ಹೊತ್ತಿಗೆ ಹನುಮಂತನ ತಾಯಿ ವೇದಿಕೆ ಮೇಲೆ ಬರುತ್ತಾರೆ. ಆತನಿಗೆ ಆಶ್ಚರ್ಯವಾಗಿ ಹಾಡು ನಿಲ್ಲಿಸುತ್ತಾನೆ. ಈಗ ನಿರೂಪಕಿ ತಾಯಿಗೆ ಸಂಬಂಧಿಸಿದ ಹಾಡು ಹಾಡುತ್ತಿದ್ದೀಯ ಅದನ್ನು ನಿನ್ನ ತಾಯಿಯ ಮುಖವನ್ನು ನೋಡುತ್ತಾ ಹಾಡು ಎನ್ನುತ್ತಾಳೆ. ಹನುಮಂತು ತಾಯಿಯ ಮುಖ ನೋಡುತ್ತಾ ಹಾಡಲು ಶುರು ಮಾಡಿದಾಗ, ಪಾಪ ಆ ತಾಯಿಗೆ ಏನು ನಡೀತಿದೆ ಎನ್ನುವುದು ತಿಳಿಯದೆ ಮಗನ ಕಡೆ ನೋಡದೆ ಪ್ರೇಕ್ಷಕರ ಕಡೆ ನೋಡುತ್ತಾ ನಿಲ್ಲುತ್ತಾಳೆ. ಕ್ಯಾಮೆರಾ ತಾಯಿಯ ಕಣ್ಣಿಗೆ ಫೋಕಸ್ ಆಗುತ್ತದೆ. ಆಕೆ ಅಷ್ಟೇನು ಭಾವುಕಳಾಗದಂತೆ ಇದ್ದದ್ದು ಗಮನಿಸಿದಳೇನೋ ನಿರೂಪಕಿ, ತಾಯಿಗೆ ಮತ್ತೆ ಪ್ರಶ್ನೆ ಮಾಡುತ್ತಾಳೆ, ಮಗನ ನೆನಪು ಆಗುತ್ತಿತ್ತಾ? ನೆನಪಾದಾಗ ಏನು ಮಾಡುತ್ತಿದ್ರಿ? ಎಂದು.

ತಾಯಿ ಭಾವುಕರಾಗದೆ ಉತ್ತರ ನೀಡಿದ್ದು ನಿರೂಪಕಿಗೆ ಸಮಾಧಾನವಾಗಲಿಲ್ಲ ಅನಿಸುತ್ತೆ. ಆ ಹೊತ್ತಿಗೆ ವೇದಿಕೆಗೆ ಬಂದಿದ್ದ ಹನುಮಂತನ ತಂದೆಗೂ ಇದೇ ರೀತಿಯ ಬಗೆಬಗೆಯ ಪ್ರಶ್ನೆ. ಮತ್ತು ಎಲ್ಲರಿಗೂ ಹನುಮಂತನ ತಂದೆಗಾಗಿ ’ಅಪ್ಪ ಐ ಲವ್ಯೂ ಅಪ್ಪ ಹಾಡು ಹೇಳುವಂತೆ ಕೇಳುತ್ತಾಳೆ. ಒಟ್ಟಾರೆಯಲ್ಲಿ ಏನೆಲ್ಲಾ ಮಾಡಿ ಅಲ್ಲಿ ಭಾವನಾತ್ಮಕ ವಾತಾವರಣ ಸೃಷ್ಟಿ ಮಾಡಬಹುದೋ ಅದನ್ನು ಮಾಡುವ ಪ್ರಯತ್ನ ಮಾಡುತ್ತಿದ್ದಳು. ಹಾಡು ಮುಗಿಯುವ ಹೊತ್ತಿಗೆ ತನ್ನ ತಂದೆಯನ್ನು ನೆನೆದು ತೀರ್ಪುಗಾರ ರಾಜೇಶ್ ಕೃಷ್ಣನ್ ಅವರನ್ನು ಒಳಗೊಂಡಂತೆ ಒಂದಷ್ಟು ಜನ ಅಳುವವರನ್ನು ಕ್ಯಾಮರಾ ಕಣ್ಣಿಗೆ ಕಾಣಿಸುವುದರಲ್ಲಿ ಸಫಲರಾಗುತ್ತಾರೆ. ಈ ಹೊತ್ತಿಗೆ ಅಲ್ಲೇನು ನಡೆಯುತ್ತಿದೆ ಎನ್ನುವ ಅರಿವು ಇಲ್ಲದ ರೀತಿಯಲ್ಲಿ ಹನುಮಂತನ ಕುಟುಂಬ ವೇದಿಕೆ ಮೇಲೆ ಸುಮ್ಮನೆ ನಿಂತಿದ್ದರು.

ಈ ಕಾರ್ಯಕ್ರಮ ನೋಡುತ್ತಿದ್ದ ಸೂಕ್ಷ್ಮ ವೀಕ್ಷಕರಿಗೆ ಇದೆಲ್ಲವೂ ಟಿಆರ್‌ಪಿ ಗೇಮ್ ಎನ್ನುವುದು ಅರ್ಥವಾಗುತ್ತಿತ್ತು. ಸೆಮಿ ಫೈನಲ್ ಪ್ರಸಾರ ಆಗುವ ಮೊದಲೇ ದಿನಪತ್ರಿಕೆಗಳಲ್ಲಿ ಸೆಮಿಫೈನಲ್ ಕಾರ್ಯಕ್ರಮದಲ್ಲಿ ಭಾವನಾತ್ಮಕ ಸನ್ನಿವೇಶಗಳು ಇರಲಿವೆ ಎಂದು ಸುದ್ಧಿ ಮಾಡಿಸಿದ್ದನ್ನು ಗಮನಿಸಿದರೆ ರಿಯಾಲಿಟಿ ಶೋಗಳಲ್ಲಿ ನಡೆಯುವ ಭಾವನಾತ್ಮಕ ಸನ್ನಿವೇಶಗಳು ಟಿಆರ್‌ಪಿಗಾಗಿ ಜನರನ್ನು ಹಿಡಿದಿಡಲು ಮಾಡುವ ಪೂರ್ವನಿಯೋಜಿತ ಪ್ಲಾನ್‌ಗಳು ಎಂಬ ಅನುಮಾನ ಹುಟ್ಟುತ್ತದೆ. ಹಲವು ಬಾರಿ ನೂರಕ್ಕೆ ನೂರು ಅಂಕ ಪಡೆದಿರುವ ಹನುಮಂತನಿಗಿಂತ ಇತರರು ಚೆನ್ನಾಗಿ ಹಾಡುತ್ತಾರೆ ಎಂದು ವಾದಿಸುವವರೂ ಇದ್ದಾರೆ. ಕಾರ್ಯಕ್ರಮದ ಕೊನೆಯವರೆಗೂ ಜನರನ್ನು ಹಿಡಿದಿಡಲು ಮುಗ್ಧತೆಯನ್ನು ಅತಿಯಾಗಿ ವೈಭವೀಕರಿಸುವ ಅಥವಾ ತಮಾಷೆ ಮಾಡುವುದನ್ನು ನಡೆಸಿಕೊಂಡೇ ಅವರನ್ನು ಫೈನಲ್‌ವರೆಗೂ ತರುತ್ತಾರೆ ಎನ್ನುವ ಆಪಾದನೆ ಸಹ ಹೊಸದೇನಲ್ಲ.

ಇದೆಲ್ಲದರ ನಡುವೆಯೂ ಹೆಚ್ಚು ಹೆಗಡೆ, ಹೊಳ್ಳ, ರಾವ್, ಶರ್ಮ, ಭಟ್‌ಗಳೇ ತುಂಬಿರುವ ಇಂತಹ ಸಂಗೀತ ವೇದಿಕೆಗಳ ನಡುವೆ ಯಾವುದೋ ಮೂಲೆಯ ಹಳ್ಳಿಯೊಂದರ ಪ್ರತಿಭೆಗೆ ಅವಕಾಶ ಸಿಗುತ್ತಿದೆ ಅನ್ನುವುದು ನಿಜವೇ ಆದರೂ, ಇದು ಟಿವಿ ಚಾನಲ್ ಅವರ ಆಟ ಮತ್ತು ಅವರದ್ದೇ ಮೈದಾನ ಅನ್ನುವುದು ವಾಸ್ತವ. ಇಂತಹ ಯಾವುದೇ ವೈಭವೀಕರಣ ಮಾಡದೇ ಭಾವಾವೇಶಕ್ಕೆ ಒಳಗಾಗದೇ ವಸ್ತುನಿಷ್ಠವಾಗಿ ನಡೆದುಕೊಳ್ಳುತ್ತಿದ್ದವರು ಹಂಸಲೇಖ ಅವರು. ಆದರೆ ಟೀವಿ ಚಾನೆಲ್‌ಗಳ ಟಿಆರ್‌ಪಿ ದಾಹದಿಂದ ಸೃಷ್ಟಿಗೊಳ್ಳುವ ಅನಿವಾರ್ಯ ಸಂದರ್ಭಗಳ ಮುಂದೆ ಅವರು ಕೂಡಾ ಸೋತು ರಾಜಿಯಾಗುವ ಮರ್ಜಿಗೆ ಸಿಲುಕಿದರಾ ಎನ್ನುವ ಪ್ರಶ್ನೆ ನಿಜಕ್ಕೂ ಅವರ ದೇಸಿ ಸಂಗೀತ ಪ್ರೀತಿಯನ್ನು ಅಪಾರವಾಗಿ ಅಭಿಮಾನಿಸುತ್ತಿದ್ದ ಸೂಕ್ಷ್ಮಸಂವೇದನೆಯ ಅಭಿಮಾನಿಗಳನ್ನು ಕಾಡುತ್ತಿದೆ.

ಹಳ್ಳಿಗಾಡಿನ ಯುವತಿ ಯುವಕರು ತಮ್ಮದೇ ಆದ ಜೀವನಶೈಲಿಯಲ್ಲಿ ಬದುಕುತ್ತಿರುತ್ತಾರೆ. ಅವರಿಗೆ ಅವರದ್ದೇ ಸಂಸ್ಕೃತಿ ಇರುತ್ತೆ. ಜೀವಪ್ರೀತಿಯೇ ಆ ಸಂಸ್ಕೃತಿಯ ಜೀವಾಳ. ಮುಗ್ಧತೆ ಅಲ್ಲಿ ಸಲೀಸಾಗಿ ಕಾಣಸಿಗುವ ಗುಣಲಕ್ಷಣ. ‘ಪ್ರತಿಭೆಗೆ ಅವಕಾಶ’ ಎಂಬ ಹೆಸರಲ್ಲಿ ಅವರನ್ನು ಸರಕಾಗಿಸಿಕೊಳ್ಳುವುದು ನಿಜಕ್ಕೂ ಕ್ರೂರ ಜಗತ್ತಿನ ಹೇಯ ಕೃತ್ಯ. ಹನುಮಂತಣ್ಣ ಮೊದಲ ಬಾರಿ ಶರೀಫಜ್ಜನ ಹಾಡು ಹಾಡಿ ಈ ರಿಯಾಲಿಟಿ ಶೋಗೆ ಆಯ್ಕೆಯಾದಾಗಲೇ ನ್ಯಾಯಪಥ ಪತ್ರಿಕೆ ಎಚ್ಚರಿಕೆಯ ಬರಹ ಪ್ರಕಟಿಸಿತ್ತು. ಅವನ ಪ್ರತಿಭೆ ಬೆಳಗಲಿ, ಆದರೆ ಮುಗ್ಧತೆ ಸರಕಾಗದಿರಲಿ ಎಂದು ಆಶಿಸಿತ್ತು. ಇದೀಗ ಹನುಮಂತುಗಿಂತ ಚೆನ್ನಾದ ಹಾಡುಗಾರಿಕೆ ಇದ್ದವರನ್ನೂ ಹಿಮ್ಮೆಟ್ಟಿಸಿ ಆತನಿಗೆ ಫೈನಲ್‌ನಲ್ಲಿ ಜಾಗ ಕೊಟ್ಟಿರೋದನ್ನು ನೋಡಿದರೆ ನಿಜಕ್ಕೂ ಅದು ಅವನ ಪ್ರತಿಭೆಗೆ ಸಂದ ಗೌರವಕ್ಕಿಂತ ಹೆಚ್ಚಾಗಿ ಅವನನ್ನು ಫೈನಲ್‌ಗೆ ಟಿಆರ್‌ಪಿ ಸರಕಾಗಿ ಬಳಸಿಕೊಳ್ಳುವ ಟೀವಿಯವರ ಹುನ್ನಾರವಾಗಿ ಕಾಣಿಸುತ್ತೆ.

ಎಷ್ಟೇ ಆಗಲಿ ಅದು ಸಂಗೀತ ಸ್ಪರ್ಧೆ. ಅಲ್ಲಿ ಸಂಗೀತವೇ ಮುಖ್ಯವಾಗಬೇಕೆ ವಿನಃ ಬೇರೆಯ ಕಾರಣಗಳಲ್ಲ. ಹನುಮಂತನ ಆಯ್ಕೆಯಲ್ಲಿ ಈ ಬೇರೆ ಕಾರಣಗಳೇ ಎದ್ದು ಕಾಣುತ್ತಿರೋದು ವಿಪರ್ಯಾಸ. ಒಂದೊಮ್ಮೆ ಅಂತಹ ಯಾವ ಲೆಕ್ಕಾಚಾರಗಳೂ ಇಲ್ಲದೆ ತನ್ನ ಹಾಡಿನ ಪ್ರತಿಭೆಯಿಂದಲೇ ಹನುಮಂತು ಈ ಸ್ಥಾನಕ್ಕೇರಿದ್ದರೆ ಪತ್ರಿಕೆ ಆತನಿಗೆ ನಿಜವಾಗಲೂ ಶುಭ ಹಾರೈಸುತ್ತದೆ. ಯಾಕೆಂದರೆ, ಕೆಲ ಪ್ರಬಲ ಸಮುದಾಯಗಳಿಗಷ್ಟೇ ಸೀಮಿತವಾಗಿದ್ದ ಇಂಥಾ Sophisticated ಕಲೆಗಳ ಚಾರಿತ್ರಿಕ trait ಅನ್ನು ಮೀರಿ ಆತ ಬೆಳೆದಿರೋದು ನಿಜಕ್ಕೂ ಹೆಮ್ಮೆಯ ವಿಷಯ. ಆದಾಗ್ಯೂ ಈ ಫ್ಯಾಂಟಸಿ ಟೀವಿ ಜಗತ್ತಿನ ವ್ಯಾಮೋಹಗಳ ಒಳಗೆ, ನಿಭಾಯಿಸಲಾಗದ ‘ಯಶಸ್ಸಿನ’ ಉಸುಕುನೆಲದೊಳಗೆ ಇಂಥಾ ಪ್ರತಿಭೆಗಳು ಹೂತು ಹೋಗದಿರಲಿ ಎಂಬುದಷ್ಟೇ ನಮ್ಮ ಕಾಳಜಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...