Homeಅಂಕಣಗಳುದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ದೇವೇಗೌಡ್ರು ಯಾವ ಜನಾಂಗನೂ ದ್ವೇಷ ಮಾಡಲ್ಲ

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು.

- Advertisement -
- Advertisement -

ಅದೊಂದು ಹಿರಿಯರು ಒಪ್ಪಿದ ಮದುವೆ. ಯಾಕೆಂದರೆ ಮನೆ ನಡೆದುಕೊಂಡು ಹೋಗಬೇಕು. ವಂಶಾಭಿವೃದ್ಧಿಯಾಗಬೇಕು. ಆ ವಂಶ ಊರಲ್ಲೆಲ್ಲಾ ಹರಡಬೇಕು. ಕುಟುಂಬದ ವೈರಿಗಳು ನಿರ್ನಾಮವಾಗಬೇಕು. ಊರು ಅಭಿವೃದ್ಧಿಯಾಗಬೇಕು. ಇತ್ಯಾದಿ ಆಶಯಗಳೊಂದಿಗೆ ನಡೆದುಹೋದ ಬಲವಂತದ ಮದುವೆ. ಆದರೂ ಏಗಬೇಕಿದೆ. ಒಂದುವೇಳೆ ವಿಚ್ಛೇದನವಾದರೆ, ಅದನ್ನೆ ಕಾಯುತ್ತ ಕುಳಿತ ವೈರಿಪಡೆ, ಬೇಕಾದಷ್ಟು ಧನಕನಕ ವಸ್ತುಗಳನ್ನು ಕೊಟ್ಟು ಹುಡುಗಿ ಹೇಗಾದರೂ ಇರಲಿ ಆರಿಸಿಕೊಂಡು ಹೋಗಿ ಮದುವೆ ಮಾಡಿಕೊಳ್ಳಲು ತುದಿಗಾಲ ಮೇಲೆ ನಿಂತಿದೆ. ಇಂತಹ ಅಪಾಯದ ಸನ್ನಿವೇಶವರಿತ ವಧುವಿನ ತಂದೆಯ ಪಾಡು ಹೇಳತೀರದು. ಇಂತದೊಂದು ಕುಟುಂಬದ ಸ್ಥಿತಿ ಕರ್ನಾಟಕದ ರಾಜಕಾರಣವನ್ನೇ ಹೋಲುತ್ತಿದೆಯಂತಲ್ಲಾ. ಈ ನಡುವೆ ವಧುವಿನ ಕಡೆಯ ಕುರುಬರ ಪೈಕಿಯ ಯಜಮಾನನೊಬ್ಬ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿರುವ ತೀರ್ಮಾನ ಕೇಳಿ ಫೋನ್ ಮಾಡಬೇಕೆನಿಸಿತಲ್ಲಾ. ತಡ ಮಾಡದೆ ಫೋನ್ ಮಾಡಲಾಗಿ ರಿಂಗಾಯ್ತು.

ರಿಂಗ್‍ಟೋನ್: … ನಿನಗ್ಯಾರಿದ್ದರೇನು ಸುಖವಿಲ್ಲಾ ಪ್ರಭುವೆ. ದಾರಿ ಸುಖವಿಲ್ಲ… ಬಾಯಾರಿತು ಎಂದು ದಳದ ಬಾವಿಗೆ ಪೋದೆ.
“ಹಲೋ ಯಾರೂ”
“ನಾನೂ ಸರ್ ಯಾಹೂ”
“ಏನಪ್ಪ ಯಾಹೂ”
“ಚೆನ್ನಾಗಿದ್ದೀರಾ ಸರ್”
“ಏನೋ ಹಿಂಗಿದೀನಿ”
“ದಳದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ರಂತಲ್ಲ ಸಾರ್”
“ಜವಾಬ್ದಾರಿ ಸಾಕು ಅನ್ನುಸ್ತು ಕೊಟ್ಟೆ”
“ಜವಾಬ್ದಾರಿ ಏನಿತ್ತು ಸಾರ್ ಅಲ್ಲಿ”
“ಒಂದು ಪಾರ್ಟಿ ಅಧ್ಯಕ್ಷ ಅಂದಮೇಲೆ ಜವಾಬ್ದಾರಿ ಇರಲ್ವೆ”

“ನಾನು ತಿಳಕಂಡಂಗೆ ಸಾರ್, ಜನತಾದಳದ ಜವಾಬ್ದಾರಿ ಅಂದ್ರೆ, ಬೆಳಿಗ್ಗೆ ತಿಂಡಿ ತಿನ್ನುವಾಗ ದೇವೇಗೌಡ್ರು ಕುಮಾರಣ್ಣ ರೇವಣ್ಣ ಆಡಿದ ಮಾತುಗಳು ನಿಮಗೆ ತಲುಪ್ತವೆ, ಅವನ್ನ ಕೇಳಿಸಿಗಂಡು ಸುಮ್ಮನಾಗದು ಅಲವೆ ಸಾರ್”
“ಅದು ನಿಮ್ಮ ಊಹೆ”

“ಆಮೇಲೆ ಅಡುಗೆ ಮನೆಯಿಂದ ಚೆನ್ನಮ್ಮ ಅದೇನೇನೊ ಹೇಳ್ತಾರೆ. ಮತ್ತೆ ಭವಾನಿ ಹೇಳಿದ್ದ ರೇವಣ್ಣ ತಂದಿರತನೆ. ಈ ತರ ಮಾತು ಕತೆ ಪಾರ್ಟಿ ಅಧ್ಯಕ್ಷನಿಗೆ ತಲುಪಬಹುದು ಅಥವಾ ತಲುಪದೆಯೂ ಇರಬಹುದು. ಇಂತಹ ಪಾರ್ಟಿಯ ಅಧ್ಯಕ್ಷನಾದವನು ಅಸಾಮಾನ್ಯ ತಾಳ್ಮೆ, ಮುಜುಗರ ಸಹಿಸಿಕೊಳೊ ಶಕ್ತಿ ಪಡೆದಿರಬೇಕು ಅಲ್ವ ಸಾರ್”
“ನೀವು ಹೇಳ್ತಕಂತ ಯಾವುದೇ ಸನ್ನಿವೇಶನ ನಾನು ಎದುರಿಸಿಲ್ಲ”

“ಪಂಚಾಯ್ತಿ ಚುನಾವಣೇಲಿ ಸ್ವಜಾತಿಗೊಂದು ಟಿಕೆಟ್ ಕೊಡಲಿಕ್ಕಾಗದ ಪಾರ್ಟಿ ಅಧ್ಯಕ್ಷಗಿರಿ ಇನ್ನೆಂತದಿರಬೇಕು ಸಾರ್”
“ನನ್ನ ರಾಜೀನಾಮೆ ಅವನ್ನೆಲ್ಲಾ ಒಳಗೊಂಡಿದೆ”

“ಒಳ್ಳೆ ಕೆಲಸ ಮಾಡಿದ್ರಿ. ಸಾಮಾನ್ಯವಾಗಿ ದೇವೇಗೌಡ್ರು ಪಾರ್ಟಿ ಅಧ್ಯಕ್ಷನ್ನ ಅವನ ಅನುಪಸ್ಥಿತೀಲಿ ಬದ್ಲಾಯಿಸ್ತಾರೆ. ಆದ್ರೆ ನೀವೇ ರಾಜೀನಾಮೆ ಕೊಟ್ಟಿದ್ದು ಒಳ್ಳೆದು. ಸಾರ್”
“ನೋಡಿ ಯಾಹೂ, ಕಾಲಕ್ಕೆ ನಾವು ಅಂಟಿಕೊಂಡು ಕೂತ್ಗಬಾರ್ದು. ಕಾಲ ಬದಲಾವಣೆ ಬಯಸಿದಾಗ ನಾವು ಬದಲಾಗಬೇಕು”

“ನಿಜ ಸಾರ್, ಆ ಸಿದ್ದರಾಮಯ್ಯನ್ನ ಹಿಡಕಂಡೋಗಿ ಕಾಂಗೈ ಸೇರಿಸಿದ್ರಿ. ನೀವು ಬಂದು ದಳದ ಅಧ್ಯಕ್ಷರಾದ್ರಿ. ಏನಾಶ್ಚರ್ಯ ಅಲವಾ”
‘‘ಅದಕ್ಕೆ ರಾಜಕಾರಣ ಅನ್ನದು”

“ಅಂದ್ರೆ ರಾಜಕಾರಣದಲ್ಲಿ ಏನಾದ್ರು ಆಗಬವುದ?”
“ನೀವೇ ನೋಡಿದ್ರಲ್ಲ, ನಿಮ್ಮಪ್ಪನಾಣೆ ಮುಖ್ಯಮಂತ್ರಿ ಆಗಲ್ಲ ಅಂತ ಬೆಳಿಗ್ಗೆ ಕುಮಾರಸ್ವಾಮಿಗೆ ಹೇಳಿದ ಸಿದ್ದರಾಮಯ್ಯ, ಮಧ್ಯಾಹ್ನ ಒಂದು ಗಂಟೆಗೆ ಬಂದು ನಿಮ್ಮಪ್ಪನಾಣೆ ನೀನೆ ಮುಖ್ಯಮಂತ್ರಿ ಆಗು ಬಾ ಅಂದಿರೋದು. ಇಂತದ್ದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ನಡೆದಿರಲಿಲ್ಲ”

“ಇದನ್ನ ಅವಮಾನಕರ ನಡವಳಿಕೆ ಅಂತೀರಾ”
“ಇಲ್ಲ ಹಾಗನ್ನಲ್ಲ. ಮತೀಯ ಶಕ್ತಿಗೆ ಅವಕಾಶ ಕೊಡಬಾರ್ದು ಅನ್ನೊ ತೀರ್ಮಾನಕ್ಕೆ ತಲೆಬಾಗಿದ್ದು ಅಂತ ಭಾವುಸ್ತೀನಿ. ಆದ್ರೆ ಅಹಂಕಾರದ ಮಾತು ಯಾರಿಗೂ ಒಳ್ಳೆದಲ್ಲ”

“ಸಿದ್ದರಾಮಯ್ಯನಿಗೆ ಅಹಂಕಾರ ಇದೆ ಅಂತೀರಾ?”
“ಅಹಂಕಾರದ ಮೂರ್ತಿರೂಪ ಆತ”

“ಅದು ಅಹಂಕಾರದ ತರದ ವ್ಯಕ್ತಿರೂಪವಂತಲ್ಲಾ”
“ಹಾಗೇನೂ ಇಲ್ಲ. ಉಪಕಾರ ಸ್ಮರಣೆ ಇಲ್ಲದ ಧಿಮಾಕಿನ ಮನ್ಸ ಆತ. ಮನುಷ್ಯನಿಗೆ ತಪ್ಪು ತಿದ್ದಿಕಳೊ ಒಳನೋಟ, ಅಹಂಕಾರಕ್ಕೆ ಅವಕಾಶ ಕೊಡದ ವ್ಯಕ್ತಿತ್ವ ಇರಬೇಕು”

“ನೀವು ಒಂದು ಕಾಲದ ಸಿದ್ದು ಅಭಿಮಾನಿ. ಅವರಿಗಾದ ಅವಮಾನಾನ ನೀವು ಸಹಿಸುತಿರಲಿಲ್ಲ. ಸಿದ್ದುನ ಯಾರಾದ್ರು ಟೀಕೆ ಮಾಡಿದ್ರೆ ನೀವು ಪ್ರತಿಕ್ರಿಯಿಸ್ತಿದ್ರಿ. ಇದು ನಿಮ್ಮ ತಪ್ಪೊ ಸಿದ್ದರಾಮಯ್ಯರ್ ತಪ್ಪೊ ಹೇಳಿ”
“ನನ್ನದೇ ತಪ್ಪು”

“ಈ ತಪ್ಪಿನಲ್ಲಿ ಮತೀಯ ಅಂಶ ಇದೆ ಅಲ್ವ”
“ಇರಬವುದು”

“ಇರಬವುದೇನು, ಇದೆ ಸಾರ್. ನಮ್ಮ ಜನಾಂಗದ ಲೀಡ್ರು, ಅವನನ್ನ ಯಾರೂ ಟೀಕೆ ಮಾಡಬಾರ್ದು ಬೈಯ್ಯಬಾರ್ದು ಅಂತ ಭಾವಿಸಿದ್ದ ಮನಸ್ಸಿನ ಕಣ್ಣು ತೆರಿಸಿದಾನಲ್ಲ ಸಿದ್ದರಾಮಯ್ಯ”
“ಇರಬವುದು”

“ಅವುರಂಗೆ ಮಾಡಿದ್ರಿಂದ ನೀವು ದಳಕ್ಕೆ ಬಂದು ಲೀಡರಾದ್ರಿ, ಶಾಸಕರಾದ್ರಿ, ಅಧ್ಯಕ್ಷರಾದ್ರಿ”
“ನಿಜ ನನ್ನ ರಾಜಕೀಯದ ಅಂತ್ಯ, ನಿರಾಶೆಗೊಳ್ಳೊತರ ಇಲ್ಲ. ಮಾಜೀ ಪ್ರಧಾನಿಯ ಪಾರ್ಟಿಗೆ ಅಧ್ಯಕ್ಷನಾದದ್ದು ಸಾಮಾನ್ಯ ಸಂಗತಿಯಲ್ಲ”

“ಈಗಲಾದ್ರು ದೇವೇಗೌಡ್ರಿಗೆ ಕುರುಬರನ್ನ ಕಂಡ್ರೆ ಅವ್ಯಕ್ತ ಅಕ್ಕರೆ ಇದೆ ಅನ್ನದನ್ನ ಒಪ್ಪಿಗತಿರಾ”
“ನೋಡಿ ಯಾಹು, ದೇವೇಗೌಡ್ರಿಗೆ ಯಾವ ಜನಾಂಗ ಕಂಡ್ರೂ ದ್ವೇಷ ಇಲ್ಲ. ರಾಜಕಾರಣದ ಕಾರಣಕ್ಕೆ ಅಂತ ಆಪಾದನೆಗಳಿಗೆ ಗುರಿಯಾಗ್ತಾರೆ”

“ಹೌದ ಸಾರ್”
“ನೋಡಿ, ಅವುರು ಬ್ರಾಹ್ಮಣ ವಿರೋಧಿ ಅಂತಾರೆ, ಅದೂ ಕೂಡ ಸುಳ್ಳು. ಲಿಂಗಾಯತರ ಬೊಮ್ಮಾಯಿ ಅಂದ್ರೆ ಅವರಿಗೆ ಪಂಚಪ್ರಾಣ. ದಲಿತರ ಡಾ.ತಿಪ್ಪೇಸ್ವಾಮಿನ ಪಾರ್ಟಿ ಪ್ರೆಸಿಡೆಂಟ್ ಮಾಡಿದ್ರು. ಲಿಂಗಾಯಿತರ ತಿಪ್ಪಣ್ಣನ್ನ ಅಧ್ಯಕ್ಷನ್ನ ಮಾಡಿದ್ರು. ಆ ನಂತರ ಕುರುಬರ ಸಿದ್ದರಾಮಯ್ಯನ್ನ ಅಧ್ಯಕ್ಷನನ್ನಾಗಿ ಮಾಡಿ ಫೈನಾನ್ಸ್ ಮಿನಿಷ್ಟ್ರು ಮಾಡಿದ್ರು. ಈಗ ನನ್ನ ಮಾಡಿದಾರೆ”

“ಅದೇ ಸಾರ್ ನಾನೇಳಿದ್ದೂ, ಕುರುಬರನ್ನ ಮುಂದೆ ತಂದಂಗೆ ಒಕ್ಕಲಿಗರನ್ನ ತರಲಿಲ್ಲ. ಒಕ್ಕಲಿಗರನ್ನೆಲ್ಲಾ ಮುಗಿಸಿ ಅಲ್ಲಿಗೆ ತಮ್ಮ ಕುಟುಂಬವನ್ನ ನಾಟಿ ಮಾಡ್ತಾ ಬಂದ್ರು. ಇದನ್ನ ಒಪ್ಪಿಗಳ್ತಿರಾ”
“ಒಕ್ಕಲಿಗ ನಾಯಕರನ್ನ ತುಳುದ್ರು ಪರ್ಯಾಯವಾಗಿ ಒಕ್ಕಲಿಗ ಲೀಡರನ್ನ ಬೆಳಸಿದಾರೆ”

“ಅದೆಲ್ಲಾ ಅಂಗಿರ್ಲಿ. ಲೋಕಸಭಾ ಚುನಾವಣೇಲಿ ಜನ ಸಮ್ಮಿಶ್ರ ಸರ್ಕಾರದ ವಿರುದ್ಧ ಓಟು ಕೊಟ್ಟಿರೋದನ್ನ ಒಪ್ಪಿಗಳ್ತೀರಾ”

“ಮೋದಿ ಅಲೆ”
“ಮೋದಿದೂ ಇಲ್ಲ ಯಂತದೂ ಇಲ್ಲ. ಒಂದೊರ್ಸದಿಂದ ದಳದೋರು ಕಾಂಗ್ರೆಸ್‍ನೋರು ಆಡ್ತಾಯಿರೊ ಜಗಳ ನಿಲ್ಸಕ್ಕೆ ಸೋಲ್ಸಿದ್ರು”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...