Homeಸಾಮಾಜಿಕಜೋಯಿಸರ ‘ವರ್ಚುವಲ್’ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ಮು!

ಜೋಯಿಸರ ‘ವರ್ಚುವಲ್’ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ಮು!

- Advertisement -
- Advertisement -

ನಕಲಿ ಜೋಯಿಸರ ಬುರುಡೆ ಶಾಸ್ತ್ರಗಳು ಹೇಗೆ, ಜನ್ಮದಿಂದ ಸುತ್ತಿಕೊಂಡು, ಹೆಸರಿನಿಂದ ಗಟ್ಟಿಗೊಂಡು, ಪಂಚಾಂಗಗಳೆಂಬ ಬಾಹುಗಳಿಂದ ಕಟ್ಟಿಹಾಕುತ್ತವೆಂಬುದನ್ನು ನೋಡಿದೆವು. ಕಳೆದ ಬಾರಿ ವಿವರಿಸಿದ ಹಲ್ಲಿ ಶಕುನ ಎಷ್ಟು ವ್ಯಾಪಕವಾಗಿದೆ ಎಂಬುದನ್ನು ಸೂಚಿಸಲು ಓದುಗರಾದ ಪುಷ್ಪಾ ಸುರೇಂದ್ರ ಅವರು ಕಾಂಚಿಪುರಂ ದೇವಾಲಯದ ಉದಾಹರಣೆ ಕೊಟ್ಟಿದ್ದಾರೆ. ಅಲ್ಲೊಂದು ಕಲ್ಲಿನ ಹಲ್ಲಿಯಿದೆಯಂತೆ. ಈ ಹಲ್ಲಿಪತನ ಫಲದಿಂದ ಭಯಗೊಂಡವರು ಬೇರೆಬೇರೆ ರಾಜ್ಯಗಳಿಂದ ಪರಿಹಾರಾರ್ಥ ಇಲ್ಲಿ ಬಂದು ಅದರ ಮೇಲೆ ಎಣ್ಣೆ ಸುರಿಯುತ್ತಾರಂತೆ! ಅಂದರೆ ಈ ಹಲ್ಲಿಯನ್ನೇ ಜನರ ಮೇಲೆಸೆದು ಬೆದರಿಸಿ ದೋಚುವ ದೊಡ್ಡ ಜಾಲವೇ ಕಾರ್ಯಾಚರಿಸುತ್ತಿದ್ದೆ ಎಂದಾಯಿತು! ಅದಿರಲಿ, ನಾವೀಗ ಹುಟ್ಟಿನಿಂದ ನೇರವಾಗಿ ಸಾವಿಗೆ ಹೋಗಿ ಅಲ್ಲಾಗಿರುವ ಮಹಾನ್ ಆವಿಷ್ಕಾರಗಳನ್ನು ನೋಡೋಣ. ನಂತರ ವಿಸ್ತಾರವಾದ ಜೀವನಕ್ಕೆ ಬರೋಣ.
ಕೆಲ ವರ್ಷಗಳ ಹಿಂದೆ ನನ್ನ ದೊಡ್ಡಪ್ಪ ಮುಂಬಯಿಯಲ್ಲಿ ತೀರಿಕೊಂಡಾಗ ಅವರ ಮತ್ತು ಅದಕ್ಕೆ ಕೇವಲ ಒಂದು ವಾರ ಮೊದಲು ತೀರಿಕೊಂಡಿದ್ದ ಅವರ ಪತ್ನಿ- ದೊಡ್ಡಮ್ಮನ ಶವಸಂಸ್ಕಾರವನ್ನು ಅವರ ಗೆಳೆಯರು ವಿದ್ಯುತ್ ಚಿತೆಯಲ್ಲಿ ಯಾವುದೇ ಧಾರ್ಮಿಕ ಕ್ರಿಯಾಕರ್ಮ ಇಲ್ಲದೇ ಮಾಡಿದ್ದರು. ಅವರಿಗೆ ಮಕ್ಕಳಿರಲಿಲ್ಲ.
ನಾಸ್ತಿಕರಾಗಿದ್ದ ಅವರ ಪಿಂಡ ಪ್ರಧಾನವನ್ನೂ ಯಾರೂ ಮಾಡಿಲ್ಲ ಎಂದು ಬಹುವಾಗಿ ನೊಂದ ಮುಂಬಯಿಯಲ್ಲೇ ಇದ್ದ ಅವರ ತಂಗಿ, ಅಂದರೆ ನನ್ನ ಅತ್ತೆ ಪಿಂಡ ಬಿಡಲು ನನ್ನನ್ನು ಕರೆಸಿದರು. ಹಿಂದೂ ಆಚರಣೆಗಳ ಬಗ್ಗೆ ಅತೀವ ಶ್ರದ್ಧೆ ಇದ್ದ ಅತ್ತೆ ಮದುವೆಯಾದದ್ದು ಕ್ರೈಸ್ತರನ್ನು ಎಂದರೆ ನಿಮಗೆ ಆಶ್ಚರ್ಯ ಆಗಬಹುದು!
ದೊಡ್ಡಪ್ಪನ ಶಿಷ್ಯನೂ, ದೇವ-ಧರ್ಮ ನಿರ್ಲಿಪ್ತನೂ ಅದ ನಾನು, ಅವರ ಮನ ನೋಯಿಸಲು ಇಚ್ಛಿಸದೇ ಒಪ್ಪಿಕೊಂಡಿದ್ದೆ. ಮುಂಬಯಿಯಲ್ಲೇ ಕೆಲ ವರ್ಷ ಇದ್ದ ನನಗೆ ಜನ ನಿಭಿಡ ಮೆರೀನ್ ಲೈನ್ಸ್ನಲ್ಲಿ ಎತ್ತರವಾದ ಗೋಡೆಗಳ ಹಿಂದೆ ಅಷ್ಟೊಂದು ದೊಡ್ಡ ಸ್ಮಶಾನವಿದೆ ಎಂದು ಗೊತ್ತೇ ಇರಲಿಲ್ಲ. ಅದೊಂದು ಹಳ್ಳಿಯೇ ಅಗಿದ್ದು, ಬೇರೆ ಬೇರೆ ಜಾತಿಗಳವರು ನೂರಾರು ವರ್ಷಗಳ ಹಿಂದೆಯೇ ಕ್ರಿಯಾಕರ್ಮಗಳಿಗೆಂದು ಕಟ್ಟಿಸಿದ್ದ ದೊಡ್ಡ ದೊಡ್ಡ ಪುರಾತನ ಮನೆಗಳಿದ್ದವು. ಅಲ್ಲಿ ಅದಕ್ಕಾಗಿಯೇ ಹಲವಾರು ಅರ್ಚಕ ಕುಟುಂಬಗಳೂ ವಾಸಿಸುತ್ತಿದ್ದವು! ಅದೊಂದು ಬ್ರಾಹ್ಮಣ ಗ್ರಾಮವಾಗಿದ್ದು, ಇವೆಲ್ಲಾ ಬೇಕಾಬಿಟ್ಟಿ ಹಣ ಮಾಡುವ ಅಧಿಕೃತ ಏಜೆನ್ಸಿಗಳು!
ನನ್ನ ಸಂಬಂಧಿಯೊಬ್ಬರು ಕ್ರಿಯೆಗೆ ಕೂತುದರಿಂದ ನನಗೆ ಸಂಕಷ್ಟ ತಪ್ಪಿತು. ನಮಗೆ ಸಿಕ್ಕಿದ ಭಟ್ರು ಮಂತ್ರದ ಅರ್ಥ ಮಾತ್ರವಲ್ಲದೆ, ಆ ಪದ್ಧತಿ ಬಂದುದರ ಹಿನ್ನೆಲೆ, ಆಚರಣೆಯ ವೈದಿಕ ಅರ್ಥ, ಕಾಲಾನುಕ್ರಮದಲ್ಲಿ ಆದ ಬದಲಾವಣೆಗಳು ಎಲ್ಲವನ್ನೂ ವಿವರಿಸಿ ಹೇಳುತ್ತಿದ್ದರು. “ನಿಮಗೆ ಅರ್ಧವಾಗದೆ ನೀವಿದನ್ನು ಮಾಡಿ ಏನು ಪ್ರಯೋಜನ?” ಎಂಬ ಅವರ ಮಾತನ್ನು ಈಗಿನ ಸುಲಿಗೆಕೋರರಿಗೂ, ಅವರ ಬಕ್ರಾಗಳಿಗೂ ಕೇಳಬೇಕು!
ಹಿಂದೂ ಧರ್ಮ ಪ್ರಕಾರ ನನ್ನ ದಿವಂಗತ ದೊಡ್ಡಪ್ಪ ಮತ್ತು ದೊಡ್ಡಮ್ಮನಿಗೆ ಸ್ಥಾನಮಾನ ಬೇರೆ ಬೇರೆಯಾಗಿದ್ದುದರಿಂದ ಪಿತೃ ಪ್ರಧಾನ ಸಂಸ್ಕೃತಿಯಂತೆ ಗಂಡು-ಹೆಣ್ಣು ತಾರತಮ್ಯದ ಕ್ರಿಯೆಗಳು ನಡೆದವು. ಅದು ಯಾಕೆ ಇತ್ಯಾದಿಗಳನ್ನೂ ಅವರು ‘ವೇದಾಧಾರದಲ್ಲಿ’ ವಿವರಿಸಿದರು.
ಇದನ್ನು ಯಾಕೆ ಹೇಳಿದೆನೆಂದರೆ ಈಗ ನಿಮ್ಮನ್ನು ಹುಸಿಮಂತ್ರಗಳ ಭಯದ ಕತ್ತಲಲ್ಲಿಟ್ಟು ನೀವು ಬೆರಳು ತೋರಿಸದೆಯೇ ಹಸ್ತ ಮಾತ್ರವಲ್ಲ, ಇಡೀ ದೇಹವನ್ನೇ ನುಂಗುವ ಜೋಯಿಸರುಗಳು ಟಿವಿಗಳಲ್ಲೇ ವಕ್ಕರಿಸುತ್ತಿರುವಾಗ ಇಂತವರು ‘ನವಗ್ರಹ’ ಯೋಗದಂತೆ ತಾತಾ ಅಪರೂಪ!
ವಿಶೇಷವೆಂದರೆ ಸರಳವಾಗಿದ್ದ ಈ ವ್ಯಕ್ತಿ ‘ಶಾಸ್ತ್ರ’ದಲ್ಲಿ ಎಷ್ಟು ಹೇಳಿದೆಯೋ ಅಷ್ಟೇ- ಅಂದರೆ, ಪೈಸೆ, ಅಣೆ ಲೆಕ್ಕದಲ್ಲಿ ಚಿಲ್ಲರೆ ಹಣ ಮಾತ್ರ ಪಡೆಯುತ್ತಿದ್ದರು!
“ನಿಮ್ಮಲ್ಲಿ ಚಿಲ್ಲರೆ ಇರಲಿಕ್ಕಿಲ್ಲವಾದುದರಿಂದ ಅದನ್ನೂ ನಾನೇ ತಂದಿದ್ದೇನೆ” ಎಂದು ಜೋಳಿಗೆಯಿಂದ ಹಳೆಯ ನಾಣ್ಯಗಳನ್ನು ತೆಗೆದರು. “ನಿಮಗೆ ನಾನು ಸಾಲ ಕೊಡುತ್ತೇನೆ. ಅದನ್ನು ನೀವು ಶಾಸ್ತ್ರದಂತೆ ನನಗೆ ದಾನ ಮಾಡಬೇಕು. ನಂತರ ನನ್ನ ಸಾಲವನ್ನು ಒಟ್ಟಿಗೆ ತೀರಿಸಿ. ಶಾಸ್ತ್ರದ ಪ್ರಕಾರ ನೀವು ನನಗೆ ಗೋದಾನ ಮಾಡಬೇಕು. ಈಗ ಈ ನಗರದಲ್ಲಿ ಗೋವನ್ನು ಎಲ್ಲಿಂದ ತರುತ್ತೀರಿ? ನಾನೆಲ್ಲಿ ಸಾಕಲಿ? ಗೋವು ಇಲ್ಲದಿದ್ದಲ್ಲಿ ಶಾಸ್ತ್ರದಲ್ಲಿ ಚಿನ್ನದ ಪ್ರತಿಮೆ ದಾನ ಮಾಡಬಹುದೆಂದಿದೆ. ನಾನು ಅದನ್ನೂ ತಂದಿದ್ದೇನೆ” ಎಂದು ಜೋಳಿಗೆಯಿಂದ ಚಿನ್ನದ ಚಿಕ್ಕ ದನದ ಪ್ರತಿಮೆ ತೆಗೆದರು.
“ನಾನು ನಿಮಗೆ ಹಣ ಸಾಲಕೊಟ್ಟು ಇದನ್ನು ಮಾರುತ್ತೇನೆ. ಆ ಕಾಲದ ರೇಟು ಒಂದೂ ಕಾಲು ರೂಪಾಯಿ. ಹಣ ನಂತರ ಕೊಡಿ” ಎಂದು ಚಿನ್ನದ ದನವನ್ನು ಅತ್ತೆಗೆ ಮಾರಿದರು. ನಂತರ ಅದನ್ನೇ ದಾನವಾಗಿ ಪಡೆದರು ಎನ್ನಿ! ಮಾರಿದ ಹಣ ಬೇರೆ, ದಾನ ಲಾಭ ಪ್ರತ್ಯೇಕ! ಅದರೂ ಅವರು ದನದ ಪ್ರಸ್ತುತ ರೇಟು ಪಡೆಯಲಿಲ್ಲ! ಅದೇ ರೀತಿ ಜೋಳಿಗೆಯಿಂದ ಮಣ್ಣನ್ನು ತೆಗೆದು ತಾವೇ ಮಾರಿ, ಭೂದಾನವನ್ನೂ ಪಡೆದರು. ಎಲ್ಲವನ್ನೂ ಅಣೆ ಪೈ ಲೆಕ್ಕದಲ್ಲಿ ದಕ್ಷಿಣೆ ಪಡೆದರು. ನಾನು ಈ ವರ್ಚುವಲ್ ಗೋದಾನ, ಭೂದಾನ ಮತ್ತು ಕ್ರೆಡಿಟ್ ಸಿಸ್ಟಮ್ ನೋಡಿ ಅಚ್ಚರಿಪಟ್ಟೆ.
ನನ್ನ ಅತ್ತೆಯವರಿಗಂತೂ ಖುಷಿಯಾಗಿ ಕೊನೆಗೆ ಉದಾರ ದಕ್ಷಿಣೆ ಕೊಟ್ಟ ರೂ, ಅವರು ಅದರಲ್ಲಿ ಈಗಿನ ಲೆಕ್ಕಾಚಾರ ಹಾಕಿ ಸ್ವಲ್ಪವನ್ನೇ ತೆಗೆದುಕೊಂಡರು! “ನಿಮಗಿದು ಈಗ ಕಡಿಮೆ ಕಾಣಬಹುದು. ಹಿಂದಿನ ಕಾಲದಲ್ಲಿ ಇದು ಭಾರೀ ದೊಡ್ಡ ಹಣ!” ಎಂದು ನೆನಪಿಸಿದರು ಬೇರೆ!!
ಇವೆಲ್ಲಾ ನಮಗೆ ಜೀವನದ ಅರ್ಥ ಮಾಡಿಸುವ ಸಾಂಕೇತಿಕ ಕ್ರಿಯೆಗಳು ಮಾತ್ರ ಅವುಗಳಿಗೆ ಪ್ರಸ್ತುತತೆ ಅರ್ಥ ಇಲ್ಲ. ಹಿಂದಿನವರ ಜೀವನಕ್ರಮ, ಅವರು ಕಂಡುಕೊಂಡ ಅರ್ಥವನ್ನು ನೆನಪಿಸುವುದು ಇವುಗಳ ಉದ್ದೇಶ ಎಂದೂ ವಿವರಿಸಿದರು.
ನಾನು ಒಂದು ಕಡೆ ಬೆರಗಾಗುತ್ತಾ, ಇನ್ನೊಂದು ಕಡೆ ಮನಸ್ಸಿನಲ್ಲೇ ನಗುತ್ತಾ ಇದ್ದೆ! ಯಾಕೆಂದರೆ, ಕ್ರಿಯೆ ನಡೆಯುತ್ತಿದ್ದಾಗ ನಾನು ಈ ರೀತಿಯ ಪಿಂಡ ಪ್ರಧಾನ ನಡೆಯುವ ಕೆಲವು ಕಡೆಗೆಲ್ಲ ಹೋಗಿ ಇಣುಕ್ಕಿದ್ದೆ! ಕಾಟಾಚಾರಕ್ಕೆ ಕ್ರಿಯೆಗಳು ಅವಸರವಸರದಲ್ಲಿ ನಡೆದು, ಕಂತೆ ಕಂತೆ ನೋಟುಗಳು ಕೈಬದಲಿಸುತ್ತಿದ್ದವು! ದಂಧೆ ಜೋರಾಗಿ ನಡೆಯುತ್ತಿತ್ತು.
ನಮಗೆ ಸಿಕ್ಕಂತಹ ಪ್ರಾಮಾಣಿಕ ಅರ್ಚಕನನ್ನು ನಾನು ಜನ್ಮದಲ್ಲಿ ನೋಡಿಲ್ಲ. ಸುಲಿಯುವವರೇ ಹೆಚ್ಚು!
ನನಗೆ ಸಂಸ್ಕೃತ ಅರೆಬರೆ ಅರ್ಥ ಅಗುವುದರಿಂದ ತಪ್ಪು ಮಂತ್ರ ಹೇಳಿದ್ದಕ್ಕೆ ಹಿಂದೆ ನಾನು ಒಂದಿಬ್ಬರು ಪರಿಚಯದ ಅರ್ಚಕರನ್ನು ಪ್ರಶ್ನಿಸಿದ್ದೆ! ನನ್ನ ವಿಷಯ ಗೊತ್ತಿದ್ದುದರಿಂದ ‘ನಮ್ಮದು ಬಾಯಿಪಾಠ ಮಾರಾಯ್ರೆ, ಎಲ್ಲರೆದುರು ಮರ್ಯಾದೆ ತೆಗೆಯಬೇಡಿ’ ಅಂದಿದ್ದರು!
ನಂಬಿಕೆ ಸಂಕೀರ್ಣವಾದ ವಿಷಯ. ನುಂಗುವಂತಿಲ್ಲ, ಉಗುಳುವಂತಿಲ್ಲ! ಅದಕ್ಕಾಗಿ ಸುಮ್ಮನಿದ್ದೆ! ಇಂತವರನ್ನು ನಾವು ದೇವರ ಕಮೀಷನ್ ಏಜೆಂಟರಾಗಿ ಒಪ್ಪಿಕೊಂಡು ಬಕ್ರಾಗಳಾಗುತ್ತಿದ್ದೇವೆ.
ಮೇಲೆ ಹೇಳಿದ ಅರ್ಚಕರಿಗೆ ವ್ಯತಿರಿಕ್ತವಾಗಿ ಈಗಿನ ವಂಚಕರು ಗೋದಾನ, ಭೂದಾನ, ಸುವರ್ಣ ದಾನ ಎಂದು ಅವರೇ ಮಾರಿ, ಅವರೇ ಪಡೆದು ಎಂತಹ ದರೋಡೆ ಮಾಡುತ್ತಿದ್ದಾರೆಂಬುದಕ್ಕೆ ಹಿನ್ನೆಲೆಯಾಗಿ ಈ ಘಟನೆಯನ್ನು ವಿವರಿಸಿದೆ. ಇವರಲ್ಲಿ ಕೆಲವರು ‘ಕನ್ಯಾದಾನ’ ಪಡೆಯಲು ಹೋಗಿ ಏಟುತಿಂದ, ಕೇಸು ಸುತ್ತಿಸಿಕೊಂಡ ಮಹಾನುಭಾವರೂ ಇದ್ದಾರೆಂಬುದನ್ನು ನೆನಪಿಸಿಕೊಳ್ಳಿ! ಸಾವಿನಂತಹ ದುಃಖದ ಘಟನೆಯಿಂದಲೂ ಹಿಂಡಲು ಎಂತಹಾ ಮಹಾ ಭಯಂಕರ ಆವಿಷ್ಕಾರಗಳನ್ನು ಮಾಡಲಾಗಿದೆ ಎಂಬುದನ್ನು ಮುಂದೆ ನೋಡೋಣ. ಅದಕ್ಕಿದು ಪೀಠಿಕೆ ಅಷ್ಟೇ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...