Homeಅಂಕಣಗಳುಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

- Advertisement -
- Advertisement -

ಕೇಳುಗರಿಗೆಲ್ಲ ನಮಸ್ಕಾರ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ‘ಅಟ್ಯಾಕ್ ಹನ್ಮಂತ’. ಇದೀಗ ದೊಡ್ ಸುದ್ದಿಗಳು.
ಪರದೇಶಿ ದುಡ್ಡಿಗೆ ಆಸೆಪಟ್ಟು ಬ್ಲೂಜೆಪಿ ಮಾಡ್ತು ಎಡವಟ್ಟು: ಕಾನೂನಿಗೆ ತಂದ್ರು ತಿದ್ದುಪಡಿ, ಕೋರ್ಟ್ ಇಡ್ತು ದೊಡ್ಡ ಧಡಿ.
ಪೊಲಿಟಿಕಲ್ ಪಾರ್ಟಿಗಳು ವಿದೇಶದಿಂದ ಯಾವುದೇ ಬಗೆಯ ದೇಣಿಗೆ ಪಡೆಯುವುದು ಅಪರಾಧ ಎಂದಿದ್ದ ಹಿಂದಿನ ಕಾನೂನನ್ನು ಬದಲಾಯಿಸಿ, ದೇಶದೊಳಗಿನ ಪಕ್ಷಗಳು ಯಾವ ದೇಶದ ಶ್ರೀಮಂತರಿಂದ ಬೇಕಾದರೂ ಕೋಟಿಗಟ್ಟಲೆ ತಿರುಪೆ ಎತ್ತಬಹುದು ಎಂದು ತಿದ್ದುಪಡಿ ಮಾಡಿಕೊಂಡಿದ್ದ ಬ್ಲೂಜೆಪಿ ಪಕ್ಷದ ಮುಖಕ್ಕೆ ಖಡಕ್ ನೊಟೀಸ್ ಕಳಿಸಿರುವ ದೆಹಲಿ ಹೈಕೋರ್ಟ್, ಇಷ್ಟ ಬಂದಂತೆ ಕಾನೂನನ್ನು ಬದಲಿಸಲು, ಕೋರ್ಟ್‍ನ ತೀರ್ಪುಗಳನ್ನು ತಿರುಚಲು ಕಾನೂನು ನಿಮ್ಮಪ್ಪನ ಮನೆಯ ಆಸ್ತಿಯಲ್ಲ ಎಂದು ಕ್ಯಾಕರಿಸಿ ಉಗಿದಿದೆ. ಅಕ್ರಮವಾಗಿ ಅಘೋಷಿತ ಮೂಲಗಳಿಂದ ಪಕ್ಷಕ್ಕೆ ದೇಣಿಗೆ ಪಡೆದು ಜೇಬು ತುಂಬಿಸಿಕೊಂಡಿದ್ದ ಕಮಲ ಪಕ್ಷ ಕಾನೂನಿನ ಕುಣಿಕೆಗೆ ಸಿಲುಕಿ ಮುಖ ಕೆತ್ತಿಸಿಕೊಳ್ಳುವ ಸಂದರ್ಭ ಎದುರಾಗಿದೆ. ಕೈ ಪಕ್ಷ ಕೂಡ ಈ ದಂಧೆಯಲ್ಲಿ ಕಮಲ ಪಕ್ಷಕ್ಕೆ ಸಾಥ್ ಕೊಟ್ಟಿರುವುದೂ ಕೂಡ ಜಗಜ್ಜಾಹೀರಾಗಿದೆ. ಕಾನೂನು ಕುಣಿಕೆಯಿಂದ ಬಚಾವಾಗಲು ಎಫ್.ಸಿ.ಆರ್.ಎ ಕಾಯ್ದೆಗೇ ತಿದ್ದುಪಡಿ ತಂದು ಎಸ್ಕೇಪ್ ರೂಟ್ ಹುಡುಕಿದ್ದ ಊಸರವಳ್ಳಿ ಪಕ್ಷ ಈಗ ಹೆಗ್ಗಣ ಹಿಡಿಯಲು ಇಟ್ಟಿದ್ದ ಇಕ್ಕಳದೊಳಗೆ ಮುಖ ಸಿಗಿಸಿಕೊಂಡು ತಪ್ಪಿಸಿಕೊಳ್ಳಲಾರದೆ ಕುಯ್ಯೋ ಮರ್ರೋ ಎಂದು ನರಳಾಡುತ್ತಿರುವುದು ದೇಶದ ಜನತೆಗೆ ಸಂತಸವುಂಟು ಮಾಡಿದೆ.

*****

ಲಾಚಾರ್ ಸಾಹಿತಿ ‘ಬೊಯ್ರಪ್ಪ’ನ ‘ಮಕ್ಕನ್ ಮಾರ್’ ಅವಾಂತರ: ಈ ಸಲ ಗ್ಯಾರಂಟಿ ವಕ್ಕರಿಸುತ್ತಂತೆ ಜ್ಞಾನಪೀಠಕ್ಕೇ ಗಂಡಾಂತರ
ದೇಶದ ಅತ್ಯುನ್ನತ ಪ್ರಶಸ್ತಿಗಳು ಘೋಷಣೆಯಾಗಲು ಒಂದೆರಡು ತಿಂಗಳು ಇರುವಂತೆಯೇ ಗರ್ಭಧರಿಸಿದ ಬೆಕ್ಕಿನಂತೆ ಕಯೋವ್, ಮಿಯೋವ್ ಎಂದು ಎದ್ದು ಕೂರುವ ಕುಖ್ಯಾತ ಸಾಹಿತಿ ‘ಬೊಯ್ರಪ್ಪ’ನವರು ಪ್ರತೀವರ್ಷದಂತೆ ಈ ವರ್ಷವೂ ತಮ್ಮ ಮನೆಯಿಂದ ಹೊರಗೆ ಬಂದು ನರಳಾಡಲು ಶುರು ಮಾಡಿದ್ದಾರೆ. ದೇಶವನ್ನು ಅಭಿವೃದ್ಧಿಪಡಿಸಲು ಪಕೋಡೇಂದ್ರ ಫಕೀರಪ್ಪನಿಗೆ 5 ವರ್ಷಗಳು ಜುಜುಬಿ, ಕನಿಷ್ಟಪಕ್ಷ ಎರಡು ಶತಮಾನವಾದರೂ ಪಕೋಡಯ್ಯನು ದೇಶದ ಪ್ರಧಾನಿಯಾದರೆ ದೇಶ ಉದ್ದಾರವಾಗುತ್ತದೆ ಎಂಬ ಸುಸ್ಸು ಸ್ಟೇಟ್‍ಮೆಂಟನ್ನು ಮನೆಯೆದುರಿನ ಲೈಟುಕಂಬಕ್ಕೆ ಕಾಲೆತ್ತಿ ಹುಯ್ದು ವಾಪಸ್ ಮನೆಯೊಳಗೆ ಬುಡುಬುಡನೆ ಓಡಿಹೋಗಿ ಹೊಟ್ಟೆ ಮಕಾಡೆ ಮಲಗಿಬಿಟ್ಟರೆಂದು ನಂಬಲರ್ಹ ಗಾಳಿಸುದ್ದಿಗಳು ತಿಳಿಸಿವೆ.

*****

ದೆಹಲಿ ಲೆಫ್ಟಿನೆಂಟ್ ಗೌರ್ನರ್ ಮುಸುಡಿಗೆ ಬಿತ್ತು ಕೋರ್ಟ್ ತಪರಾಕಿ: ಕೇಜ್ರಿವಾಲ್ ಎದುರು ಮಕಾಡೆಬಿದ್ದ ಬ್ಲೂಜೆಪಿ ಬಾಯಿಗೆ ಆನೆಪಟಾಕಿ.
ದೆಹಲಿಯಲ್ಲಿ ಕೇಜ್ರಿವಾಲ್ ಕೈಲಿ ಸಮಾ ಇಕ್ಕಿಸಿಕೊಂಡು ಚರಂಡಿಪಾಲಾಗಿದ್ದ ದ್ವೇಷಭಕ್ತ ಬ್ಲೂಜೆಪಿಗಳು ಮರ್ಮಸ್ಥಳಕ್ಕೆ ಬಿದ್ದ ಸುತ್ತಿಗೆ ಏಟಿಗೂ ಜಗ್ಗದೆ ಕೇಜ್ರಿವಾಲ್ ತಲೆಯ ಮೇಲೆ ಲೆಫ್ಟಿನೆಂಟ್ ಗೌರ್ನರ್ ಎಂಬ ಗಢವಗೂಬೆಯೊಂದನ್ನು ಕೂರಿಸಿ ಬ್ಯಾಕ್‍ಡೋರ್ ಪಾಲಿಟಿಕ್ಸಿಗೆ ಇಳಿದಿದ್ದರು. ಈ ಬಗ್ಗೆ ಸುಪ್ರೀಂಕೋರ್ಟಿಗೆ ಕೇಸು ಜಡಾಯಿಸಿದ್ದ ಕೇಜ್ರಿವಾಲ್ ಈ ವನ್ಯಜೀವಿ ಗಢವಗೂಬೆಯನ್ನು ಯಾವುದಾದರೂ ಅಭಯಾರಣ್ಯಕ್ಕೆ ಎಸೆಯಬೇಕೆಂದು ಹೋರಾಟ ನಡೆಸುತ್ತಿದ್ದರು. ಈ ಕೇಸಿನ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ‘ಲೆಫ್ಟಿನೆಂಟ್ ಗೌರ್ನರ್’ ಎಂಬ ಹುದ್ದೆಯೇ ಮೂರುಕಾಸಿನದ್ದು, ಅದಕ್ಕೆ ಯಾರೂ ಬೆಲೆ ಕೊಡುವ ಅಗತ್ಯವಿಲ್ಲ, ಬ್ಲೂಜೆಪಿಯ ಈ ಲಡಕಾಸಿ ಗೌರ್ನರ್ ಜನಪ್ರತಿನಿಧಿಗಳ ಅಧಿಕಾರದಲ್ಲಿ ಮೂಗುತೂರಿಸದೆ ಸರ್ವಾಂಗಗಳನ್ನೂ ಮುಚ್ಚಿಕೊಂಡು ತೆಪ್ಪಗಿರಬೇಕೆಂದು ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಕೇಜ್ರಿವಾಲ್ ಕೈ ಮೇಲಾಗಿ, ಬ್ಲೂಜೆಪಿಯ ವಯೋವೃದ್ಧ ಪಾಖಂಡಿಗಳು ತಾವು ಬಿದ್ದಿದ್ದ ಚರಂಡಿಯೊಳಗಿಂದ ಎದ್ದುಬರಲು ಯತ್ನಿಸುತ್ತಿರುವಾಗಲೇ ಮತ್ತೊಂದು ಮ್ಯಾನ್‍ಹೋಲ್ ಒಳಕ್ಕೆ ತಲೆಕೆಳಗಾಗಿ ಬಿದ್ದಂತಾಗಿದೆಯೆಂಬ ವಿಶ್ಲೇಷಣೆ ಹೊರಬಿದ್ದಿದೆ. ಈ ಕಿತಾಪತಿ ಪಿತೂರಿಯಲ್ಲಿ ಕೈ ಪಕ್ಷದ ಹಾಸ್ಯನಟರೂ ಸೇರಿಕೊಂಡು ಕೇಜ್ರಿವಾಲರನ್ನು ಈ ಸಲ ಕೆಡವಲು ನಡೆಸುತ್ತಿದ್ದ ಸಂಚು ಈ ಮೂಲಕ ವಿಫಲವಾಗಿದ್ದು, ಸದ್ಯಕ್ಕೆ ರಾಜಧಾನಿಯ ಗೋಶಾಲೆಯಲ್ಲಿ ಹಿಂಡಿಬೂಸಾ ಮೆಲ್ಲುತ್ತ ಪೊಗದಸ್ತಾಗಿದ್ದ ಕೈ ಪಕ್ಷದ ದೆಹಲಿ ನಾಯಕರು ಈ ಕೋರ್ಟ್ ತೀರ್ಪು ಕೇಳಿದ ಕೂಡಲೇ ಅಂಬಾ ಎಂದು ಅರಚಿ, ನಾಲಿಗೆ ಹೊರಚಾಚಿ ಮೂರ್ಛೆ ಹೋಗಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

*****

ಕ್ಯಾನ್ಸರ್‍ಗೆ ದನದ ಮೂತ್ರದಲ್ಲಿ ಔಷಧಿ ಕಂಡುಹಿಡಿದ್ರು ಗುಜರಾತಿಗರು: ಫ್ರಥಮ ದರ್ಜೆ ಮುಠ್ಠಾಳರ ಸಂಶೋಧನೆಯಾಯ್ತು ಜಗಜ್ಜಾಹೀರು
‘ಆಧುನಿಕ ವೈದ್ಯಶಾಸ್ತ್ರ’ ಅಂದರೆ ಕೇಜಿಗೆಷ್ಟು, ಅದು ನೋಡಲಿಕ್ಕೆ ಕರ್ರಗಿರುತ್ತೋ ಬೆಳ್ಳಗಿರುತ್ತೋ ಎಂದು ಕೇಳುವ ಪ್ರಥಮದರ್ಜೆ ಮುಠ್ಠಾಳರ ಗುಜರಾತಿನ ಪಡೆಯೊಂದು, ದನದ ಮೂತ್ರದಲ್ಲಿ ಕ್ಯಾನ್ಸರ್‍ಗೆ ಔಷಧಿ ಇದೆಯೆಂಬ ಎದೆಯೊಡೆಯುವ ಹಾಸ್ಯಾಸ್ಪದ ಸಂಶೋಧನೆಯನ್ನು ಮಾಡಿ ಮುಗಿಸಿದ್ದಾರೆ. ಗುಜರಾತಿನ ಜುನಾಗಢ್ ಯೂನಿವರ್ಸಿಟಿಯ ಪ್ರಾಧ್ಯಾಪಕರು ಈ ಕಿಸಲಗೇಡಿ ಕ್ರಿಸ್ತಪೂರ್ವ ಕಾಲದ ತಾಳೆಗರಿ ಸಂಶೋಧನೆ ನಡೆಸಿದ್ದಾರೆ. ಈ ಸುದ್ದಿ ತಿಳಿದ ವಿದೇಶದ ಯೂನಿವರ್ಸಿಟಿಗಳು ಈ ನಾಲ್ಕನೇ ದರ್ಜೆ ಸಂಶೋಧನೆ ನಡೆಸಿದ ಆದಿಮಾನವರು ಶಿಲಾಯುಗ ಕಾಲದಿಂದ 21ನೇ ಶತಮಾನಕ್ಕೆ ಟೈಂಟ್ರಾವೆಲ್ ಮಾಡಿಕೊಂಡು ಬಂದದ್ದಾದರೂ ಹೇಗೆ ಎಂಬ ಬಗ್ಗೆ ಸಂಶೋಧನೆ ನಡೆಸಲು ಅನುಮತಿ ಕೋರಿ ದ್ವೇಷಭಕ್ತರ ಸರ್ಕಾರದ ಅನುಮತಿ ಕೋರಿದ್ದಾರಂತೆ. ಈ ಅರ್ಜಿಯನ್ನು ಓದಿದ ಸನ್ಮಾನ್ಯ ಕೌಡಂಗ್‍ಪ್ರಿಯ ಪಕೋಡೇಂದ್ರ ಅವರು ಆ ಸಂಶೋಧನೆಗಿಂತಲೂ ಮುಂಚೆ ತನ್ನ ತಲೆಯನ್ನೇ ಮೊದಲು ಆಪರೇಷನ್ ಮಾಡಿ ಒಳಗಿರುವುದು ಮಾಂಸಮಜ್ಜೆಯಿಂದಾದ ಮಿದುಳೋ, ಇಲ್ಲಾ.. ದನದ ಸೆಗಣಿಯಿಂದ ತಯಾರಾದ ಮಿದುಳೋ ಎಂದು ಪತ್ತೆ ಮಾಡಿಕೊಡಲು ವಿದೇಶಿ ಸಂಶೋಧಕರನ್ನು ಅಂಗಲಾಚಿದ್ದಾರಂತೆ.

*****

ಹೊಲದಲ್ಲಿ ನಿಂತು ಮಂತ್ರ ಹೇಳಿದ್ರೆ ಬೆಳೆ ಬರುತ್ತಂತೆ
ಗೋವಾ ಬ್ಲೂಜೆಪಿ ಸಚಿವನ ತಲೆಕೆಟ್ಟ ಅಂತೆಕಂತೆ
ರೈತರ ಹೊಲದಲ್ಲಿ ಸರಿಯಾಗಿ ಬೆಳೆ ಬರದೇ ಇದ್ರೆ ರೈತರು ಹೊಲದಲ್ಲಿ ನಿಂತು “ಓಂ ರುಂ ಜುಂ ಸ್ವಾಹಾ, ಓಂ ರುಂ ಜುಂ ಸ್ವಾಹಾ” ಎಂದು ಮಂತ್ರ ಪಠಿಸಿದರೆ ಬೆಳೆ ಚೆನ್ನಾಗಿ ಬರುತ್ತದೆಂದು ಗೋವಾದ ಬ್ಲೂಜೆಪಿ ಪಕ್ಷದ ಕೃಷಿಸಚಿವ ಹೊಸ ಸಂಶೋಧನೆ ಮಾಡಿದ್ದಾನೆ. ಹೀಗೆ ಮಂತ್ರ ಪಠಿಸುವಾಗ ಹಿಂದಿನಿಂದ ಯಾವುದಾದರೂ ಕೊಳಕುಮಂಡಲದ ಹಾವು ಬಂದು ತೊಡೆಗೆ ಕಡಿದರೆ ಓಡಿ ಹೋಗುವುದೋ, ಕಚ್ಚಿಸಿಕೊಂಡು ಅಲ್ಲೇ ನಿಂತು “ಓಂ ರುಂ ಜುಂ ಸ್ವಾಹಾ” ಮಂತ್ರ ಪಠಿಸುವುದೋ ಎಂದು ವದರಿಗಾರರು ಕೇಳಿದ ಪ್ರಶ್ನೆಗೆ ಸಚಿವರು ಕೆಂಡಾಮಂಡಲರಾಗಿ ಕೈಲಿ ಹಿಡಿದಿದ್ದ ಮೈಕನ್ನೇ ಕಚಪಚನೆ ಅಗಿದು ‘ಪ್ಯಾಕಪ್’ ಎಂದು ಕಿರುಚಿ ಓಡಿಹೋದರೆಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಎಲ್ಲ ಬಿಟ್ಟು ಈ ಬ್ಲೂಜೆಪಿಯವರಿಗೇ ಈ ಕಜ್ಜಿ ಐಡಿಯಾಗಳು ಹೇಗೆ ಬರುತ್ತವೆ? ಯಾವ ಫ್ಯಾಕ್ಟರಿಯಲ್ಲಿ ಇವರ ಮೆದುಳುಗಳನ್ನು ಪ್ರೊಡಕ್ಷನ್ ಮಾಡಲಾಗುತ್ತದೆ ಎಂದು ಕಕ್ಕಾಬಿಕ್ಕಿಯಾಗಿರುವ ಕೃಷಿ ವಿಜ್ಞಾನಿಗಳು ಸದರಿ ಬ್ಲೂಜೆಪಿ ಕೃಷಿ ಸಚಿವನನ್ನು ಗುಂಪುಗಲಭೆಯಲ್ಲಿ ಹೊಡೆದು ರೈತರ ಹೊಲಗಳಿಂದ ಒದ್ದೋಡಿಸಲು ತಯಾರಾಗಿದ್ದಾರೆಂದು ವರದಿಯಾಗಿದೆ. ಈ ಮನೆಹಾಳು ಐಡಿಯಾ ಮಾಡಿದ ಕೃಷಿಸಚಿವನ ಎಬಡೇಶಿ ಹೇಳಿಕೆಯ ದೆಸೆಯಿಂದ ಕಂಗಾಲಾಗಿರುವ ಗೋವಾದ ರೈತರು, ಹಂದಿ ಆಹಾರವನ್ನು ಪ್ಯಾಕ್ ಮಾಡಿ ವಿದೇಶಗಳಿಗೆ ಸಾಗಿಸುವ ಹಡಗಿನಲ್ಲಿ ಈ ಸಚಿವನನ್ನು ಹಾಕಿ ಯಾವುದಾದರೂ ಆಫ್ರಿಕನ್ ದೇಶಕ್ಕೆ ಆದಷ್ಟು ಬೇಗ ರಫ್ತು ಮಾಡಬೇಕೆಂದು ಒಕ್ಕೊರಲಿನಿಂದ ಸರ್ಕಾರವನ್ನು ಇನ್ನೂ ಆಗ್ರಹಿಸಿಲ್ಲದಿರುವುದು ಆಶ್ಚರ್ಯ ಹುಟ್ಟಿಸಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಇನ್ನಷ್ಟು ಮತ್ತಷ್ಟು ಆಘಾತ ಹುಟ್ಟಿಸುವ ವಾರ್ತೆಗಳಿಗಾಗಿ ಮುಂದಿನವಾರ ಸಿಗೋಣ. ಧನ್ಯವಾದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...