Homeಅಂಕಣಗಳುಟಿಬೆಟ್ ಮತ್ತು ಕವಿ ಟೆಂಜಿನ್ ಬಗ್ಗೆ

ಟಿಬೆಟ್ ಮತ್ತು ಕವಿ ಟೆಂಜಿನ್ ಬಗ್ಗೆ

ಟೆಂಜಿನ್ ಅಪರೂಪದ ಹೋರಾಟಗಾರ. ಈತ ಕನ್ನಡಿಗರ ಗಮನವನ್ನು ಸೆಳೆದಿದ್ದು 2005ರಲ್ಲಿ. ಅವರು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‍ಸಿ)ಗೆ ಚೀನಾದ ಪ್ರಧಾನಿ ವೆನ್ ಜಿಯಾಬೊ ಬರಲಿದ್ದರು

- Advertisement -
- Advertisement -

| ಗೌರಿ ಲಂಕೇಶ್ |

ಈಗ ಎಲ್ಲಿನೋಡಿದರಲ್ಲಿ ಚುನಾವಣಾ ಬಗ್ಗೆಯೇ ಚರ್ಚೆ, ಬಾಜಿ, ಲೆಕ್ಕಾಚಾರ ಇತ್ಯಾದಿಗಳು. ಟಿವಿ ಚಾನೆಲ್‍ಗಳಲ್ಲಿ, ದಿನ ಪತ್ರಿಕೆಗಳಲ್ಲಿ, ಅಷ್ಟೇ ಏಕೆ ಈ ನಿಮ್ಮ ಪತ್ರಿಕೆಯ ಹಲವಾರು ಪುಟಗಳಲ್ಲೂ ಚುನಾವಣೆಗಳ ಬಗೆಗಿನ ವರದಿಗಳೇ ತುಂಬಿವೆ. ಆದ್ದರಿಂದ ನನಗೂ, ನಿಮಗೂ ಒಂದು ಪುಟ್ಟ ಬ್ರೇಕ್ ಸಿಗಲೆಂದು ಚುನಾವಣಾ ಹೊರತಾಗಿರುವ ವಿಷಯದ ಬಗ್ಗೆ ಬರೆಯಬೇಕೆನಿಸುತ್ತದೆ. ಇದಕ್ಕೆ ಪ್ರೇರಣೆ ನೀಡಿದ್ದು ಟಿಬೆಟ್‍ನ ಕವಿ ಮತ್ತು ಹೋರಾಟಗಾರ ಟೆಂಜಿನ್ ಟ್ಸಂಡು ಅವರು ಇತ್ತೀಚೆಗೆ ಬರೆದಿರುವ ಲೇಖನ.

ಟೆಂಜಿನ್ ಅಪರೂಪದ ಹೋರಾಟಗಾರ. ಈತ ಕನ್ನಡಿಗರ ಗಮನವನ್ನು ಸೆಳೆದಿದ್ದು 2005ರಲ್ಲಿ. ಅವರು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‍ಸಿ)ಗೆ ಚೀನಾದ ಪ್ರಧಾನಿ ವೆನ್ ಜಿಯಾಬೊ ಬರಲಿದ್ದರು. ಅವರ ಭೇಟಿಯನ್ನು ವಿರೋಧಿಸಿ ಕರ್ನಾಟಕದಲ್ಲಿರುವ ಟಿಬೆಟಿಯನ್ನರು ಹಲವು ಪ್ರತಿಭಟನೆಗಳನ್ನು ಮಾಡಿದ್ದರು. ಆದರೆ ಈ ಟೆಂಜಿನ್ ಅವರೆಲ್ಲರಿಗಿಂತ ಹಲವು ಹೆಜ್ಜೆ ಮುಂದೆ ಹೋಗಿದ್ದರು. ಒಂದೆರಡು ದಿನಗಳ ಹಿಂದೆಯೇ ಐಐಎಸ್‍ಸಿಯ ಮುಖ್ಯ ಕಟ್ಟಡದಲ್ಲಿ ಅವಿತುಕೊಂಡ ಟೆಂಜಿನ್ ಚೀನಾದ ಜಿಯಾಬೋ ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆಯೇ ಕಟ್ಟಡದ ಮೇಲುಗಡೆ ಪ್ರತ್ಯಕ್ಷವಾಗಿ ಜಿಯಾಬೋ ಅವರ ತಲೆಯ ಮೇಲೆ ಟಿಬೆಟ್‍ನ ಧ್ವಜವನ್ನು ಹಾರಿಸಿದರಲ್ಲದೆ, ಅವರ ವಿರುದ್ಧ ಘೋಷಣೆಗಳನ್ನೂ ಕೂಗಿದರು. ಟಿಂಜನ್ ಅವರ ಉದ್ದೇಶ ಚೀನಾದ ಪ್ರಧಾನಿ ಮೇಲೆ ಭಯೋತ್ಪಾದಕ ಕೃತ್ಯವನ್ನು ಎಸಗುವುದಾಗಿರಲಿಲ್ಲ. ಬದಲಾಗಿ ತನ್ನ ಟಿಬೆಟ್ ಸಮಾಜದ ಮೇಲೆ ಚೀನಾ ಎಸಗುತ್ತಿರುವ ಭಯೋತ್ಪಾದಕ ಕೃತ್ಯಗಳತ್ತ ಜಗತ್ತಿನ ಗಮನವನ್ನು ಸೆಳೆಯುವುದಾಗಿತ್ತು.

ಟೆಂಜಿನ್ ಅವರ ಈ ಅಪರೂಪದ ಪ್ರತಿಭಟನೆಯಿಂದಾಗಿ ಭಾರತದ ಭದ್ರತಾ ಪಡೆ ವ್ಯವಸ್ಥೆಗೆ ಮುಜುಗರವಾಗಿತ್ತಲ್ಲದೆ, ಚೀನಾಕ್ಕೆ ಮುಖಭಂಗವಾಗಿತ್ತು. ಟೆಂಜಿನ್ ಅವರ ವಿರುದ್ಧ ಹಲವಾರು ಕಾನೂನು ಕ್ರಮಗಳನ್ನು ಜರುಗಿಸಿದ ಭಾರತದ ಸರ್ಕಾರ ಅವಮಾನಗೊಂಡಿದ್ದ ಚೀನಾವನ್ನು ಸಂತೈಸಲು ಆ ದೇಶದ ಸರ್ಕಾರದ ಮುಂದೆ ಡೊಗ್ಗು ಸಲಾಮು ಹೊಡೆದಿತ್ತು.

2006ರಲ್ಲಿ ಚೀನಾದ ಅಧ್ಯಕ್ಷ ಹು ಜಿಂಟಾವೊ ಭಾರತಕ್ಕೆ ಭೇಟಿ ನೀಡಿದಾಗ ಚೀನಾದ ಸರ್ಕಾರದ ಅಪೇಕ್ಷೆಯಂತೆ ಟಿಂಜನ್ ಅವರ ಚಲನವಲನಗಳನ್ನು 14 ದಿನಗಳ ಕಾಲ ಧರ್ಮಶಾಲಾ ಪ್ರದೇಶಕ್ಕೆ ಸೀಮಿತಗೊಳಿಸಿ ಅವರ ಮೇಲೆ ಕಟ್ಟೆಚ್ಚರ ಇಡಲಾಗಿತ್ತು.

ಚೀನಾದ ಸಾಂಸ್ಕೃತಿಕ ಕ್ರಾಂತಿ ಅಂತ್ಯಗೊಂಡು ಆ ದೇಶ ಮಾವೋನ ಹಿಡಿತಕ್ಕೆ ಸಿಕ್ಕ ನಂತರ ಆತ ಟಿಬೆಟ್‍ಅನ್ನು ಚೀನಾದ ವಶಕ್ಕೆ ತೆಗೆದುಕೊಳ್ಳಲು ಯತ್ನಿಸಲಾರಂಭಿಸಿದ. ಆಗ ಟಿಬೆಟ್ ಜನರ ನೆರವಿಗೆ ಮುಂದಾಗಿದ್ದು ಅಮೆರಿಕಾದ ಸಿಐಎ ಮತ್ತು ಭಾರತದ ಸರ್ಕಾರ. ಇದರಿಂದಾಗಿ ಟಿಬೆಟ್ ಸೈನ್ಯ ರೂಪಗೊಂಡಿತ್ತಾದರೂ ಚೀನಾದ ದಬ್ಬಾಳಿಕೆ ನಿಲ್ಲಲಿಲ್ಲ. ಆಗ ಟಿಬೆಟ್ ಜನ ದಂಗೆ ಎದ್ದರು. ಇದಕ್ಕೆ ಪ್ರತಿಯಾಗಿ ಟಿಬೆಟಿಯನ್ನರ ಪರಮಗುರು ದಲೈ ಲಾಮರನ್ನೇ ಮುಗಿಸಲು ಚೀನಾ ಸಂಚು ರೂಪಿಸಿತು. ಆಗ ಅನಿವಾರ್ಯವಾಗಿ ದಲೈಲಾಮಾ ಅವರು ಭಾರತಕ್ಕೆ ಓಡಿಬಂದು ಇಲ್ಲಿ ರಕ್ಷಣೆ ಪಡೆಯಬೇಕಾಯಿತು. ಹೀಗೆ ದಲೈಲಾಮಾ ತಪ್ಪಿಸಿಕೊಂಡ ನಂತರ ಟಿಬೆಟ್ ಮೇಲೆ ಚೀನಾ ತನ್ನ ಕ್ರೌರ್ಯವನ್ನು ಹೆಚ್ಚಿಸಿ ಲಕ್ಷಾಂತರ ಜನರನ್ನು ಕೊಂದು ಹಾಕಿತು.

ದಲೈಲಾಮಾರೊಂದಿಗೆ ಸಾವಿರಾರು ಟಿಬೆಟಿಯನ್ನರು ಭಾರತದಲ್ಲಿ ವಾಸಿಸಲಾರಂಭಿಸಿದರು. ಮಾತ್ರವಲ್ಲ, ಅವರಲ್ಲಿ ನೂರಾರು ಜನ ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ಕೂಲಿಗಳಾಗಿ ದುಡಿಯಲಾರಂಭಿಸಿದರು. ಹಾಗೆ ದುಡಿಯುತ್ತಾ, ಟೆಂಟ್‍ನಲ್ಲಿ ವಾಸಿಸುತ್ತಿದ್ದ ದಂಪತಿಗಳಿಗೆ ಒಂದು ದಿನ ರಸ್ತೆಬದಿಯಲ್ಲಿ ಜನಿಸಿದ ಕವಿಯೇ ಈ ಟೆಂಜಿನ್‍ಟ್ಸಂಡು.

ಚೆನೈನಲ್ಲಿರುವ ಲಯೋಲಾ ಕಾಲೇಜಿನಿಂದ ಪದವಿ, ಮುಂಬೈನಲ್ಲಿ ಸ್ನಾತಕೋತ್ತರ ಪದವಿ ಪಡೆದ ಟೆಂಜಿನ್ ಶೇಕ್ಸ್‍ಪಿಯರ್‍ನೊಂದಿಗೆ ಕನ್ನಡದ ಎ.ಕೆ.ರಾಮಾನುಜನ್ ಅವರನ್ನು ಅನುಸರಿಸುತ್ತ ಕವಿಯಾಗಿ ರೂಪುಗೊಂಡರು. ಜೊತೆಗೆ ಟಿಬೆಟ್‍ನ ಸ್ವಾತಂತ್ರ್ಯದ ಕಿಚ್ಚನ್ನೂ ತಮ್ಮ ಎದೆಯಲ್ಲಿ ಹೊತ್ತಿಸಿಕೊಂಡರು. ಆತನೇ ಹೇಳುವಂತೆ “ಟಿಬೆಟ್‍ನಲ್ಲಿ ಕ್ರಾಂತಿಯನ್ನು ಪ್ರಾರಂಭಿಸಲು ಅಲ್ಲಿಗೆ ಹೋದೆ. ಆದರೆ ಕೆಲದಿನಗಳಲ್ಲೇ ಈ ರೋಮಾಂಚಕ ಬಂಡಾಯಗಾರರನ್ನು ಬಂಧಿಸಿ, ಹೊಡೆದು, ಲಾಸಾದಲ್ಲಿನ ಜೈಲಿಗೆ ದೂಡಿದರು. ಜೈಲಿನಲ್ಲಿ ಜೊತೆಗಿದ್ದ ಬಂಧಿಯೊಬ್ಬ ‘ಸ್ವತಂತ್ರ ಟಿಬೆಟ್‍ಗಾಗಿ ನಿನ್ನ ಎದೆ ಬೆಂಕಿ ಹತ್ತಿ ಉರಿದರೂ ಅದರ ಹೊಗೆ ಕಾಣಿಸಿಕೊಳ್ಳದಂತೆ ಎಚ್ಚರ ವಹಿಸು’ ಎಂದು ಉಪದೇಶ ನೀಡಿದ. ಆದರೆ ಭಗತ್‍ಸಿಂಗ್‍ನ ಅಭಿಮಾನಿಯಾದ ಈ ಅನನುಭವಿ ಕ್ರಾಂತಿಕಾರಿ ಅಷ್ಟೊತ್ತಿಗಾಗಲೇ ತಾನು ಟಿಬೆಟ್‍ಅನ್ನು ಬಿಡುಗಡೆಗೊಳಿಸಲು ಬಂದಿರುವುದಾಗಿ ಕೊಚ್ಚಿಕೊಂಡಿದ್ದ.”

ಟಿಬೆಟ್ ಮೇಲೆ ಚೀನಾ ದಾಳಿ ಮಾಡಿ ಅಲ್ಲಿನ ಜನರನ್ನು ತನ್ನ ಸರ್ವಾಧಿಕಾರಿ ಧೋರಣೆಗೆ ಗುರಿ ಮಾಡಿ ಈಗ್ಗೆ ಐವತ್ತು ವರ್ಷಗಳಾಗಿವೆ. ಈ ಐದು ದಶಕಗಳಲ್ಲಿ ಟಿಬೆಟ್‍ನಲ್ಲಿರುವ ಆರು ಮಿಲಿಯನ್ ಜನರು ಮತ್ತು ಗಡಿಪಾರಾಗಿ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಇಂದು ಬದುಕುತ್ತಿರುವ ಲಕ್ಷಾಂತರ ಟಿಬೆಟಿಯನ್ನರು ಹಂಬಲಿಸುತ್ತಿರುವುದು ತಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ. ಸ್ವಾಭಿಮಾನದ ಬದುಕಿಗಾಗಿ. ಬೌದ್ಧ ಧರ್ಮೀಯರಾದ ಟಿಬೆಟಿಯನ್ನರು ತಮ್ಮ ಕನಸನ್ನು ನನಸಾಗಿಸಲು ಅನುಸರಿಸುತ್ತಿರುವುದು ಅಹಿಂಸಾತ್ಮಕ ಹಾದಿಯನ್ನು. ಆದರೆ ಆ ಹಾದಿ ಎಷ್ಟು ಕಷ್ಟಕರವಾಗಿದೆ ಎಂಬುದನ್ನು ಟೆಂಜಿನ್ ಅವರ ಈ ಪದ್ಯ ಬಿಂಬಿಸುತ್ತದೆ.

ನನ್ನ ಅಪ್ಪ ಸತ್ತ
ತನ್ನ ಮನೆ, ತನ್ನ ಹಳ್ಳಿ
ತನ್ನ ದೇಶಕ್ಕಾಗಿ ಹೋರಾಡುತ್ತಾ.
ಆದರೆ ನಾವು ಬೌದ್ಧರು.
ಜನ ಹೇಳುತ್ತಾರೆ ನಾವು
ಶಾಂತರಾಗಿರಬೇಕೆಂದು,
ಅಹಿಂಸಾವಾದಿಗಳಾಗಿರಬೇಕೆಂದು.
ಆದ್ದರಿಂದ ನಾನು ನನ್ನ ವೈರಿಗಳನ್ನು
ಕ್ಷಮಿಸಿದೆ.
ಹಲವೊಮ್ಮೆ ಅನ್ನಿಸುತ್ತೆ,
ಹಾಗೆ ಕ್ಷಮಿಸುವ ಮೂಲಕ
ನಾನು ನನ್ನ ತಂದೆಗೆ
ದ್ರೋಹ ಬಗೆದೆನೆಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...