Homeಅಂಕಣಗಳುಟಿಬೆಟ್ ಮತ್ತು ಕವಿ ಟೆಂಜಿನ್ ಬಗ್ಗೆ

ಟಿಬೆಟ್ ಮತ್ತು ಕವಿ ಟೆಂಜಿನ್ ಬಗ್ಗೆ

ಟೆಂಜಿನ್ ಅಪರೂಪದ ಹೋರಾಟಗಾರ. ಈತ ಕನ್ನಡಿಗರ ಗಮನವನ್ನು ಸೆಳೆದಿದ್ದು 2005ರಲ್ಲಿ. ಅವರು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‍ಸಿ)ಗೆ ಚೀನಾದ ಪ್ರಧಾನಿ ವೆನ್ ಜಿಯಾಬೊ ಬರಲಿದ್ದರು

- Advertisement -
- Advertisement -

| ಗೌರಿ ಲಂಕೇಶ್ |

ಈಗ ಎಲ್ಲಿನೋಡಿದರಲ್ಲಿ ಚುನಾವಣಾ ಬಗ್ಗೆಯೇ ಚರ್ಚೆ, ಬಾಜಿ, ಲೆಕ್ಕಾಚಾರ ಇತ್ಯಾದಿಗಳು. ಟಿವಿ ಚಾನೆಲ್‍ಗಳಲ್ಲಿ, ದಿನ ಪತ್ರಿಕೆಗಳಲ್ಲಿ, ಅಷ್ಟೇ ಏಕೆ ಈ ನಿಮ್ಮ ಪತ್ರಿಕೆಯ ಹಲವಾರು ಪುಟಗಳಲ್ಲೂ ಚುನಾವಣೆಗಳ ಬಗೆಗಿನ ವರದಿಗಳೇ ತುಂಬಿವೆ. ಆದ್ದರಿಂದ ನನಗೂ, ನಿಮಗೂ ಒಂದು ಪುಟ್ಟ ಬ್ರೇಕ್ ಸಿಗಲೆಂದು ಚುನಾವಣಾ ಹೊರತಾಗಿರುವ ವಿಷಯದ ಬಗ್ಗೆ ಬರೆಯಬೇಕೆನಿಸುತ್ತದೆ. ಇದಕ್ಕೆ ಪ್ರೇರಣೆ ನೀಡಿದ್ದು ಟಿಬೆಟ್‍ನ ಕವಿ ಮತ್ತು ಹೋರಾಟಗಾರ ಟೆಂಜಿನ್ ಟ್ಸಂಡು ಅವರು ಇತ್ತೀಚೆಗೆ ಬರೆದಿರುವ ಲೇಖನ.

ಟೆಂಜಿನ್ ಅಪರೂಪದ ಹೋರಾಟಗಾರ. ಈತ ಕನ್ನಡಿಗರ ಗಮನವನ್ನು ಸೆಳೆದಿದ್ದು 2005ರಲ್ಲಿ. ಅವರು ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‍ಸಿ)ಗೆ ಚೀನಾದ ಪ್ರಧಾನಿ ವೆನ್ ಜಿಯಾಬೊ ಬರಲಿದ್ದರು. ಅವರ ಭೇಟಿಯನ್ನು ವಿರೋಧಿಸಿ ಕರ್ನಾಟಕದಲ್ಲಿರುವ ಟಿಬೆಟಿಯನ್ನರು ಹಲವು ಪ್ರತಿಭಟನೆಗಳನ್ನು ಮಾಡಿದ್ದರು. ಆದರೆ ಈ ಟೆಂಜಿನ್ ಅವರೆಲ್ಲರಿಗಿಂತ ಹಲವು ಹೆಜ್ಜೆ ಮುಂದೆ ಹೋಗಿದ್ದರು. ಒಂದೆರಡು ದಿನಗಳ ಹಿಂದೆಯೇ ಐಐಎಸ್‍ಸಿಯ ಮುಖ್ಯ ಕಟ್ಟಡದಲ್ಲಿ ಅವಿತುಕೊಂಡ ಟೆಂಜಿನ್ ಚೀನಾದ ಜಿಯಾಬೋ ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆಯೇ ಕಟ್ಟಡದ ಮೇಲುಗಡೆ ಪ್ರತ್ಯಕ್ಷವಾಗಿ ಜಿಯಾಬೋ ಅವರ ತಲೆಯ ಮೇಲೆ ಟಿಬೆಟ್‍ನ ಧ್ವಜವನ್ನು ಹಾರಿಸಿದರಲ್ಲದೆ, ಅವರ ವಿರುದ್ಧ ಘೋಷಣೆಗಳನ್ನೂ ಕೂಗಿದರು. ಟಿಂಜನ್ ಅವರ ಉದ್ದೇಶ ಚೀನಾದ ಪ್ರಧಾನಿ ಮೇಲೆ ಭಯೋತ್ಪಾದಕ ಕೃತ್ಯವನ್ನು ಎಸಗುವುದಾಗಿರಲಿಲ್ಲ. ಬದಲಾಗಿ ತನ್ನ ಟಿಬೆಟ್ ಸಮಾಜದ ಮೇಲೆ ಚೀನಾ ಎಸಗುತ್ತಿರುವ ಭಯೋತ್ಪಾದಕ ಕೃತ್ಯಗಳತ್ತ ಜಗತ್ತಿನ ಗಮನವನ್ನು ಸೆಳೆಯುವುದಾಗಿತ್ತು.

ಟೆಂಜಿನ್ ಅವರ ಈ ಅಪರೂಪದ ಪ್ರತಿಭಟನೆಯಿಂದಾಗಿ ಭಾರತದ ಭದ್ರತಾ ಪಡೆ ವ್ಯವಸ್ಥೆಗೆ ಮುಜುಗರವಾಗಿತ್ತಲ್ಲದೆ, ಚೀನಾಕ್ಕೆ ಮುಖಭಂಗವಾಗಿತ್ತು. ಟೆಂಜಿನ್ ಅವರ ವಿರುದ್ಧ ಹಲವಾರು ಕಾನೂನು ಕ್ರಮಗಳನ್ನು ಜರುಗಿಸಿದ ಭಾರತದ ಸರ್ಕಾರ ಅವಮಾನಗೊಂಡಿದ್ದ ಚೀನಾವನ್ನು ಸಂತೈಸಲು ಆ ದೇಶದ ಸರ್ಕಾರದ ಮುಂದೆ ಡೊಗ್ಗು ಸಲಾಮು ಹೊಡೆದಿತ್ತು.

2006ರಲ್ಲಿ ಚೀನಾದ ಅಧ್ಯಕ್ಷ ಹು ಜಿಂಟಾವೊ ಭಾರತಕ್ಕೆ ಭೇಟಿ ನೀಡಿದಾಗ ಚೀನಾದ ಸರ್ಕಾರದ ಅಪೇಕ್ಷೆಯಂತೆ ಟಿಂಜನ್ ಅವರ ಚಲನವಲನಗಳನ್ನು 14 ದಿನಗಳ ಕಾಲ ಧರ್ಮಶಾಲಾ ಪ್ರದೇಶಕ್ಕೆ ಸೀಮಿತಗೊಳಿಸಿ ಅವರ ಮೇಲೆ ಕಟ್ಟೆಚ್ಚರ ಇಡಲಾಗಿತ್ತು.

ಚೀನಾದ ಸಾಂಸ್ಕೃತಿಕ ಕ್ರಾಂತಿ ಅಂತ್ಯಗೊಂಡು ಆ ದೇಶ ಮಾವೋನ ಹಿಡಿತಕ್ಕೆ ಸಿಕ್ಕ ನಂತರ ಆತ ಟಿಬೆಟ್‍ಅನ್ನು ಚೀನಾದ ವಶಕ್ಕೆ ತೆಗೆದುಕೊಳ್ಳಲು ಯತ್ನಿಸಲಾರಂಭಿಸಿದ. ಆಗ ಟಿಬೆಟ್ ಜನರ ನೆರವಿಗೆ ಮುಂದಾಗಿದ್ದು ಅಮೆರಿಕಾದ ಸಿಐಎ ಮತ್ತು ಭಾರತದ ಸರ್ಕಾರ. ಇದರಿಂದಾಗಿ ಟಿಬೆಟ್ ಸೈನ್ಯ ರೂಪಗೊಂಡಿತ್ತಾದರೂ ಚೀನಾದ ದಬ್ಬಾಳಿಕೆ ನಿಲ್ಲಲಿಲ್ಲ. ಆಗ ಟಿಬೆಟ್ ಜನ ದಂಗೆ ಎದ್ದರು. ಇದಕ್ಕೆ ಪ್ರತಿಯಾಗಿ ಟಿಬೆಟಿಯನ್ನರ ಪರಮಗುರು ದಲೈ ಲಾಮರನ್ನೇ ಮುಗಿಸಲು ಚೀನಾ ಸಂಚು ರೂಪಿಸಿತು. ಆಗ ಅನಿವಾರ್ಯವಾಗಿ ದಲೈಲಾಮಾ ಅವರು ಭಾರತಕ್ಕೆ ಓಡಿಬಂದು ಇಲ್ಲಿ ರಕ್ಷಣೆ ಪಡೆಯಬೇಕಾಯಿತು. ಹೀಗೆ ದಲೈಲಾಮಾ ತಪ್ಪಿಸಿಕೊಂಡ ನಂತರ ಟಿಬೆಟ್ ಮೇಲೆ ಚೀನಾ ತನ್ನ ಕ್ರೌರ್ಯವನ್ನು ಹೆಚ್ಚಿಸಿ ಲಕ್ಷಾಂತರ ಜನರನ್ನು ಕೊಂದು ಹಾಕಿತು.

ದಲೈಲಾಮಾರೊಂದಿಗೆ ಸಾವಿರಾರು ಟಿಬೆಟಿಯನ್ನರು ಭಾರತದಲ್ಲಿ ವಾಸಿಸಲಾರಂಭಿಸಿದರು. ಮಾತ್ರವಲ್ಲ, ಅವರಲ್ಲಿ ನೂರಾರು ಜನ ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ಕೂಲಿಗಳಾಗಿ ದುಡಿಯಲಾರಂಭಿಸಿದರು. ಹಾಗೆ ದುಡಿಯುತ್ತಾ, ಟೆಂಟ್‍ನಲ್ಲಿ ವಾಸಿಸುತ್ತಿದ್ದ ದಂಪತಿಗಳಿಗೆ ಒಂದು ದಿನ ರಸ್ತೆಬದಿಯಲ್ಲಿ ಜನಿಸಿದ ಕವಿಯೇ ಈ ಟೆಂಜಿನ್‍ಟ್ಸಂಡು.

ಚೆನೈನಲ್ಲಿರುವ ಲಯೋಲಾ ಕಾಲೇಜಿನಿಂದ ಪದವಿ, ಮುಂಬೈನಲ್ಲಿ ಸ್ನಾತಕೋತ್ತರ ಪದವಿ ಪಡೆದ ಟೆಂಜಿನ್ ಶೇಕ್ಸ್‍ಪಿಯರ್‍ನೊಂದಿಗೆ ಕನ್ನಡದ ಎ.ಕೆ.ರಾಮಾನುಜನ್ ಅವರನ್ನು ಅನುಸರಿಸುತ್ತ ಕವಿಯಾಗಿ ರೂಪುಗೊಂಡರು. ಜೊತೆಗೆ ಟಿಬೆಟ್‍ನ ಸ್ವಾತಂತ್ರ್ಯದ ಕಿಚ್ಚನ್ನೂ ತಮ್ಮ ಎದೆಯಲ್ಲಿ ಹೊತ್ತಿಸಿಕೊಂಡರು. ಆತನೇ ಹೇಳುವಂತೆ “ಟಿಬೆಟ್‍ನಲ್ಲಿ ಕ್ರಾಂತಿಯನ್ನು ಪ್ರಾರಂಭಿಸಲು ಅಲ್ಲಿಗೆ ಹೋದೆ. ಆದರೆ ಕೆಲದಿನಗಳಲ್ಲೇ ಈ ರೋಮಾಂಚಕ ಬಂಡಾಯಗಾರರನ್ನು ಬಂಧಿಸಿ, ಹೊಡೆದು, ಲಾಸಾದಲ್ಲಿನ ಜೈಲಿಗೆ ದೂಡಿದರು. ಜೈಲಿನಲ್ಲಿ ಜೊತೆಗಿದ್ದ ಬಂಧಿಯೊಬ್ಬ ‘ಸ್ವತಂತ್ರ ಟಿಬೆಟ್‍ಗಾಗಿ ನಿನ್ನ ಎದೆ ಬೆಂಕಿ ಹತ್ತಿ ಉರಿದರೂ ಅದರ ಹೊಗೆ ಕಾಣಿಸಿಕೊಳ್ಳದಂತೆ ಎಚ್ಚರ ವಹಿಸು’ ಎಂದು ಉಪದೇಶ ನೀಡಿದ. ಆದರೆ ಭಗತ್‍ಸಿಂಗ್‍ನ ಅಭಿಮಾನಿಯಾದ ಈ ಅನನುಭವಿ ಕ್ರಾಂತಿಕಾರಿ ಅಷ್ಟೊತ್ತಿಗಾಗಲೇ ತಾನು ಟಿಬೆಟ್‍ಅನ್ನು ಬಿಡುಗಡೆಗೊಳಿಸಲು ಬಂದಿರುವುದಾಗಿ ಕೊಚ್ಚಿಕೊಂಡಿದ್ದ.”

ಟಿಬೆಟ್ ಮೇಲೆ ಚೀನಾ ದಾಳಿ ಮಾಡಿ ಅಲ್ಲಿನ ಜನರನ್ನು ತನ್ನ ಸರ್ವಾಧಿಕಾರಿ ಧೋರಣೆಗೆ ಗುರಿ ಮಾಡಿ ಈಗ್ಗೆ ಐವತ್ತು ವರ್ಷಗಳಾಗಿವೆ. ಈ ಐದು ದಶಕಗಳಲ್ಲಿ ಟಿಬೆಟ್‍ನಲ್ಲಿರುವ ಆರು ಮಿಲಿಯನ್ ಜನರು ಮತ್ತು ಗಡಿಪಾರಾಗಿ ಭಾರತ ಸೇರಿದಂತೆ ವಿವಿಧ ದೇಶಗಳಲ್ಲಿ ಇಂದು ಬದುಕುತ್ತಿರುವ ಲಕ್ಷಾಂತರ ಟಿಬೆಟಿಯನ್ನರು ಹಂಬಲಿಸುತ್ತಿರುವುದು ತಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ. ಸ್ವಾಭಿಮಾನದ ಬದುಕಿಗಾಗಿ. ಬೌದ್ಧ ಧರ್ಮೀಯರಾದ ಟಿಬೆಟಿಯನ್ನರು ತಮ್ಮ ಕನಸನ್ನು ನನಸಾಗಿಸಲು ಅನುಸರಿಸುತ್ತಿರುವುದು ಅಹಿಂಸಾತ್ಮಕ ಹಾದಿಯನ್ನು. ಆದರೆ ಆ ಹಾದಿ ಎಷ್ಟು ಕಷ್ಟಕರವಾಗಿದೆ ಎಂಬುದನ್ನು ಟೆಂಜಿನ್ ಅವರ ಈ ಪದ್ಯ ಬಿಂಬಿಸುತ್ತದೆ.

ನನ್ನ ಅಪ್ಪ ಸತ್ತ
ತನ್ನ ಮನೆ, ತನ್ನ ಹಳ್ಳಿ
ತನ್ನ ದೇಶಕ್ಕಾಗಿ ಹೋರಾಡುತ್ತಾ.
ಆದರೆ ನಾವು ಬೌದ್ಧರು.
ಜನ ಹೇಳುತ್ತಾರೆ ನಾವು
ಶಾಂತರಾಗಿರಬೇಕೆಂದು,
ಅಹಿಂಸಾವಾದಿಗಳಾಗಿರಬೇಕೆಂದು.
ಆದ್ದರಿಂದ ನಾನು ನನ್ನ ವೈರಿಗಳನ್ನು
ಕ್ಷಮಿಸಿದೆ.
ಹಲವೊಮ್ಮೆ ಅನ್ನಿಸುತ್ತೆ,
ಹಾಗೆ ಕ್ಷಮಿಸುವ ಮೂಲಕ
ನಾನು ನನ್ನ ತಂದೆಗೆ
ದ್ರೋಹ ಬಗೆದೆನೆಂದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...