Homeನ್ಯಾಯ ಪಥತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

ತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

- Advertisement -
- Advertisement -

| ಸಂಪಾದಕೀಯ |

ಕೇಂದ್ರ ಸರ್ಕಾರ ತಾನು ಆಡಳಿತ ನಡೆಸಿದ 5 ವರ್ಷಗಳಲ್ಲಿ ಸುಪ್ರೀಂ ಕೋರ್ಟ್, ಆರ್‍ಬಿಐ, ಸಿ.ಬಿ.ಐ, ದತ್ತಾಂಶ ಸಂಸ್ಥೆಗಳು ಸೇರಿದಂತೆ ಆಡಳಿತದ ಎಲ್ಲಾ ಸಾಂಸ್ಥಿಕ ಆಯಾಮಗಳನ್ನು ಹದಗೆಡಿಸಿರುವುದು ಪ್ರಜ್ಞಾವಂತರಿಗೆ ಗೊತ್ತೇ ಇದೆ. ಸರ್ಕಾರದ ಅನಧಿಕೃತ ಸಂಸ್ಥೆಗಳ ಮೂಲಕ ದೇಶದ ಜನ ಏನು ತಿನ್ನಬೇಕು, ಯಾವ ರೀತಿಯ ಬಟ್ಟೆ ಹಾಕಬೇಕು ಎನ್ನುವ ಫರ್ಮಾನು ಸಹ ಹೊರಡಿಸಲಾಯಿತು. ಈಗ ಅದೇ ಸರ್ಕಾರ ತನ್ನ ಕೊನೆಯ ದಿನಗಳಲ್ಲಿ ದೇಶದ ಮಕ್ಕಳು ಏನು ಕಲಿಯಬೇಕು ಏನು ಬಿಡಬೇಕು ಎಂದು ನಿರ್ಧರಿಸಲು ಮುಂದಾಗಿರುವುದು ಪ್ರಜಾಪ್ರಭುತ್ವ ಘೋರ ಅಣಕವಾಗಿದೆ.

ಭಾರತ ಬಹುತ್ವ ದೇಶ. ಈ ವೈವಿಧ್ಯತೆಯೇ ಅದರ ಜೀವಾಳ. ಈ ವೈವಿಧ್ಯತೆಯೂ ದೇಶದ ಎಲ್ಲಾ ರಂಗಗಳಲ್ಲೂ ಕಂಡಿಬಂದಿದ್ದು ಸಹಜವಾಗಿಯೇ ಮಕ್ಕಳ ಕಲಿಕೆಯಲ್ಲಿಯೂ ಸೇರಿಕೊಂಡಿದೆ. ಭಾರತದ ಪಠ್ಯಪುಸ್ತಕಗಳು ಸಮಗ್ರತೆಯಿಂದ ಕೂಡಿದ್ದು ಇಡೀ ದೇಶದ ಸಂಸ್ಕೃತಿ ಆಚಾರ ವಿಚಾರ ಜನಾಂಗಗಳ ಕುರಿತ ಮಾಹಿತಿಗಳನ್ನು ಒಳಗೊಂಡಿರಬೇಕೆನ್ನುವುದು ಸಂವಿಧಾನದ ಆಶಯ ಮಾತ್ರವಲ್ಲ ಮಕ್ಕಳ ಕಲಿಕೆಯ ದೃಷ್ಟಿಯಿಂದ, ಅವರ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಅನಿವಾರ್ಯವೆಂದು ವೈಜ್ಞಾನಿಕವಾಗಿ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ನಾವಿನ್ನು ನಮ್ಮ ಪಠ್ಯಪುಸ್ತಕಗಳಲ್ಲಿ ಒಳಗೊಳ್ಳಬೇಕಿರುವ ಸಾವಿರಾರು ಅಂಶಗಳಿದ್ದರೂ ಆ ಕಡೆ ಹೆಜ್ಜೆ ಇಟ್ಟೆದ್ದೆವು. ಆದರೆ ಈ ಸರ್ಕಾರ ಅದರಿಂದ ಹಿಂದೆ ಬರುವ ಸೂಚನೆಗಳನ್ನು ನೀಡುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ.

ಮೂರು ದಿನ ಹಿಂದೆಯಷ್ಟೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಪ್ರಕಾಶ್ ಜಾವೇಡ್‍ಕರ್‍ ರವರ ನಿರ್ದೇಶನದ ಮೇರೆಗೆ ಮಕ್ಕಳ ಕಲಿಕೆಯ ಹೊರೆ ಕಡಿಮೆ ಮಾಡುವ ನೆಪಹೊಡ್ಡಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಭೇತಿ ಮಂಡಳಿಯು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಭಾರೀ ಬದಲಾವಣೆಗಳನ್ನು ತಂದಿದೆ. ಭಾರತ ಮತ್ತು ಸಮಕಾಲೀನ ಜಗತ್ತು-1 ಎಂಬ ಪಠ್ಯಪುಸ್ತಕದಲ್ಲಿ 70 ಪುಟಗಳನ್ನು ಕೈಬಿಟ್ಟಿದೆ. ಆದರೆ ಅದರಲ್ಲಿ ಕೇರಳದ ಟ್ರಾವೆಂಕೂರ್‍ನಲ್ಲಿ ಕೆಳ ಜಾತಿಯವರಾಗಿ ಪರಿಗಣಿಸುವ ನಾಡಾರ್ ಮಹಿಳೆಯರು ಎದೆಭಾಗವನ್ನು ಬಟ್ಟೆಯಿಂದ ಮುಚ್ಚಿಕೊಳ್ಳುವುದಕ್ಕಾಗಿ ನಡೆಸಿದ ಹೋರಾಟದ ಕಥನ ಸೇರಿದಂತೆ ಮಹತ್ವದ ಮೂರು ಪಾಠಗಳನ್ನು ತೆಗೆದಿರುವುದು ಕೇವಲ ಹೊರೆ ಕಡಿಮೆ ಮಾಡುವುದಕ್ಕಾಗಿ ಎಂದರೆ ನಂಬಲು ಸಾಧ್ಯವೇ?

ಮುಂದುವರಿದು ಇತಿಹಾಸ ಮತ್ತು ಕ್ರೀಡೆ ಎಂಬ ಅಧ್ಯಾಯದಲ್ಲಿ ಭಾರತದಲ್ಲಿ ಕ್ರಿಕೆಟ್ ಆಟವೆಂಬುದು ಕೆಲವೇ ಜಾತಿ, ಪ್ರದೇಶ ಮತ್ತು ಸಮುದಾಯದೊಂದಿಗೆ ಮಾತ್ರ ಬೆಸೆದುಕೊಂಡಿದೆ ಎಂಬುದರ ವಿಮರ್ಶಾತ್ಮಕ ಪಠ್ಯವನ್ನು ಸಹ ಕೈಬಿಡಲಾಗಿದೆ. ಹಾಗಯೇ ಗ್ರಾಮೀಣ ಜನರು ಮತ್ತು ರೈತರು ಎಂಬ ಅಧ್ಯಾಯದಡಿ ಬಂಡವಾಳಶಾಹಿ ಮತ್ತು ವಸಾಹತುಶಾಹಿ ಆಳ್ವಿಕೆಗಳು ಗ್ರಾಮೀಣ ಜನರ ಮೇಲೆ ಅದರಲ್ಲೂ ರೈತರ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಇದ್ದ ಅಧ್ಯಾಯವೂ ಹೊರೆಯ ಕಾರಣಕ್ಕೆ ಕಾಣೆಯಾಗಿದೆ. ಕೈಬಿಟ್ಟಿರುವ ಮೂರು ಪಠ್ಯಗಳು ಸಹ ದೇಶದ ತಳಸಮುದಾಯಗಳ ಕಥನವಾಗಿದ್ದು ಅವರಿಗಾಗುತ್ತಿರುವ ಅನ್ಯಾಯ ಮತ್ತು ಸಮಾಜವನ್ನು ವಿಮರ್ಶಾತ್ಮಕ ನೋಡಲು ಸಾಧ್ಯವಾಗುವಂತವೇ ಆಗಿರುವುದರಿಂದ ಇದು ಉದ್ದೇಶಪೂರ್ವಕ ಕೃತ್ಯ ಎಂಬುದು ಸ್ಪಷ್ಟವಾಗುತ್ತದೆ.

ಈ ಪ್ರಕ್ರಿಯೆ 2016ರಿಂದಲೂ ಚಾಲ್ತಿಯಲ್ಲಿದ್ದು ಈ ಪಠ್ಯಗಳ ಕುರಿತು ಪರೀಕ್ಷೆಗಳಲ್ಲಿ ಪ್ರಶ್ನೆ ಕೇಳಬಾರದೆಂದು ಆಗಲೇ ಸುತ್ತೋಲೆ ಹೊರಡಿಸಿತ್ತು. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡದೇ ಕೇವಲ ಇತಿಹಾಸ (ಸಾಮಾಜಿಕ ವಿಜ್ಞಾನ)ದ ಪಠ್ಯಪುಸ್ತಕಗಳಲ್ಲಿ ಮಾತ್ರ ಪಠ್ಯಗಳನ್ನು ಕಡಿತ ಮಾಡಿದೆ ಎಂದರೆ ಆಳುವ ಸರ್ಕಾರದ ಹುನ್ನಾರ ಅರ್ಥವಾಗದೇ ಇರುವುದಿಲ್ಲ. ಇದೇ ಸಂದರ್ಭದಲ್ಲಿ ಹೊರೆ ಕಡಿಮೆ ಮಾಡುವ ಉದ್ದೇಶ ಅಂತ ಬಾಯಲ್ಲಿ ಹೇಳುತ್ತಿದ್ದು ಇತ್ತೀಚೆಗೆ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರ ಹಿಂದಿ ಕವನವನ್ನು ಇದೇ ಎನ್‍ಸಿಇಆರ್‍ಟಿ ಪಠ್ಯದಲ್ಲಿ ಸೇರ್ಪಡೆ ಮಾಡಿದೆ.

ಮಕ್ಕಳು ಏನನ್ನು ಕಲಿಯಬೇಕು, ಪಠ್ಯ ಯಾವುದಿರಬೇಕೆಂಬುದನ್ನು ಹಾಗೂ ಎಷ್ಟಿರಬೇಕೆಂಬುದನ್ನು ನಿರ್ಧರಿಸಬೇಕಿರುವುದು ಶಿಕ್ಷಣ ತಜ್ಞರು, ಮಕ್ಕಳ ತಜ್ಞರು. ಆಳುವ ಸರ್ಕಾರಗಳು ತಮ್ಮ ರಾಜಕೀಯ ಲಾಭಕ್ಕಾಗಿ ಶಿಕ್ಷಣದಂತಹ ಕ್ಷೇತ್ರಗಳಲ್ಲಿ ಮೂಗು ತೂರಿಸುವುದು ಪ್ರಜಾತಂತ್ರ ವಿರೋಧಿಯಾದುದು. ಆದರೆ ಬಲಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಂತೆಲ್ಲಾ ಶಿಕ್ಷಣದ ಕೇಸರಿಕರಣಕ್ಕೆ ನೇರವಾಗಿ ಕೈಹಾಕುತ್ತಾ ಎಳೆಯ ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪ್ರಯತ್ನ ಮಾಡುತ್ತಿವೆ. ಇನ್ನೊಂದು ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ತಮಗೆ ಮನಸ್ಸಿಗೆ ಬಂದುದ್ದನ್ನು ಪಠ್ಯಪುಸ್ತಕಗಳಲ್ಲಿ ತರಲು ಹೊರಟರೆ ಶಿಕ್ಷಣದ ಉದ್ದೇಶವೇ ಬೀದಿಪಾಲಾಗುತ್ತದೆ.

ಈ ಹಿಂದೆಯೂ 2009ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಬೇಕು ಎಂಬ ಸುತ್ತೋಲೆ ಹೊರಡಿಸಿತ್ತು. ಆಗ ಕರ್ನಾಟಕದ ಪ್ರಜ್ಞಾವಂತರಿಂದ ವ್ಯಾಪಕ ವಿರೋಧ ಬಂದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಿಲುವಿನಿಂದ ಹಿಂದೆ ಸರಿದಿತ್ತು. ತದನಂತರ ಸಂಸ್ಕøತ ಭಾಷೆಯನ್ನು ಕಡ್ಡಾಯ ಮಾಡುತ್ತೇವೆಂದು ಒಂದಷ್ಟು ದಿನ ಪ್ರಚಾರ ಮಾಡಿದರು. ಈಗ ವೇದ ಶಿಕ್ಷಣವನ್ನು ಕಡ್ಡಾಯಗೊಳಿಸುತ್ತೇವೆಂದು ಗುಲ್ಲೆಬ್ಬಿಸುತ್ತಿದ್ದಾರೆ. ಇಡೀ ಪ್ರಪಂಚವೇ ಆಧುನಿಕ, ವೈಜ್ಞಾನಿಕ ಶಿಕ್ಷಣ ಪಡೆದು ಅಭಿವೃದ್ದಿ ಪಥದಲ್ಲಿ ಮುನ್ನುಗ್ಗುತ್ತಿದ್ದರೆ ಭಾರತ ಮಾತ್ರ ಮತಾಂಧರ ಕೈಗೆ ಸಿಕ್ಕಿ ಹಿಮ್ಮುಖವಾಗಿ ಚಲಿಸುವ ದುಸ್ಥಿಗೆ ತಲುಪಿದೆ.

ಶಿಕ್ಷಣದ ಮೂಲಭೂತ ಉದ್ದೇಶ ಮಾನವೀಯವಾದ, ಪ್ರಜಾತಾಂತ್ರಿಕವಾದ, ಎಲ್ಲಾ ಜನರೂ ಸಮಾನರಾದ, ಬಹು ವೈವಿಧ್ಯತೆಯನ್ನು ಗೌರವಿಸುವ, ಸೃಜನಶೀಲತೆ, ಜ್ಞಾನ ಹಾಗೂ ನೆಮ್ಮದಿಯನ್ನು ಹೆಚ್ಚಿಸುತ್ತಾ ಹೋಗುವ ಸಮಾಜವನ್ನು ನಿರ್ಮಿಸುವುದಾಗಿದೆ. ಅದರ ಈಡೇರಿಕೆಗೆ ಎಲ್ಲಾ ಜಾತಿ ಧರ್ಮದ ಮಕ್ಕಳು ಸಹ ಒಂದೇ ಶಾಲೆಯಲ್ಲಿ ಕಲಿಯುವ ಸಮಾನ ಶಾಲಾ ವ್ಯವಸ್ಥೆಯ ಅಗತ್ಯವಿದೆ. ಆಗ ಮಾತ್ರ ಭಾರತದ ಮಕ್ಕಳು ಯಾವುದೇ ಹೇರಿಕೆ ಇಲ್ಲದೇ ಮುಕ್ತವಾಗಿ ಕಲಿಯುವ ವಾತವರಣ ನಿರ್ಮಾಣವಾಗುತ್ತದೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಲಪಂಥೀಯ ಸರ್ಕಾರದ ಅರ್ಥಹೀನ ಕ್ರಮಗಳನ್ನು ವಿರೊಧಿಸುತ್ತಲೇ ಜನಪರ ಕಲಿಕಾ ವಿಧನಕ್ಕಾಗಿ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...