Homeನ್ಯಾಯ ಪಥತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

ತಳಸಮುದಾಯಗಳ ಕಥನವನ್ನು ಮರೆಮಾಚುವುದು ಭಾರತದ ಮಟ್ಟಿಗೆ ಆತ್ಮವಂಚನೆಯೇ ಸರಿ

- Advertisement -
- Advertisement -

| ಸಂಪಾದಕೀಯ |

ಕೇಂದ್ರ ಸರ್ಕಾರ ತಾನು ಆಡಳಿತ ನಡೆಸಿದ 5 ವರ್ಷಗಳಲ್ಲಿ ಸುಪ್ರೀಂ ಕೋರ್ಟ್, ಆರ್‍ಬಿಐ, ಸಿ.ಬಿ.ಐ, ದತ್ತಾಂಶ ಸಂಸ್ಥೆಗಳು ಸೇರಿದಂತೆ ಆಡಳಿತದ ಎಲ್ಲಾ ಸಾಂಸ್ಥಿಕ ಆಯಾಮಗಳನ್ನು ಹದಗೆಡಿಸಿರುವುದು ಪ್ರಜ್ಞಾವಂತರಿಗೆ ಗೊತ್ತೇ ಇದೆ. ಸರ್ಕಾರದ ಅನಧಿಕೃತ ಸಂಸ್ಥೆಗಳ ಮೂಲಕ ದೇಶದ ಜನ ಏನು ತಿನ್ನಬೇಕು, ಯಾವ ರೀತಿಯ ಬಟ್ಟೆ ಹಾಕಬೇಕು ಎನ್ನುವ ಫರ್ಮಾನು ಸಹ ಹೊರಡಿಸಲಾಯಿತು. ಈಗ ಅದೇ ಸರ್ಕಾರ ತನ್ನ ಕೊನೆಯ ದಿನಗಳಲ್ಲಿ ದೇಶದ ಮಕ್ಕಳು ಏನು ಕಲಿಯಬೇಕು ಏನು ಬಿಡಬೇಕು ಎಂದು ನಿರ್ಧರಿಸಲು ಮುಂದಾಗಿರುವುದು ಪ್ರಜಾಪ್ರಭುತ್ವ ಘೋರ ಅಣಕವಾಗಿದೆ.

ಭಾರತ ಬಹುತ್ವ ದೇಶ. ಈ ವೈವಿಧ್ಯತೆಯೇ ಅದರ ಜೀವಾಳ. ಈ ವೈವಿಧ್ಯತೆಯೂ ದೇಶದ ಎಲ್ಲಾ ರಂಗಗಳಲ್ಲೂ ಕಂಡಿಬಂದಿದ್ದು ಸಹಜವಾಗಿಯೇ ಮಕ್ಕಳ ಕಲಿಕೆಯಲ್ಲಿಯೂ ಸೇರಿಕೊಂಡಿದೆ. ಭಾರತದ ಪಠ್ಯಪುಸ್ತಕಗಳು ಸಮಗ್ರತೆಯಿಂದ ಕೂಡಿದ್ದು ಇಡೀ ದೇಶದ ಸಂಸ್ಕೃತಿ ಆಚಾರ ವಿಚಾರ ಜನಾಂಗಗಳ ಕುರಿತ ಮಾಹಿತಿಗಳನ್ನು ಒಳಗೊಂಡಿರಬೇಕೆನ್ನುವುದು ಸಂವಿಧಾನದ ಆಶಯ ಮಾತ್ರವಲ್ಲ ಮಕ್ಕಳ ಕಲಿಕೆಯ ದೃಷ್ಟಿಯಿಂದ, ಅವರ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಅನಿವಾರ್ಯವೆಂದು ವೈಜ್ಞಾನಿಕವಾಗಿ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ನಾವಿನ್ನು ನಮ್ಮ ಪಠ್ಯಪುಸ್ತಕಗಳಲ್ಲಿ ಒಳಗೊಳ್ಳಬೇಕಿರುವ ಸಾವಿರಾರು ಅಂಶಗಳಿದ್ದರೂ ಆ ಕಡೆ ಹೆಜ್ಜೆ ಇಟ್ಟೆದ್ದೆವು. ಆದರೆ ಈ ಸರ್ಕಾರ ಅದರಿಂದ ಹಿಂದೆ ಬರುವ ಸೂಚನೆಗಳನ್ನು ನೀಡುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ.

ಮೂರು ದಿನ ಹಿಂದೆಯಷ್ಟೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ಪ್ರಕಾಶ್ ಜಾವೇಡ್‍ಕರ್‍ ರವರ ನಿರ್ದೇಶನದ ಮೇರೆಗೆ ಮಕ್ಕಳ ಕಲಿಕೆಯ ಹೊರೆ ಕಡಿಮೆ ಮಾಡುವ ನೆಪಹೊಡ್ಡಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಭೇತಿ ಮಂಡಳಿಯು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಭಾರೀ ಬದಲಾವಣೆಗಳನ್ನು ತಂದಿದೆ. ಭಾರತ ಮತ್ತು ಸಮಕಾಲೀನ ಜಗತ್ತು-1 ಎಂಬ ಪಠ್ಯಪುಸ್ತಕದಲ್ಲಿ 70 ಪುಟಗಳನ್ನು ಕೈಬಿಟ್ಟಿದೆ. ಆದರೆ ಅದರಲ್ಲಿ ಕೇರಳದ ಟ್ರಾವೆಂಕೂರ್‍ನಲ್ಲಿ ಕೆಳ ಜಾತಿಯವರಾಗಿ ಪರಿಗಣಿಸುವ ನಾಡಾರ್ ಮಹಿಳೆಯರು ಎದೆಭಾಗವನ್ನು ಬಟ್ಟೆಯಿಂದ ಮುಚ್ಚಿಕೊಳ್ಳುವುದಕ್ಕಾಗಿ ನಡೆಸಿದ ಹೋರಾಟದ ಕಥನ ಸೇರಿದಂತೆ ಮಹತ್ವದ ಮೂರು ಪಾಠಗಳನ್ನು ತೆಗೆದಿರುವುದು ಕೇವಲ ಹೊರೆ ಕಡಿಮೆ ಮಾಡುವುದಕ್ಕಾಗಿ ಎಂದರೆ ನಂಬಲು ಸಾಧ್ಯವೇ?

ಮುಂದುವರಿದು ಇತಿಹಾಸ ಮತ್ತು ಕ್ರೀಡೆ ಎಂಬ ಅಧ್ಯಾಯದಲ್ಲಿ ಭಾರತದಲ್ಲಿ ಕ್ರಿಕೆಟ್ ಆಟವೆಂಬುದು ಕೆಲವೇ ಜಾತಿ, ಪ್ರದೇಶ ಮತ್ತು ಸಮುದಾಯದೊಂದಿಗೆ ಮಾತ್ರ ಬೆಸೆದುಕೊಂಡಿದೆ ಎಂಬುದರ ವಿಮರ್ಶಾತ್ಮಕ ಪಠ್ಯವನ್ನು ಸಹ ಕೈಬಿಡಲಾಗಿದೆ. ಹಾಗಯೇ ಗ್ರಾಮೀಣ ಜನರು ಮತ್ತು ರೈತರು ಎಂಬ ಅಧ್ಯಾಯದಡಿ ಬಂಡವಾಳಶಾಹಿ ಮತ್ತು ವಸಾಹತುಶಾಹಿ ಆಳ್ವಿಕೆಗಳು ಗ್ರಾಮೀಣ ಜನರ ಮೇಲೆ ಅದರಲ್ಲೂ ರೈತರ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ಇದ್ದ ಅಧ್ಯಾಯವೂ ಹೊರೆಯ ಕಾರಣಕ್ಕೆ ಕಾಣೆಯಾಗಿದೆ. ಕೈಬಿಟ್ಟಿರುವ ಮೂರು ಪಠ್ಯಗಳು ಸಹ ದೇಶದ ತಳಸಮುದಾಯಗಳ ಕಥನವಾಗಿದ್ದು ಅವರಿಗಾಗುತ್ತಿರುವ ಅನ್ಯಾಯ ಮತ್ತು ಸಮಾಜವನ್ನು ವಿಮರ್ಶಾತ್ಮಕ ನೋಡಲು ಸಾಧ್ಯವಾಗುವಂತವೇ ಆಗಿರುವುದರಿಂದ ಇದು ಉದ್ದೇಶಪೂರ್ವಕ ಕೃತ್ಯ ಎಂಬುದು ಸ್ಪಷ್ಟವಾಗುತ್ತದೆ.

ಈ ಪ್ರಕ್ರಿಯೆ 2016ರಿಂದಲೂ ಚಾಲ್ತಿಯಲ್ಲಿದ್ದು ಈ ಪಠ್ಯಗಳ ಕುರಿತು ಪರೀಕ್ಷೆಗಳಲ್ಲಿ ಪ್ರಶ್ನೆ ಕೇಳಬಾರದೆಂದು ಆಗಲೇ ಸುತ್ತೋಲೆ ಹೊರಡಿಸಿತ್ತು. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡದೇ ಕೇವಲ ಇತಿಹಾಸ (ಸಾಮಾಜಿಕ ವಿಜ್ಞಾನ)ದ ಪಠ್ಯಪುಸ್ತಕಗಳಲ್ಲಿ ಮಾತ್ರ ಪಠ್ಯಗಳನ್ನು ಕಡಿತ ಮಾಡಿದೆ ಎಂದರೆ ಆಳುವ ಸರ್ಕಾರದ ಹುನ್ನಾರ ಅರ್ಥವಾಗದೇ ಇರುವುದಿಲ್ಲ. ಇದೇ ಸಂದರ್ಭದಲ್ಲಿ ಹೊರೆ ಕಡಿಮೆ ಮಾಡುವ ಉದ್ದೇಶ ಅಂತ ಬಾಯಲ್ಲಿ ಹೇಳುತ್ತಿದ್ದು ಇತ್ತೀಚೆಗೆ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರ ಹಿಂದಿ ಕವನವನ್ನು ಇದೇ ಎನ್‍ಸಿಇಆರ್‍ಟಿ ಪಠ್ಯದಲ್ಲಿ ಸೇರ್ಪಡೆ ಮಾಡಿದೆ.

ಮಕ್ಕಳು ಏನನ್ನು ಕಲಿಯಬೇಕು, ಪಠ್ಯ ಯಾವುದಿರಬೇಕೆಂಬುದನ್ನು ಹಾಗೂ ಎಷ್ಟಿರಬೇಕೆಂಬುದನ್ನು ನಿರ್ಧರಿಸಬೇಕಿರುವುದು ಶಿಕ್ಷಣ ತಜ್ಞರು, ಮಕ್ಕಳ ತಜ್ಞರು. ಆಳುವ ಸರ್ಕಾರಗಳು ತಮ್ಮ ರಾಜಕೀಯ ಲಾಭಕ್ಕಾಗಿ ಶಿಕ್ಷಣದಂತಹ ಕ್ಷೇತ್ರಗಳಲ್ಲಿ ಮೂಗು ತೂರಿಸುವುದು ಪ್ರಜಾತಂತ್ರ ವಿರೋಧಿಯಾದುದು. ಆದರೆ ಬಲಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಂತೆಲ್ಲಾ ಶಿಕ್ಷಣದ ಕೇಸರಿಕರಣಕ್ಕೆ ನೇರವಾಗಿ ಕೈಹಾಕುತ್ತಾ ಎಳೆಯ ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪ್ರಯತ್ನ ಮಾಡುತ್ತಿವೆ. ಇನ್ನೊಂದು ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ತಮಗೆ ಮನಸ್ಸಿಗೆ ಬಂದುದ್ದನ್ನು ಪಠ್ಯಪುಸ್ತಕಗಳಲ್ಲಿ ತರಲು ಹೊರಟರೆ ಶಿಕ್ಷಣದ ಉದ್ದೇಶವೇ ಬೀದಿಪಾಲಾಗುತ್ತದೆ.

ಈ ಹಿಂದೆಯೂ 2009ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಬೇಕು ಎಂಬ ಸುತ್ತೋಲೆ ಹೊರಡಿಸಿತ್ತು. ಆಗ ಕರ್ನಾಟಕದ ಪ್ರಜ್ಞಾವಂತರಿಂದ ವ್ಯಾಪಕ ವಿರೋಧ ಬಂದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಿಲುವಿನಿಂದ ಹಿಂದೆ ಸರಿದಿತ್ತು. ತದನಂತರ ಸಂಸ್ಕøತ ಭಾಷೆಯನ್ನು ಕಡ್ಡಾಯ ಮಾಡುತ್ತೇವೆಂದು ಒಂದಷ್ಟು ದಿನ ಪ್ರಚಾರ ಮಾಡಿದರು. ಈಗ ವೇದ ಶಿಕ್ಷಣವನ್ನು ಕಡ್ಡಾಯಗೊಳಿಸುತ್ತೇವೆಂದು ಗುಲ್ಲೆಬ್ಬಿಸುತ್ತಿದ್ದಾರೆ. ಇಡೀ ಪ್ರಪಂಚವೇ ಆಧುನಿಕ, ವೈಜ್ಞಾನಿಕ ಶಿಕ್ಷಣ ಪಡೆದು ಅಭಿವೃದ್ದಿ ಪಥದಲ್ಲಿ ಮುನ್ನುಗ್ಗುತ್ತಿದ್ದರೆ ಭಾರತ ಮಾತ್ರ ಮತಾಂಧರ ಕೈಗೆ ಸಿಕ್ಕಿ ಹಿಮ್ಮುಖವಾಗಿ ಚಲಿಸುವ ದುಸ್ಥಿಗೆ ತಲುಪಿದೆ.

ಶಿಕ್ಷಣದ ಮೂಲಭೂತ ಉದ್ದೇಶ ಮಾನವೀಯವಾದ, ಪ್ರಜಾತಾಂತ್ರಿಕವಾದ, ಎಲ್ಲಾ ಜನರೂ ಸಮಾನರಾದ, ಬಹು ವೈವಿಧ್ಯತೆಯನ್ನು ಗೌರವಿಸುವ, ಸೃಜನಶೀಲತೆ, ಜ್ಞಾನ ಹಾಗೂ ನೆಮ್ಮದಿಯನ್ನು ಹೆಚ್ಚಿಸುತ್ತಾ ಹೋಗುವ ಸಮಾಜವನ್ನು ನಿರ್ಮಿಸುವುದಾಗಿದೆ. ಅದರ ಈಡೇರಿಕೆಗೆ ಎಲ್ಲಾ ಜಾತಿ ಧರ್ಮದ ಮಕ್ಕಳು ಸಹ ಒಂದೇ ಶಾಲೆಯಲ್ಲಿ ಕಲಿಯುವ ಸಮಾನ ಶಾಲಾ ವ್ಯವಸ್ಥೆಯ ಅಗತ್ಯವಿದೆ. ಆಗ ಮಾತ್ರ ಭಾರತದ ಮಕ್ಕಳು ಯಾವುದೇ ಹೇರಿಕೆ ಇಲ್ಲದೇ ಮುಕ್ತವಾಗಿ ಕಲಿಯುವ ವಾತವರಣ ನಿರ್ಮಾಣವಾಗುತ್ತದೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಲಪಂಥೀಯ ಸರ್ಕಾರದ ಅರ್ಥಹೀನ ಕ್ರಮಗಳನ್ನು ವಿರೊಧಿಸುತ್ತಲೇ ಜನಪರ ಕಲಿಕಾ ವಿಧನಕ್ಕಾಗಿ ಒತ್ತಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...