Homeರಾಜಕೀಯತುಮಕೂರು : ಜೆಡಿಎಸ್ ಪ್ರಾಬಲ್ಯಕ್ಕೆ ಬೀಳಲಿದೆ ಕೈ ಪೆಟ್ಟು

ತುಮಕೂರು : ಜೆಡಿಎಸ್ ಪ್ರಾಬಲ್ಯಕ್ಕೆ ಬೀಳಲಿದೆ ಕೈ ಪೆಟ್ಟು

- Advertisement -
- Advertisement -

ತುಮಕೂರು ರಾಜಕಾರಣವೆಂದರೇನೆ ಅದು ಜಾತಿ ಆಧಾರಿತ ರಾಜಕಾರಣ. ಒಕ್ಕಲಿಗ ಮತ್ತು ಲಿಂಗಾಯತ ಮತಗಳು ಇಲ್ಲಿ ಹೆಚ್ಚೂಕಮ್ಮಿ ಸೋಲುಗೆಲುವನ್ನು ನಿರ್ಧರಿಸುತ್ತವೆ. ಅದೇ ಕಾರಣಕ್ಕೆ ಕಳೆದ ಅಸೆಂಬ್ಲಿ ಎಲೆಕ್ಷನ್‍ನಲ್ಲಿ ಜಿಲ್ಲೆಯ ಒಟ್ಟು 11 ಕ್ಷೇತ್ರಗಳ ಪೈಕಿ ಜೆಡಿಎಸ್ 6 ಕ್ಷೇತ್ರಗಳನ್ನು ತನ್ನ ವಶ ಮಾಡಿಕೊಂಡಿತ್ತು. ಕಾಂಗ್ರೆಸ್ ಪಾರ್ಟಿಯು ನಾಲ್ಕರಲ್ಲಿ ಗೆದ್ದಿದ್ದರೆ, ಬಿಜೆಪಿ 1 ಸ್ಥಾನದಲ್ಲಿ ಗೆದ್ದಿತ್ತು. ಆದರೆ ಈ ಸಲ ಚುನಾವಣಾ ಲೆಕ್ಕಾಚಾರವೇ ತಲೆಕೆಳಗಾಗುವ ಸಾಧ್ಯತೆಯಿದ್ದು ತುಮಕೂರು ಜಿಲ್ಲೆ ಕಾಂಗ್ರೆಸ್‍ಗೆ ಭರ್ಜರಿ ಫಸಲು ಕೊಡುವ ಸಂಭವವಿದೆ.

ಶ್ರೀನಿವಾಸ್ ಎಸ್. ಆರ್

ಗುಬ್ಬಿಯಲ್ಲಿ ಮೇಲ್ನೋಟಕ್ಕೆ ಮೂರೂ ಪಾರ್ಟಿಗಳ ನಡುವೆ ತ್ರಿಕೋನ ಸ್ಪರ್ಧೆಯಿರುವಂತೆ ಕಂಡುಬಂದರೂ ಜೆಡಿಎಸ್‍ನ ಹಾಲಿ ಶಾಸಕ ಎಸ್.ಆರ್. ಶ್ರೀನಿವಾಸ್, ಬಿಜೆಪಿಯ ಬೆಟ್ಟಸ್ವಾಮಿಯ ನಡುವೆಯೇ ಕತ್ತುಕತ್ತಿನ ಪೈಪೋಟಿ ಇರೋದು ಎದ್ದು ಕಾಣುತ್ತೆ. ಸತತ ಮೂರು ಚುನಾವಣೆಗಳಲ್ಲಿ ಜಯಭೇರಿ ಬಾರಿಸಿ ಹ್ಯಾಟ್ರಿಕ್ ಸಾಧನೆಗೈದಿರುವ ಶ್ರೀನಿವಾಸ್ ನಾಲ್ಕನೇ ಅದೃಷ್ಟದಾಟಕ್ಕೆ ಕಾತರರಾಗಿದ್ದಾರೆ. ಇವರಿಗೆ ಪೈಪೋಟಿ ಇರೋದು ಬಿಜೆಪಿಯ ಬೆಟ್ಟಸ್ವಾಮಿಯವರಿಂದ. ಆದರೆ ಬಿಜೆಪಿಯ ಟಿಕೆಟ್‍ಗೆ ಪ್ರಯತ್ನಿಸಿ ಈಗ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರುವ ದಿಲೀಪ್ ಕುಮಾರ್‍ರ ಪ್ರಚಾರದ ವೇಗ ಬೆಟ್ಟಸ್ವಾಮಿಗೆ ಅಡ್ಡಗಾಲು ಹಾಕುತ್ತಿದೆ. ಇನ್ನು ಕಾಂಗ್ರೆಸಿನ ಬಾಲಾಜಿ ಕುಮಾರ್, ಸರ್ಕಾರದ ಜನಪರ ಕೆಲಸಗಳನ್ನು ಮುಂದಿಟ್ಟು ಮತಯಾಚಿಸುತ್ತಿದ್ದಾರಾದರು ಕಳೆದ ಸಲ ಕೈ ಅಭ್ಯರ್ಥಿಯಾಗಿದ್ದ ಹೊನ್ನಗಿರಿಗೌಡರಿಗೆ ದಕ್ಕಿದ ಫಲಿತಾಂಶಕ್ಕಿಂತ ಭಿನ್ನ ರಿಜಲ್ಟೇನೂ ಇವರಿಗೆ ಸಿಕ್ಕದು.

ಎಂ.ಟಿ.ಕೃಷ್ಣಪ್ಪ

ಇತ್ತ ತುರುವೇಕೆರೆಯಲ್ಲಿ ಜೆಡಿಎಸ್‍ನ ಹುರಿಯಾಳಾಗಿ ಹಾಲಿ ಶಾಸಕ ಎಂ.ಟಿ.ಕೃಷ್ಣಪ್ಪನೇ ಕಣಕ್ಕಿಳಿದಿದ್ದಾರಾದರು ಅವರಿಗೆ ಗೆಲುವು ಕಳೆದ ಬಾರಿಯಷ್ಟು ಸಲೀಸಾಗಿಲ್ಲ. ಯಾಕೆಂದರೆ ಜನರ ನಡುವೆ ಅವರ ಬಗ್ಗೆ ವಿಪರೀತ ಅಸಮಧಾನವಿದೆ. ರಸ್ತೆ, ಒಳಚರಂಡಿ, ಆಸ್ಪತ್ರೆ ಹೀಗೆ ಮೂಲ ಸೌಕರ್ಯಗಳ್ಯಾವುವು ಹೇಳಿಕೊಳ್ಳುವಷ್ಟು ನೆಮ್ಮದಿಯಾಗಿಲ್ಲ. ಇವತ್ತಿಗೂ ಜನ ಆಸ್ಪತ್ರೆಗೆ ಪಕ್ಕದ ಚಿಕ್ಕನಾಯಕನಹಳ್ಳಿಯತ್ತ ಮುಖ ಮಾಡಬೇಕಾದ ಪರಿಸ್ಥಿತಿಯಿದೆ. ಇವೆಲ್ಲವೂ ಕೃಷ್ಣಪ್ಪನ ಓಘಕ್ಕೆ ಬ್ರೇಕ್ ಹಾಕುವ ಸಾಧ್ಯತೆಗಳು ದಟ್ಟವಾಗಿ ಕಾಣುತ್ತಿವೆ. ಇತ್ತ ಬಿಜೆಪಿಯಲ್ಲಿ ಒಳಬೇಗುದಿ ಆ ಪಕ್ಷವನ್ನು ದಿನದಿಂದ ದಿನಕ್ಕೆ ಮೆತ್ತಗಾಗಿಸುತ್ತಿದೆ. ಕಳೆದ ಸಲ ಯಡ್ಯೂರಪ್ಪನವರ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಸಾಲೆ ಜಯರಾಂಗೆ ಬಿಜೆಪಿಯ ಟಿಕೇಟು ಕೊಟ್ಟಿರೋದು ಹಲವರ ಬೇಸರಕ್ಕೆ ಕಾರಣವಾಗಿದೆ. ಇನ್ನು ಕಾಂಗ್ರೆಸ್‍ನಲ್ಲಿ ಹಿರಿಯ ಮುಖಂಡ ಚೌದ್ರಿ ರಂಗಪ್ಪ ಅಭ್ಯರ್ಥಿಯಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮೂರು ಪಕ್ಷಗಳ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವುದು ನಿಜವಾದರೂ ಪಕ್ಷೇತರ ಸ್ಪರ್ಧಿಗಳಾದ ಎಂ.ಡಿ.ರಮೇಶ್ ಗೌಡ ಮತ್ತು ನಾರಾಯಣಗೌಡ ಫ್ಯಾಕ್ಟರೂ ಗೆಲುವನ್ನು ಅತ್ತಿಂದಿತ್ತ ಹೊಯ್ದಾಡಿಸುತ್ತಿವೆ.

ಸುರೇಶ್ ಗೌಡ

ತುಮಕೂರು ಗ್ರಾಮಾಂತರ ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ಸುರೇಶ್‍ಗೌಡರಿಗೆ ಜೆಡಿಎಸ್‍ನ ಹಿರಿಯ ಮುಖಂಡ ಚೆನ್ನಿಗಪ್ಪನವರ ಮಗ ಬಿ.ಸಿ.ಗೌರಿಶಂಕರ ಪ್ರಬಲ ಪೈಪೋಟಿ ಒಡ್ಡುತ್ತಿದ್ದಾರೆ. ಸುರೇಶ್‍ಗೌಡರಿಗೆ ಸ್ಥಳೀಯವಾಗಿ ಒಳ್ಳೆಯ ಹೆಸರಿದೆ. ಆದರೆ ಕ್ಷೇತ್ರದಲ್ಲಿ ಎರಡನೇ ಹಂತದ ನಾಯಕತ್ವವನ್ನು ಬೆಳೆಸದೇ ಇರೋದು ಸುರೇಶ್ ಗೌಡ ವಿರುದ್ಧ ಸ್ವಪಕ್ಷೀಯರೆ ಸಣ್ಣ ಸಂಚು ನಡೆಸಲು ಅವಕಾಶ ಮಾಡಿಕೊಟ್ಟಿದೆ. ಜೆಡಿಎಸ್‍ನ ಗೌರಿಶಂಕರ್, ಕುಮಾರಸ್ವಾಮಿ ಮತ್ತು ದೇವೇಗೌಡರ ನಾಮಬಲದ ಮೇಲೆ ಗೆಲುವಿಗಾಗಿ ಹಂಬಲಿಸುತ್ತಿದ್ದಾರೆ. ಕಾಂಗ್ರೆಸ್‍ನಿಂದ ಲಿಂಗಾಯತ ಸಮುದಾಯದ ರಾಯಸಂದ್ರ ರವಿಕುಮಾರ್ ಸ್ಪರ್ಧಿಸಿರೋದು ಬಿಜೆಪಿಗೆ ಇಕ್ಕಟ್ಟು ಸೃಷ್ಟಿಸಿದೆ. ಅಜಮಾಸು 30 ಸಾವಿರದಷ್ಟಿರುವ ಲಿಂಗಾಯತ ಮತಗಳು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇಬ್ಭಾಗವಾಗಲಿದ್ದು ಇದು ಲಾಭ ಜೆಡಿಎಸ್‍ಗೆ ತರಲಿದೆ ಎನ್ನಲಾಗುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿಯಿರುವ ಇಲ್ಲಿ, ಇತ್ತೀಚೆಗೆ ಮಾಜಿ ಶಾಸಕ ನಿಂಗಪ್ಪನವರು ಜೆಡಿಎಸ್ ಸೇರಿರೋದು ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ.

ಡಿ.ನಾಗರಾಜಯ್ಯ

ಕುಣಿಗಲ್‍ನಲ್ಲಿ ಪೈಪೋಟಿ ಇರೋದು ಜೆಡಿಎಸ್‍ನ ಹಾಲಿ ಶಾಸಕ ಡಿ.ನಾಗರಾಜಯ್ಯ ಮತ್ತು ಕಾಂಗ್ರೆಸ್‍ನ ಡಾ.ರಂಗನಾಥ್ ನಡುವೆ. ಅಂದಹಾಗೆ ಈ ರಂಗನಾಥ್, ಕೈ ಪಾರ್ಟಿಯ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‍ರ ಹತ್ತಿರದ ಸಂಬಂಧಿ. ಕಳೆದ 4 ವರ್ಷಗಳಿಂದಲೇ ಕ್ಷೇತ್ರದಲ್ಲಿ ಓಡಾಡಿಕೊಂಡು ಜನರ ಒಡನಾಟ ಹೊಂದಿರುವ ರಂಗನಾಥ್, ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್‍ರ ಪ್ರಭಾವದ ನೆರಳಲ್ಲೇ ಸ್ಪರ್ಧೆಯಲ್ಲಿದ್ದಾರೆ. ಆದರೆ ಕಾಂಗ್ರೆಸ್‍ನ ಮಾಜಿ ಶಾಸಕ ರಾಮಸ್ವಾಮಿಗೌಡರು ಪ್ರಚಾರದಿಂದ ಹಿಂದೆ ಸರಿದಿರುವುದು ರಂಗನಾಥ್‍ಗೆ ಹಿನ್ನಡೆಯಾಗಿದೆ. ಇತ್ತ ನಾಗರಾಜಯ್ಯನವರ ಸರಳ ಸ್ವಭಾವದ ವ್ಯಕ್ತಿತ್ವ ಮತ್ತು ಭರಾಟೆಯ ಪ್ರಚಾರಗಳು ಜೆಡಿಎಸ್‍ಗೆ ಮತ್ತೊಂದು ಗೆಲುವಿನ ಆಸೆ ಚಿಗುರಿಸಿವೆ. ಬಿಜೆಪಿಯ ಡಿ.ಕೃಷ್ಣಕುಮಾರ್ ಸ್ಪರ್ಧೆ ಹೆಚ್ಚೇನೂ ಪರಿಣಾಮ ಬೀರುವಂತದ್ದಲ್ಲ ಎನ್ನಲಾಗುತ್ತಿದೆ.

ತಿಪಟೂರಿನಲ್ಲಿ ಕಾಂಗ್ರೆಸ್ ಟಿಕೇಟ್ ಹಂಚಿಕೆಯಲ್ಲಿ ಮಾಡಿಕೊಂಡ ಯಡವಟ್ಟು ಕಾಂಗ್ರೆಸ್‍ಗೆ ಕೊಂಚ ಹಿನ್ನಡೆ ಉಂಟು ಮಾಡಿತ್ತು. ವಯಸ್ಸು, ಅನಾರೋಗ್ಯ ಮತ್ತು ಪರ್ಸನಲ್ ಭಾನ್ಗಡಿಗಳ ಕಾರಣಕ್ಕೆ ಹಾಲಿ ಶಾಸಕ ಷಡಕ್ಷರಿಗೆ ಬಿ ಫಾರಂ ದಯಪಾಲಿಸದೆ ನಂಜಾಮರಿಗೆ ಟಿಕೇಟ್ ಘೋಷಿಸಲಾಗಿತ್ತು. ಆದರೆ ಯಾವಾಗ ಷಡಕ್ಷರಿ ಪಟಾಲಮ್ಮಿನಿಂದ ಪ್ರತಿಭಟನೆಯ ಕಾವು ಹೆಚ್ಚಾಯ್ತೊ, ಆಗ ಎಚ್ಚೆತ್ತುಕೊಂಡ ಪಕ್ಷ ಷಡಕ್ಷರಿಗೆ ಟಿಕೆಟ್ ನಿಕ್ಕಿ ಮಾಡಿದೆ. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ನಂಜಾಮರಿ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋದು ಕಾಂಗ್ರೆಸ್‍ನ ಮತಗಳನ್ನು ವಿಭಜಿಸುವ ಅಪಾಯ ತಂದಿಟ್ಟಿದೆ. ಬಿಜೆಪಿಯಿಂದ ಮಾಜಿ ಶಾಸಕ ಬ್ರಾಹ್ಮಣರ ಬಿ.ಸಿ.ನಾಗೇಶ್ ಮತ್ತು ಜೆಡಿಎಸ್‍ನಿಂದ ಮಾಜಿ ಪೊಲೀಸಪ್ಪ ಲೋಕೇಶ್ವರ್ ಕಣದಲ್ಲಿದ್ದಾರೆ. ಆದರೆ ನೇರ ಸ್ಪರ್ಧೆ ಇರೋದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ.

ಸುರೇಶ್ ಬಾಬು

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ 3 ಬಾರಿ ಶಾಸಕರಾಗಿರುವ ಜೆಡಿಎಸ್‍ನ ಸುರೇಶ್‍ಬಾಬು, ಜಿಲ್ಲಾ ಉಸ್ತುವಾರಿ ಮಂತ್ರಿ ಟಿ.ಬಿ.ಜಯಚಂದ್ರರ ಅವರ ಮಗ ಸಂತೋಷ್, ಬಿಜೆಪಿಯ ಜೆ.ಸಿ.ಮಾಧುಸ್ವಾಮಿ ನಡುವೆ ತ್ರಿಕೋನ ಪೈಪೋಟಿಯಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಕ್ಷೇತ್ರದಿಂದ ಬಂದಿದ್ದ 58 ಸಾವಿರ ಮತಗಳ ಮೇಲೆ ನಂಬಿಕೆಯಿಟ್ಟುಕೊಂಡು ತನ್ನ ವರ್ಚಸ್ಸನ್ನೆಲ್ಲ ಫಣಕ್ಕಿಟ್ಟು ಪ್ರಚಾರ ಮಾಡುತ್ತಿರುವ ಜಯಚಂದ್ರ ಅವರು ತಮ್ಮದೇ ಒಕ್ಕಲಿಗ ಮತ್ತು ಸಿದ್ರಾಮಯ್ಯನವರ ಕುರುಬ ಸಮುದಾಯದ ಮತಗಳನ್ನು ವಿಪರೀತ ನಂಬಿಕೊಂಡಿದ್ದಾರೆ. ಸದ್ಯದ ಮಟ್ಟಿಗೆ ಚುನಾವಣೆಯ ರೇಸಿನಲ್ಲಿ ಜೆಡಿಎಸ್‍ನ ಸುರೇಶ್ ಬಾಬು ಮುಂಚೂಣಿಯಲ್ಲಿ ಕಂಡುಬರುತ್ತಿದ್ದಾರೆ.

ರಫೀಕ್

ತುಮಕೂರು ನಗರದಲ್ಲಿ ಕಾಂಗ್ರೆಸ್‍ನ ಹಾಲಿ ಶಾಸಕ ಡಾ.ರಫೀಕ್ ಅಹಮದ್, ಜೆಡಿಎಸ್‍ನ ಗೋವಿಂದರಾಜು ಮತ್ತು ಬಿಜೆಪಿಯ ಜ್ಯೋತಿ ಗಣೇಶ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ರಫೀಕ್ ಅಹಮದ್ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಜೊತೆಗೆ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಮತ್ತು ದಲಿತ ಮತಗಳನ್ನು ನಂಬಿಕೊಂಡಿದ್ದಾರೆ. ಜೆಡಿಎಸ್‍ನ ಗೋವಿಂದರಾಜು ಒಕ್ಕಲಿಗ ಮತಗಳನ್ನು ಅವಲಂಬಿಸಿದ್ದರೆ, ಮಾಜಿ ಲೋಕಸಭಾ ಸದಸ್ಯ ಬಸವರಾಜ್‍ರವರ ಮಗ ಜ್ಯೋತಿ ಗಣೇಶ್ ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಸೊಗಡು ಶಿವಣ್ಣ ಸೇರಿದಂತೆ ಅನೇಕ ಬಿಜೆಪಿಯ ಹಿರಿಯ ನಾಯಕರು ತಟಸ್ಥವಾಗಿರೋದು ಕಾಂಗ್ರೆಸ್‍ಗೆ ನೆರವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಕೊರಟಗೆರೆ ಈ ಸಲ ವಿಶೇಷ ಗಮನ ಸೆಳೆದಿದೆ. ಯಾಕೆಂದರೆ ಇದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‍ರ ಕರ್ಮಭೂಮಿ. ಕಳೆದ ಸಲ ಅಚ್ಚರಿಯ ಫಲಿತಾಂಶ ಹೊರಬಿದ್ದು ಪರಮೇಶ್ವರ್, ಜೆಡಿಎಸ್‍ನ ಸುಧಾಕರ್ ಲಾಲ್ ಎದುರು ಮುಗ್ಗರಿಸಿದ್ದರು. ಈ ಬಾರಿ ಅವರು ಕ್ಷೇತ್ರವನ್ನೇ ಬಿಟ್ಟು ಬೆಂಗಳೂರಿನತ್ತ ಮುಖ ಮಾಡಲಿದ್ದಾರೆ ಎಂಬ ಗಾಳಿ ಸುದ್ದಿಗಳು ಕೇಳಿ ಬಂದವಾದರು ಕೊನೆಗೇ ಕೊರಟಗೆರೆಯಿಂದಲೇ ಕಣಕ್ಕಿಳಿದಿದ್ದಾರೆ. ಜೊತೆಗೆ ಕಳೆದ ಸಲದ ಆಲಸ್ಯದಿಂದ ಹೊರಬಂದಿರುವ ಅವರು ಸ್ಪರ್ಧೆಯಲ್ಲಿ ಜೆಡಿಎಸ್‍ನ ಸುಧಾಕರ್, ಬಿಜೆಪಿಯ ಹುಚ್ಚಯ್ಯನಿಗಿಂತ ಮುಂಚೂಣಿಯಲ್ಲಿದ್ದಾರೆ.

ಮಧುಗಿರಿಯಲ್ಲಿ ಹಾಲಿ ಕೈ ಶಾಸಕ ಕೆ.ಎನ್.ರಾಜಣ್ಣ ಮತ್ತು ಜೆಡಿಎಸ್‍ನ ವೀರಭದ್ರಯ್ಯ ನಡುವೆ ಪೈಪೋಟಿಯಿದೆ. ರಾಜಣ್ಣ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸುತ್ತಿದ್ದರೆ, ವೀರಭದ್ರಯ್ಯ ಕಳೆದ ಸಲದ ಸೋಲಿನ ಅನುಕಂಪ ಹಾಗೂ ದೇವೇಗೌಡರ ಕುಟುಂಬದ ವರ್ಚಸ್ಸನ್ನು ನಂಬಿಕೊಂಡು ಪೈಪೋಟಿ ಒಡ್ಡುತ್ತಿದ್ದಾರೆ.

ಪಾವಗಡ ಕ್ಷೇತ್ರದಲ್ಲಿ ಹಾಲಿ ಶಾಸಕ ಜೆಡಿಎಸ್‍ನ ತಿಮ್ಮರಾಯಪ್ಪ, ಕಾಂಗ್ರೆಸ್‍ನ ವೆಂಕಟರಮಣಪ್ಪ ಮತ್ತು ಬಿಜೆಪಿಯ ಬಲರಾಂ ನಡುವೆ ಸ್ಪರ್ಧೆ ಏರ್ಪಟ್ಟಿದ್ದು, ಜೆಡಿಎಸ್‍ಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡುತ್ತಿದೆ. ಒಟ್ಟಾರೆ ತುಮಕೂರು ಜಿಲ್ಲೆಯ ಎಲೆಕ್ಷನ್ ರಾಜಕಾರಣ ಜಾತಿ ಆಧಾರಿತ ಸಮೀಕರಣದಲ್ಲೇ ಸಾಗುತ್ತಿದೆಯಾದರು ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಪ್ರಚೋದಿತ ಮೋದಿ ಮೇನಿಯಾ, ದೇವೇಗೌಡರ ಕೌಟುಂಬಿಕ ವರ್ಚಸ್ಸಿನ ಹಿಡಿತಕ್ಕೂ ಎಡತಾಕುತ್ತಿವೆ. ಮೇಲ್ನೋಟಕ್ಕೆ ಜಿಲ್ಲೆಯಲ್ಲಿ ಕಾಂಗ್ರೆಸ್‍ಗೆ ಲಾಭವಾಗುವ ಸೂಚನೆಗಳಿದ್ದು ಜೆಡಿಎಸ್ ಎರಡನೇ ಸ್ಥಾನ ಮತ್ತು ಬಿಜೆಪಿ ಮೂರನೇ ಸ್ಥಾನ ಗಳಿಸಬಹುದು. ಆದರೆ ಇದೆಲ್ಲವೂ ಕೊನೇಕ್ಷಣದಲ್ಲಿ ನಡೆಯುವ ಪೊಲಿಟಿಕಲ್ ಹೈಡ್ರಾಮಾದ ನಿಬಂಧನೆಗೆ ಒಳಪಟ್ಟಿರುತ್ತವೆ.

– ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...