Homeಸಿನಿಮಾಸಿನಿ ಸುದ್ದಿತೂಕ ಇಳಿಸಲು ಹೋದ ಬುಲೆಟ್ಟು, ಆಸ್ಪತ್ರೆಗೆ ಅಡ್ಮಿಟ್ಟು

ತೂಕ ಇಳಿಸಲು ಹೋದ ಬುಲೆಟ್ಟು, ಆಸ್ಪತ್ರೆಗೆ ಅಡ್ಮಿಟ್ಟು

- Advertisement -
- Advertisement -

ಮೊನ್ನೆ ಅದ್ಯಾರೋ ಪುಣ್ಯಾತ್ಮರು `ಬುಲೆಟ್ ಪ್ರಕಾಶ್ ಸತ್ತೇ ಹೋದ’ ಅಂತ ಸುದ್ದಿ ಹಬ್ಬಿಸಿದ್ದರು. ಆ ಸುದ್ದಿಗೆ ಸ್ವತಃ ಬುಲೆಟ್ಟೇ ಬೆಚ್ಚಿಬಿದ್ದು, ತಾನು ಮಲಗಿದ್ದ ವಿಕ್ರಂ ಆಸ್ಪತ್ರೆಯ ಬೆಡ್‍ನಲ್ಲೇ ಎಗರೆಗರಿ `ಐ ಆಮ್ ಆಲ್ರೈಟ್ ಮಾರಾಯ್ರೆ’ ಅಂತ ಸ್ಪಷ್ಟನೆ ಕೊಡಬೇಕಾಯ್ತು. ಬದುಕಿರುವ ವ್ಯಕ್ತಿ ಬಗ್ಗೆ ಸತ್ತ ಸುದ್ದಿ ಹಬ್ಬಿಸಿದ್ದು ಬೇಸರದ ಸಂಗತಿ. ಆದ್ರೆ ಅದಕ್ಕಿಂತಲೂ ಬೇಸರದ ಸಂಗತಿ ಅಂದ್ರೆ ಬುಲೆಟ್ ಪ್ರಕಾಶ್ ಆಸ್ಪತ್ರೆ ಸೇರುವಂತೆ ಮಾಡಿದ ಕಾರಣ. ತನ್ನದೇ ಮ್ಯಾನರಿಸಂನಿಂದ ಹಾಸ್ಯನಟನಾಗಿ ಮಿಂಚುತ್ತಿರುವ ಪ್ರಕಾಶನ ಪ್ಲಸ್ ಪಾಯಿಂಟ್ ಅಂದ್ರೆ ಅವನ `ಘನ’ಕಾಯ. ಆದ್ರೆ ಬುಲೆಟ್ಟು ತನ್ನ ತೂಕ ಇಳಿಸಿಕೊಂಡು ಅಂತಹ ಘನಕಾಯವನ್ನೇ `ಮಿನಿ’ಕಾಯವಾಗಿಸಿಕೊಳ್ಳಲು ಹೋಗಿ ಆಸ್ಪತ್ರೆ ಸೇರಿದ್ದಾನೆ. ಹೊಸಬರ ಅಲೆಯಲ್ಲಿ ತಾನು ಕೊಚ್ಚಿಹೋಗದೆ ಗಟ್ಟಿಯಾಗಿ ನೆಲೆ ನಿಲ್ಲಲು ತನ್ನ ದೇಹ ಅಡ್ಡಿಯಾಗುತ್ತಿದೆ ಅಂತನ್ನಿಸಿ ತೂಕ ಇಳಿಸಿಕೊಳ್ಳುವ ಸಾಹಸಕ್ಕೆ ಕೈಹಾಕಿದ್ದಾನಂತೆ. `ಲೋ ಕನ್ನಡದ ಕರೀ ಇಡ್ಲಿಯೇ’ ಅಂತ ಪ್ರೀತಿಯಿಂದ ತಲೆನೇವರಿಸಿ, `ನಟನಾಗಿ ಛಾಪು ಮೂಡಿಸಲು ಬೇಕಿರೋದು ನಟನಾ ಕೌಶಲ್ಯವೇ ಹೊರತು, ಸ್ಲಿಮ್ ದೇಹವಲ್ಲ. ಅಷ್ಟಕ್ಕೂ ನಿನ್ನ ಈ ಭಾರೀ ಗಾತ್ರವೇ ನಿನ್ನ ಪ್ಲಸ್ ಪಾಯಿಂಟ್ ಕಣೋ. ಬಡ್ಡೇತದೆ, ಅಡ್ಡದಾರಿ ಹಿಡಿಯದೆ ನಿನ್ನ ಹೆಲ್ತ್ ಬಗ್ಗೆ ಗಮನ ಕೊಡಪ್ಪಾ’ ಎಂಬ ಬುದ್ದಿಮಾತನ್ನು ತುರ್ತಾಗಿ ಆತನಿಗೆ ಯಾರಾದ್ರು ಮುಟ್ಟಿಸಬೇಕಿದೆ. ಬುಲೆಟ್‍ನ ಅವಾಂತರ ಕೇಳಿದಾಗಿನಿಂದ ತೂಕ ಇಳಿಸಿಕೊಳ್ಳುವ ಲೈಪೋಸಕ್ಷನ್ ಫ್ಯಾಟ್ ಸರ್ಜರಿಗೆ ತುತ್ತಾಗಿ ಅಮೆರಿಕಾದಲ್ಲಿ ಪ್ರಾಣವನ್ನೇ ಕಳೆದುಕೊಂಡ ಮೇಣದ ಬೊಂಬೆಯಂತ ಬೆಡಗಿ ಆರತಿ ಅಗರ್ವಾಲ್ ನೆನಪು ಮತ್ತೆಮತ್ತೆ ಕಾಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...