Homeರಾಜಕೀಯಥರ್ಡ್ ಪ್ಲೇಸ್ ಈಶ್ವರಪ್ಪ ಫಸ್ಟ್ ಕ್ಲಾಸ್ ಗೆದ್ದಿದ್ದು ಹೇಗೆ?

ಥರ್ಡ್ ಪ್ಲೇಸ್ ಈಶ್ವರಪ್ಪ ಫಸ್ಟ್ ಕ್ಲಾಸ್ ಗೆದ್ದಿದ್ದು ಹೇಗೆ?

- Advertisement -
- Advertisement -

ಮಾಚಯ್ಯ |

ಅಂತೂಇಂತೂ ಬ್ರಿಗೇಡ್ ಈಶ್ವರಪ್ಪ ಶಿವಮೊಗ್ಗ ಸಿಟಿಯಲ್ಲಿ ಗೆದ್ದು ನಿಟ್ಟುಸಿರು ಬಿಟ್ಟಿದ್ದಾರೆ. ಎತ್ತಿಂದೆತ್ತ ಲೆಕ್ಕ ಹಾಕಿದರೂ ಕಳೆದ ಸಲದ ಮೂರನೇ ಸ್ಥಾನ ಬಿಟ್ಟು ಮೇಲಕ್ಕೇಳುವ ಲಕ್ಷಣಗಳೇ ಈ ಚುನಾವಣೆಯ ಕೊನೆಯ ಕ್ಷಣದವರೆಗೆ ಈಶ್ವರಪ್ಪ ಮೊಗದಲ್ಲಿ ಕಾಣಿಸುತ್ತಿರಲಿಲ್ಲ. ತಾನು ಪಕ್ಷ ಬಿಟ್ಟು ಹೋಗಲು ಕಾರಣವಾಗಿದ್ದ, ವಾಪಾಸು ಬಂದಾಗಲೂ ರಾಯಣ್ಣ ಬ್ರಿಗೇಡ್ ಕಟ್ಟಿಕೊಂಡು ವಿಪರೀತ ಕಾಟ ಕೊಟ್ಟಿದ್ದ ಈಶ್ವರಪ್ಪರನ್ನು ಸೋಲಿಸಿ, ಅವರ ರಾಜಕೀಯ ಬದುಕಿಗೆ ಇತಿಶ್ರೀ ಹಾಡಲು ಸ್ವತಃ ಯಡ್ಯೂರಪ್ಪನವರೇ ಸಕಲ ಸನ್ನದ್ಧರಾಗಿದ್ದು ವಾಸ್ತವ. ಹಾಗೆ ನೋಡಿದರೆ ಈಶ್ವರಪ್ಪನಿಗೆ ಟಿಕೇಟು ಕೊಡೋದೇ ಯಡ್ಯೂರಪ್ಪನವರಿಗೆ ಇಷ್ಟವಿರಲಿಲ್ಲ. ಅದಕ್ಕೆಂದೇ ಕಳೆದ ಸಲದ ಕೆಜೆಪಿ ಹುರಿಯಾಳು ರುದ್ರೇಗೌಡರನ್ನು ಜಿಲ್ಲಾಧ್ಯಕ್ಷ ಮಾಡಿ, ಚುನಾವಣಾ ಮುಂಚೂಣಿಗೆ ತರುವ ಪ್ರಯತ್ನ ಮಾಡಿದ್ದೂ ಉಂಟು.

ಹೈಕಮಾಂಡ್ ಒತ್ತಡಕ್ಕೆ ಮಣಿದು ಟಿಕೇಟ್ ಕನ್ಫರ್ಮ್ ಮಾಡಿದ ಮೇಲೂ ಈಶ್ವರಪ್ಪರಿಗೆ ಸೋಲಿನ ರುಚಿ ತೋರಿಸಲು ಮಾಡಬೇಕಾದ ಮಸಲತ್ತುಗಳನ್ನೆಲ್ಲ ಯಡ್ಯೂರಪ್ಪ ಅಣಿ ಮಾಡಿಟ್ಟಿದ್ದರು. ಕೊನೇ ಕ್ಷಣದವರೆಗೆ ಕ್ಷೇತ್ರದೊಳಗೆ ಕಾಲಿಟ್ಟ ಎಂತವರಿಗೇ ಆದರೂ ಈಶ್ವರಪ್ಪನ ಮೂರನೇ ಸ್ಥಾನದ ದುರಂತ ಭವಿಷ್ಯ ಮುಖಕ್ಕೆ ರಾಚುತ್ತಿತ್ತು. ಅಂತದ್ದರಲ್ಲಿ ಬ್ರಾಹ್ಮಣ ಮತಗಳು ಗಣನೀಯ ಸಂಖ್ಯೆಯಲ್ಲಿರುವ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಅದೇ ಬ್ರಾಹ್ಮಣ ಸಮುದಾಯದ ಕೆ.ಬಿ.ಪ್ರಸನ್ನ ಕುಮಾರ್‍ರನ್ನು ಹಿಂದಿಕ್ಕಿ ಬರೋಬ್ಬರಿ ಐವತ್ತು ಸಾವಿರ ಲೀಡ್‍ನಲ್ಲಿ ಈಶ್ವರಪ್ಪ ಗೆಲುವಿನ ಪತಾಕೆ ಹಾರಿಸುತ್ತಾರೆಂದರೆ ಹೇಗೆ ಸಾಧ್ಯ ಅನ್ನೋದು ಜನರನ್ನು ಕಾಡುತ್ತಿದೆ.

ಒನ್ಸ್ ಎಗೇನ್, ಈಶ್ವರಪ್ಪನವರ ಈ ಗೆಲುವಿನ ಹಿಂದೆ ಕೆಲಸ ಮಾಡಿರೋದು ಅದೇ ಹೈಕಮಾಂಡ್! ಶತಾಯಗತಾಯ ಕರ್ನಾಟಕದಲ್ಲಿ ಕಾಂಗ್ರೆಸ್ಸನ್ನು ಅಧಿಕಾರದಿಂದ ದೂರ ಇಡಬೇಕೆಂದು ನಿರ್ಧರಿಸಿಕೊಂಡಿದ್ದ ಬಿಜೆಪಿ ಹೈಕಮಾಂಡ್‍ಗೆ ಒಂದೊಂದು ಸೀಟೂ ಮುಖ್ಯವೆನ್ನುವುದು ಮನದಟ್ಟಾಗಿ ಹೋಗಿತ್ತು. ಅದಕ್ಕೋಸ್ಕರ ಆಂತರಿಕ ಕಚ್ಚಾಟದಿಂದ ಕೈತಪ್ಪಿ ಹೋಗಬಹುದಾಗಿರುವ ಕ್ಷೇತ್ರಗಳನ್ನು ಪಟ್ಟಿ ಮಾಡಿ ಸಂಬಂಧಪಟ್ಟವರ ತಲೆಮೇಲೆ ಮೊಟಕುವ ಪ್ರಯತ್ನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾದಾಗ ಆ ಪಟ್ಟಿಯಲ್ಲಿ ಮೊದಲು ಕಾಣಿಸಿಕೊಂಡಿದ್ದೇ ಈಶ್ವರಪ್ಪನವರ ತವರುಮನೆ. ಸ್ವತಃ ಯಡ್ಯೂರಪ್ಪನವರೇ ಈಶ್ವರಪ್ಪನನ್ನು ಮಣಿಸಲು ರಹಸ್ಯ ಸಿದ್ಧತೆ ಮಾಡಿಕೊಂಡಿರೋದನ್ನು ಖಾತ್ರಿಪಡಿಸಿಕೊಂಡ ಅಮಿತ್ ಶಾ, ಯಡ್ಯೂರಪ್ಪನನ್ನು ಕರೆದು `ನಿಮ್ಮ ಸಿಎಂ ಆಗೋ ಕನಸು ನನಸಾಗಬೇಕು ಅಂದ್ರೆ, ನೀವು ಈಶ್ವರಪ್ಪನನ್ನು ಗೆಲ್ಲಿಸಿಕೊಳ್ಳಲೇಬೇಕು. ಅಕಸ್ಮಾತ್ ಆಯಪ್ಪ ಸೋತರೆ, ಅದಕ್ಕೆ ನೀವೇ ಜವಾಬ್ಧಾರರಾಗ್ತೀರಿ. ಆಮೇಲಿನ ಬೆಳವಣಿಗೆಗಳಿಗೆ ನಾವು ಹೊಣೆಯಲ್ಲ’ ಅನ್ನೋ ಸಾಫ್ಟ್ ಎಚ್ಚರಿಕೆ ರವಾನಿಸಿದ್ದರು. ಆನಂತರವೇ ಯಡ್ಯೂರಪ್ಪ ತನ್ನೆಲ್ಲಾ ರಣತಂತ್ರಗಳನ್ನು ರಿವರ್ಸ್ ಮಾಡಿ, ಈಶ್ವರಪ್ಪನನ್ನು ಗೆಲ್ಲಿಸಿಕೊಳ್ಳಲು ದಾಳ ಉರುಳಿಸಿದ್ದು. ಲಿಂಗಾಯತ ಮತಗಳು ಸಾಲಿಡ್ಡಾಗಿ ಈಶ್ವರಪ್ಪನಿಗೆ ಒಲಿದು ಬರುವಂತೆ ಫರ್ಮಾನು ಹೊರಡಿಸಿದ್ದಲ್ಲದೇ, ಸ್ಥಳೀಯ ಆರೆಸ್ಸೆಸ್ ನಾಯಕರನ್ನು ಬಳಸಿಕೊಂಡು ಈ ಸಲ ಬಿಜೆಪಿ ಅಧಿಕಾರಕ್ಕೆ ಬಂದ್ರೇನೆ ಬ್ರಾಹ್ಮಣ ಸಮುದಾಯಕ್ಕೆ ಅನುಕೂಲ, ಹಾಗಾಗಿ ಜಾತ್ಯಸ್ಥ ಅಂತ ಪ್ರಸನ್ನ ಕುಮಾರ್‍ಗೆ ಓಟ್ ಹಾಕುವ ಬದಲು ಕಮಲದ ಚಿಹ್ನೆಗೆ ಮತ ಹಾಕುವಂತೆ ಅಂಡರ್ ಕರೆಂಟ್ ಹರಿಸಿದ್ದರು. ಅದು ಈಶ್ವರಪ್ಪನವರನ್ನು ಅನಾಮತ್ತು ಮೂರನೇ ಸ್ಥಾನದಿಂದ ಮೇಲಕ್ಕೇರಿಸಿ, ಐವತ್ತು ಸಾವಿರ ಲೀಡ್‍ಗಳಲ್ಲಿ ಗೆಲ್ಲಿಸಿದೆ.

ಅಂದಹಾಗೆ, ಗೆದ್ದರೂ ಪಕ್ಷದೊಳಗೆ ಈಶ್ವರಪ್ಪರನ್ನು ಈ ಋಣಭಾರ ಭರ್ಜರಿಯಾಗೇ ಮೆತ್ತಗಾಗಿಸಲಿದೆ. ಅಂತದ್ದೊಂದು ಸಣ್ಣ ಸ್ಯಾಂಪಲ್ ಕೂಡಾ ಈಗಾಗಲೇ ಘಟಿಸಿದೆ. ಫಲಿತಾಂಶ ಹೊರಬಿದ್ದು ಅಧಿಕಾರದ ಹೊಸ್ತಿಲಿಗೆ ಬಂದು ಅಂಡು ಸುಟ್ಟ ಬೆಕ್ಕಿನಂತಾಗಿದ್ದ ಬಿಜೆಪಿಯು ಪಕ್ಷೇತರರು, ಕಾಂಗ್ರೆಸ್-ಜೆಡಿಎಸ್ ಅತೃಪ್ತರಿಗೆ ಗಾಳ ಹಾಕುವ ಪ್ರಯತ್ನದಲ್ಲಿತ್ತು. ಆಗ ರಾಣೇಬೆನ್ನೂರಿನಿಂದ ಕೋಳಿವಾಡರನ್ನು ಮುಕ್ಕಿಸಿ ಬಂದ ಕೆಪಿಜೆಪಿಯ ಆರ್.ಶಂಕರ್‍ನನ್ನು ಬಿಜೆಪಿ ಸಂಪರ್ಕಿಸಿ ಕುದುರಿಸಿಕೊಂಡಿದ್ದುಂಟು. ಆತ ಜಾತಿಯಲ್ಲಿ ಕುರುಬನಾದ್ದರಿಂದ ಮತ್ತು ಈಶ್ವರಪ್ಪನ ಕಳ್ಳುಬಳ್ಳಿ ಸಂಬಂಧಿಕನೂ ಆದ್ದರಿಂದ ಆತನನ್ನು ನಿಭಾಯಿಸುವ ಹೊಣೆಯನ್ನು ಈಶ್ವರಪ್ಪನಿಗೇ ಹೈಕಮಾಂಡ್ ವಹಿಸಿತ್ತು. ಆದರೆ ಈಶ್ವರಪ್ಪ ಕೊಂಚ ಮೈಮರೆತಿದ್ದರಿಂದ ಬೆಳಿಗ್ಗೆ ಬಿಜೆಪಿ ಜೊತೆಗಿದ್ದ ಶಂಕರ್ ಸಂಜೆಯ ವೇಳೆಗಾಗಲೇ ಸಿದ್ದರಾಮಯ್ಯನವರ ಪಡಸಾಲೆಯಲ್ಲಿ ಮುಖ ತೋರಿಸಿ ಜೈ ಅಂದ. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಹೈಕಮಾಂಡ್ ಪ್ರತಿನಿಧಿ ಪ್ರಕಾಶ್ ಜಾವ್ಡೇಕರ್, ಈಶ್ವರಪ್ಪನನ್ನು ಕರೆಸಿಕೊಂಡು `ಒಬ್ಬ ಎಮ್ಮೆಲ್ಲೆನ ನಿಮ್ಮ ಕೈಲಿ ನಿಭಾಯಿಸೋಕೆ ಆಗಲ್ವೇನ್ರೀ? ಇದಕ್ಕೋಸ್ಕರನೇನಾ ನಾವು ಯಡ್ಯೂರಪ್ಪಾಜಿಯ ಮನವೊಲಿಸಿ ನಿಮ್ಮನ್ನು ಗೆಲ್ಲಿಸಿಕೊಂಡದ್ದು. ನಿಮ್ಮ ಈ ಹೊಣೆಗೇಡಿತನದ ವಿರುದ್ಧ ಅಮಿತ್ ಶಾಜಿಗೆ ಕಂಪ್ಲೇಂಟ್ ಮಾಡ್ತೀನಿ’ ಅಂತ ಲೆಫ್ಟ್‍ರೈಟ್ ಕ್ಲಾಸ್ ತಗೊಂಡಿದ್ದರು. ಯಡ್ಯೂರಪ್ಪನವರ ಮರ್ಜಿಯಲ್ಲಿ ಗೆದ್ದಿರೋ ಈಶ್ವರಪ್ಪನೋರಿಗೆ ಭವಿಷ್ಯದಲ್ಲಿ ಇಂಥ ದೈನೇಸಿ ಬಹುಮಾನಗಳು ಸಾಕಷ್ಟು ಕಾದಿವೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...