HomeUncategorizedಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

ಥೂತ್ತೇರಿ : ಅಂಬರೀಶ್ ಮೃತ್ಯುಂಜಯ ಹೋಮ ಮಾಡಿಸಬೇಕಿತ್ತು

- Advertisement -
- Advertisement -

ಯಾಹೂ |

ಸಿನಿಮಾ ರಂಗದಲ್ಲಿ ಮತ್ತು ರಾಜಕಾರಣದಲ್ಲಿ ಹಾಗೂ ಖಾಸಗೀ ಬದುಕಿನಲ್ಲಿ ವೈರಿಗಳೇ ಇಲ್ಲದಂತೆ ಬದುಕಿದ ಅಂಬರೀಶ್‍ಗೆ ಗ್ರಹಗತಿಗಳು ಮುನಿಸಿಕೊಂಡಿದ್ದವು ಎಂದು ಟಿ.ವಿ.ಯೊಳಗೆ ಸೇರಿಕೊಂಡಿರುವ ಪುರೋಹಿತ ಪಿಂಡಗಳು ವಾದಿಸತೊಡಗಿವೆಯಂತಲ್ಲಾ. ಈ ಪಿಂಡಗಳ ವಿಶೇಷವೆಂದರೆ, ತ್ರಿಕಾಲಜ್ಞಾನಿಗಳಂತಾಡುವ ಇವು ಯಾವುದೇ ಘಟನೆ ನಡೆಯುವ ಮುನ್ನ ಬಾಯಿ ಬಿಡುವುದಿಲ್ಲ. ವಿಷ್ಣು ತೀರಿಕೊಂಡ ನಂತರವೇ ಅವರಿಗೆ ನಾಗವಲ್ಲಿ ಕಾಟ ಅಮರಿಕೊಂಡಿತ್ತು ಎಂದು ವದರಿದವು. ಸಕ್ಕರೆ ಕಾಯಿಲೆ ದೆಸೆಯಿಂದ ಹೃದಯಾಘಾತಕ್ಕೆ ತುತ್ತಾದ ವಿಷ್ಣುಗೆ ನಾಗವಲ್ಲಿ ಕಾಟವಿತ್ತು, ಯಾಗ ಮಾಡಿಸಿದ್ದರೆ ಸರಿಹೋಗುತ್ತಿತ್ತು ಎನ್ನುವ ಈ ಪಿಂಡಗಳು ಈಗ ಅಂಬರೀಶ್ ಸಾವಿಗೂ ಪುರೋಹಿತಶಾಹಿ ತಂತ್ರವನ್ನೇ ಬಳಸತೊಡಗಿರುವುದು ಕಂಡು ದಿಗಿಲಾಗಿ ಜ್ಯೋತಿಷ್ಯ ಬ್ರಹ್ಮ ಪ್ರಕಾಶ ಮಣ್ಣುರಾಯರಿಗೆ ಫೋನ್ ಮಾಡಲಾಗಿ ರಿಂಗಾಯ್ತು,
ರಿಂಗ್‍ಟೋನ್: “ಹೋನ್ಹೀ ತೋ ಹೋನ್ಹೀ ಹೀ ಹೈ, ಅನ್ಹೋಹ್ಹೀ ನಹೀಂ ಭವತ್ಯೇವ ಭವತವ್ಯಂ….. ಹಲೋ ಯಾರು.”
“ಗುರುಗಳೇ ನಾನು ಪತ್ರಕರ್ತ”
“ಯಾವ ಪತ್ರಿಕೆ.”
“ನ್ಯಾಯಪಥ.”
“ನ್ಯಾಯಪಥ ಅಂದರೆ ಸತ್ಯದ ದಾರಿ.”
“ಹೌದು ಸ್ವಾಮಿ, ನಿಮ್ಮ ಫೋನಿನ ರಿಂಗ್‍ಟೋನ್ ಅರ್ಥ ಆಗಲಿಲ್ಲ.”
“ನಡೆಯಬೇಕಾದದ್ದು ನಡೆದೇ ನಡೆಯುತ್ತದೆ, ನಡೆಯಬೇಕಾದ ರೀತಿಯಲ್ಲೇ ನಡೆಯುತ್ತದೆ ಅಂತ ಅರ್ಥ.”
“ಹಾಗಿದ್ದರೆ ಜ್ಯೋತಿಷ್ಯದ ಅಗತ್ಯವೇನು.”
“ನೀವು ಆಸ್ತಿಕರೋ ನಾಸ್ತಿಕರೋ.”
“ಸದ್ಯಕ್ಕೆ ನಾಸ್ತಿಕ.”
“ಹಾಗಾದರೆ ನಿಮ್ಮೊಟ್ಟಿಗೆ ಮಾತನಾಡಿ ಪ್ರಯೋಜನ ಇಲ್ಲ.”
“ಹಾಗನ್ನಬೇಡಿ ಗುರುವೆ, ನಮ್ಮ ಅಂಬರೀಶಣ್ಣನ ಸಾವಿನ ಬಗ್ಗೆ ತಿಳಕೊಬೇಕು.”
“ನೋಡಿ, ಅಂಬರೀಶ್ ನಮ್ಮನ್ನು ಭೇಟಿಮಾಡಿ ನಾವು ಹೇಳಿದಂತೆ ಕೇಳಿದ್ದರೆ ಬದುಕುತ್ತಿದ್ದರು.”
“ಅದು ಹ್ಯೆಂಗೆ ಗುರುಗಳೇ.”
“ಒಂದು ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಮೃತ್ಯುಂಜಯ ಹೋಮ ಅಂದರೆ ಸಾವನ್ನ ಜಯಿಸುವ ಹೋಮ ಅಲ್ಲವೆ ಗುರು.”
“ಹೌದು.”
“ಈ ಮೃತ್ಯುಂಜಯ ಹೋಮ ಮಾಡಿಸಿದ್ರೆ ಎಷ್ಟು ದಿನ ಬದುಕಬಹುದು.”
“ನೋಡಿ, ನಮಗಿರುವ ಆಯಸ್ಸು ಬ್ರಹ್ಮನದಲ್ಲ ನಾವು ನಮ್ಮ ಆಯಸ್ಸನ್ನ ವೃದ್ಧಿಸಿಕೊಳ್ಳಬೇಕು. ಮರಣದಲ್ಲಿ ನೂರ ಒಂದು ಪ್ರಕಾರಗಳುಂಟು. ನೂರನ್ನ ಜಯಿಸಬಹುದು. ಒಂದನ್ನ ಮಾತ್ರ ಜಯಿಸಲಾಗುವುದಿಲ್ಲ.”
“ಅದ್ಯಾವುದು ಗುರುಗಳೇ.”
“ನಿಜವಾದ ಮರಣ!”
“ಈಗ ಅಂಬರೀಶ್‍ಗೆ ಸಂಭವಿಸಿದ್ದು ನಿಜವಾದ ಮರಣ ಅಲ್ಲವ.”
“ಇಲ್ಲ ಅವರದ್ದು ಭಾವೋದ್ವೇಗದ ಮರಣ. ಅದಕ್ಕಾಗಿ ನಾಗಾರಾಧನೆಯ ಮೃತ್ಯುಂಜಯ ಹೋಮ ಮಾಡಿಸಿದ್ದರೆ ಬದುಕುತ್ತಿದ್ದರು.”
“ಅದನ್ನ ಅವರಿಗೆ ಹೇಳಬೇಕಾಗಿತ್ತು.”
“ಅವರು ಬಂದು ಕೇಳಬಹುದಿತ್ತು, ನಾವು ಅವರ ಬಳಿಗೆ ಹೋಗುವುದಿಲ್ಲ.”
“ಅವರ ಜೀವ ಮುಖ್ಯ ಅಲ್ಲವೆ?”
“ಅದೌದು. ನಾವು ಸಂಸ್ಕಾರವಂತ ಜ್ಯೋತಿಷಿಗಳು. ಅವರಾಗಿ ಬಂದರೆ ಹೇಳ್ತೇವೆ.”
“ಅವುರಾಗಿ ಬಂದ್ರೆ ಹೇಳೋ ಅಂತವರು, ಈಗ ಟಿವಿಯೊಳಗಡೆ ಬಂದು ಯಾಕೇಳ್ತಿದೀರಿ”
“ನಾವು ಬಂದದ್ದಲ್ಲ ಟಿವಿಯವರು ಕರೆದದ್ದು.”
“ಬಂದು-ಬಳಗದೋರು ಕರೆದ್ರೆ ಹೊಗಬೇಕಾಗತ್ತೆ ಬಿಡಿ. ತಮ್ಮ ಪ್ರಕಾರ ಅಂಬರೀಶ್ ಜಾತಕ ಹೇಗಿತ್ತು ಗುರುಗಳೇ.”
“ಅಂಬರೀಶ್ ಜಾತಕದಲ್ಲಿ ಗುರುವಿನ ಬಲವಿತ್ತು. ಶನಿ ದೂರವಿದ್ದ. ಈಗ ಅವರ ಬಳಿ ಶನಿ ಸಂಚಾರ ಆರಂಭವಾಗಿತ್ತು. ಮೃತ್ಯುಂಜಯ ಹೋಮದಿಂದ ಶನಿಯನ್ನ ದೂರ ಮಾಡಬಹುದಿತ್ತು.”
“ಬ್ರಹ್ಮರ್ಷಿಗಳೇ ನಾಗನ ಆರಾಧನೆ ಯಾಕೆ ಮಾಡ್ತರೆ ಗೊತ್ತೆ.”
“ನಾಗದೋಷ ಪರಿಹಾರಕ್ಕೆ.”
“ಅದಲ್ಲ, ಹಾವುಗಳ ಪೈಕಿ ನಾಗರಹಾವಿಗೆ ವಿಷ ಇದೆ. ಅದು ಕಡುದ್ರೆ ಮನುಷ್ಯ ಸತ್ತೋಗ್ತನೆ. ಪೂಜೆ ಮಾಡಿದ್ರೆ ಅದು ಕಡಿಯಲ್ಲ ಅನ್ನೋ ಕಾರಣಕ್ಕೆ. ಅಂದ್ರೆ ಭಯ ಭಕ್ತಿ ಮೂಡಿಸುತ್ತೆ ಅಲ್ಲವಾ.”
“ಅದೌದು. ಭಯ ನಿವಾರಣೆ ನಮ್ಮ ಕೆಲಸ.”
“ನಿಮ್ಮ ಮೃತ್ಯುಂಜಯ ಹೋಮದಿಂದ ಅರ್ಭುದ ರೋಗ ನಿವಾರಿಸಬಹುದಾ?”
“ಹೌದು.”
“ಹಾಗಾದ್ರೆ ಅನಂತಕುಮಾರ್ ಅದರಲ್ಲೇ ಹೋದರಲ್ಲ. ಅವರ ಸಂಬಂಧಿಯಾದ ನೀನು ಆಗ ಕತ್ತೆ ಕಾಯ್ತಾಯಿದ್ದ?”
“ಯಾಕೆ ಹಾಗೆ ಕೆಟ್ಟ ಮಾತನ್ನಾಡುವುದು ನೀವು.”
“ಸಾರಿ, ಗೋವು ಕಾಯ್ತಾಯಿದ್ರ.”
“ನೋಡಿ ಇವರೆ, ನಿಮ್ಮಂತ ಅಸಂಸ್ಕೃತ ಅಹಂಕಾರಿಗಳನ್ನ ನಾವು ಸಹಿಸಿಕೊಂಡು ಉತ್ತರ ಕೊಡಬೇಕಾಗ್ತದೆ, ಅಂಬರೀಶರು ಭಾವೋದ್ವೇಗದ ವ್ಯಕ್ತಿ. ಆನೆ ನಡೆದದ್ದೇ ದಾರಿ ಅಂತ ಹೇಳುವ ಹಾಗೆ ಅವರು ಯಾರ ಮಾತನ್ನ ಕೇಳಲಿಲ್ಲ. ಕೇಳಿದ್ದರೆ ನಮ್ಮಲ್ಲಿ ಪರಿಹಾರವಿತ್ತು.”
“ಏನು ಪರಿಹಾರ ಹೇಳಿ.”
“ನೋಡಿ ಮನುಷ್ಯನ ಬಾಹ್ಯ ವರ್ತನೆಗೆ ಆಂತರ್ಯದ ಸಮಸ್ಯೆಗಳು ಕಾರಣ. ನಮ್ಮ ದೇಹದಲ್ಲಿ 72 ಸಾವಿರ ನಾಡಿಗಳಿವೆ. ಅವುಗಳ ಸಮತೋಲನ ಮುಖ್ಯ. ಅವುಗಳ ಏರುಪೇರಿನಿಂದ ಮನುಷ್ಯ ಕೀಳರಿಮೆಗೆ ತುತ್ತಾಗುವುದುಂಟು. ಆಗ ನಾವು ಆತ್ಮವಿಶ್ವಾಸ ಮೂಡಿಸುತ್ತೇವೆ.”
“ಯಾವ ತರ.”
“ನಮ್ಮ ಹೆಂಡತಿಗೆ ಒಂದಿಷ್ಟು ಉಬ್ಬು ಹಲ್ಲುಗಳಿದ್ದವು.”
“ಹಲ್ಲಿಗೇ ಮುತ್ತು ಕೊಡೋತರ.”
“ಹಾಗಂದುಕೊಳ್ಳಬಹುದು. ಆಗ ನಾನು ಆಕೆಗೆ ಆತ್ಮವಿಶ್ವಾಸ ತುಂಬಿದೆ. ನಿನ್ನ ಹಲ್ಲುಗಳ ಬಗ್ಗೆ ಕೀಳರಿಮೆ ಬೇಡ. ಮನೆಯ ಮೆಟ್ಟಿಲು ಕಲ್ಲುಗಳು, ಮನೆಯ ಹೊರಗಿರುತ್ತವೆ, ಒಳಗಲ್ಲ ಅಂತ ಹಾಸ್ಯ ಮಾಡಿ ಹೇಳಿದೆ. ಆಕೆಗೆ ಕೀಳರಿಮೆ ಹೋಯ್ತು. ನಮ್ಮ ಬದುಕು ಸರಾಗವಾಯ್ತು. ಹೀಗೆ ನಾವು ಮನುಷ್ಯನ ಆಂತರ್ಯದಲ್ಲಿನ ಕೀಳರಿಮೆ ಹೋಗಲಾಡಿಸಿಬಿಡ್ತೇವೆ.”
“ಇದಕ್ಕೂ ಅಂಬರೀಶ್ ವಿಷಯಕ್ಕೂ ಏನು ಸಂಬಂಧ.”
“ಸಂಬಂಧವುಂಟು, ಅಂಬರೀಶ್ರಲ್ಲಿದ್ದ ಭಾವೋದ್ವೇಗ ಕಡಿಮೆ ಮಾಡಿ, ಇನ್ನೂ ಬದುಕುವಂತೆ ಮಾಡ್ತಾಯಿದ್ದೆ.”
“ಮಿಸ್ಟರ್ ಬ್ರಹ್ಮ, ನಿಮ್ಮ ಜೋತಿಷ್ಯ ಪ್ರಧಾನವಾಗಿ ಹೊಟ್ಟೆ ಪಾಡಿಂದು, ಈ ದೇಶದ ಮುಗ್ಧ ಮನಸ್ಸುಗಳ ತಲೆಗೆ ಪುರಾಣ ತುಂಬಿ ದೇಶನೆ ಬಾಳೆಎಲೆ ಮಾಡಿಕೊಂಡು ಉಂಡ್ರಿ ಅಂತ ನಮ್ಮ ತೇಜಸ್ವಿ ಹೇಳತಿದ್ರು. ಏನಾದ್ರು ಮಾಡಿಕೊಂಡು ಹಾಳಾಗೋಗಿ. ಆದ್ರೆ ಅಂಬರೀಶ್ ವಿಷಯದಲ್ಲಿ ಪುರಾಣ ಶುರುಮಾಡಿದ್ರೆ ಸರಿಯಾಗಿ ಮಾಡಬೇಕಾಯ್ತದೆ.”
“ಯಂತ ಮಾಡ್ತಿರಿ.”
“ನಿನ್ನ ರಿಂಗ್‍ಟೋನಿದೆಯಲ್ಲ ಆ ತರ ನಡೆಯಬೇಕಾದ್ದು ನಡದೇ ನಡೆಯುತ್ತೆ. ನಡೆಯಬೇಕಾದ ರೀತಿಯಲ್ಲೇ ನಡೆಯುತ್ತೆ.”
“ನನ್ನನ್ನ ಬೆದರಿಸುತ್ತೀಯ, ಶಾಪ ಕೊಡ್ತೇನೆ.”
“ನಿನ್ನ ಶಾಪ ನನ್ನ ಕೂದಲಿಗೆ ಸಮ.”
“ಛೇ ಕೆಟ್ಟವನೆ.”
ಥೂತ್ತೇರಿ….!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...