Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ...

ಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ…

- Advertisement -
- Advertisement -

ಯಾಹೂ |

ಮೋಹನ್‌ರಾಂ ಎಂಬ ತಿಕ್ಕಲು ಬ್ರಾಹ್ಮಣ ಲಂಕೇಶರಿಂದ ಉಗಿಸಿಕೊಂಡು ಹೋದ 36 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡಿದ್ದಾನಂತಲ್ಲಾ. ಅಂದರೆ ಲಂಕೇಶ್ ಎಷ್ಟರ ಮಟ್ಟಿಗೆ ಉಗಿದಿರಬಹುದೆಂದು ವೇದ್ಯವಾಗುತ್ತದೆ. ಇಂತವನನ್ನು ನೋಡಿಯೇ ಏನೋ ದೇವನೂರು ಒಂದು ಕತೆ ಬರೆದಿದ್ದರು. ಮೋಹನ ಶಾಸ್ತ್ರಿ ಎಂಬ ಗುಮಾಸ್ತನಿದ್ದ. ಅವನ ಬಾಸು ಲಂಕೇಗೌಡ. ಈ ಲಂಕೇಗೌಡ ಗುಮಾಸ್ತನಿಗೆ ಕೆಟ್ಟದಾಗಿ ಬೈಯ್ಯುತ್ತಿದ್ದ. ಇದರಿಂದ ಸೇಡಿಗೆ ತುತ್ತಾದ ಮೋಹನಶಾಸ್ತ್ರಿ ಲಂಕೇಗೌಡನ ಸರ‍್ವಿಸ್ ರಿಜಿಸ್ಟರಿನಲ್ಲಿ ಗೌಡನ ಆಕಾರ ಬರೆದು ಮುಂದಿನ ಎರಡು ಹಲ್ಲಿಲ್ಲ ಎಂದು ಬರೆದು ನಿವೃತ್ತನಾಗಿದ್ದನಂತೆ. ಲಂಕೇಗೌಡ ನಿವೃತ್ತನಾಗುವಾಗ ಅನಿವಾರ್ಯವಾಗಿ ಎರಡಲ್ಲು ಕೀಳಿಸಿಕೊಂಡು ಪಿಂಚನಿ ಪಡೆದನಂತೆ. ನಮ್ಮ ನಡುವಿನ ಪುರೋಹಿತಶಾಹಿಗಳ ಪಿಂಡಗಳು ಆಂತರ್ಯದಲ್ಲಿ ಹೊಂದಿರುವ ಹಗೆ ಎಂತದ್ದು ಎಂಬುದನ್ನು ಹೇಳಲು ದೇವನೂರು ಈ ಕತೆಯನ್ನು ಪಂಚಮದಲ್ಲಿ ಬರೆದಿದ್ದರು. ಮೂವತ್ತಾರು ವರ್ಷಗಳ ನಂತರ ಲಂಕೇಶರ ಹಲ್ಲು ಎಣಿಸಿರುವ ಸದರಿ ಮೋಹನ್ ರಾಂ ಎಂಬುವನ ಬಗ್ಗೆ ಲಂಕೇಶ್ ಹೇಳಿದ್ದೇನೆಂದರೆ, ‘ಆತ ಸುಳ್ಳು ಬರೆಯುತ್ತಾನೆ, ಈಗತಾನೆ ಬಾಂಬೆಯಿಂದ ಬಂದೆ. ಅಮಿತಾ ಬಚ್ಚನ್ ಇಂಟ್ರೂ ಮಾಡಿದೆ ಎಂದು ಮನೆಯಲ್ಲಿ ಕುಳಿತು ಬರೆದು ತಂದಿದ್ದ ಅದಕ್ಕೆ ಓಡಿಸಿದೆ’ ಎಂದು ಹೇಳಿದ್ದರಲ್ಲಾ, ಥೂತ್ತೇರಿ.

* * * *

ಎಂದಿನಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟಣೆಗೊಂಡಿವೆ. ಸಮ್ಮಿಶ್ರ ಸರಕಾರವೊಂದು ನೇಮಿಸಿದ್ದ ಆಯ್ಕೆ ಸಮಿತಿಯ ಸದರಿ ವಿದ್ವಾಂಸರು ಆಯ್ಕೆ ಮಾಡಿದ ಪ್ರತಿಭಾವಂತರ ಬಗ್ಗೆ ಚಕಾರವೆತ್ತದ ಜಯಮಾಲ ಹಾಗು ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ನೇನು ಅನುಮೋದನೆಯ ಸೀಲು ಒತ್ತಿ ಪತ್ರಿಕೆಗಳಿಗೆ ಬಿಡುಗಡೆ ಮಡಬೇಕೆನ್ನುವಷ್ಟರಲ್ಲಿ ಸದರಿ ಪಟ್ಟಿಯನ್ನು ಕಿತ್ತುಕೊಂಡ ಡಿ.ಕೆ.ಶಿವಕುಮಾರ್ ಎಂಬ ಕರ್ನಾಟಕ ರಾಜಕಾರಣದ ಸಮಸ್ಯೆ, ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅಂದ್ರೆ ಬರೀ ಸಾಹಿತಿಗಳು, ಜನಪದ ಕಲಾವಿದರಿಗಷ್ಟೇ ಕೊಡಬಾರ್ದು ಕಂಡ್ರೀ. ರಾಜಕಾರಣಿಗಳು, ನಮಗೆ ಪಾಠ ಹೇಳಿದ ಮೇಷ್ಟ್ರು, ನಮ್ಮ ಪರ ವಾದ ಮಾಡೋ ಲಾಯರ್‌ಗಳು, ರಸ್ತೆ ಮಾಡೋರು, ಮನೆಕಟ್ಟೋರನ್ನೂ ಪರಿಗಣಿಸಬೇಕು’ ಎಂದು ರಾಜ್ಯೋತ್ಸವ ಪಟ್ಟಿಯೊಳಕ್ಕೆ ತನ್ನ ಅಭಿರುಚಿಯನ್ನ ಸೇರಿಸಿದರಂತಲ್ಲಾ. ಆಗ ಮುಖ್ಯಮಂತ್ರಿಯಾಗಿ ಯಾರನ್ನು ಸೇರಿಸಲಾಗದ ಕುಮಾರಸ್ವಾಮಿ ಅನಿವಾರ್ಯವಾಗಿ ಡಿ.ಕೆ.ಸಿ. ಅಭಿರುಚಿಯನ್ನು ಮನ್ನಿಸಿದರಂತಲ್ಲಾ, ಥೂತ್ತೇರಿ.

* * * *

ಈ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ತಮ್ಮ ಮಹತ್ವ ಕಳೆದುಕೊಂಡಿದ್ದು ಬಂಗಾರಪ್ಪನ ಕಾಲದಲ್ಲಂತಲ್ಲಾ. ಹಿಂದುಳಿದ ವರ್ಗದ ನಾಯಕರಾದ ಬಂ ಸಾಮಾಜಿಕ ನ್ಯಾಯವನ್ನು ರಾಜ್ಯೋತ್ಸವ ಪ್ರಶಸ್ತಿ ಮುಖಾಂತರ ಸರಿಮಾಡಲು ಹೋಗಿ ಪ್ರಶಸ್ತಿ ಹಂಚಿದ ಪರಿಗೆ ಬೆದರಿದ ಪತ್ರಕರ್ತರು ಇದೇನು ಸಾರ್ ಅನರ್ಹರಿಗೆಲ್ಲಾ ಪ್ರಶಸ್ತಿ ಕೊಟ್ಟರಲ್ಲ ಎಂದಾಗ ಅರ್ಹರಿಗೆ ಮುಂದಿನ ಬಾರಿ ಕೊಡೋಣ ಬಿಡಿ ಎಂದರು. ಅರ್ಹರ‍್ಯಾರು, ಅವರು ಪಡೆದ ಸವಲತ್ತುಗಳೇನು ಎಂಬುದು ’ಬಂ’ಗೆ ಗೊತ್ತಿತ್ತು. ಆ ನಂತರ ಬಂದ ಬಿ.ಜೆ.ಪಿ ಸರಕಾರದಲ್ಲಿ ಬಿಸಿಬೇಳೆ ಬಾತು ಮಾಡುವವರಿಗೆಲ್ಲಾ ಪ್ರಶಸ್ತಿಗಳು ಸಿಕ್ಕವು. ಒಂದೆರಡು ಕನ್ನಡ ರಾಜ್ಯೋತ್ಸವ ಮಾಡಿದವನಿಗೂ ಈಶ್ವರಪ್ಪ ಪ್ರಶಸ್ತಿ ಕೊಡಿಸಿದರೆ, ನಾನು ಈಶ್ವರಪ್ಪನಿಗೇನು ಕಡಿಮೆ ಎಂದು ಭಾವಿಸಿದ ಯಡೂರಪ್ಪನ ಮಗಳು ಮಾತುಮಾತಿಗು ತನ್ನನ್ನು ನಗಿಸುತ್ತಿದ್ದ ಹುಡುಗನಿಗೂ ಒಂದು ರಾಜ್ಯೋತ್ಸವ ಪ್ರಶಸ್ತಿ ಕೊಡಿಸಿದಳು. ಅದೇ ತರಹ ಈಗೊಂದು ಪ್ರಶಸ್ತಿ ವ್ಯರ್ಥವಾಗಿ ಹೋಯ್ತು. ಪ್ರತಿಭಾವಂತರೊಬ್ಬರ ಕೈಯಿಂದ ಪ್ರಶಸ್ತಿ ಕಿತ್ತುಕೊಂಡ ಡಿ.ಕೆ.ಶಿ ಅದನ್ನ ಮಾರ್ಗರೇಟ್ ಆಳ್ವರಿಗೆ ಕೊಟ್ಟಿದ್ದಾರೆ. ಈ ಮಾಜಿ ರಾಜ್ಯಪಾಲೆ ನಿರಾಕರಿಸಬಹುದಿತ್ತು. ಎಲ್ಲರ ಬಳಿ ಘನತೆವೆತ್ತ ಗುಣ ಸುಳಿಯುವುದು ಕಡಿಮೆಯಂತಲ್ಲಾ, ಥೂತ್ತೇರಿ.

* * * *

ರಾಜ್ಯೋತ್ಸವ ಪ್ರಶಸ್ತಿ ವಿಷಯ ಬಿತ್ತರಿಸುವಲ್ಲಿ ಕೆಲವು ಪತ್ರಿಕೆಗಳು ಹರಾಜಾಗಿ ಹೋದವಂತಲ್ಲಾ ಉದಾಹರಣೆ ಕೊಡುವುದಾದರೆ, ಪ್ರಶಸ್ತಿಯ ಆಯ್ಕೆ ಸಮಿತಿಯೇ ರಚನೆಯಾಗಿಲ್ಲ ಎಂದು ಅವು ಕರೆಯುತ್ತಿದ್ದಾಗ ಆಯ್ಕೆ ಸಮಿತಿ ಕಲಾಗ್ರಾಮದಲ್ಲಿ ಆಯ್ಕೆಯಲ್ಲಿ ನಿರತವಾಗಿತ್ತು. ಎರಡೂ ಪಕ್ಷದ ಒತ್ತಡದಲ್ಲಿ ಕುಮಾರಸ್ವಾಮಿ ನಲುಗಿ ಹೋಗಿದ್ದಾರೆ ಎಂದು ಬರೆಯುತ್ತಿದ್ದಾಗ ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿದ್ದರು.

ಪ್ರಶಸ್ತಿ ಕೊಡುವ ಹಿಂದಿನ ದಿನ ಆಯ್ಕೆ ನಡೆಸಿ ಮರುದಿನ ವಿತರಿಸಲಾಗುವುದೆಂದು ಪತ್ರಿಕೆಗಳು ಬರೆಯುವಾಗ ಎರಡು ವಾರಗಳ ಆಯ್ಕೆ ಪರಿಶ್ರಮದಿಂದ ಮುಕ್ತವಾದ ಆಯ್ಕೆ ಸಮಿತಿ ಕುಮಾರಸ್ವಾಮಿಗೆ ತಮ್ಮ ವರದಿಕೊಟ್ಟಿತ್ತು. ಹೀಗೆ ಮನಸ್ಸಿಗೆ ಬಂದ ವರದಿ ಬರೆಯುತ್ತಿದ್ದ ಪತ್ರಿಕೆಗಳನ್ನು ಕಂಡು ನಗುವುದರ ಬದಲು ನಗಿಸಲಾಗುತ್ತಿತ್ತು. ಏಕೆಂದರೆ ಏನೊಂದೂ ಪರಿಶೀಲಿಸದೆ ಕುಳಿತಲ್ಲೇ ಒಂದು ಊಹಾತ್ಮಕ ವರದಿ ಬರೆದು ಕೊಡುವುದರಿಂದ ಅನಾಹುತಗಳು ಜರುಗುವ ಸಂಭವವಿರುತ್ತದೆ. ಪಬ್ಲಿಕ್ ಟಿವಿಯ ಕಡ್ಡಿ ರಂಗ ಚಿಕ್ಕಮಗಳೂರು ಡಿ.ವೈ.ಎಸ್.ಪಿ ವಿಷಯದಲ್ಲಿಯೂ ಹೀಗೆಯೇ ಸುಳ್ಳು ಸುದ್ದಿ ಬಿತ್ತರಿಸಿದ್ದ. ಅವರ ಆತ್ಮಹತ್ಯೆಗೆ ಕಾರಣನಾದವರು ನಮ್ಮ ಕಣ್ಣು ಮುಂದಿರುವುದರಿಂದ ಪತ್ರಕರ್ತರು ಆದಷ್ಟೂ ಕಣ್ಣು ಕಿವಿ ತೊಳೆಯುವುದೊಳ್ಳೆಯದಂತಲ್ಲಾ, ಥೂತ್ತೇರಿ.

* * * *

ಪ್ರಶಸ್ತಿಗಳ ಬಗ್ಗೆ ಮನಸ್ಸಿಗೆ ಬಂದ ಸುಳ್ಳು ಸುದ್ದಿ ಬರೆದ ಪತ್ರಿಕೆಗಳು ಆ ನಂತರ ತಮ್ಮ ಜವಾಬ್ದಾರಿಯ ಕಡೆ ಗಮನಹರಿಸಲಿಲ್ಲವಂತಲ್ಲಾ. ಆಯ್ಕೆಯಾದ ೬೩ ಜನರಲ್ಲಿನ ವೈವಿಧ್ಯಮಯ ಪ್ರತಿಭೆ ಬೆರಗು ಹುಟ್ಟಿಸುವಂತಿತ್ತು. ತಮ್ಮ ಕ್ಷೌರದ ಅಂಗಡಿಯಲ್ಲೇ ಸಮಾಜವಾದದ ಚಳುವಳಿ ರೂಪಿಸಿದ ರಾಚಪ್ಪ ಹಡಪದ. ಇವರನ್ನು ನೋಡಿ ಮಾತನಾಡಿಸಲು ತೇಜಸ್ವಿ ಸ್ಕೂಟರಿನಲ್ಲೇ ಹೋಗಿದ್ದರಂತೆ. ಇನ್ನು ಕೈಗೆ ಕಾಸು ಸಿಕ್ಕ ಕೂಡಲೇ ಕೆರೆ, ಚೆಕ್ ಡ್ಯಾಂ ಕಟ್ಟುವ ಕಲ್ಮನೆ ಕಾಮೇಗೌಡ, ಆ ಕಾಲಕ್ಕೆ ಕ್ರಾಂತಿ ಮಾಡಿದ ಅಮ್ಮೆಂಬಳ ಆನಂದ, ಜನಪದ ನಿಧಿ ಗುಲ್ಬರ್ಗದ ಶಂಕ್ರಮ್ಮ ಇಂತಹ ಇತಿಹಾಸಗಳನ್ನ ಕೆದಕಿದರೆ ಸಾಕು, ಸಾರ್ಥಕ ಬದುಕೊಂದು ನಮ್ಮ ಮುಂದೆ ತೆರೆದುಕೊಳ್ಳುತ್ತದೆ. ಹೊಸ ತಲೆಮಾರಿಗೆ ಇವರ ಬದುಕು ಸ್ಪೂರ್ತಿ ನೀಡಬಲ್ಲದು. ಇವರ ಪ್ರತಿಭೆ ಪ್ರಭಾವ ಬೀರಬಹುದು. ಇದಾವುದನ್ನು ಗ್ರಹಿಸದೆ ಕೇವಲ ಅವರ ಹೆಸರುಗಳನ್ನಷ್ಟೇ ಪ್ರಕಟಿಸಿ ಕೈತೊಳೆದುಕೊಂಡ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮಗಳು ಸತ್ತು ಎಷ್ಟೋ ವರ್ಷಗಳಾಗಿವೆಯಂತಲ್ಲಾ. ವಿಶೇಷವೆಂದರೆ, ಸಾಂಸ್ಕೃತಿಕವಾಗಿ ಸತ್ತಂತಿರುವ ಈ ಮಾಧ್ಯಮಗಳ ವಿಷಯದಲ್ಲಿ ಜನರೂ ಕೂಡ ನಿರ್ಲಕ್ಷ್ಯದಿಂದಿದ್ದಾರಂತಲ್ಲಾ, ಥೂತ್ತೇರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...