Homeಅಂಕಣಗಳುಆಘಾತವಾಣಿ | ಅಟ್ಯಾಕ್ ಹನ್ಮಂತಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ...

ಥೂತ್ತೇರಿ: ರಾಜ್ಯೋತ್ಸವ ಪ್ರಶಸ್ತೀನ ರಸ್ತೆ ಮಾಡೋರಿಗೆ, ಮನೆಕಟ್ಟೋರಿಗೂ ಕೊಡ್ಬೇಕು ಕಣ್ರೀ…

- Advertisement -
- Advertisement -

ಯಾಹೂ |

ಮೋಹನ್‌ರಾಂ ಎಂಬ ತಿಕ್ಕಲು ಬ್ರಾಹ್ಮಣ ಲಂಕೇಶರಿಂದ ಉಗಿಸಿಕೊಂಡು ಹೋದ 36 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡಿದ್ದಾನಂತಲ್ಲಾ. ಅಂದರೆ ಲಂಕೇಶ್ ಎಷ್ಟರ ಮಟ್ಟಿಗೆ ಉಗಿದಿರಬಹುದೆಂದು ವೇದ್ಯವಾಗುತ್ತದೆ. ಇಂತವನನ್ನು ನೋಡಿಯೇ ಏನೋ ದೇವನೂರು ಒಂದು ಕತೆ ಬರೆದಿದ್ದರು. ಮೋಹನ ಶಾಸ್ತ್ರಿ ಎಂಬ ಗುಮಾಸ್ತನಿದ್ದ. ಅವನ ಬಾಸು ಲಂಕೇಗೌಡ. ಈ ಲಂಕೇಗೌಡ ಗುಮಾಸ್ತನಿಗೆ ಕೆಟ್ಟದಾಗಿ ಬೈಯ್ಯುತ್ತಿದ್ದ. ಇದರಿಂದ ಸೇಡಿಗೆ ತುತ್ತಾದ ಮೋಹನಶಾಸ್ತ್ರಿ ಲಂಕೇಗೌಡನ ಸರ‍್ವಿಸ್ ರಿಜಿಸ್ಟರಿನಲ್ಲಿ ಗೌಡನ ಆಕಾರ ಬರೆದು ಮುಂದಿನ ಎರಡು ಹಲ್ಲಿಲ್ಲ ಎಂದು ಬರೆದು ನಿವೃತ್ತನಾಗಿದ್ದನಂತೆ. ಲಂಕೇಗೌಡ ನಿವೃತ್ತನಾಗುವಾಗ ಅನಿವಾರ್ಯವಾಗಿ ಎರಡಲ್ಲು ಕೀಳಿಸಿಕೊಂಡು ಪಿಂಚನಿ ಪಡೆದನಂತೆ. ನಮ್ಮ ನಡುವಿನ ಪುರೋಹಿತಶಾಹಿಗಳ ಪಿಂಡಗಳು ಆಂತರ್ಯದಲ್ಲಿ ಹೊಂದಿರುವ ಹಗೆ ಎಂತದ್ದು ಎಂಬುದನ್ನು ಹೇಳಲು ದೇವನೂರು ಈ ಕತೆಯನ್ನು ಪಂಚಮದಲ್ಲಿ ಬರೆದಿದ್ದರು. ಮೂವತ್ತಾರು ವರ್ಷಗಳ ನಂತರ ಲಂಕೇಶರ ಹಲ್ಲು ಎಣಿಸಿರುವ ಸದರಿ ಮೋಹನ್ ರಾಂ ಎಂಬುವನ ಬಗ್ಗೆ ಲಂಕೇಶ್ ಹೇಳಿದ್ದೇನೆಂದರೆ, ‘ಆತ ಸುಳ್ಳು ಬರೆಯುತ್ತಾನೆ, ಈಗತಾನೆ ಬಾಂಬೆಯಿಂದ ಬಂದೆ. ಅಮಿತಾ ಬಚ್ಚನ್ ಇಂಟ್ರೂ ಮಾಡಿದೆ ಎಂದು ಮನೆಯಲ್ಲಿ ಕುಳಿತು ಬರೆದು ತಂದಿದ್ದ ಅದಕ್ಕೆ ಓಡಿಸಿದೆ’ ಎಂದು ಹೇಳಿದ್ದರಲ್ಲಾ, ಥೂತ್ತೇರಿ.

* * * *

ಎಂದಿನಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಪ್ರಕಟಣೆಗೊಂಡಿವೆ. ಸಮ್ಮಿಶ್ರ ಸರಕಾರವೊಂದು ನೇಮಿಸಿದ್ದ ಆಯ್ಕೆ ಸಮಿತಿಯ ಸದರಿ ವಿದ್ವಾಂಸರು ಆಯ್ಕೆ ಮಾಡಿದ ಪ್ರತಿಭಾವಂತರ ಬಗ್ಗೆ ಚಕಾರವೆತ್ತದ ಜಯಮಾಲ ಹಾಗು ಮುಖ್ಯಮಂತ್ರಿ ಕುಮಾರಸ್ವಾಮಿ ಇನ್ನೇನು ಅನುಮೋದನೆಯ ಸೀಲು ಒತ್ತಿ ಪತ್ರಿಕೆಗಳಿಗೆ ಬಿಡುಗಡೆ ಮಡಬೇಕೆನ್ನುವಷ್ಟರಲ್ಲಿ ಸದರಿ ಪಟ್ಟಿಯನ್ನು ಕಿತ್ತುಕೊಂಡ ಡಿ.ಕೆ.ಶಿವಕುಮಾರ್ ಎಂಬ ಕರ್ನಾಟಕ ರಾಜಕಾರಣದ ಸಮಸ್ಯೆ, ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಅಂದ್ರೆ ಬರೀ ಸಾಹಿತಿಗಳು, ಜನಪದ ಕಲಾವಿದರಿಗಷ್ಟೇ ಕೊಡಬಾರ್ದು ಕಂಡ್ರೀ. ರಾಜಕಾರಣಿಗಳು, ನಮಗೆ ಪಾಠ ಹೇಳಿದ ಮೇಷ್ಟ್ರು, ನಮ್ಮ ಪರ ವಾದ ಮಾಡೋ ಲಾಯರ್‌ಗಳು, ರಸ್ತೆ ಮಾಡೋರು, ಮನೆಕಟ್ಟೋರನ್ನೂ ಪರಿಗಣಿಸಬೇಕು’ ಎಂದು ರಾಜ್ಯೋತ್ಸವ ಪಟ್ಟಿಯೊಳಕ್ಕೆ ತನ್ನ ಅಭಿರುಚಿಯನ್ನ ಸೇರಿಸಿದರಂತಲ್ಲಾ. ಆಗ ಮುಖ್ಯಮಂತ್ರಿಯಾಗಿ ಯಾರನ್ನು ಸೇರಿಸಲಾಗದ ಕುಮಾರಸ್ವಾಮಿ ಅನಿವಾರ್ಯವಾಗಿ ಡಿ.ಕೆ.ಸಿ. ಅಭಿರುಚಿಯನ್ನು ಮನ್ನಿಸಿದರಂತಲ್ಲಾ, ಥೂತ್ತೇರಿ.

* * * *

ಈ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ತಮ್ಮ ಮಹತ್ವ ಕಳೆದುಕೊಂಡಿದ್ದು ಬಂಗಾರಪ್ಪನ ಕಾಲದಲ್ಲಂತಲ್ಲಾ. ಹಿಂದುಳಿದ ವರ್ಗದ ನಾಯಕರಾದ ಬಂ ಸಾಮಾಜಿಕ ನ್ಯಾಯವನ್ನು ರಾಜ್ಯೋತ್ಸವ ಪ್ರಶಸ್ತಿ ಮುಖಾಂತರ ಸರಿಮಾಡಲು ಹೋಗಿ ಪ್ರಶಸ್ತಿ ಹಂಚಿದ ಪರಿಗೆ ಬೆದರಿದ ಪತ್ರಕರ್ತರು ಇದೇನು ಸಾರ್ ಅನರ್ಹರಿಗೆಲ್ಲಾ ಪ್ರಶಸ್ತಿ ಕೊಟ್ಟರಲ್ಲ ಎಂದಾಗ ಅರ್ಹರಿಗೆ ಮುಂದಿನ ಬಾರಿ ಕೊಡೋಣ ಬಿಡಿ ಎಂದರು. ಅರ್ಹರ‍್ಯಾರು, ಅವರು ಪಡೆದ ಸವಲತ್ತುಗಳೇನು ಎಂಬುದು ’ಬಂ’ಗೆ ಗೊತ್ತಿತ್ತು. ಆ ನಂತರ ಬಂದ ಬಿ.ಜೆ.ಪಿ ಸರಕಾರದಲ್ಲಿ ಬಿಸಿಬೇಳೆ ಬಾತು ಮಾಡುವವರಿಗೆಲ್ಲಾ ಪ್ರಶಸ್ತಿಗಳು ಸಿಕ್ಕವು. ಒಂದೆರಡು ಕನ್ನಡ ರಾಜ್ಯೋತ್ಸವ ಮಾಡಿದವನಿಗೂ ಈಶ್ವರಪ್ಪ ಪ್ರಶಸ್ತಿ ಕೊಡಿಸಿದರೆ, ನಾನು ಈಶ್ವರಪ್ಪನಿಗೇನು ಕಡಿಮೆ ಎಂದು ಭಾವಿಸಿದ ಯಡೂರಪ್ಪನ ಮಗಳು ಮಾತುಮಾತಿಗು ತನ್ನನ್ನು ನಗಿಸುತ್ತಿದ್ದ ಹುಡುಗನಿಗೂ ಒಂದು ರಾಜ್ಯೋತ್ಸವ ಪ್ರಶಸ್ತಿ ಕೊಡಿಸಿದಳು. ಅದೇ ತರಹ ಈಗೊಂದು ಪ್ರಶಸ್ತಿ ವ್ಯರ್ಥವಾಗಿ ಹೋಯ್ತು. ಪ್ರತಿಭಾವಂತರೊಬ್ಬರ ಕೈಯಿಂದ ಪ್ರಶಸ್ತಿ ಕಿತ್ತುಕೊಂಡ ಡಿ.ಕೆ.ಶಿ ಅದನ್ನ ಮಾರ್ಗರೇಟ್ ಆಳ್ವರಿಗೆ ಕೊಟ್ಟಿದ್ದಾರೆ. ಈ ಮಾಜಿ ರಾಜ್ಯಪಾಲೆ ನಿರಾಕರಿಸಬಹುದಿತ್ತು. ಎಲ್ಲರ ಬಳಿ ಘನತೆವೆತ್ತ ಗುಣ ಸುಳಿಯುವುದು ಕಡಿಮೆಯಂತಲ್ಲಾ, ಥೂತ್ತೇರಿ.

* * * *

ರಾಜ್ಯೋತ್ಸವ ಪ್ರಶಸ್ತಿ ವಿಷಯ ಬಿತ್ತರಿಸುವಲ್ಲಿ ಕೆಲವು ಪತ್ರಿಕೆಗಳು ಹರಾಜಾಗಿ ಹೋದವಂತಲ್ಲಾ ಉದಾಹರಣೆ ಕೊಡುವುದಾದರೆ, ಪ್ರಶಸ್ತಿಯ ಆಯ್ಕೆ ಸಮಿತಿಯೇ ರಚನೆಯಾಗಿಲ್ಲ ಎಂದು ಅವು ಕರೆಯುತ್ತಿದ್ದಾಗ ಆಯ್ಕೆ ಸಮಿತಿ ಕಲಾಗ್ರಾಮದಲ್ಲಿ ಆಯ್ಕೆಯಲ್ಲಿ ನಿರತವಾಗಿತ್ತು. ಎರಡೂ ಪಕ್ಷದ ಒತ್ತಡದಲ್ಲಿ ಕುಮಾರಸ್ವಾಮಿ ನಲುಗಿ ಹೋಗಿದ್ದಾರೆ ಎಂದು ಬರೆಯುತ್ತಿದ್ದಾಗ ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿದ್ದರು.

ಪ್ರಶಸ್ತಿ ಕೊಡುವ ಹಿಂದಿನ ದಿನ ಆಯ್ಕೆ ನಡೆಸಿ ಮರುದಿನ ವಿತರಿಸಲಾಗುವುದೆಂದು ಪತ್ರಿಕೆಗಳು ಬರೆಯುವಾಗ ಎರಡು ವಾರಗಳ ಆಯ್ಕೆ ಪರಿಶ್ರಮದಿಂದ ಮುಕ್ತವಾದ ಆಯ್ಕೆ ಸಮಿತಿ ಕುಮಾರಸ್ವಾಮಿಗೆ ತಮ್ಮ ವರದಿಕೊಟ್ಟಿತ್ತು. ಹೀಗೆ ಮನಸ್ಸಿಗೆ ಬಂದ ವರದಿ ಬರೆಯುತ್ತಿದ್ದ ಪತ್ರಿಕೆಗಳನ್ನು ಕಂಡು ನಗುವುದರ ಬದಲು ನಗಿಸಲಾಗುತ್ತಿತ್ತು. ಏಕೆಂದರೆ ಏನೊಂದೂ ಪರಿಶೀಲಿಸದೆ ಕುಳಿತಲ್ಲೇ ಒಂದು ಊಹಾತ್ಮಕ ವರದಿ ಬರೆದು ಕೊಡುವುದರಿಂದ ಅನಾಹುತಗಳು ಜರುಗುವ ಸಂಭವವಿರುತ್ತದೆ. ಪಬ್ಲಿಕ್ ಟಿವಿಯ ಕಡ್ಡಿ ರಂಗ ಚಿಕ್ಕಮಗಳೂರು ಡಿ.ವೈ.ಎಸ್.ಪಿ ವಿಷಯದಲ್ಲಿಯೂ ಹೀಗೆಯೇ ಸುಳ್ಳು ಸುದ್ದಿ ಬಿತ್ತರಿಸಿದ್ದ. ಅವರ ಆತ್ಮಹತ್ಯೆಗೆ ಕಾರಣನಾದವರು ನಮ್ಮ ಕಣ್ಣು ಮುಂದಿರುವುದರಿಂದ ಪತ್ರಕರ್ತರು ಆದಷ್ಟೂ ಕಣ್ಣು ಕಿವಿ ತೊಳೆಯುವುದೊಳ್ಳೆಯದಂತಲ್ಲಾ, ಥೂತ್ತೇರಿ.

* * * *

ಪ್ರಶಸ್ತಿಗಳ ಬಗ್ಗೆ ಮನಸ್ಸಿಗೆ ಬಂದ ಸುಳ್ಳು ಸುದ್ದಿ ಬರೆದ ಪತ್ರಿಕೆಗಳು ಆ ನಂತರ ತಮ್ಮ ಜವಾಬ್ದಾರಿಯ ಕಡೆ ಗಮನಹರಿಸಲಿಲ್ಲವಂತಲ್ಲಾ. ಆಯ್ಕೆಯಾದ ೬೩ ಜನರಲ್ಲಿನ ವೈವಿಧ್ಯಮಯ ಪ್ರತಿಭೆ ಬೆರಗು ಹುಟ್ಟಿಸುವಂತಿತ್ತು. ತಮ್ಮ ಕ್ಷೌರದ ಅಂಗಡಿಯಲ್ಲೇ ಸಮಾಜವಾದದ ಚಳುವಳಿ ರೂಪಿಸಿದ ರಾಚಪ್ಪ ಹಡಪದ. ಇವರನ್ನು ನೋಡಿ ಮಾತನಾಡಿಸಲು ತೇಜಸ್ವಿ ಸ್ಕೂಟರಿನಲ್ಲೇ ಹೋಗಿದ್ದರಂತೆ. ಇನ್ನು ಕೈಗೆ ಕಾಸು ಸಿಕ್ಕ ಕೂಡಲೇ ಕೆರೆ, ಚೆಕ್ ಡ್ಯಾಂ ಕಟ್ಟುವ ಕಲ್ಮನೆ ಕಾಮೇಗೌಡ, ಆ ಕಾಲಕ್ಕೆ ಕ್ರಾಂತಿ ಮಾಡಿದ ಅಮ್ಮೆಂಬಳ ಆನಂದ, ಜನಪದ ನಿಧಿ ಗುಲ್ಬರ್ಗದ ಶಂಕ್ರಮ್ಮ ಇಂತಹ ಇತಿಹಾಸಗಳನ್ನ ಕೆದಕಿದರೆ ಸಾಕು, ಸಾರ್ಥಕ ಬದುಕೊಂದು ನಮ್ಮ ಮುಂದೆ ತೆರೆದುಕೊಳ್ಳುತ್ತದೆ. ಹೊಸ ತಲೆಮಾರಿಗೆ ಇವರ ಬದುಕು ಸ್ಪೂರ್ತಿ ನೀಡಬಲ್ಲದು. ಇವರ ಪ್ರತಿಭೆ ಪ್ರಭಾವ ಬೀರಬಹುದು. ಇದಾವುದನ್ನು ಗ್ರಹಿಸದೆ ಕೇವಲ ಅವರ ಹೆಸರುಗಳನ್ನಷ್ಟೇ ಪ್ರಕಟಿಸಿ ಕೈತೊಳೆದುಕೊಂಡ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮಗಳು ಸತ್ತು ಎಷ್ಟೋ ವರ್ಷಗಳಾಗಿವೆಯಂತಲ್ಲಾ. ವಿಶೇಷವೆಂದರೆ, ಸಾಂಸ್ಕೃತಿಕವಾಗಿ ಸತ್ತಂತಿರುವ ಈ ಮಾಧ್ಯಮಗಳ ವಿಷಯದಲ್ಲಿ ಜನರೂ ಕೂಡ ನಿರ್ಲಕ್ಷ್ಯದಿಂದಿದ್ದಾರಂತಲ್ಲಾ, ಥೂತ್ತೇರಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...