Homeಮುಖಪುಟದರ್ಶನ್‍ಗೆ ಧಿಕ್ಕಾರ, ಏನಿದರ ಹುನ್ನಾರ?

ದರ್ಶನ್‍ಗೆ ಧಿಕ್ಕಾರ, ಏನಿದರ ಹುನ್ನಾರ?

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಇತ್ತೀಚೆಗೆ ನಟ ದರ್ಶನ್ ಸಿಎಂ ಸಿದ್ರಾಮಯ್ಯ ಪರ ಪ್ರಚಾರ ಮಾಡಲು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋದಾಗ ಒಂದಷ್ಟು ಜೆಡಿಎಸ್ ಕಾರ್ಯಕರ್ತರ ದಂಡು ದರ್ಶನ್‍ಗೆ ಧಿಕ್ಕಾರ ಕೂಗಿತ್ತು, ಹಾಗೆ ಧಿಕ್ಕಾರ ಕೂಗಲು ಆ ಪ್ರತಿಭಟನಾಕಾರರ ಬಳಿ ಇದ್ದದ್ದು ಎರಡು ಆಪಾದನೆಗಳು. ಮೊದಲನೆಯದ್ದು, ಎಲ್ಲಾ ಪಕ್ಷದಲ್ಲೂ ದರ್ಶನ್ ಅಭಿಮಾನಿಗಳು ಇರೋದ್ರಿಂದ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಬಾರದು. ಎರಡನೆಯದ್ದು, ಕಾವೇರಿ ವಿವಾದದಲ್ಲಿ ದರ್ಶನ್ ಏನೂ ಮಾಡದಿರುವುದರಿಂದ ಆತನಿಗೆ ಮತ ಕೇಳುವ ಹಕ್ಕಿಲ್ಲ!

ಒನ್ಸ್ ಎಗೇನ್, ಇವೆರಡೂ ಕಾರಣಗಳು ಜಸ್ಟ್ ನೆಪವಷ್ಟೇ. ಇವುಗಳ ಹಿಂದೆ ಇರೋದು ಮತ್ತದೇ ಪೊಲಿಟಿಕ್ಸ್, ಅದರಲ್ಲೂ ಜೆಡಿಎಸ್‍ನ ಜಾತಿ ಪೊಲಿಟಿಕ್ಸ್! ಮೊದಲನೇ ಕಾರಣವನ್ನೇ ತೆಗೆದುಕೊಳ್ಳೋಣ. ದರ್ಶನ್‍ಗಿರುವ ಪಕ್ಷಾತೀತ ಅಭಿಮಾನಿಗಳ ಕಾಳಜಿಯಿಂದ ಈ ಮಾತು ಹೇಳುವುದೇ ಆಗಿದ್ದರೆ, ಒಂದು ತಟಸ್ಥ ಅಭಿಮಾನಿ ಸಮೂಹವಾಗಿ ಅಂತಹ ಪ್ರತಿರೋಧವನ್ನು ಹೊರಹಾಕಬೇಕಿತ್ತು. ಅದನ್ನು ಬಿಟ್ಟು ಜೆಡಿಎಸ್ ಅನ್ನೊ ಒಂದು ಪೊಲಿಟಿಕಲ್ ಪಾರ್ಟಿಯ ಬ್ಯಾನರ್‍ನಡಿ, ಆ ಪಕ್ಷದ ಕಾರ್ಯಕರ್ತರಾಗಿ ಎದುರಾಳಿ ಪಕ್ಷದ ಪ್ರಚಾರ ಮಾಡಬೇಡ ಎಂದು ಅಭಿಮಾನವನ್ನು ಮುಂದೆ ಮಾಡೋದೇ ಒಂದರ್ಥದಲ್ಲಿ ಸಾಂಸ್ಕೃತಿಕ ಬೆದರಿಕೆ ಹಾಕಿದಂತೆ.

ಇನ್ನು ಎರಡನೇ ಕಾರಣವೂ ಅಷ್ಟೇ ಸವಕಲು. ಕಾವೇರಿ ವಿವಾದದಲ್ಲಿ ಏನನ್ನಾದರು ಮಾಡಲು ಪಾಪ ದರ್ಶನ್ ಚುನಾಯಿತ ಜನಪ್ರತಿನಿಧಿಯೇನಲ್ಲ. ಒಬ್ಬ ಕಲಾವಿದನಾಗಿ, ತನ್ನ ಕಲಾಬಳಗದ ಜೊತೆಗೂಡಿ ಯಾವ ಪ್ರತಿಭಟನೆಯನ್ನು ದಾಖಲಿಸಬೇಕಿತ್ತೊ ಅದನ್ನು ದರ್ಶನ್ ಮಾಡಿದ್ದಾರೆ. ಅದಕ್ಕಿಂತ ಹೆಚ್ಚಿನದನ್ನು ಆತನಿಂದ ನಿರೀಕ್ಷಿಸಲಿಕ್ಕಾಗದು. ಈಗ ಆತನ ಪ್ರಚಾರಕ್ಕೆ ಆ ನೆಪವಿಟ್ಟುಕೊಂಡು ಅಡ್ಡಿಪಡಿಸೋದು ರಾಜಕಾರಣವಲ್ಲದೆ ಮತ್ತೇನೂ ಅಲ್ಲ.

ಅಭಿಮಾನವನ್ನು ಅಡ್ಡವಿಟ್ಟುಕೊಂಡು ದರ್ಶನ್ ಪ್ರಚಾರಕ್ಕೆ ಅಡ್ಡಿಪಡಿಸೋ ದರ್ದು ಜೆಡಿಎಸ್‍ಗೆ ಏನಿತ್ತು ಅಂತ ಕೆದಕಲು ಶುರು ಮಾಡಿದರೆ ಚಾಮುಂಡೇಶ್ವರಿ ಕ್ಷೇತ್ರದ ಜಾತಿ ಚುನಾವಣೆಯ ರಂಗು ತೆರೆದುಕೊಳ್ಳುತ್ತೆ. ದೇವೇಗೌಡರ ಕುಟುಂಬದ ವೈಯಕ್ತಿಕ ಸಿಟ್ಟಿಗೆ ತುತ್ತಾಗಿರುವ ಸಿದ್ರಾಮಯ್ಯರನ್ನು ಸೋಲಿಸಲು ಚಾಮುಂಡೇಶ್ವರಿಯಲ್ಲಿ ಭರ್ಜರಿ ಜಾತಿ ರಣತಂತ್ರವನ್ನೇ ಹೆಣೆಯಲಾಗಿದೆ. ಸಿದ್ರಾಮಯ್ಯ ರನ್ನು ಒಕ್ಕಲಿಗರ ವಿರೋಧಿಯಂತೆ ಬಿಂಬಿಸಿ ಕ್ಷೇತ್ರದಲ್ಲಿರುವ ಒಕ್ಕಲಿಗರ ನಡುವೆ ಒಂದು ಬಗೆಯ ಕಡುಕೆಟ್ಟ ಉನ್ಮತ್ತ ಒಗ್ಗಟ್ಟನ್ನು ಹುಟ್ಟಿಸಲಾಗಿದೆ. ಹೀಗೆ ಜಾತಿ ರಾಜಕಾರಣವನ್ನು ರೊಚ್ಚಿಗೆಬ್ಬಿಸದಿದ್ದರೆ ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯರನ್ನು ಮಣಿಸೋದು ಕಷ್ಟ ಅನ್ನೋದು ಜೆಡಿಎಸ್ ಅಭ್ಯರ್ಥಿ ಜಿ,ಟಿ,ದೇವೇಗೌಡರಿಗೆ ಸ್ಪಷ್ಟವಾಗಿತ್ತು. ಯಾಕೆಂದರೆ 2006ರ ಉಪಚುನಾವಣೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್ ಪಾರ್ಟಿಗಳು ಜಂಟಿಯಾಗಿ ಸಿದ್ರಾಮಯ್ಯರನ್ನು ಸೋಲಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಿರಲಿಲ್ಲ. ಆ ಮಟ್ಟಕ್ಕೆ ಸಿದ್ರಾಮಯ್ಯ ಚಾಮುಂಡೇಶ್ವರಿಯಲ್ಲಿ ತಮ್ಮದೇ ಮತಬ್ಯಾಂಕ್ ಹೊಂದಿದ್ದಾರೆ. ಅಂತದ್ದರಲ್ಲಿ ಈಗ ಸಿಎಂ ಆಗಿರುವ ಅವರನ್ನು ಅಲ್ಲಿ ಸೋಲಿಸೋದು ಅಂದ್ರೆ ಸುಮ್ನೇ ಮಾತಾ?

ಅದೇ ಕಾರಣಕ್ಕೆ ಒಕ್ಕಲಿಗ ಜಾತಿ ಕೆಮಿಸ್ಟ್ರಿಯನ್ನೇ ಜೆಡಿಎಸ್ ಅಲ್ಲಿ ವಿಪರೀತ ನಂಬಿ ಕೂತಿದೆ. ದರ್ಶನ್ ಬಂದು ಪ್ರಚಾರ ಮಾಡಿದರೆ ಒಕ್ಕಲಿಗರ ಜಾತಿ ಮತಗಳ ಈ ಕಟ್ಟು ಮುಕ್ಕಾಗಿ ಬಿಡುತ್ತೆ ಎಂಬ ಆತಂಕ ಜೆಡಿಎಸ್ ಅಭ್ಯರ್ಥಿಗೆ ಶುರುವಾಗಿದ್ದೇ ಈ ಪ್ರತಿಭಟನೆ ಹಿಂದಿರುವ ಅಸಲೀ ಕಾರಣ. ಹಳೇ ಮೈಸೂರು ಪ್ರಾಂತ್ಯದಲ್ಲಿ ಪ್ರಭಾವಿ ಎನಿಸಿಕೊಂಡಿರುವ ಒಕ್ಕಲಿಗರಿಗೆ, ಅದರಲ್ಲೂ ಒಕ್ಕಲಿಗ ಸಮುದಾಯದ ಯುವಜನರಿಗೆ ದರ್ಶನ್ ಎಂದರೆ ಐಕಾನ್ ಇದ್ದಂತೆ. ಆತ ಒಮ್ಮೆ ಕೈಬೀಸಿದರೆ ಅಭಿಮಾನದ ಹುಚ್ಚು ಹೊಳೆಯಲ್ಲಿ ಅವರೆಲ್ಲಿ ಕೊಚ್ಚಿ ಹೋಗುತ್ತಾರೋ ಎಂಬ ಆತಂಕ ಆ ಪ್ರತಿಭಟನೆಯನ್ನು ಆಯೋಜಿಸಿದೆ.

ವಿಪರ್ಯಾಸವೆಂದರೆ, ನಟ ದರ್ಶನ್ ಒಕ್ಕಲಿಗ ಸಮುದಾಯದವರೇ ಅಲ್ಲ. ಆತ ಬಲಿಜ ಜಾತಿಯವ. ಆದಾಗ್ಯೂ ಒಕ್ಕಲಿಗರ ಸಾಂಸ್ಕøತಿಕ ಐಕಾನ್‍ನಂತಿರುವ ಅಂಬರೀಷ್‍ರ ಸಿನಿ ಹೀರೊ ವ್ಯಾಕ್ಯೂಮನ್ನು ತುಂಬಿದ ಬದಲೀ ನಟನಾಗಿ ದರ್ಶನ್ ತನ್ನನ್ನು ತಾನು ಬಿಂಬಿಸಿಕೊಂಡರೆ, ಅದಕ್ಕೆ ತಕ್ಕಂತೆ ದರ್ಶನ್‍ರ ಸಿನಿ ಪಯಣದ ಮೊದಲ ದಿನದಿಂದ ಇಲ್ಲಿಯವರೆಗೂ ಅಂಬರೀಶ್ ಆತನ ಗಾಡಫಾದರ್‍ನಂತೇ ವರ್ತಿಸಿದ್ದಾರೆ. ಹಾಗಾಗಿ ಒಕ್ಕಲಿಗ ಸಿನಿ ಪ್ರಿಯರು ಅಂಬರೀಷ್ ಮೇಲಿಟ್ಟಿದ್ದ ಅಷ್ಟೂ ಅಭಿಮಾನವನ್ನು ದರ್ಶನ್‍ಗೂ ಹರಿಸಿದ್ದಾರೆ. ಯಾವ ಮಟ್ಟಕ್ಕೆಂದರೆ, ದರ್ಶನ್‍ರನ್ನು ಒಕ್ಕಲಿಗ ಅಂತಲೇ ಸುಮಾರಷ್ಟು ಮಂದಿ ಭ್ರಮಿಸುವಷ್ಟರ ಮಟ್ಟಿಗೆ ಗೊಂದಲ ಗೂಡುಕಟ್ಟಿದೆ. ಇದೇ ಗೊಂದಲ ಎಲ್ಲಿ ತಮ್ಮ ಜಾತಿ ರಾಜಕಾರಣವನ್ನು ದಿಕ್ಕೆಡಿಸಿಬಿಡುತ್ತೋ ಎಂಬ ಭಯ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಪಾಳಯವನ್ನು ಕಾಡಿದೆ. ಅದರ ಫಲವಾಗಿಯೇ ಅಭಿಮಾನ, ಕಾವೇರಿ ವಿವಾದಗಳನ್ನು ಮುಂದಿಟ್ಟುಕೊಂಡು ದರ್ಶನ್‍ಗೆ ಧಿಕ್ಕಾರದ ಕೂಗು ಹುಟ್ಟಿಕೊಂಡಿದೆ.

ಈ ಸಿನಿ ಮಂದಿ ಪ್ರಸ್ತುತ ರಾಜಕೀಯದ ಅರಿವು ಇಲ್ಲದೆ, ಸೈದ್ಧಾಂತಿಕ ಬದ್ಧತೆ ಇಲ್ಲದೆ ಹತ್ತು ಹಲವು ಮರ್ಜಿಗಳಿಗೆ ಕಟ್ಟುಬಿದ್ದು ಬಣ್ಣದ ಬೊಂಬೆಯಂತೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸೋದು ಎಷ್ಟು ಅಸಮಂಜಸವೋ, ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಅಭಿಮಾನವನ್ನು ನೆಪ ಮಾಡಿಕೊಂಡು ಅದೇ ಸಿನಿ ಮಂದಿಯ ಚುನಾವಣಾ ಪ್ರಚಾರಕ್ಕೆ ಅಡ್ಡಿ ಮಾಡೋದು ಕೂಡಾ ಅಷ್ಟೇ ಅಸಂಬದ್ಧ ರಾಜಕಾರಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...