Homeಮುಖಪುಟದರ್ಶನ್‍ಗೆ ಧಿಕ್ಕಾರ, ಏನಿದರ ಹುನ್ನಾರ?

ದರ್ಶನ್‍ಗೆ ಧಿಕ್ಕಾರ, ಏನಿದರ ಹುನ್ನಾರ?

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಇತ್ತೀಚೆಗೆ ನಟ ದರ್ಶನ್ ಸಿಎಂ ಸಿದ್ರಾಮಯ್ಯ ಪರ ಪ್ರಚಾರ ಮಾಡಲು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋದಾಗ ಒಂದಷ್ಟು ಜೆಡಿಎಸ್ ಕಾರ್ಯಕರ್ತರ ದಂಡು ದರ್ಶನ್‍ಗೆ ಧಿಕ್ಕಾರ ಕೂಗಿತ್ತು, ಹಾಗೆ ಧಿಕ್ಕಾರ ಕೂಗಲು ಆ ಪ್ರತಿಭಟನಾಕಾರರ ಬಳಿ ಇದ್ದದ್ದು ಎರಡು ಆಪಾದನೆಗಳು. ಮೊದಲನೆಯದ್ದು, ಎಲ್ಲಾ ಪಕ್ಷದಲ್ಲೂ ದರ್ಶನ್ ಅಭಿಮಾನಿಗಳು ಇರೋದ್ರಿಂದ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಬಾರದು. ಎರಡನೆಯದ್ದು, ಕಾವೇರಿ ವಿವಾದದಲ್ಲಿ ದರ್ಶನ್ ಏನೂ ಮಾಡದಿರುವುದರಿಂದ ಆತನಿಗೆ ಮತ ಕೇಳುವ ಹಕ್ಕಿಲ್ಲ!

ಒನ್ಸ್ ಎಗೇನ್, ಇವೆರಡೂ ಕಾರಣಗಳು ಜಸ್ಟ್ ನೆಪವಷ್ಟೇ. ಇವುಗಳ ಹಿಂದೆ ಇರೋದು ಮತ್ತದೇ ಪೊಲಿಟಿಕ್ಸ್, ಅದರಲ್ಲೂ ಜೆಡಿಎಸ್‍ನ ಜಾತಿ ಪೊಲಿಟಿಕ್ಸ್! ಮೊದಲನೇ ಕಾರಣವನ್ನೇ ತೆಗೆದುಕೊಳ್ಳೋಣ. ದರ್ಶನ್‍ಗಿರುವ ಪಕ್ಷಾತೀತ ಅಭಿಮಾನಿಗಳ ಕಾಳಜಿಯಿಂದ ಈ ಮಾತು ಹೇಳುವುದೇ ಆಗಿದ್ದರೆ, ಒಂದು ತಟಸ್ಥ ಅಭಿಮಾನಿ ಸಮೂಹವಾಗಿ ಅಂತಹ ಪ್ರತಿರೋಧವನ್ನು ಹೊರಹಾಕಬೇಕಿತ್ತು. ಅದನ್ನು ಬಿಟ್ಟು ಜೆಡಿಎಸ್ ಅನ್ನೊ ಒಂದು ಪೊಲಿಟಿಕಲ್ ಪಾರ್ಟಿಯ ಬ್ಯಾನರ್‍ನಡಿ, ಆ ಪಕ್ಷದ ಕಾರ್ಯಕರ್ತರಾಗಿ ಎದುರಾಳಿ ಪಕ್ಷದ ಪ್ರಚಾರ ಮಾಡಬೇಡ ಎಂದು ಅಭಿಮಾನವನ್ನು ಮುಂದೆ ಮಾಡೋದೇ ಒಂದರ್ಥದಲ್ಲಿ ಸಾಂಸ್ಕೃತಿಕ ಬೆದರಿಕೆ ಹಾಕಿದಂತೆ.

ಇನ್ನು ಎರಡನೇ ಕಾರಣವೂ ಅಷ್ಟೇ ಸವಕಲು. ಕಾವೇರಿ ವಿವಾದದಲ್ಲಿ ಏನನ್ನಾದರು ಮಾಡಲು ಪಾಪ ದರ್ಶನ್ ಚುನಾಯಿತ ಜನಪ್ರತಿನಿಧಿಯೇನಲ್ಲ. ಒಬ್ಬ ಕಲಾವಿದನಾಗಿ, ತನ್ನ ಕಲಾಬಳಗದ ಜೊತೆಗೂಡಿ ಯಾವ ಪ್ರತಿಭಟನೆಯನ್ನು ದಾಖಲಿಸಬೇಕಿತ್ತೊ ಅದನ್ನು ದರ್ಶನ್ ಮಾಡಿದ್ದಾರೆ. ಅದಕ್ಕಿಂತ ಹೆಚ್ಚಿನದನ್ನು ಆತನಿಂದ ನಿರೀಕ್ಷಿಸಲಿಕ್ಕಾಗದು. ಈಗ ಆತನ ಪ್ರಚಾರಕ್ಕೆ ಆ ನೆಪವಿಟ್ಟುಕೊಂಡು ಅಡ್ಡಿಪಡಿಸೋದು ರಾಜಕಾರಣವಲ್ಲದೆ ಮತ್ತೇನೂ ಅಲ್ಲ.

ಅಭಿಮಾನವನ್ನು ಅಡ್ಡವಿಟ್ಟುಕೊಂಡು ದರ್ಶನ್ ಪ್ರಚಾರಕ್ಕೆ ಅಡ್ಡಿಪಡಿಸೋ ದರ್ದು ಜೆಡಿಎಸ್‍ಗೆ ಏನಿತ್ತು ಅಂತ ಕೆದಕಲು ಶುರು ಮಾಡಿದರೆ ಚಾಮುಂಡೇಶ್ವರಿ ಕ್ಷೇತ್ರದ ಜಾತಿ ಚುನಾವಣೆಯ ರಂಗು ತೆರೆದುಕೊಳ್ಳುತ್ತೆ. ದೇವೇಗೌಡರ ಕುಟುಂಬದ ವೈಯಕ್ತಿಕ ಸಿಟ್ಟಿಗೆ ತುತ್ತಾಗಿರುವ ಸಿದ್ರಾಮಯ್ಯರನ್ನು ಸೋಲಿಸಲು ಚಾಮುಂಡೇಶ್ವರಿಯಲ್ಲಿ ಭರ್ಜರಿ ಜಾತಿ ರಣತಂತ್ರವನ್ನೇ ಹೆಣೆಯಲಾಗಿದೆ. ಸಿದ್ರಾಮಯ್ಯ ರನ್ನು ಒಕ್ಕಲಿಗರ ವಿರೋಧಿಯಂತೆ ಬಿಂಬಿಸಿ ಕ್ಷೇತ್ರದಲ್ಲಿರುವ ಒಕ್ಕಲಿಗರ ನಡುವೆ ಒಂದು ಬಗೆಯ ಕಡುಕೆಟ್ಟ ಉನ್ಮತ್ತ ಒಗ್ಗಟ್ಟನ್ನು ಹುಟ್ಟಿಸಲಾಗಿದೆ. ಹೀಗೆ ಜಾತಿ ರಾಜಕಾರಣವನ್ನು ರೊಚ್ಚಿಗೆಬ್ಬಿಸದಿದ್ದರೆ ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯರನ್ನು ಮಣಿಸೋದು ಕಷ್ಟ ಅನ್ನೋದು ಜೆಡಿಎಸ್ ಅಭ್ಯರ್ಥಿ ಜಿ,ಟಿ,ದೇವೇಗೌಡರಿಗೆ ಸ್ಪಷ್ಟವಾಗಿತ್ತು. ಯಾಕೆಂದರೆ 2006ರ ಉಪಚುನಾವಣೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್ ಪಾರ್ಟಿಗಳು ಜಂಟಿಯಾಗಿ ಸಿದ್ರಾಮಯ್ಯರನ್ನು ಸೋಲಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಿರಲಿಲ್ಲ. ಆ ಮಟ್ಟಕ್ಕೆ ಸಿದ್ರಾಮಯ್ಯ ಚಾಮುಂಡೇಶ್ವರಿಯಲ್ಲಿ ತಮ್ಮದೇ ಮತಬ್ಯಾಂಕ್ ಹೊಂದಿದ್ದಾರೆ. ಅಂತದ್ದರಲ್ಲಿ ಈಗ ಸಿಎಂ ಆಗಿರುವ ಅವರನ್ನು ಅಲ್ಲಿ ಸೋಲಿಸೋದು ಅಂದ್ರೆ ಸುಮ್ನೇ ಮಾತಾ?

ಅದೇ ಕಾರಣಕ್ಕೆ ಒಕ್ಕಲಿಗ ಜಾತಿ ಕೆಮಿಸ್ಟ್ರಿಯನ್ನೇ ಜೆಡಿಎಸ್ ಅಲ್ಲಿ ವಿಪರೀತ ನಂಬಿ ಕೂತಿದೆ. ದರ್ಶನ್ ಬಂದು ಪ್ರಚಾರ ಮಾಡಿದರೆ ಒಕ್ಕಲಿಗರ ಜಾತಿ ಮತಗಳ ಈ ಕಟ್ಟು ಮುಕ್ಕಾಗಿ ಬಿಡುತ್ತೆ ಎಂಬ ಆತಂಕ ಜೆಡಿಎಸ್ ಅಭ್ಯರ್ಥಿಗೆ ಶುರುವಾಗಿದ್ದೇ ಈ ಪ್ರತಿಭಟನೆ ಹಿಂದಿರುವ ಅಸಲೀ ಕಾರಣ. ಹಳೇ ಮೈಸೂರು ಪ್ರಾಂತ್ಯದಲ್ಲಿ ಪ್ರಭಾವಿ ಎನಿಸಿಕೊಂಡಿರುವ ಒಕ್ಕಲಿಗರಿಗೆ, ಅದರಲ್ಲೂ ಒಕ್ಕಲಿಗ ಸಮುದಾಯದ ಯುವಜನರಿಗೆ ದರ್ಶನ್ ಎಂದರೆ ಐಕಾನ್ ಇದ್ದಂತೆ. ಆತ ಒಮ್ಮೆ ಕೈಬೀಸಿದರೆ ಅಭಿಮಾನದ ಹುಚ್ಚು ಹೊಳೆಯಲ್ಲಿ ಅವರೆಲ್ಲಿ ಕೊಚ್ಚಿ ಹೋಗುತ್ತಾರೋ ಎಂಬ ಆತಂಕ ಆ ಪ್ರತಿಭಟನೆಯನ್ನು ಆಯೋಜಿಸಿದೆ.

ವಿಪರ್ಯಾಸವೆಂದರೆ, ನಟ ದರ್ಶನ್ ಒಕ್ಕಲಿಗ ಸಮುದಾಯದವರೇ ಅಲ್ಲ. ಆತ ಬಲಿಜ ಜಾತಿಯವ. ಆದಾಗ್ಯೂ ಒಕ್ಕಲಿಗರ ಸಾಂಸ್ಕøತಿಕ ಐಕಾನ್‍ನಂತಿರುವ ಅಂಬರೀಷ್‍ರ ಸಿನಿ ಹೀರೊ ವ್ಯಾಕ್ಯೂಮನ್ನು ತುಂಬಿದ ಬದಲೀ ನಟನಾಗಿ ದರ್ಶನ್ ತನ್ನನ್ನು ತಾನು ಬಿಂಬಿಸಿಕೊಂಡರೆ, ಅದಕ್ಕೆ ತಕ್ಕಂತೆ ದರ್ಶನ್‍ರ ಸಿನಿ ಪಯಣದ ಮೊದಲ ದಿನದಿಂದ ಇಲ್ಲಿಯವರೆಗೂ ಅಂಬರೀಶ್ ಆತನ ಗಾಡಫಾದರ್‍ನಂತೇ ವರ್ತಿಸಿದ್ದಾರೆ. ಹಾಗಾಗಿ ಒಕ್ಕಲಿಗ ಸಿನಿ ಪ್ರಿಯರು ಅಂಬರೀಷ್ ಮೇಲಿಟ್ಟಿದ್ದ ಅಷ್ಟೂ ಅಭಿಮಾನವನ್ನು ದರ್ಶನ್‍ಗೂ ಹರಿಸಿದ್ದಾರೆ. ಯಾವ ಮಟ್ಟಕ್ಕೆಂದರೆ, ದರ್ಶನ್‍ರನ್ನು ಒಕ್ಕಲಿಗ ಅಂತಲೇ ಸುಮಾರಷ್ಟು ಮಂದಿ ಭ್ರಮಿಸುವಷ್ಟರ ಮಟ್ಟಿಗೆ ಗೊಂದಲ ಗೂಡುಕಟ್ಟಿದೆ. ಇದೇ ಗೊಂದಲ ಎಲ್ಲಿ ತಮ್ಮ ಜಾತಿ ರಾಜಕಾರಣವನ್ನು ದಿಕ್ಕೆಡಿಸಿಬಿಡುತ್ತೋ ಎಂಬ ಭಯ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಪಾಳಯವನ್ನು ಕಾಡಿದೆ. ಅದರ ಫಲವಾಗಿಯೇ ಅಭಿಮಾನ, ಕಾವೇರಿ ವಿವಾದಗಳನ್ನು ಮುಂದಿಟ್ಟುಕೊಂಡು ದರ್ಶನ್‍ಗೆ ಧಿಕ್ಕಾರದ ಕೂಗು ಹುಟ್ಟಿಕೊಂಡಿದೆ.

ಈ ಸಿನಿ ಮಂದಿ ಪ್ರಸ್ತುತ ರಾಜಕೀಯದ ಅರಿವು ಇಲ್ಲದೆ, ಸೈದ್ಧಾಂತಿಕ ಬದ್ಧತೆ ಇಲ್ಲದೆ ಹತ್ತು ಹಲವು ಮರ್ಜಿಗಳಿಗೆ ಕಟ್ಟುಬಿದ್ದು ಬಣ್ಣದ ಬೊಂಬೆಯಂತೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸೋದು ಎಷ್ಟು ಅಸಮಂಜಸವೋ, ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಅಭಿಮಾನವನ್ನು ನೆಪ ಮಾಡಿಕೊಂಡು ಅದೇ ಸಿನಿ ಮಂದಿಯ ಚುನಾವಣಾ ಪ್ರಚಾರಕ್ಕೆ ಅಡ್ಡಿ ಮಾಡೋದು ಕೂಡಾ ಅಷ್ಟೇ ಅಸಂಬದ್ಧ ರಾಜಕಾರಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...