Homeಮುಖಪುಟದರ್ಶನ್‍ಗೆ ಧಿಕ್ಕಾರ, ಏನಿದರ ಹುನ್ನಾರ?

ದರ್ಶನ್‍ಗೆ ಧಿಕ್ಕಾರ, ಏನಿದರ ಹುನ್ನಾರ?

- Advertisement -
- Advertisement -
  • ಗಿರೀಶ್ ತಾಳಿಕಟ್ಟೆ |

ಇತ್ತೀಚೆಗೆ ನಟ ದರ್ಶನ್ ಸಿಎಂ ಸಿದ್ರಾಮಯ್ಯ ಪರ ಪ್ರಚಾರ ಮಾಡಲು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋದಾಗ ಒಂದಷ್ಟು ಜೆಡಿಎಸ್ ಕಾರ್ಯಕರ್ತರ ದಂಡು ದರ್ಶನ್‍ಗೆ ಧಿಕ್ಕಾರ ಕೂಗಿತ್ತು, ಹಾಗೆ ಧಿಕ್ಕಾರ ಕೂಗಲು ಆ ಪ್ರತಿಭಟನಾಕಾರರ ಬಳಿ ಇದ್ದದ್ದು ಎರಡು ಆಪಾದನೆಗಳು. ಮೊದಲನೆಯದ್ದು, ಎಲ್ಲಾ ಪಕ್ಷದಲ್ಲೂ ದರ್ಶನ್ ಅಭಿಮಾನಿಗಳು ಇರೋದ್ರಿಂದ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಬಾರದು. ಎರಡನೆಯದ್ದು, ಕಾವೇರಿ ವಿವಾದದಲ್ಲಿ ದರ್ಶನ್ ಏನೂ ಮಾಡದಿರುವುದರಿಂದ ಆತನಿಗೆ ಮತ ಕೇಳುವ ಹಕ್ಕಿಲ್ಲ!

ಒನ್ಸ್ ಎಗೇನ್, ಇವೆರಡೂ ಕಾರಣಗಳು ಜಸ್ಟ್ ನೆಪವಷ್ಟೇ. ಇವುಗಳ ಹಿಂದೆ ಇರೋದು ಮತ್ತದೇ ಪೊಲಿಟಿಕ್ಸ್, ಅದರಲ್ಲೂ ಜೆಡಿಎಸ್‍ನ ಜಾತಿ ಪೊಲಿಟಿಕ್ಸ್! ಮೊದಲನೇ ಕಾರಣವನ್ನೇ ತೆಗೆದುಕೊಳ್ಳೋಣ. ದರ್ಶನ್‍ಗಿರುವ ಪಕ್ಷಾತೀತ ಅಭಿಮಾನಿಗಳ ಕಾಳಜಿಯಿಂದ ಈ ಮಾತು ಹೇಳುವುದೇ ಆಗಿದ್ದರೆ, ಒಂದು ತಟಸ್ಥ ಅಭಿಮಾನಿ ಸಮೂಹವಾಗಿ ಅಂತಹ ಪ್ರತಿರೋಧವನ್ನು ಹೊರಹಾಕಬೇಕಿತ್ತು. ಅದನ್ನು ಬಿಟ್ಟು ಜೆಡಿಎಸ್ ಅನ್ನೊ ಒಂದು ಪೊಲಿಟಿಕಲ್ ಪಾರ್ಟಿಯ ಬ್ಯಾನರ್‍ನಡಿ, ಆ ಪಕ್ಷದ ಕಾರ್ಯಕರ್ತರಾಗಿ ಎದುರಾಳಿ ಪಕ್ಷದ ಪ್ರಚಾರ ಮಾಡಬೇಡ ಎಂದು ಅಭಿಮಾನವನ್ನು ಮುಂದೆ ಮಾಡೋದೇ ಒಂದರ್ಥದಲ್ಲಿ ಸಾಂಸ್ಕೃತಿಕ ಬೆದರಿಕೆ ಹಾಕಿದಂತೆ.

ಇನ್ನು ಎರಡನೇ ಕಾರಣವೂ ಅಷ್ಟೇ ಸವಕಲು. ಕಾವೇರಿ ವಿವಾದದಲ್ಲಿ ಏನನ್ನಾದರು ಮಾಡಲು ಪಾಪ ದರ್ಶನ್ ಚುನಾಯಿತ ಜನಪ್ರತಿನಿಧಿಯೇನಲ್ಲ. ಒಬ್ಬ ಕಲಾವಿದನಾಗಿ, ತನ್ನ ಕಲಾಬಳಗದ ಜೊತೆಗೂಡಿ ಯಾವ ಪ್ರತಿಭಟನೆಯನ್ನು ದಾಖಲಿಸಬೇಕಿತ್ತೊ ಅದನ್ನು ದರ್ಶನ್ ಮಾಡಿದ್ದಾರೆ. ಅದಕ್ಕಿಂತ ಹೆಚ್ಚಿನದನ್ನು ಆತನಿಂದ ನಿರೀಕ್ಷಿಸಲಿಕ್ಕಾಗದು. ಈಗ ಆತನ ಪ್ರಚಾರಕ್ಕೆ ಆ ನೆಪವಿಟ್ಟುಕೊಂಡು ಅಡ್ಡಿಪಡಿಸೋದು ರಾಜಕಾರಣವಲ್ಲದೆ ಮತ್ತೇನೂ ಅಲ್ಲ.

ಅಭಿಮಾನವನ್ನು ಅಡ್ಡವಿಟ್ಟುಕೊಂಡು ದರ್ಶನ್ ಪ್ರಚಾರಕ್ಕೆ ಅಡ್ಡಿಪಡಿಸೋ ದರ್ದು ಜೆಡಿಎಸ್‍ಗೆ ಏನಿತ್ತು ಅಂತ ಕೆದಕಲು ಶುರು ಮಾಡಿದರೆ ಚಾಮುಂಡೇಶ್ವರಿ ಕ್ಷೇತ್ರದ ಜಾತಿ ಚುನಾವಣೆಯ ರಂಗು ತೆರೆದುಕೊಳ್ಳುತ್ತೆ. ದೇವೇಗೌಡರ ಕುಟುಂಬದ ವೈಯಕ್ತಿಕ ಸಿಟ್ಟಿಗೆ ತುತ್ತಾಗಿರುವ ಸಿದ್ರಾಮಯ್ಯರನ್ನು ಸೋಲಿಸಲು ಚಾಮುಂಡೇಶ್ವರಿಯಲ್ಲಿ ಭರ್ಜರಿ ಜಾತಿ ರಣತಂತ್ರವನ್ನೇ ಹೆಣೆಯಲಾಗಿದೆ. ಸಿದ್ರಾಮಯ್ಯ ರನ್ನು ಒಕ್ಕಲಿಗರ ವಿರೋಧಿಯಂತೆ ಬಿಂಬಿಸಿ ಕ್ಷೇತ್ರದಲ್ಲಿರುವ ಒಕ್ಕಲಿಗರ ನಡುವೆ ಒಂದು ಬಗೆಯ ಕಡುಕೆಟ್ಟ ಉನ್ಮತ್ತ ಒಗ್ಗಟ್ಟನ್ನು ಹುಟ್ಟಿಸಲಾಗಿದೆ. ಹೀಗೆ ಜಾತಿ ರಾಜಕಾರಣವನ್ನು ರೊಚ್ಚಿಗೆಬ್ಬಿಸದಿದ್ದರೆ ಚಾಮುಂಡೇಶ್ವರಿಯಲ್ಲಿ ಸಿದ್ರಾಮಯ್ಯರನ್ನು ಮಣಿಸೋದು ಕಷ್ಟ ಅನ್ನೋದು ಜೆಡಿಎಸ್ ಅಭ್ಯರ್ಥಿ ಜಿ,ಟಿ,ದೇವೇಗೌಡರಿಗೆ ಸ್ಪಷ್ಟವಾಗಿತ್ತು. ಯಾಕೆಂದರೆ 2006ರ ಉಪಚುನಾವಣೆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಮತ್ತು ಜೆಡಿಎಸ್ ಪಾರ್ಟಿಗಳು ಜಂಟಿಯಾಗಿ ಸಿದ್ರಾಮಯ್ಯರನ್ನು ಸೋಲಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಿರಲಿಲ್ಲ. ಆ ಮಟ್ಟಕ್ಕೆ ಸಿದ್ರಾಮಯ್ಯ ಚಾಮುಂಡೇಶ್ವರಿಯಲ್ಲಿ ತಮ್ಮದೇ ಮತಬ್ಯಾಂಕ್ ಹೊಂದಿದ್ದಾರೆ. ಅಂತದ್ದರಲ್ಲಿ ಈಗ ಸಿಎಂ ಆಗಿರುವ ಅವರನ್ನು ಅಲ್ಲಿ ಸೋಲಿಸೋದು ಅಂದ್ರೆ ಸುಮ್ನೇ ಮಾತಾ?

ಅದೇ ಕಾರಣಕ್ಕೆ ಒಕ್ಕಲಿಗ ಜಾತಿ ಕೆಮಿಸ್ಟ್ರಿಯನ್ನೇ ಜೆಡಿಎಸ್ ಅಲ್ಲಿ ವಿಪರೀತ ನಂಬಿ ಕೂತಿದೆ. ದರ್ಶನ್ ಬಂದು ಪ್ರಚಾರ ಮಾಡಿದರೆ ಒಕ್ಕಲಿಗರ ಜಾತಿ ಮತಗಳ ಈ ಕಟ್ಟು ಮುಕ್ಕಾಗಿ ಬಿಡುತ್ತೆ ಎಂಬ ಆತಂಕ ಜೆಡಿಎಸ್ ಅಭ್ಯರ್ಥಿಗೆ ಶುರುವಾಗಿದ್ದೇ ಈ ಪ್ರತಿಭಟನೆ ಹಿಂದಿರುವ ಅಸಲೀ ಕಾರಣ. ಹಳೇ ಮೈಸೂರು ಪ್ರಾಂತ್ಯದಲ್ಲಿ ಪ್ರಭಾವಿ ಎನಿಸಿಕೊಂಡಿರುವ ಒಕ್ಕಲಿಗರಿಗೆ, ಅದರಲ್ಲೂ ಒಕ್ಕಲಿಗ ಸಮುದಾಯದ ಯುವಜನರಿಗೆ ದರ್ಶನ್ ಎಂದರೆ ಐಕಾನ್ ಇದ್ದಂತೆ. ಆತ ಒಮ್ಮೆ ಕೈಬೀಸಿದರೆ ಅಭಿಮಾನದ ಹುಚ್ಚು ಹೊಳೆಯಲ್ಲಿ ಅವರೆಲ್ಲಿ ಕೊಚ್ಚಿ ಹೋಗುತ್ತಾರೋ ಎಂಬ ಆತಂಕ ಆ ಪ್ರತಿಭಟನೆಯನ್ನು ಆಯೋಜಿಸಿದೆ.

ವಿಪರ್ಯಾಸವೆಂದರೆ, ನಟ ದರ್ಶನ್ ಒಕ್ಕಲಿಗ ಸಮುದಾಯದವರೇ ಅಲ್ಲ. ಆತ ಬಲಿಜ ಜಾತಿಯವ. ಆದಾಗ್ಯೂ ಒಕ್ಕಲಿಗರ ಸಾಂಸ್ಕøತಿಕ ಐಕಾನ್‍ನಂತಿರುವ ಅಂಬರೀಷ್‍ರ ಸಿನಿ ಹೀರೊ ವ್ಯಾಕ್ಯೂಮನ್ನು ತುಂಬಿದ ಬದಲೀ ನಟನಾಗಿ ದರ್ಶನ್ ತನ್ನನ್ನು ತಾನು ಬಿಂಬಿಸಿಕೊಂಡರೆ, ಅದಕ್ಕೆ ತಕ್ಕಂತೆ ದರ್ಶನ್‍ರ ಸಿನಿ ಪಯಣದ ಮೊದಲ ದಿನದಿಂದ ಇಲ್ಲಿಯವರೆಗೂ ಅಂಬರೀಶ್ ಆತನ ಗಾಡಫಾದರ್‍ನಂತೇ ವರ್ತಿಸಿದ್ದಾರೆ. ಹಾಗಾಗಿ ಒಕ್ಕಲಿಗ ಸಿನಿ ಪ್ರಿಯರು ಅಂಬರೀಷ್ ಮೇಲಿಟ್ಟಿದ್ದ ಅಷ್ಟೂ ಅಭಿಮಾನವನ್ನು ದರ್ಶನ್‍ಗೂ ಹರಿಸಿದ್ದಾರೆ. ಯಾವ ಮಟ್ಟಕ್ಕೆಂದರೆ, ದರ್ಶನ್‍ರನ್ನು ಒಕ್ಕಲಿಗ ಅಂತಲೇ ಸುಮಾರಷ್ಟು ಮಂದಿ ಭ್ರಮಿಸುವಷ್ಟರ ಮಟ್ಟಿಗೆ ಗೊಂದಲ ಗೂಡುಕಟ್ಟಿದೆ. ಇದೇ ಗೊಂದಲ ಎಲ್ಲಿ ತಮ್ಮ ಜಾತಿ ರಾಜಕಾರಣವನ್ನು ದಿಕ್ಕೆಡಿಸಿಬಿಡುತ್ತೋ ಎಂಬ ಭಯ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಪಾಳಯವನ್ನು ಕಾಡಿದೆ. ಅದರ ಫಲವಾಗಿಯೇ ಅಭಿಮಾನ, ಕಾವೇರಿ ವಿವಾದಗಳನ್ನು ಮುಂದಿಟ್ಟುಕೊಂಡು ದರ್ಶನ್‍ಗೆ ಧಿಕ್ಕಾರದ ಕೂಗು ಹುಟ್ಟಿಕೊಂಡಿದೆ.

ಈ ಸಿನಿ ಮಂದಿ ಪ್ರಸ್ತುತ ರಾಜಕೀಯದ ಅರಿವು ಇಲ್ಲದೆ, ಸೈದ್ಧಾಂತಿಕ ಬದ್ಧತೆ ಇಲ್ಲದೆ ಹತ್ತು ಹಲವು ಮರ್ಜಿಗಳಿಗೆ ಕಟ್ಟುಬಿದ್ದು ಬಣ್ಣದ ಬೊಂಬೆಯಂತೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸೋದು ಎಷ್ಟು ಅಸಮಂಜಸವೋ, ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಅಭಿಮಾನವನ್ನು ನೆಪ ಮಾಡಿಕೊಂಡು ಅದೇ ಸಿನಿ ಮಂದಿಯ ಚುನಾವಣಾ ಪ್ರಚಾರಕ್ಕೆ ಅಡ್ಡಿ ಮಾಡೋದು ಕೂಡಾ ಅಷ್ಟೇ ಅಸಂಬದ್ಧ ರಾಜಕಾರಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...