Homeಅಂಕಣಗಳುದಲಿತರ ಮೇಲಿನ ದೌರ್ಜನ್ಯ ನ್ಯಾಯಾಂಗಕ್ಕೆ ಕಾಣುತ್ತಿಲ್ಲವೇ?

ದಲಿತರ ಮೇಲಿನ ದೌರ್ಜನ್ಯ ನ್ಯಾಯಾಂಗಕ್ಕೆ ಕಾಣುತ್ತಿಲ್ಲವೇ?

- Advertisement -
- Advertisement -

ಕಳೆದ ಮಾರ್ಚ್ 20ರಂದು ಸುಪ್ರೀಂಕೋರ್ಟಿನ ನ್ಯಾಯಮೂರ್ತಿಗಳಾದ ನ್ಯಾ.ಆದರ್ಶ್ ಗೋಯಲ್ ಮತ್ತು ಯು.ಯು.ಲಲಿತ್ ಅದರನ್ನೊಳಗೊಂಡ ನ್ಯಾಯಪೀಠ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯಗಳ ತಡೆ) ಕಾಯ್ದೆ-1989ಕ್ಕೆ ಸಂಬಂಧಿಸಿದಂತೆ ಒಂದು ಪವಿತ್ರವಾದ ತೀರ್ಪನ್ನು ನೀಡಿತು. “ಸುಭಾಶ್ ಕಾಶಿನಾಥ್ ವಿರುದ್ಧ ಮಹಾರಾಷ್ಟ್ರ ಸರ್ಕಾರ ಹೆಸರಿನ ಪ್ರಕರಣವನ್ನು ವಿಚಾರಣೆ ನಡೆಸುತ್ತಾ ದೇಶದಲ್ಲಿ ಸ.ಜಾ ಮತ್ತು ಪ.ತಂ(ದೌರ್ಜನ್ಯಗಳ…) ಕಾಯ್ದೆಯನ್ನು ಬಳಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸುವುದರ ಮೂಲಕ ದಲಿತನು ಈ ಕಾಯ್ದೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಂದೂ, ಇದರಿಂದಾಗಿ ಮೇಲ್ಜಾತಿಗಳು ಉದ್ದೇಶಪೂರ್ವಕವಾಗಿ ತೊಂದರೆ ಅನುಭವಿಸುವಂತಾಗಿದೆಯೆಂದು ಅಭಿಪ್ರಾಯ ಪಟ್ಟ ನ್ಯಾಯಾಲಯ ಈ ಕಾಯ್ದೆಯನ್ನು ಪುನರ್ ಸಂಯೋಜಿಸಿ ಕೆಲವು ತಿದ್ದುಪಡಿಗಳನ್ನು ಮಾಡುವುದರ ಮೂಲಕ ಕಾಯ್ದೆಯು ಅನಗತ್ಯವಾಗಿ ದುರುಪಯೋಗ ಆಗುವುದನ್ನು ಮತ್ತು ಮೇಲ್ಜಾತಿಯವರು ತೊಂದರೆ ಅನುಭವಿಸದಂತೆ ಹೇಳಿತ್ತು. ಸುಪ್ರೀಂಕೋರ್ಟ್ ಪ್ರಕಾರ ಈ ಕಾಯ್ದೆಯ ಅಡಿಯಲ್ಲಿ ಆಗಿರುವಂತೆ ಜಾಮೀನುರಹಿತ ಬಂಧಿಸುವುದನ್ನು ಬದಲಾಯಿಸಿ ಈ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸುವ ಮುಂಚೆ ವಿಸ್ತøತ ವಿಚಾರಣೆ ನಡೆಸಬೇಕೆಂದು ಅವಶ್ಯಕತೆ ಇದ್ದರೆ ನಿರೀಕ್ಷಣಾ ಜಾಮೀನು ಪಡೆಯಲು ಆಪಾದಿತನಿಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿತ್ತು. ಈ ತೀರ್ಪು ಪ್ರಕಟವಾದ ಬೆನ್ನಿಗೆ ಈ ತೀರ್ಪನ್ನು ವಿರೋಧಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆದವು. ತೀರ್ಪಿನ ಪರವಾಗಿ ಮತ್ತು ತೀರ್ಪಿನ ವಿರುದ್ಧವಾಗಿ ಚರ್ಚೆಗಳು ನಡೆದವು ಮತ್ತು ಈಗಲೂ ನಡೆಯುತ್ತಲೇ ಇವೆ. ದೇಶದೆಲ್ಲೆಡೆ ಈ ತೀರ್ಪಿನ ವಿರುದ್ಧ ಕಂಡುಬಂದ ದಲಿತರ ಪ್ರತಿರೋಧವನ್ನು ಗಮನಿಸಿ ಕೇಂದ್ರಸರ್ಕಾರ ಸುಪ್ರೀಂಕೋರ್ಟ್‍ಗೆ ಈ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ ನಾಟಕವೂ ನಡೆಯಿತು.
ತೀರ್ಪಿನ ಪರ-ವಿರೋಧ ಚರ್ಚೆಗಳ ಆಚೆಗೆ ನಮ್ಮ ದೇಶಕ್ಕೆ ಇಂತಹದೊಂದು ಕಾಯ್ದೆಯ ಅಗತ್ಯವಾದರೂ ಏಕಿದೆ ಎನ್ನುವುದನ್ನು ಪರಿಶೀಲಿಸಿದರೆ ಈ ತೀರ್ಪಿನ ಹಾದಿರುವ ಮತ್ತು ತೀರ್ಪಿಗೆ ಅನುಗುಣವಾಗಿ ಈ ಕಾಯ್ದೆಗೆ ತಿದ್ದುಪಡಿಗಳಾದರೆ ಎಂತಹ ಪರಿಣಾಮಗಳಾಗಬಹುದು ಎನ್ನುವುದು ಅರ್ಥವಾಗುತ್ತದೆ. ಜಾತಿಯ ಕಾರಣಕ್ಕೆ ಮೇಲು-ಕೀಳು ಎನ್ನುವ ಅಪಮಾನತೆಯನ್ನು ಸೃಷ್ಟಿಸಿ ತಳ ಸಮುದಾಯಗಳ ಮೇಲೆ ನಿರಂತರವಾಗಿ ಶೋಷಣೆ, ದೌರ್ಜನ್ಯಗಳನ್ನು ಎಸಗುತ್ತಿರುವ ದೇಶ ನಮ್ಮದು. ಅಸ್ಪøಶ್ಯತೆ, ಅಸಮಾನತೆಗಳ ಭೀಕರತೆಯನ್ನು ಮನಗಂಡೆ ನಮ್ಮ ಹಿರಿಯರು ಸ್ವಾತಂತ್ರ್ಯದ ನಂತರ ಜಾರಿಯಾದ ಸಂವಿಧಾನದಲ್ಲಿ ಅಸ್ಪøಶ್ಯತೆ ಆಚರಣೆ ಮತ್ತು ಜಾತಿಯ ಹೆಸರಿನಲ್ಲಿ ಅವಮಾನ, ಶೋಷಣೆ ಮಾಡುವುದನ್ನು ಕಾನೂನುಬಾಹಿರ ಎಂದು ಪರಿಗಣಿಸಿ ಅಸ್ಪøಶ್ಯತೆ ಆಚರಣೆಯನ್ನು ಅಪರಾಧವೆಂದು ಘೋಷಿಸಿ, ಸಂವಿಧಾನದಲ್ಲಿ ಅಳವಡಿಸಿಕೊಂಡರು.
ಆದರೆ ಸಂವಿಧಾನದಲ್ಲಿ ಅಕ್ಷರರೂಪದಲ್ಲೇ ಉಳಿದ ಕಾನೂನುಗಳಿಗೆ ಸಂಪೂರ್ಣ ವಿರುದ್ಧವಾಗಿ ದೇಶ ನಡೆದುಕೊಳ್ಳ ತೊಡಗಿದಾಗ, ಸ್ವಾತಂತ್ರ್ಯ ಬಂದು ನಾಲ್ಕು ದಶಕಗಳ ನಂತರ 1989ರಲ್ಲಿ ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳ (ದೌರ್ಜನ್ಯದ ತಡೆ)ಕಾಯ್ದೆ ಜಾರಿಗೆ ತರಲಾಯಿತು. ಆ ಮೂಲಕ ತಮ್ಮ ಮೇಲಿನ ದೌರ್ಜನ್ಯಗಳಿಂದ ರಕ್ಷಣೆ ಪಡೆಯುವ ಮತ್ತು ನ್ಯಾಯಾಲಯದ ಮೂಲಕ ತಮಗಾದ ದೌರ್ಜನ್ಯಕ್ಕೆ ನ್ಯಾಯ ಪಡೆಯುವ ಅಧಿಕಾರವನ್ನು ಈ ಕಾಯ್ದೆ ದಲಿತರಿಗೆ ಒದಗಿಸಿತ್ತು. ಈಗ ದುರುಪಯೋಗದ ಹೆಸರಿನಲ್ಲಿ ಈ ಕಾಯ್ದೆಯನ್ನು ಸಂಪೂರ್ಣವಾಗಿ ದುರ್ಬಲಗೊಳಿಸಲು ಪ್ರಯತ್ನಿಸುವ ಸುಪ್ರೀಂಕೋರ್ಟಿನ ನಡೆ ದಲಿತರಿಗೆ ಇದ್ದ ಏಕೈಕ ರಕ್ಷಣೆಯ ಅಸ್ತ್ರವನ್ನು ಕಿತ್ತುಕೊಳ್ಳುತ್ತಿದೆ.
ಸರಿ, ಈ ಕಾಯ್ದೆ ದುರುಪಯೋಗವಾಗುತ್ತಿದ್ದು, ಮೇಲ್ಜಾತಿಗಳಿಗೆ ಅನ್ಯಾಯವಾಗುತ್ತಿದೆ ಎನ್ನುವ ನ್ಯಾಯಾಲಯ ಈ ಕಾಯ್ದೆ ಜಾರಿಗೆ ಬಂದ ನಂತರದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ನಿಜವಾಗಿಯೂ ಕಡಿಮೆಯಾಗಿವೆಯೇ ಎಂಬುದನ್ನು ಗಮನಿಸಿದರೆ ವಾಸ್ತವದ ಚಿತ್ರಣ ಬೇರೆಯೇ ಇರುವುದು ಗೊತ್ತಾಗುತ್ತದೆ. ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ನ್ಯಾಷನಲ್ ಕ್ರೈಂ ರೀಸರ್ಚ್ ಬ್ಯೂರೋದಲ್ಲಿರುವ ಅಂಕಿ ಅಂಶಗಳನ್ನು ಒಂದು ಸಾರಿ ಇಣುಕಿ ನೋಡಿದರೆ ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ವಿರಾಟ ದರ್ಶನವಾಗುತ್ತದೆ. ಕೇವಲ ದಾಖಲಾಗುವ ಪ್ರಕರಣಗಳ ಸಂಖ್ಯೆಯೇ ಬೆಟ್ಟ ಬೀಳಿಸುವ ಹಾಗಿದ್ದರೆ, ದಾಖಲಾಗದೇ ಪೊಲೀಸ್ ಠಾಣೆಯಲ್ಲಿಯೇ ಮುಚ್ಚಿಹೋಗುವ ಪ್ರಕರಣಗಳ ಸಂಖ್ಯೆ ಇನ್ನೆಷ್ಟಿರಬಹುದು ಎಂಬುದು ಗೊತ್ತಾಗುತ್ತದೆ. ತಮ್ಮ ಮೇಲಿನ ದೌರ್ಜನ್ಯಗಳನ್ನು ಪ್ರಶ್ನಿಸಿ ದೂರು ದಾಖಲಿಸಲು ಪೊಲೀಸ್ ಠಾಣೆಯ ಬಾಗಿಲು ತಟ್ಟಿದರೆ ದಲಿತರಿಗೆ ಎದುರಾಗುವ ಸಂಕಷ್ಟಗಳನ್ನು ನಿವಾರಿಸಲೆಂದೇ ಪ್ರತ್ಯೇಕ ಕಾಯ್ದೆಯನ್ನು ರೂಪಿಸಬೇಕಾದಷ್ಟು ಭೀಕರ ಸ್ಥಿತಿ ನಮ್ಮಲ್ಲಿದೆ. ದೌರ್ಜನ್ಯ ಪ್ರಕರಣ ದಾಖಲಿಸಲು ಬರುವ ದಲಿತರ ಮೇಲೆಯೇ ಕಳ್ಳತನ, ವಂಚನೆ, ಕೊಲೆ, ದರೋಡೆ ಇನ್ನೂ ಮುಂದುವರೆದು ನಕ್ಸಲರು, ಡಕಾಯಿತರು ಎಂದು ಆರೋಪಿಸಿ ಸುಳ್ಳು ಮೊಕದ್ದಮೆ ದಾಖಲಿಸಿ ತಮ್ಮ ಮೇಲಿನ ದೌರ್ಜನ್ಯಗಳ ಬಗ್ಗೆ ಮಾತನಾಡದೇ ಇರುವಂತೆ ಮಾಡಬಲ್ಲ ವ್ಯವಸ್ಥಿತ ಕ್ರೌರ್ಯ ನಿರಂತರವಾಗಿ ಕೆಲಸ ಮಾಡುತ್ತಿವೆ. … ಯಲ್ಲಿನ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಆದರೆ ಅದೇ ಕಾಲದಲ್ಲಿ ಈ ರೀತಿ ಏರಿಕೆಯಾದ ದೌರ್ಜನ್ಯ ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗುತ್ತಿರುವ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿದೆ. ಮೇಲೆ ಹೇಳಿದ ಅಂಶಗಳು ಈ ರೀತಿ ಇಳಿಕೆಯಾಗಲು ಕಾರಣ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಅಧ್ಯಯನಗಳ ಪ್ರಕಾರ ಇದಕ್ಕೆ ಉದಾಹರಣೆಯಾಗಿ 2016ರಲ್ಲಿ ದೇಶದ ನ್ಯಾಯಾಲಯಗಳಲ್ಲಿ ದಾಖಲಾದ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಶೇ89.7 ರಷ್ಟು ಪ್ರಕರಣಗಳನ್ನು ಇನ್ನೂ ವಿಚಾರಣೆಗೆ ತೆಗೆದುಕೊಂಡಿಲ್ಲ. ಇನ್ನು ಪರಿಶಿಷ್ಟ ಪಂಗಡಗಳಲ್ಲಿ ಶೇ 87.2ರಷ್ಟು ಪ್ರಕರಣಗಳು ವಿಚಾರಣೆ ಆಗದೇ ಹಾಗೆಯೇ ಉಳಿದಿದೆ. ಶೇ80ಕ್ಕಿಂತ ಹೆಚ್ಚು ಪ್ರಕರಣಗಳನ್ನು ವಿಚಾರಣೆಯೇ ನಡೆಸುತ್ತಿಲ್ಲ ಎಂದಾಗ ದಲಿತರಿಗೆ ನ್ಯಾಯ ಸಿಗುತ್ತದೆ ಎಂದಾಗಲೀ ಮೇಲ್ಜಾತಿಯವರಿಗೆ ಶಿಕ್ಷೆ ಆಗುತ್ತಿದೆ ಎಂದಾಗಲಿ ಹೇಗೆ ಅರ್ಥಮಾಡಿಕೊಳ್ಳುವುದು. ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡದೇ ಕೊಳೆಯುತ್ತಿರುವ ಪ್ರಕರಣಗಳ ಕಥೆ ಹೀಗಿದ್ದರೆ ಪ್ರತಿ ಗಂಟೆಗೆ ಹತ್ತರಂತೆ ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳು ಜರುಗುತ್ತಿವೆ.
ಪ್ರತಿಯೊಂದಕ್ಕೂ ಸಾಕ್ಷಿ, ಪುರಾವೆಗಳನ್ನು ಕೇಳುವ ನ್ಯಾಯಾಲಯಗಳಿಗೆ ಖೈರ್ಲಾಂಜಿ ಕಂಬಾಲದಲ್ಲಿಲರುವಂತಹ ಭೀಕರ ಕ್ರೌರ್ಯದ ಉದಾಹರಣೆಗಳಲ್ಲಿ ಜಾತಿಯ ಕಾರಣಕ್ಕೆ ದೌರ್ಜನ್ಯ ಎಸಗಿರುವಂತೆ ಕಾಣುವ ಸಾಕ್ಷ್ಯಾಧಾರಗಳು ಸಿಕ್ಕುವುದಿಲ್ಲ ಎಂದರೆ ಈ ದೇಶ ನ್ಯಾಯಾಂಗ ದಲಿತರಿಗೆ ಎಷ್ಟರಮಟ್ಟಿಗೆ ನ್ಯಾಯ ನೀಡಲು ನಿಂತಿರಬಹುದು ಎನ್ನುವುದು ಅರ್ಥವಾಗುತ್ತಿದೆ. ಖೈರ್ಲಾಂಜಿ,ಕಂಬಾಪಲ್ಲಿಯಲ್ಲಿನ ಘಟನೆಗಳಲ್ಲಿ ಶೋಷಣೆಗೊಳಗಾದವರು ಮತ್ತು ಶೋಷಣೆಯ ಸಾಕ್ಷಿನುಡಿಯುತ್ತಿದ್ದವರು ಪ್ರತಿಕೂಲ ಹೇಳಿಕೆ ನೀಡುವ ಮಟ್ಟಕ್ಕೆ ಹೋಗುತ್ತಾರೆ ಎಂದರೆ ದಲಿತರ ಮೇಲೆ ದËರ್ಜನ್ಯಗಳನ್ನು ತಡೆಗಟ್ಟಲು ಇನ್ನು ಹೆಚ್ಚು ಕಠಿಣವಾದ ಕಾಯ್ದೆಗಳನ್ನು ರೂಪಿಸುವ ಅವಶ್ಯಕತೆ ಇದೆಯೇ ಹೊರತು ಇರುವ ಕಾಯ್ದೆಗಳನ್ನು ದುರ್ಬಲಗೊಳಿಸುವುದಲ್ಲ. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಗಳಿದ್ದರೂ ದಲಿತರಿಗೆ ತಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ಹೋರಾಡುವುದಕ್ಕೆ ಇರುವ ಏಕೈಕ ಅಸ್ತ್ರವು ದುರುಪಯೋಗದ ಹೆಸರಲ್ಲಿ ಕಿತ್ತುಕೊಳ್ಳಲು ಬಯಸುವ ಸುಪ್ರೀಂಕೋರ್ಟ್ ದಲಿತರಿಗೆ ಶಿಕ್ಷಣ ನೀಡಲು, ಭೂಮಿ ನೀಡಲು, ವಸತಿ ನೀಡಲು, ಉದ್ಯೋಗ ನೀಡಲು ಇರುವ ಎಷ್ಟೋ ಕಾನೂನುಗಳು ಸಮರ್ಪಕವಾಗಿ ಜಾರಿಯಾಗದೇ ದಲಿತರಿಗೆ ಮೀಸಲಿಟ್ಟ ಹಣ ಉಪಯೋಗವಾಗದೇ ಇರುವುದು ಕಾನೂನಿನ ದುರುಪಯೋಗ ಎನ್ನಿಸುವುದಿಲ್ಲವೇ…? ಬಹುತೇಕ ಮೇಲ್ಜಾತಿಗಳ ಅಡಿತದಲ್ಲೇ ಇರುವ ಸರ್ಕಾರ ಮತ್ತು ಆಡಳಿತಶಾಹಿಗಳು ದಲಿತರ ಅಭಿವೃಧ್ಧಿ ಇರುವ ಕಾನೂನುಗಳನ್ನು ಉದ್ದೇಶಪೂರ್ವಕವಾಗಿ ನಿಷ್ಕ್ರಿಯಗೊಳಿಸುತ್ತಿರುವುದು ಸಂವಿಧಾನದ ದುರುಪಯೋಗ ಅಲ್ಲವೇ..?
ದಲಿತನೊಬ್ಬ ಒಳ್ಳೆಯ ಬಟ್ಟೆ ಹಾಕಿದ ಕಾರಣಕ್ಕೆ ಮದುವೆ ಸಂದರ್ಭದಲ್ಲಿ ಕುದುರೆ ಸವಾರಿ ಮಾಡಿದ್ದಕ್ಕೆ, ದಪ್ಪನಾಗಿ ಮೀಸೆ ಬಿಟ್ಟಿದ್ದಕ್ಕೆ, ಹಿಡಿದು ಚಚ್ಚಿ ಸಾಯಿಸಿದ ಘಟನೆಗಳು ದಿನಬೆಳಗಾದರೆ ಬೆಳಕಿಗೆ ಬರುತ್ತಿರುವುದು ನಮ್ಮ ನ್ಯಾಯಾಲಯಗಳ ಕಣ್ಣಿಗೆ ಕಾಣುವುದಿಲ್ಲವೇಕೆ..? ಇವೆಲ್ಲವನ್ನು ಮೀರಿ ದಲಿತನನ್ನು ಮದುವೆಯಾದ ಕಾರಣಕ್ಕೆ ತಮ್ಮ ಮಕ್ಕಳನ್ನೇ ಮರ್ಯಾದೆಯ ಹೆಸರಿನಲ್ಲಿ ಭೀಕರವಾಗಿ ಕೊಲೆ ಮಾಡುತ್ತಿರುವ ದಲಿತ ಹುಡುಗರನ್ನು ಕೊಂದು ಅವನ ಕುಟುಂಬವನ್ನು ಬಹಿಷ್ಕಾರ ಹಾಕುತ್ತಿರುವ ಘಟನೆಗಳು ದಿನನಿತ್ಯದ ಸುದ್ದಿಗಳಾಗಿ ಹೋಗುತ್ತಿರುವಾಗ ದಲಿತರ ಮೇಲಿನ ದೌರ್ಜನ್ಯ ಕಾಯ್ದೆಯನ್ನು ದುರ್ಬಲಗೊಳಿಸುತ್ತಿರುವುದರ ಹಿಂದಿನ ಮರ್ಮವೇನು ಎಂಬುದನ್ನು ಅರ್ಥ ಮಾಡಿಕೊಳ್ಳಲು ಅದರ ಪಾಂಡಿತ್ಯದ ಅವಶ್ಯಕತೆ ಇಲ್ಲ.
ಸುಪ್ರೀಂಕೋರ್ಟ್‍ನ ಪ್ರಸ್ತುತ ತೀರ್ಪನ್ನು ವಿರೋಧಿಸಿ ದೇಶದ ವಿರುಧ್ಧ ಕಡೆಗಳಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ 8 ಜನ ದಲಿತ ಪ್ರತಿಭಟನಾಕಾರರನ್ನು ಗುಂಡಿಟ್ಟು ಸಾಯಿಸುವ ಸರ್ಕಾರಗಳು ಈ ತೀರ್ಪನ್ನು ಜಾರಿಗೆ ತಂದು ಆದಷ್ಟು ಬೇಗ ಕಾಯ್ದೆಯನ್ನು ದುರ್ಬಲಗೊಳಿಸಿ ಎಂದು ಆಗ್ರಹಿಸಿ ನಡೆದ ಸಮಾವೇಶ, ರ್ಯಾಲಿಗಳಿಗೆ ಬೆರಗಿ ತಾವು ಆದಷ್ಟು ಬೇಗ ಈ ಕ್ರಾಂತಿಯನ್ನು ದುರ್ಬಲಗೊಳಿಸುತ್ತೇವೆ ಎಂದು ಹೇಳಿಕೆ ನೀಡುವುದು ಈ ದೇಶದ ಸಂವಿಧಾನಿಕ ವ್ಯವಸ್ಥೆ ಎಷ್ಟು ಮಾತ್ರ ದಲಿತರ ಪರವಿದೆ ಎನ್ನುವುದನ್ನು ಸೂಚಿಸುತ್ತಿದೆ. ಸ್ವಾತಂತ್ರ್ಯ ನಂತರದ ಇಷ್ಟೂ ವರ್ಷಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಹೊರತುಪಡಿಸಿ ಬೇರೆ ಕಾಯ್ದೆಯೂ ದುರುಪಯೋಗವಾಗಿಲ್ಲವೇ..? ಆಗಿದ್ದರೆ ಅವೆಲ್ಲವನ್ನು ಬಿಟ್ಟು ಕ್ಷುಲ್ಲಕ ಕಾರಣ ನೀಡಿ ಸುಪ್ರೀಂಕೋರ್ಟ್ ಈ ಕಾಯ್ದಯಲ್ಲಿ ಸಂಪೂರ್ಣವಾಗಿ ದುರ್ಬಲಗೊಳಿಸುತ್ತಿರುವುದನ್ನು ಹೇಳುತ್ತಿದೆ..? ಇಷ್ಟುದಿನ ದಲಿತರ ಮೇಲಿನ ದೌರ್ಜನ್ಯಗಳಿಗೆ ನ್ಯಾಯಾಲಯದ ಮೆಟ್ಟಿಲೇರುತ್ತಿದ್ದ ದಲಿತರಿಗೆ ಇಂದು ನ್ಯಾಯಾಲಯವೇ ದೌರ್ಜನ್ಯ ಎಸಗುತ್ತಿರುವುದರಿಂದ ಸುಪ್ರೀಂಕೋರ್ಟ್‍ನ ಈ ನಡೆಯನ್ನು ದಲಿತರ ಮೇಲೆ ನ್ಯಾಯಾಂಗದ ದೌರ್ಜನ್ಯ ಎಂದು ಕರೆಯಬಹುದಲ್ಲವೇ..? ಸರಿ ಈಗ ನ್ಯಾಯ ಅರಸಿ ಹೋಗುವುದೆಲ್ಲಿಗೆ…?

– ನರಸಿಂಹಮೂರ್ತಿ ವಡ್ಡನಹಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...