Homeಕರ್ನಾಟಕದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ದಲಿತ ಯುವಕನ ಬೆತ್ತಲೆ ಪ್ರಕರಣ ಖಂಡಿಸಿ ಜೂನ್ 18 ರಂದು ಗುಂಡ್ಲುಪೇಟೆಯಲ್ಲಿ ಬೃಹತ್ ಜಾಥ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ?

- Advertisement -
- Advertisement -

| ನಾನುಗೌರಿ ಡೆಸ್ಕ್ |

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಇತ್ತೀಚಗೆ ನಡೆದ ದಲಿತ ಯುವಕನ ಅಮಾನುಷ ಬೆತ್ತಲೆ ಮೆರವಣಿಗೆ ಪ್ರಕರಣ ವಿರೋಧಿಸಿ, ಈ ರೀತಿಯ ಘಟನೆಗಳು ಮರುಕಳಿಸದಂತೆ ಜಾಗೃತಿ ಮೂಡಿಸಲು ಇದೇ ಜೂನ್ 18 ರಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಬೃಹತ್ ಜಾಥ ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಹಲವು ಮಂದಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಲು ನಿರ್ಧರಿಸಿದ್ದಾರೆ.

ಗುಂಡ್ಲುಪೇಟೆಯ ಪ್ರವಾಸಿ ಮಂದಿರದಲ್ಲಿ ಎಲ್ಲ ಪ್ರಗತಿಪರ ಸಂಘಟನೆಗಳ ವತಿಯಿಂದ ನಿನ್ನೆ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಘಟನೆ ನಡೆದ ಶನಿ ಮಹಾತ್ಮ ದೇವಸ್ಥಾನದಿಂದಲೇ ಬೃಹತ್ ಮೆರವಣಿಗೆ ಆರಂಭವಾಗಲಿದ್ದು, ಗುಂಡ್ಲುಪೇಟೆ ವರಗೆ ಕಾಲು ನಡಿಗೆ ಜಾಥಾ ಮತ್ತು ಗುಂಡ್ಲುಪೇಟೆ ಬಂದ್ ನಡೆಸಲು ಈ ಮೊದಲು ಎಲ್ಲರೂ ಒಕ್ಕೊರಲಿನಿಂದ ನಿರ್ಧರಿಸಿಲಾಗಿತ್ತು. ಆದರೆ 18ರಂದು ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆಗಳು ನಡೆಯುತ್ತಿದ್ದು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಬಂದ್ ಹಿಂತೆಗೆದುಕೊಂಡು ದೊಡ್ಡ ಜಾಥ ಮತ್ತು ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ.

ಸಂತ್ರಸ್ತ ಪ್ರತಾಪ್ ರವರು ಐ.ಎ.ಎಸ್ ಪರೀಕ್ಷೆ ಬರೆಯಲು ಹೋಗಿ ತಡವಾದ ಕಾರಣಕ್ಕೆ ಖಿನ್ನನಾಗಿದ್ದಾನೆ. ಆನಂತರ ನಡೆಯಬಾರದ ಘಟನೆಗಳೆಲ್ಲಾ ನಡೆದು ಮನನೊಂದಿದ್ದಾನೆ. ಇಂತಹ ಸಂದರ್ಭದಲ್ಲಿ ನಾವು ಬಂದ್ ಮಾಡಿ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ಬರೆಯುವವರಿಗೆ ತೊಂದರೆ ಕೊಡಬಾರದೆಂದು ಬಂದ್ ಹಿಂತೆಗೆದುಕೊಂಡಿದ್ದೇವೆ. ಬದಲಿಗೆ ದೊಡ್ಡ ಜಾಥಾ ನಡೆಸಿ ಬಂತೇಜಿಗಳ ನೇತೃತ್ವದಲ್ಲಿ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಲು ನಿರ್ಧರಿಸಿದ್ದಾರೆ. ಇಷ್ಟೊಂದು ತಾರತಮ್ಯ ಮತ್ತು ಅವಮಾನ ಮಾಡುವ ಈ ಧರ್ಮ ನಮಗ ಬೇಡ ಎಂದು ದಲಿತ ಸಂಘರ್ಷ ಸಮಿತಿಯ ಚೋರನಹಳ್ಳಿ ಶಿವಣ್ಣ ತಿಳಿಸಿದ್ದಾರೆ.

ಸದರಿ ಘಟನೆಗೆ ಸಂಬಂಧಿಸಿದಂತೆ ನಾಡಿನೆಲ್ಲಾ ಪ್ರಗತಿಪರ ಸಂಘಟನೆಗಳು, ಪ್ರಜ್ಞಾವಂತರು, ದಲಿತ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ತಮ್ಮ ತಮ್ಮ ಸ್ಥಳಗಳಲ್ಲಿ ಪ್ರತಿಭಟನೆಗಳನ್ನು ನಡೆಸಿ ಸರ್ಕಾರದ ಗಮನ ಸೆಳೆದಿವೆ. ಗುಂಡ್ಲುಪೇಟೆಯ ದಲಿತ ಸಂಘಟನೆಗಳು ಒಗ್ಗಟ್ಟಿನಿಂದ ದೂರು ದಾಖಲಿಸಿ ಎಲ್ಲಾ ಆರೋಪಿಗಳನ್ನೂ ಬಂಧಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. 
ಆದರೆ, ಅಷ್ಟಕ್ಕೇ ಸುಮ್ಮನಾದರೆ ಇದೊಂದು ಮಾಮೂಲಿ ಪ್ರಕರಣವಾಗಿ ಮರೆಯಾಗುತ್ತದೆ. ಜಾತಿವಾದಗಳಿಗೆ, ಧರ್ಮಾಂಧರಿಗೆ ಹಾಗೂ ಅಮಾನುಷವಾಗಿ ವರ್ತಿಸಿದ ಜನಗಳಿಗೆ ಹಾಗೂ ಜಡ್ಡುಹಿಡಿದ ವ್ಯವಸ್ಥೆಗೆ ಚುರುಕು ಮುಟ್ಟಿಸಿ ಆತ್ಮಸಾಕ್ಷಿ ಬಡಿದೆಬ್ಬಿಸಲು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ದಲಿತ ಹೋರಾಟಗಾರ ಡಾ. ಕೃಷ್ಣಮೂರ್ತಿ ಚಮರಂ ತಿಳಿಸಿದ್ದಾರೆ. 

ಕೃಷ್ಣಮೂರ್ತಿ ಚಮರಂ

ಈ ಹೋರಾಟ ಯಶಸ್ವಿಯಾಗಲು ಎಲ್ಲರ ಸಹಕಾರ ಭಾಗವಹಿಸುವಿಕೆ ಅಗತ್ಯ. ಆದ್ದರಿಂದ ನಾಡಿನೆಲ್ಲಾ ಪ್ರಜ್ಞಾವಂತ ಜನಪರ ಸಂಘಟನೆಗಳು ಎಂದಿನಂತೆ ಸ್ವಯಂಪ್ರೇರಿತವಾಗಿ ಗುಂಡ್ಲುಪೇಟೆಗೆ ಆಗಮಿಸಿ ಚಳವಳಿಗೆ ಬೆಂಬಲ ಸೂಚಿಸಿ, ಯಶಸ್ಸುಗೊಳಿಸಬೇಕೆಂದು ಚಮರಂ ರವರು ಮನವಿ ಮಾಡಿದ್ದಾರೆ.

ಸಭೆಯಲ್ಲಿ ಹಿರಿಯ ಹೋರಾಟಗಾರರಾಗ ಹರಿಹರ ಆನಂದ ಸ್ವಾಮಿ, ಎಂ.ಬಿ.ಶ್ರೀನಿವಾಸ್. ಡಾ. ಕೃಷ್ಣಮೂರ್ತಿ ಚಮರಂ, ಡಾ.ಮಹದೇವ ಭರಣಿ, ಸಿ.ಎಂ.ಕೃಷ್ಣಮೂರ್ತಿ, ಯರಿಯೂರು ಸಿ.ರಾಜಣ್ಣ, ಸೋಮಯ್ಯ ಮಲೆಯೂರು, ಅಶೋಕ ಪುರಂ ಪುನೀತ್.ಕೆಂ.ಎಂ, ನಾಗರಾಜ್, ಕಂದಹಳ್ಳಿ ನಾರಾಯಣ, ಅಣಗಳ್ಳಿ ಬಸವರಾಜ್, ಚೋರನಹಳ್ಳಿ ಶಿವಣ್ಣ, ಮುರುಡಗಳ್ಳಿ ಮಹದೇವು, ಎಡದೊರೆ ಮಹದೇವ, ಆಲಗೂಡು ಚಂದ್ರಶೇಖರ್, ಪುಟ್ಟಸ್ವಾಮಿ, ಸುರೇಶ್ ಮೌರಿ, ಕಾಗಲವಾಡಿ ಶಿವಣ್ಣ, ರಾಮ ಸಮುದ್ರ ಮಹೇಶ, ಸುಭಾಷ್ ಮಾಡ್ರಹಳ್ಳಿ, ಆರ್.ಸೋಮಣ್ಣ,  ಹೊನ್ನೆಗೌಡನಹಳ್ಳಿ ನಾಗಯ್ಯ, ಹಂಗಳ ಪ್ರಸಾದ್, ಗಿರೀಶ್ ಲಕ್ಕೂರು, ಕಂದೆಗಾಲ ಎಂ ಶಿವಣ್ಣ, ಉಮೇಶ ಮಂಗಲ, ರಂಗಸ್ವಾಮಿ, ಮುಂತಾದ ಅನೇಕರು ಭಾಗವಹಿಸಿದ್ದರು ಬೆಂಬಲ ಸೂಚಿಸಿದ್ದಾರೆ.

ಮನುಷ್ಯತ್ವ ಮರೆತಿರುವುದೇ ಈ ಅಮಾನವೀಯ ಘಟನೆಗೆ ಕಾರಣ- ಚಮರಂ

ಇಡೀ ಘಟನೆಯನ್ನು ಅವಲೋಕಿಸಿದರೆ ಮನುಷ್ಯರು ಎಷ್ಟು ಜಾತಿಗ್ರಸ್ಥರಾಗಿದ್ದಾರೆ ಎಂಬ ಆತಂಕ ಮೂಡುತ್ತಿದೆ. ಒಬ್ಬ ಯುವಕನನ್ನು ದಲಿತ ಎಂಬ ಕಾರಣಕ್ಕಾಗಿ ಬೆತ್ತಲೆ ಮೆರವಣಿಗೆ ಮಾಡುವಷ್ಟು ಕ್ರೂರ ಮನಸ್ಸುಗಳನ್ನು ಬದಲಾಯಿಸುವುದಾದರೆ ಹೇಗೆ? ಆ ಕ್ರೂರ ಮನಸ್ಸುಗಳು ಈಗಲೂ ತಮ್ಮ ಘೋರ ತಪ್ಪನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ. ಆತ ಮಾನಸಿಕ ಅಸ್ವಸ್ಥ, ವಿಗ್ರಹ ಕದಿಯಲು ಬಂದಿದ್ದ, ನಾವೇ ಪಂಚೆ ಕೊಟ್ಟೆವು, ದಲಿತ ಅಂತ ಗೊತ್ತಿರಲಿಲ್ಲ ಎಂಬೆಲ್ಲಾ ಕಟ್ಟುಕಥೆಗಳನ್ನು ಕಟ್ಟಿ ತಾವು ಕೇಸಿನಿಂದ ಬಚಾವ್ ಆಗಲು ಪ್ರಯತ್ನಿಸುತ್ತಿದ್ದಾರೆ. ಆತ ಯಾವ ಜಾತಿಯೇ ಆಗಿರಲಿ, ಆ ಯುವಕನ ಸ್ಥಿತಿಯಲ್ಲಿ ತಾವಿದ್ದರೆ ಹೀಗೆ ಮಾಡುತ್ತಿದ್ದೇವೆ ಎಂದು ಆ ಜಾತಿವಾದಿಗಳು ಯೋಚಿಸದಷ್ಟರ ಮಟ್ಟಿಗೆ ದುಷ್ಟರಾಗಿಬಿಟ್ಟಿದ್ದಾರೆ.

ಇನ್ನು ಪೊಲೀಸ್ ಇಲಾಖೆ ಯಥಾಪ್ರಕಾರ ನಿರ್ಲಕ್ಷ್ಯ ತೋರಿದೆ. ವಿಷಯ ತಿಳಿದರೂ ತುಂಬಾ ತಡವಾಗಿ ಪೊಲೀಸರು ಬಂದಿದ್ದು ಮಾತ್ರವಲ್ಲದೇ ಪೊಲೀಸ್ ವಾಹನ ಚಾಲಕ ಶ್ರೀನಿವಾಸ ಸಂತ್ರಸ್ಥ ಯುವಕನಿಗೆ ಒದ್ದಿರುವುದು ಏನನ್ನು ಸೂಚಿಸುತ್ತದೆ? ಇನ್ನು ಪ್ರಕರಣದ ಎಒನ್ ಆರೋಪಿ ಅರ್ಚಕ ಶಿವಪ್ಪ ಎಂಬುವವರ ಹೆಸರನ್ನು ಎಫ್.ಐ.ಆರ್ ನಿಂದ ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ. ಇದು ಸರ್ವಥಾ ಸರಿಯಲ್ಲ. ಈಗಾದಲ್ಲಿ ಇಂತಹ ಕ್ರೂರ ಆಚರಣೆಗಳು ಮರಕಳಿಸುವುದರಲ್ಲಿ ಸಂದೇಹವೇ ಇಲ್ಲ.

ದುಷ್ಕೃತ್ಯದ ಆರೋಪಿಗಳು

ಈಗ ಐದು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಎ.ಎಸ್.ಐ ಮತ್ತು ವಾಹನ ಚಾಲಕ ಶ್ರೀನಿವಾಸನನ್ನು ಅಮಾನತು ಮಾಡಲಾಗಿದೆ. ಆದರೆ ಸಂತ್ರಸ್ತ ಪ್ರತಾಪ್ ಗೆ ಇಷ್ಟರಿಂದ ನ್ಯಾಯ ಸಿಗುವುದೇ? ತಪ್ಪಿತಸ್ಥರು ತಮ್ಮ ತಪ್ಪನ್ನು ಅರಿತು ಪ್ರಾಯಶ್ಚಿತ ಮಾಡಿಕೊಳ್ಳುತ್ತಾರೆಯೇ? ಇದು ಗುಂಡ್ಲುಪೇಟೆ ತಾಲ್ಲೂಕಿಗೆ ಮಾತ್ರವಲ್ಲ ಇಡೀ ಕರ್ನಾಟಕ, ದೇಶಕ್ಕೆ ಒಂದು ಸಂದೇಶ ನೀಡಬೇಕಿದೆ. ಜಾತಿವಾದಿಗಳಿಗೆ ಎಚ್ಚರಿಕೆ ನೀಡುವಂತೆ ಮಾಡಬೇಕಿದೆ. ಹಾಗಾಗಿ ಬಂದ್ ನಡೆಸಿ ಮುಂದಕ್ಕೂ ಕಾನೂನು ಮತ್ತು ಬೀದಿ ಹೋರಾಟವನ್ನು ಮುಂದುವರೆಸುತ್ತೇವೆಂದು ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಹಲವು ಕಡೆ ಘಟನೆ ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆದಿವೆ. ಅವುಗಳ ಕೆಲ ಚಿತ್ರಗಳು ಇಲ್ಲವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...