Homeರಾಜಕೀಯದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

ದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

- Advertisement -
- Advertisement -
  • ಟಿ.ಎನ್.ಷಣ್ಮುಖ |

ಕಳೆದ ಸಲ ಬಹುಪಾಲು `ಕೈ’ವಶವಾಗಿದ್ದ ದಾವಣಗೆರೆ ಜಿಲ್ಲೆಯಲ್ಲಿ ಈ ಸಲ ಬಿಜೆಪಿ ಪೈಪೋಟಿ ನೀಡುತ್ತಿದೆಯಾದರೂ ಹಳೆಯ ಫಲಿತಾಂಶ ಸಂಪೂರ್ಣ ಬುಡಮೇಲಾಗುವ ಸಾಧ್ಯತೆ ಇಲ್ಲ. ಒಟ್ಟು ಎಂಟು ಕ್ಷೇತ್ರಗಳ ಪೈಕಿ 2013ರಲ್ಲಿ ಕಾಂಗ್ರೆಸ್ ಏಳರಲ್ಲಿ ಗೆದ್ದಿದ್ದರೆ ಹರಿಹರ ಮಾತ್ರ ಜೆಡಿಎಸ್ ಪಾಲಾಗಿತ್ತು. ಒಂದು ಕಾಲಕ್ಕೆ ಅಖಂಡ ಪ್ರಾಬಲ್ಯ ಸಾಧಿಸಿದ್ದ ಬಿಜೆಪಿ ಶೂನ್ಯ ಸಾಧನೆ ಮೂಲಕ ನೆಲ ಕಚ್ಚಿತ್ತು.

ಈ ಸಲ ಸ್ಪರ್ಧಿಸುವುದಿಲ್ಲ ಎಂದಿದ್ದ ವಯೋವೃದ್ಧ ಶಾಮನೂರು ಶಿವಶಂಕರಪ್ಪನವರು ಮತ್ತೆ ದಾವಣಗೆರೆ ದಕ್ಷಿಣದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿರುವ ಯಶವಂತರಾವ್ ಯಾವ ನಿಟ್ಟಿನಿಂದ ನೋಡಿದರೂ ಶಾಮನೂರು ಧಣಿಗೆ ಸರಿಸಾಟಿಯಾದ ಅಭ್ಯರ್ಥಿಯೇ ಅಲ್ಲ. ಕಾಂಗ್ರೆಸ್‍ಗೆ ಹರಿದುಹೋಗುವ ಮುಸ್ಲಿಂ ಮತಗಳನ್ನು ತನ್ನತ್ತ ತಿರುಗಿಸಿಕೊಳ್ಳಲು ಜೆಡಿಎಸ್ ಇಲ್ಲಿ ಅಮಾನುಲ್ಲಾ ಖಾನ್‍ನನ್ನು ಅಭ್ಯರ್ಥಿಯಾಗಿಸಿದೆ. ಆದರೆ ಈತ ಮೂರನೇ ಸ್ಥಾನಕ್ಕೆ ತಿಣುಕಾಡಬೇಕಾದ ಪರಿಸ್ಥಿತಿಯಿದೆ. ಬಿಜೆಪಿಯ ಯಶವಂತ ಕಳೆದ ಬಾರಿಗಿಂತ ತನ್ನ ಮತಗಳನ್ನು ಒಂದಷ್ಟು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆಯಾದರು ಶಿವಶಂಕರಪ್ಪರನ್ನು ಸೋಲಿಸುವಷ್ಟು ಆತನ ಅಖಾಡ ಪಕ್ವವಾಗಿಲ್ಲ.

ದಾವಣಗೆರೆ ಉತ್ತರದಲ್ಲಿ ಹಾಲಿ ಮತ್ತು ಮಾಜಿ ತರಕಾರಿ ಮಂತ್ರಿಗಳದ್ದೇ ಕಾದಾಟ. ಆದಾಗ್ಯೂ ಕಾಂಗ್ರೆಸ್‍ನ ಎಸ್.ಎಸ್.ಮಲ್ಲಿಕಾರ್ಜುನ ಜಯದ ನಗೆ ಬೀರಲು ಹಲವು ಕಾರಣಗಳಿವೆ. ಬಿಜೆಪಿ ರವೀಂದ್ರನಾಥನನ್ನು ಯಡ್ಯೂರಪ್ಪ ಜೊತೆ ಆತ ಕಟ್ಟಿಕೊಂಡಿರುವ ದುಷ್ಮನಿ ಅಡ್ಡಡ್ಡ ಮಲಗಿಸಿದರೆ, ಕಳೆದ ಐದು ವರ್ಷದ ಅಭಿವೃದ್ಧಿ ಕಾರ್ಯಗಳು ಮಲ್ಲಿಕಾರ್ಜುನ್‍ರ ಕೈಹಿಡಿಯಲಿವೆ.

ಎಂ.ಪಿ.ರವೀಂದ್ರ

ಹರಪನಹಳ್ಳಿಯಲ್ಲಿ ಮೇಲ್ನೋಟಕ್ಕೆ ಹಾಲಿ ಕೈ ಶಾಸಕ ಎಂ.ಪಿ.ರವೀಂದ್ರನಿಗೆ ಇಕ್ಕಟ್ಟಿನಂತೆ ಕಂಡುಬಂದರೂ ಬಿಜೆಪಿಯ ಆಂತರಿಕ ಗುದಮುರಗಿ ರವಿಗೆ ನೆರವಾಗುವ ಸಾಧ್ಯತೆ ಇದೆ. ಜೆಡಿಎಸ್‍ನಿಂದ ಸ್ಪರ್ಧಿಸಿರುವ ಕೊಟ್ರೇಶ್ ಕೂಡಾ ಲಿಂಗಾಯತನಾಗಿರುವುದರಿಂದ ರವೀಂದ್ರನ ಜಾತಿ ಮತಗಳು ಹಂಚಿಹೋಗುತ್ತವೆ ಎಂಬ ವಾದವಿದೆ. ಆದರೆ ಅಸಲಿಯತ್ತೇನೆಂದರೆ ಮೊದಲಿನಿಂದಲೂ ಇಲ್ಲಿನ ಬಹುಪಾಲು ಲಿಂಗಾಯತ ಮತಗಳು ಹೋಗುತ್ತಿದ್ದುದು ಬಿಜೆಪಿಯ ಕರುಣಾಕರ ರೆಡ್ಡಿಗೆ, ಯಡ್ಯೂರಪ್ಪನ ಕಾರಣಕ್ಕೆ. ಜೆಡಿಎಸ್‍ನ ಕೊಟ್ರೇಶಿ ಪಕ್ಕಾ ಯಡಿಯೂರಪ್ಪನ ಶಿಷ್ಯ. ಕಳೆದ ಸಲ ಕೆಜೆಪಿಯಿಂದ ಸ್ಪರ್ಧಿಸಿದ್ದ. ಆತನಿಗೇ ಬಿಜೆಪಿ ಟಿಕೇಟ್ ಕೊಡಿಸಬೇಕೆನ್ನುವುದು ಯಡ್ಯೂರಪ್ಪ ಇಂಗಿತವಾಗಿತ್ತು. ಆದರೆ ರೆಡ್ಡಿಯೇ ಟಿಕೇಟ್ ಗಿಟ್ಟಿಸಿಕೊಂಡಿರುವುದರಿಂದ ಕೊಟ್ರೇಶಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದಾನೆ. ಅಂದರೆ ಆತ ಕೀಳಲಿರುವುದು ಬಿಜೆಪಿಯ ಮತಗಳನ್ನೇ ಹೊರತು ಕಾಂಗ್ರೆಸ್ ಓಟುಗಳನ್ನಲ್ಲ. ಅಲ್ಲಿಗೆ ರವಿಯ ಗೆಲ್ಲುವ ಸಂಭವ ಹೆಚ್ಚಾಗಿದೆ. ಆದರೆ ರವಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾನೆ ಎನ್ನುವ ವಾದವೂ ಇದ್ದು ಅದು ಫಲಿತಾಂಶದ ಮೇಲೆ ಪ್ರಭಾವ ಬೀರಿದರೆ ಅಚ್ಚರಿಯಿಲ್ಲ.

ಹರಿಹರದಲ್ಲಿ ಹಾಲಿ ಜೆಡಿಎಸ್ ಶಾಸಕ ಶಿವಶಂಕರನ ದರ್ಪ ಮತ್ತು ಮತದಾರರನ್ನು ಕಡೆಗಣಿಸಿದ ಅಪರಾಧವೇ ಆತನ ಸೋಲಿಗೆ ಮುನ್ನುಡಿಯಾಗುವ ಸಾಧ್ಯತೆಗಳಿವೆ. ಕೈ ಪಾರ್ಟಿಯಿಂದ ಹಳೇ ಹುಲಿ ರಾಮಪ್ಪಜ್ಜ ಕಣಕ್ಕಿಳಿದಿರೋದರಿಂದ ಬಿಜೆಪಿಯ ಹರೀಶನ ಬಿಪಿಯೂ ಯದ್ವತದ್ವಾ ಏರತೊಡಗಿದೆ. ರಾಮಪ್ಪನಿಗೆ ಸ್ವಜಾತಿ ಕುರುಬರು ಮಾತ್ರವಲ್ಲದೇ ಮುಸ್ಲಿಮರು, ನಾಯಕರು, ದಲಿತರ ಮತಗಳೂ ಹರಿದುಬರುವ ಸಾಧ್ಯತೆಯಿದ್ದು ಅಜ್ಜ ಗೆಲುವಿನ ನಗೆ ಬೀರಬಲ್ಲರು.

ವಡ್ನಾಳ್ ರಾಜಣ್ಣ

ಚನ್ನಗಿರಿಯಲ್ಲಿ ತ್ರಿಕೋನ ಸ್ಪರ್ಧೆಯಿದೆ. ಕಾಂಗ್ರೆಸ್‍ನ ಹಾಲಿ ಶಾಸಕ ವಡ್ನಾಳು ರಾಜಣ್ಣ, ಬಿಜೆಪಿಯ ಮಾಡಾಳು ವಿರುಪಾಕ್ಷಪ್ಪ, ಜೆಡಿಯು ಮಹಿಮಾ ಪಟೇಲ್ ಆ ತ್ರಿವಳಿ ವೀರರು. ಇವರ ನಡುವೆ ಜೆಡಿಎಸ್‍ನ ಹೊದಿಗೆರೆ ರಮೇಶ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲ. ನಾಯಕ ಜಾತಿಯ ಹೊದಿಗೆರೆ ರಮೇಶನನ್ನು ಹೊರತುಪಡಿಸಿದರೆ ಉಳಿದ ಮೂವರೂ ಲಿಂಗಾಯತರು. ವಡ್ನಾಳು ರಾಜಣ್ಣನಿಗೆ ಜಾತಿ ಮತಗಳು ಕೈಕೊಡುವ ಸಾಧ್ಯತೆಯಿದ್ದು ಅವು ಮಾಡಾಳು ಮಾಡಾಳು ವಿರುಪಾಕ್ಷಪ್ಪನತ್ತ ಮುಖ ಮಾಡಿವೆ. ಆದರೆ ಈ ಮತಗಳ ಮೇಲೆ ಮಹಿಮಾ ಕೂಡಾ ದಾಳಿ ಮಾಡಬಹುದಾದ್ದರಿಂದ ಇನ್ನುಳಿದ ಸಮುದಾಯದ ಮತಗಳು ಯಾರತ್ತ ನುಗ್ಗಲಿವೆ ಎಂಬುದು ಸೋಲುಗೆಲುವನ್ನು ನಿರ್ಧರಿಸಲಿದೆ. ಸದ್ಯಕ್ಕಂತೂ ಬಿಜೆಪಿಯ ಮಾಡಾಳು ಮುಂಚೂಣಿಯಲ್ಲಿದ್ದಾರೆ.

ಜಗಳೂರಿನಲ್ಲಿ ಉದ್ಭವಿಸಿದ ಕಾಂಗ್ರೆಸ್ ಟಿಕೇಟ್ ಬಂಡಾಯದ ಯಡವಟ್ಟು ಬಿಜೆಪಿಯ ಎಸ್.ವಿ.ರಾಮಚಂದ್ರನಿಗೆ ಅನುಕೂಲ ಆಗಬಹುದು. ಮೊದಲು ಪುಷ್ಟಾಗೆ ಟಿಕೇಟ್ ಕೊಟ್ಟ ಕಾಂಗ್ರೆಸ್ ನಂತರ ನಿರ್ಧಾರದಿಂದ ಹಿಂದೆ ಸರಿದು ಹಾಲಿ ಶಾಸಕ ರಾಜೇಶನಿಗೆ ಬಿ ಫಾರಂ ದಯಪಾಲಿಸಿದೆ. ಈ ಕಣ್ಣಾಮುಚ್ಚಾಲೆಯಿಂದ ಸಿಟ್ಟಿಗೆದ್ದ ಪುಷ್ಟ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋದು ಕಾಂಗ್ರೆಸ್‍ಗೆ ದುಬಾರಿಯಾಗಲಿದೆ.

ಬಸವರಾಜ ನಾಯ್ಕ್

ಮಾಯಕೊಂಡದಲ್ಲಿ ಕಾಂಗ್ರೆಸ್‍ನ ಮೇಲುಗೈ ಕಾಣಿಸುತ್ತೆ. ಮಂತ್ರಿ ಆಂಜನೇಯರ ಅಳಿಯ ಬಸವರಾಜನನ್ನು ಕಾಂಗ್ರೆಸ್ ಅಖಾಡಕ್ಕಿಳಿಸಿದೆ. ಯಡ್ಯೂರಪ್ಪ ತನ್ನ ಭಂಟ ಲಿಂಗಪ್ಪನಿಗೆ ಟಿಕೇಟ್ ಕೊಡಿಸಿರುವುದರಿಂದ ಬೇಸತ್ತಿರುವ ಮಾಜಿ ಶಾಸಕ ಬಸವರಾಜ ನಾಯ್ಕ ಜೆಡಿಯು ಸೇರಿ ಕಣದಲ್ಲಿದ್ದಾನೆ. ಸಾಲದ್ದಕ್ಕೆ ಆನಂದಪ್ಪ ಎಂಬ ಮತ್ತೊಬ್ಬ ಅಭ್ಯರ್ಥಿಯೂ ಬಿಜೆಪಿ ಬಂಡಾಯಗಾರನಾಗಿ ಮತ ಬೇಟೆಯಲ್ಲಿ ತೊಡಗಿದ್ದಾನೆ. ಬಿಜೆಪಿಗೆ ಈ ಇಬ್ಬರ ಬಂಡಾಯ ದುಬಾರಿಯಾಗಲಿದೆ. ಮುಖ್ಯವಾಗಿ ಲಂಬಾಣಿ ಮತಗಳು ಬಿಜೆಪಿಯಿಂದ ದೂರ ಸರಿದಿವೆ. ಶಾಮನೂರು ಪಾಳೆಗಾರಿಕೆ ಕಾರಣಕ್ಕೆ ಒಂದಷ್ಟು ಲಿಂಗಾಯತ ಮತಗಳು ಕಾಂಗ್ರೆಸ್‍ಗೆ ಒಲಿಯಲಿವೆ. ಜೊತೆಗೆ ಕುರುಬ, ನಾಯಕ, ಮಾದಿಗ ಮೊದಲಾದ ಅಹಿಂದ ಮತಗಳೂ ಕೈಹಿಡಿಯಲಿವೆ. ಲಂಬಾಣಿ ಮತಗಳು ಬಸವರಾಜ ನಾಯ್ಕ ಮತ್ತು ಜೆಡಿಎಸ್‍ನ ಶೀಲಾ ನಾಯ್ಕ ನಡುವೆ ಹರಿದು ಹಂಚಿಹೋಗಲಿವೆ. ಬಿಜೆಪಿಯ ಲಿಂಗಪ್ಪನಿಗೆ ಸ್ವಜಾತಿಯ ಮಾದಿಗ ಮತಗಳು ಬೀಳೋದೂ ಡೌಟು. ಏನಿದ್ದರೂ ಯಡ್ಯೂರಪ್ಪನ ವಶೀಲಿಬಾಜಿಯ ಒಂದಷ್ಟು ಲಿಂಗಾಯತ ಮತಗಳಷ್ಟೇ ಗಟ್ಟಿ.

ರೇಣುಕಾಚಾರ್ಯ

ಹೊನ್ನಾಳಿಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್-ಟು-ನೆಕ್ ಹಣಾಹಣಿಯಿದೆ. ಕಾಂಗ್ರೆಸ್ ಟಿಕೇಟ್ ಕೈತಪ್ಪಿದ ಕಾರಣಕ್ಕೆ ಕುರುಬರ ಎಚ್.ಬಿ.ಮಂಜಪ್ಪ ಆರಂಭದಲ್ಲಿ ಬಂಡಾಯವೆದ್ದರೂ ಈಗ ಹಾಲಿ ಶಾಸಕ ಶಾಂತನಗೌಡನ ಪರ ಲವಲವಿಕೆಯಿಂದ ಪ್ರಚಾರ ಮಾಡುತ್ತಿದ್ದಾನೆ. ಇನ್ನು ಬಿಜೆಪಿಯಿಂದ ಕಣದಲ್ಲಿರುವ ನರ್ಸ್ ರೇಣುಕಾಚಾರ್ಯ ಯುವಜನರು ಮತ್ತು ನೊಣಬ, ಬಣಜಿಗ ಲಿಂಗಾಯತರ ಮತಗಳನ್ನು ನಂಬಿ ಹೋರಾಟ ನಡೆಸಿದ್ದಾನೆ. ಕಾಂಗ್ರೆಸ್‍ಗೆ ಹೆಚ್ಚಿನ ಸಂಖ್ಯೆಯಲ್ಲಿರುವ ಸಾದರ ಲಿಂಗಾಯತರ ಜೊತೆಗೆ ಅಹಿಂದ ವರ್ಗದ ಮತಗಳೂ ಬೀಳುವುದರಿಂದ ಇಲ್ಲಿ ಈ ಸಲವೂ ರೇಣುಕಾರ್ಯನಿಗೆ ಕಷ್ಟವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...