Homeರಾಜಕೀಯದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

ದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

- Advertisement -
- Advertisement -
  • ಟಿ.ಎನ್.ಷಣ್ಮುಖ |

ಕಳೆದ ಸಲ ಬಹುಪಾಲು `ಕೈ’ವಶವಾಗಿದ್ದ ದಾವಣಗೆರೆ ಜಿಲ್ಲೆಯಲ್ಲಿ ಈ ಸಲ ಬಿಜೆಪಿ ಪೈಪೋಟಿ ನೀಡುತ್ತಿದೆಯಾದರೂ ಹಳೆಯ ಫಲಿತಾಂಶ ಸಂಪೂರ್ಣ ಬುಡಮೇಲಾಗುವ ಸಾಧ್ಯತೆ ಇಲ್ಲ. ಒಟ್ಟು ಎಂಟು ಕ್ಷೇತ್ರಗಳ ಪೈಕಿ 2013ರಲ್ಲಿ ಕಾಂಗ್ರೆಸ್ ಏಳರಲ್ಲಿ ಗೆದ್ದಿದ್ದರೆ ಹರಿಹರ ಮಾತ್ರ ಜೆಡಿಎಸ್ ಪಾಲಾಗಿತ್ತು. ಒಂದು ಕಾಲಕ್ಕೆ ಅಖಂಡ ಪ್ರಾಬಲ್ಯ ಸಾಧಿಸಿದ್ದ ಬಿಜೆಪಿ ಶೂನ್ಯ ಸಾಧನೆ ಮೂಲಕ ನೆಲ ಕಚ್ಚಿತ್ತು.

ಈ ಸಲ ಸ್ಪರ್ಧಿಸುವುದಿಲ್ಲ ಎಂದಿದ್ದ ವಯೋವೃದ್ಧ ಶಾಮನೂರು ಶಿವಶಂಕರಪ್ಪನವರು ಮತ್ತೆ ದಾವಣಗೆರೆ ದಕ್ಷಿಣದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿರುವ ಯಶವಂತರಾವ್ ಯಾವ ನಿಟ್ಟಿನಿಂದ ನೋಡಿದರೂ ಶಾಮನೂರು ಧಣಿಗೆ ಸರಿಸಾಟಿಯಾದ ಅಭ್ಯರ್ಥಿಯೇ ಅಲ್ಲ. ಕಾಂಗ್ರೆಸ್‍ಗೆ ಹರಿದುಹೋಗುವ ಮುಸ್ಲಿಂ ಮತಗಳನ್ನು ತನ್ನತ್ತ ತಿರುಗಿಸಿಕೊಳ್ಳಲು ಜೆಡಿಎಸ್ ಇಲ್ಲಿ ಅಮಾನುಲ್ಲಾ ಖಾನ್‍ನನ್ನು ಅಭ್ಯರ್ಥಿಯಾಗಿಸಿದೆ. ಆದರೆ ಈತ ಮೂರನೇ ಸ್ಥಾನಕ್ಕೆ ತಿಣುಕಾಡಬೇಕಾದ ಪರಿಸ್ಥಿತಿಯಿದೆ. ಬಿಜೆಪಿಯ ಯಶವಂತ ಕಳೆದ ಬಾರಿಗಿಂತ ತನ್ನ ಮತಗಳನ್ನು ಒಂದಷ್ಟು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆಯಾದರು ಶಿವಶಂಕರಪ್ಪರನ್ನು ಸೋಲಿಸುವಷ್ಟು ಆತನ ಅಖಾಡ ಪಕ್ವವಾಗಿಲ್ಲ.

ದಾವಣಗೆರೆ ಉತ್ತರದಲ್ಲಿ ಹಾಲಿ ಮತ್ತು ಮಾಜಿ ತರಕಾರಿ ಮಂತ್ರಿಗಳದ್ದೇ ಕಾದಾಟ. ಆದಾಗ್ಯೂ ಕಾಂಗ್ರೆಸ್‍ನ ಎಸ್.ಎಸ್.ಮಲ್ಲಿಕಾರ್ಜುನ ಜಯದ ನಗೆ ಬೀರಲು ಹಲವು ಕಾರಣಗಳಿವೆ. ಬಿಜೆಪಿ ರವೀಂದ್ರನಾಥನನ್ನು ಯಡ್ಯೂರಪ್ಪ ಜೊತೆ ಆತ ಕಟ್ಟಿಕೊಂಡಿರುವ ದುಷ್ಮನಿ ಅಡ್ಡಡ್ಡ ಮಲಗಿಸಿದರೆ, ಕಳೆದ ಐದು ವರ್ಷದ ಅಭಿವೃದ್ಧಿ ಕಾರ್ಯಗಳು ಮಲ್ಲಿಕಾರ್ಜುನ್‍ರ ಕೈಹಿಡಿಯಲಿವೆ.

ಎಂ.ಪಿ.ರವೀಂದ್ರ

ಹರಪನಹಳ್ಳಿಯಲ್ಲಿ ಮೇಲ್ನೋಟಕ್ಕೆ ಹಾಲಿ ಕೈ ಶಾಸಕ ಎಂ.ಪಿ.ರವೀಂದ್ರನಿಗೆ ಇಕ್ಕಟ್ಟಿನಂತೆ ಕಂಡುಬಂದರೂ ಬಿಜೆಪಿಯ ಆಂತರಿಕ ಗುದಮುರಗಿ ರವಿಗೆ ನೆರವಾಗುವ ಸಾಧ್ಯತೆ ಇದೆ. ಜೆಡಿಎಸ್‍ನಿಂದ ಸ್ಪರ್ಧಿಸಿರುವ ಕೊಟ್ರೇಶ್ ಕೂಡಾ ಲಿಂಗಾಯತನಾಗಿರುವುದರಿಂದ ರವೀಂದ್ರನ ಜಾತಿ ಮತಗಳು ಹಂಚಿಹೋಗುತ್ತವೆ ಎಂಬ ವಾದವಿದೆ. ಆದರೆ ಅಸಲಿಯತ್ತೇನೆಂದರೆ ಮೊದಲಿನಿಂದಲೂ ಇಲ್ಲಿನ ಬಹುಪಾಲು ಲಿಂಗಾಯತ ಮತಗಳು ಹೋಗುತ್ತಿದ್ದುದು ಬಿಜೆಪಿಯ ಕರುಣಾಕರ ರೆಡ್ಡಿಗೆ, ಯಡ್ಯೂರಪ್ಪನ ಕಾರಣಕ್ಕೆ. ಜೆಡಿಎಸ್‍ನ ಕೊಟ್ರೇಶಿ ಪಕ್ಕಾ ಯಡಿಯೂರಪ್ಪನ ಶಿಷ್ಯ. ಕಳೆದ ಸಲ ಕೆಜೆಪಿಯಿಂದ ಸ್ಪರ್ಧಿಸಿದ್ದ. ಆತನಿಗೇ ಬಿಜೆಪಿ ಟಿಕೇಟ್ ಕೊಡಿಸಬೇಕೆನ್ನುವುದು ಯಡ್ಯೂರಪ್ಪ ಇಂಗಿತವಾಗಿತ್ತು. ಆದರೆ ರೆಡ್ಡಿಯೇ ಟಿಕೇಟ್ ಗಿಟ್ಟಿಸಿಕೊಂಡಿರುವುದರಿಂದ ಕೊಟ್ರೇಶಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದಾನೆ. ಅಂದರೆ ಆತ ಕೀಳಲಿರುವುದು ಬಿಜೆಪಿಯ ಮತಗಳನ್ನೇ ಹೊರತು ಕಾಂಗ್ರೆಸ್ ಓಟುಗಳನ್ನಲ್ಲ. ಅಲ್ಲಿಗೆ ರವಿಯ ಗೆಲ್ಲುವ ಸಂಭವ ಹೆಚ್ಚಾಗಿದೆ. ಆದರೆ ರವಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾನೆ ಎನ್ನುವ ವಾದವೂ ಇದ್ದು ಅದು ಫಲಿತಾಂಶದ ಮೇಲೆ ಪ್ರಭಾವ ಬೀರಿದರೆ ಅಚ್ಚರಿಯಿಲ್ಲ.

ಹರಿಹರದಲ್ಲಿ ಹಾಲಿ ಜೆಡಿಎಸ್ ಶಾಸಕ ಶಿವಶಂಕರನ ದರ್ಪ ಮತ್ತು ಮತದಾರರನ್ನು ಕಡೆಗಣಿಸಿದ ಅಪರಾಧವೇ ಆತನ ಸೋಲಿಗೆ ಮುನ್ನುಡಿಯಾಗುವ ಸಾಧ್ಯತೆಗಳಿವೆ. ಕೈ ಪಾರ್ಟಿಯಿಂದ ಹಳೇ ಹುಲಿ ರಾಮಪ್ಪಜ್ಜ ಕಣಕ್ಕಿಳಿದಿರೋದರಿಂದ ಬಿಜೆಪಿಯ ಹರೀಶನ ಬಿಪಿಯೂ ಯದ್ವತದ್ವಾ ಏರತೊಡಗಿದೆ. ರಾಮಪ್ಪನಿಗೆ ಸ್ವಜಾತಿ ಕುರುಬರು ಮಾತ್ರವಲ್ಲದೇ ಮುಸ್ಲಿಮರು, ನಾಯಕರು, ದಲಿತರ ಮತಗಳೂ ಹರಿದುಬರುವ ಸಾಧ್ಯತೆಯಿದ್ದು ಅಜ್ಜ ಗೆಲುವಿನ ನಗೆ ಬೀರಬಲ್ಲರು.

ವಡ್ನಾಳ್ ರಾಜಣ್ಣ

ಚನ್ನಗಿರಿಯಲ್ಲಿ ತ್ರಿಕೋನ ಸ್ಪರ್ಧೆಯಿದೆ. ಕಾಂಗ್ರೆಸ್‍ನ ಹಾಲಿ ಶಾಸಕ ವಡ್ನಾಳು ರಾಜಣ್ಣ, ಬಿಜೆಪಿಯ ಮಾಡಾಳು ವಿರುಪಾಕ್ಷಪ್ಪ, ಜೆಡಿಯು ಮಹಿಮಾ ಪಟೇಲ್ ಆ ತ್ರಿವಳಿ ವೀರರು. ಇವರ ನಡುವೆ ಜೆಡಿಎಸ್‍ನ ಹೊದಿಗೆರೆ ರಮೇಶ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲ. ನಾಯಕ ಜಾತಿಯ ಹೊದಿಗೆರೆ ರಮೇಶನನ್ನು ಹೊರತುಪಡಿಸಿದರೆ ಉಳಿದ ಮೂವರೂ ಲಿಂಗಾಯತರು. ವಡ್ನಾಳು ರಾಜಣ್ಣನಿಗೆ ಜಾತಿ ಮತಗಳು ಕೈಕೊಡುವ ಸಾಧ್ಯತೆಯಿದ್ದು ಅವು ಮಾಡಾಳು ಮಾಡಾಳು ವಿರುಪಾಕ್ಷಪ್ಪನತ್ತ ಮುಖ ಮಾಡಿವೆ. ಆದರೆ ಈ ಮತಗಳ ಮೇಲೆ ಮಹಿಮಾ ಕೂಡಾ ದಾಳಿ ಮಾಡಬಹುದಾದ್ದರಿಂದ ಇನ್ನುಳಿದ ಸಮುದಾಯದ ಮತಗಳು ಯಾರತ್ತ ನುಗ್ಗಲಿವೆ ಎಂಬುದು ಸೋಲುಗೆಲುವನ್ನು ನಿರ್ಧರಿಸಲಿದೆ. ಸದ್ಯಕ್ಕಂತೂ ಬಿಜೆಪಿಯ ಮಾಡಾಳು ಮುಂಚೂಣಿಯಲ್ಲಿದ್ದಾರೆ.

ಜಗಳೂರಿನಲ್ಲಿ ಉದ್ಭವಿಸಿದ ಕಾಂಗ್ರೆಸ್ ಟಿಕೇಟ್ ಬಂಡಾಯದ ಯಡವಟ್ಟು ಬಿಜೆಪಿಯ ಎಸ್.ವಿ.ರಾಮಚಂದ್ರನಿಗೆ ಅನುಕೂಲ ಆಗಬಹುದು. ಮೊದಲು ಪುಷ್ಟಾಗೆ ಟಿಕೇಟ್ ಕೊಟ್ಟ ಕಾಂಗ್ರೆಸ್ ನಂತರ ನಿರ್ಧಾರದಿಂದ ಹಿಂದೆ ಸರಿದು ಹಾಲಿ ಶಾಸಕ ರಾಜೇಶನಿಗೆ ಬಿ ಫಾರಂ ದಯಪಾಲಿಸಿದೆ. ಈ ಕಣ್ಣಾಮುಚ್ಚಾಲೆಯಿಂದ ಸಿಟ್ಟಿಗೆದ್ದ ಪುಷ್ಟ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋದು ಕಾಂಗ್ರೆಸ್‍ಗೆ ದುಬಾರಿಯಾಗಲಿದೆ.

ಬಸವರಾಜ ನಾಯ್ಕ್

ಮಾಯಕೊಂಡದಲ್ಲಿ ಕಾಂಗ್ರೆಸ್‍ನ ಮೇಲುಗೈ ಕಾಣಿಸುತ್ತೆ. ಮಂತ್ರಿ ಆಂಜನೇಯರ ಅಳಿಯ ಬಸವರಾಜನನ್ನು ಕಾಂಗ್ರೆಸ್ ಅಖಾಡಕ್ಕಿಳಿಸಿದೆ. ಯಡ್ಯೂರಪ್ಪ ತನ್ನ ಭಂಟ ಲಿಂಗಪ್ಪನಿಗೆ ಟಿಕೇಟ್ ಕೊಡಿಸಿರುವುದರಿಂದ ಬೇಸತ್ತಿರುವ ಮಾಜಿ ಶಾಸಕ ಬಸವರಾಜ ನಾಯ್ಕ ಜೆಡಿಯು ಸೇರಿ ಕಣದಲ್ಲಿದ್ದಾನೆ. ಸಾಲದ್ದಕ್ಕೆ ಆನಂದಪ್ಪ ಎಂಬ ಮತ್ತೊಬ್ಬ ಅಭ್ಯರ್ಥಿಯೂ ಬಿಜೆಪಿ ಬಂಡಾಯಗಾರನಾಗಿ ಮತ ಬೇಟೆಯಲ್ಲಿ ತೊಡಗಿದ್ದಾನೆ. ಬಿಜೆಪಿಗೆ ಈ ಇಬ್ಬರ ಬಂಡಾಯ ದುಬಾರಿಯಾಗಲಿದೆ. ಮುಖ್ಯವಾಗಿ ಲಂಬಾಣಿ ಮತಗಳು ಬಿಜೆಪಿಯಿಂದ ದೂರ ಸರಿದಿವೆ. ಶಾಮನೂರು ಪಾಳೆಗಾರಿಕೆ ಕಾರಣಕ್ಕೆ ಒಂದಷ್ಟು ಲಿಂಗಾಯತ ಮತಗಳು ಕಾಂಗ್ರೆಸ್‍ಗೆ ಒಲಿಯಲಿವೆ. ಜೊತೆಗೆ ಕುರುಬ, ನಾಯಕ, ಮಾದಿಗ ಮೊದಲಾದ ಅಹಿಂದ ಮತಗಳೂ ಕೈಹಿಡಿಯಲಿವೆ. ಲಂಬಾಣಿ ಮತಗಳು ಬಸವರಾಜ ನಾಯ್ಕ ಮತ್ತು ಜೆಡಿಎಸ್‍ನ ಶೀಲಾ ನಾಯ್ಕ ನಡುವೆ ಹರಿದು ಹಂಚಿಹೋಗಲಿವೆ. ಬಿಜೆಪಿಯ ಲಿಂಗಪ್ಪನಿಗೆ ಸ್ವಜಾತಿಯ ಮಾದಿಗ ಮತಗಳು ಬೀಳೋದೂ ಡೌಟು. ಏನಿದ್ದರೂ ಯಡ್ಯೂರಪ್ಪನ ವಶೀಲಿಬಾಜಿಯ ಒಂದಷ್ಟು ಲಿಂಗಾಯತ ಮತಗಳಷ್ಟೇ ಗಟ್ಟಿ.

ರೇಣುಕಾಚಾರ್ಯ

ಹೊನ್ನಾಳಿಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್-ಟು-ನೆಕ್ ಹಣಾಹಣಿಯಿದೆ. ಕಾಂಗ್ರೆಸ್ ಟಿಕೇಟ್ ಕೈತಪ್ಪಿದ ಕಾರಣಕ್ಕೆ ಕುರುಬರ ಎಚ್.ಬಿ.ಮಂಜಪ್ಪ ಆರಂಭದಲ್ಲಿ ಬಂಡಾಯವೆದ್ದರೂ ಈಗ ಹಾಲಿ ಶಾಸಕ ಶಾಂತನಗೌಡನ ಪರ ಲವಲವಿಕೆಯಿಂದ ಪ್ರಚಾರ ಮಾಡುತ್ತಿದ್ದಾನೆ. ಇನ್ನು ಬಿಜೆಪಿಯಿಂದ ಕಣದಲ್ಲಿರುವ ನರ್ಸ್ ರೇಣುಕಾಚಾರ್ಯ ಯುವಜನರು ಮತ್ತು ನೊಣಬ, ಬಣಜಿಗ ಲಿಂಗಾಯತರ ಮತಗಳನ್ನು ನಂಬಿ ಹೋರಾಟ ನಡೆಸಿದ್ದಾನೆ. ಕಾಂಗ್ರೆಸ್‍ಗೆ ಹೆಚ್ಚಿನ ಸಂಖ್ಯೆಯಲ್ಲಿರುವ ಸಾದರ ಲಿಂಗಾಯತರ ಜೊತೆಗೆ ಅಹಿಂದ ವರ್ಗದ ಮತಗಳೂ ಬೀಳುವುದರಿಂದ ಇಲ್ಲಿ ಈ ಸಲವೂ ರೇಣುಕಾರ್ಯನಿಗೆ ಕಷ್ಟವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...