Homeರಾಜಕೀಯದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

ದಾವಣಗೆರೆ: ಕೈಗೆ ಬೆಣ್ಣೆದೋಸೆ ಕಮಲಕ್ಕೆ ಖಾರ ಮಿರ್ಚಿ

- Advertisement -
- Advertisement -
  • ಟಿ.ಎನ್.ಷಣ್ಮುಖ |

ಕಳೆದ ಸಲ ಬಹುಪಾಲು `ಕೈ’ವಶವಾಗಿದ್ದ ದಾವಣಗೆರೆ ಜಿಲ್ಲೆಯಲ್ಲಿ ಈ ಸಲ ಬಿಜೆಪಿ ಪೈಪೋಟಿ ನೀಡುತ್ತಿದೆಯಾದರೂ ಹಳೆಯ ಫಲಿತಾಂಶ ಸಂಪೂರ್ಣ ಬುಡಮೇಲಾಗುವ ಸಾಧ್ಯತೆ ಇಲ್ಲ. ಒಟ್ಟು ಎಂಟು ಕ್ಷೇತ್ರಗಳ ಪೈಕಿ 2013ರಲ್ಲಿ ಕಾಂಗ್ರೆಸ್ ಏಳರಲ್ಲಿ ಗೆದ್ದಿದ್ದರೆ ಹರಿಹರ ಮಾತ್ರ ಜೆಡಿಎಸ್ ಪಾಲಾಗಿತ್ತು. ಒಂದು ಕಾಲಕ್ಕೆ ಅಖಂಡ ಪ್ರಾಬಲ್ಯ ಸಾಧಿಸಿದ್ದ ಬಿಜೆಪಿ ಶೂನ್ಯ ಸಾಧನೆ ಮೂಲಕ ನೆಲ ಕಚ್ಚಿತ್ತು.

ಈ ಸಲ ಸ್ಪರ್ಧಿಸುವುದಿಲ್ಲ ಎಂದಿದ್ದ ವಯೋವೃದ್ಧ ಶಾಮನೂರು ಶಿವಶಂಕರಪ್ಪನವರು ಮತ್ತೆ ದಾವಣಗೆರೆ ದಕ್ಷಿಣದಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿರುವ ಯಶವಂತರಾವ್ ಯಾವ ನಿಟ್ಟಿನಿಂದ ನೋಡಿದರೂ ಶಾಮನೂರು ಧಣಿಗೆ ಸರಿಸಾಟಿಯಾದ ಅಭ್ಯರ್ಥಿಯೇ ಅಲ್ಲ. ಕಾಂಗ್ರೆಸ್‍ಗೆ ಹರಿದುಹೋಗುವ ಮುಸ್ಲಿಂ ಮತಗಳನ್ನು ತನ್ನತ್ತ ತಿರುಗಿಸಿಕೊಳ್ಳಲು ಜೆಡಿಎಸ್ ಇಲ್ಲಿ ಅಮಾನುಲ್ಲಾ ಖಾನ್‍ನನ್ನು ಅಭ್ಯರ್ಥಿಯಾಗಿಸಿದೆ. ಆದರೆ ಈತ ಮೂರನೇ ಸ್ಥಾನಕ್ಕೆ ತಿಣುಕಾಡಬೇಕಾದ ಪರಿಸ್ಥಿತಿಯಿದೆ. ಬಿಜೆಪಿಯ ಯಶವಂತ ಕಳೆದ ಬಾರಿಗಿಂತ ತನ್ನ ಮತಗಳನ್ನು ಒಂದಷ್ಟು ಹೆಚ್ಚಿಸಿಕೊಳ್ಳುವ ಸಾಧ್ಯತೆ ಇದೆಯಾದರು ಶಿವಶಂಕರಪ್ಪರನ್ನು ಸೋಲಿಸುವಷ್ಟು ಆತನ ಅಖಾಡ ಪಕ್ವವಾಗಿಲ್ಲ.

ದಾವಣಗೆರೆ ಉತ್ತರದಲ್ಲಿ ಹಾಲಿ ಮತ್ತು ಮಾಜಿ ತರಕಾರಿ ಮಂತ್ರಿಗಳದ್ದೇ ಕಾದಾಟ. ಆದಾಗ್ಯೂ ಕಾಂಗ್ರೆಸ್‍ನ ಎಸ್.ಎಸ್.ಮಲ್ಲಿಕಾರ್ಜುನ ಜಯದ ನಗೆ ಬೀರಲು ಹಲವು ಕಾರಣಗಳಿವೆ. ಬಿಜೆಪಿ ರವೀಂದ್ರನಾಥನನ್ನು ಯಡ್ಯೂರಪ್ಪ ಜೊತೆ ಆತ ಕಟ್ಟಿಕೊಂಡಿರುವ ದುಷ್ಮನಿ ಅಡ್ಡಡ್ಡ ಮಲಗಿಸಿದರೆ, ಕಳೆದ ಐದು ವರ್ಷದ ಅಭಿವೃದ್ಧಿ ಕಾರ್ಯಗಳು ಮಲ್ಲಿಕಾರ್ಜುನ್‍ರ ಕೈಹಿಡಿಯಲಿವೆ.

ಎಂ.ಪಿ.ರವೀಂದ್ರ

ಹರಪನಹಳ್ಳಿಯಲ್ಲಿ ಮೇಲ್ನೋಟಕ್ಕೆ ಹಾಲಿ ಕೈ ಶಾಸಕ ಎಂ.ಪಿ.ರವೀಂದ್ರನಿಗೆ ಇಕ್ಕಟ್ಟಿನಂತೆ ಕಂಡುಬಂದರೂ ಬಿಜೆಪಿಯ ಆಂತರಿಕ ಗುದಮುರಗಿ ರವಿಗೆ ನೆರವಾಗುವ ಸಾಧ್ಯತೆ ಇದೆ. ಜೆಡಿಎಸ್‍ನಿಂದ ಸ್ಪರ್ಧಿಸಿರುವ ಕೊಟ್ರೇಶ್ ಕೂಡಾ ಲಿಂಗಾಯತನಾಗಿರುವುದರಿಂದ ರವೀಂದ್ರನ ಜಾತಿ ಮತಗಳು ಹಂಚಿಹೋಗುತ್ತವೆ ಎಂಬ ವಾದವಿದೆ. ಆದರೆ ಅಸಲಿಯತ್ತೇನೆಂದರೆ ಮೊದಲಿನಿಂದಲೂ ಇಲ್ಲಿನ ಬಹುಪಾಲು ಲಿಂಗಾಯತ ಮತಗಳು ಹೋಗುತ್ತಿದ್ದುದು ಬಿಜೆಪಿಯ ಕರುಣಾಕರ ರೆಡ್ಡಿಗೆ, ಯಡ್ಯೂರಪ್ಪನ ಕಾರಣಕ್ಕೆ. ಜೆಡಿಎಸ್‍ನ ಕೊಟ್ರೇಶಿ ಪಕ್ಕಾ ಯಡಿಯೂರಪ್ಪನ ಶಿಷ್ಯ. ಕಳೆದ ಸಲ ಕೆಜೆಪಿಯಿಂದ ಸ್ಪರ್ಧಿಸಿದ್ದ. ಆತನಿಗೇ ಬಿಜೆಪಿ ಟಿಕೇಟ್ ಕೊಡಿಸಬೇಕೆನ್ನುವುದು ಯಡ್ಯೂರಪ್ಪ ಇಂಗಿತವಾಗಿತ್ತು. ಆದರೆ ರೆಡ್ಡಿಯೇ ಟಿಕೇಟ್ ಗಿಟ್ಟಿಸಿಕೊಂಡಿರುವುದರಿಂದ ಕೊಟ್ರೇಶಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದಾನೆ. ಅಂದರೆ ಆತ ಕೀಳಲಿರುವುದು ಬಿಜೆಪಿಯ ಮತಗಳನ್ನೇ ಹೊರತು ಕಾಂಗ್ರೆಸ್ ಓಟುಗಳನ್ನಲ್ಲ. ಅಲ್ಲಿಗೆ ರವಿಯ ಗೆಲ್ಲುವ ಸಂಭವ ಹೆಚ್ಚಾಗಿದೆ. ಆದರೆ ರವಿ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾನೆ ಎನ್ನುವ ವಾದವೂ ಇದ್ದು ಅದು ಫಲಿತಾಂಶದ ಮೇಲೆ ಪ್ರಭಾವ ಬೀರಿದರೆ ಅಚ್ಚರಿಯಿಲ್ಲ.

ಹರಿಹರದಲ್ಲಿ ಹಾಲಿ ಜೆಡಿಎಸ್ ಶಾಸಕ ಶಿವಶಂಕರನ ದರ್ಪ ಮತ್ತು ಮತದಾರರನ್ನು ಕಡೆಗಣಿಸಿದ ಅಪರಾಧವೇ ಆತನ ಸೋಲಿಗೆ ಮುನ್ನುಡಿಯಾಗುವ ಸಾಧ್ಯತೆಗಳಿವೆ. ಕೈ ಪಾರ್ಟಿಯಿಂದ ಹಳೇ ಹುಲಿ ರಾಮಪ್ಪಜ್ಜ ಕಣಕ್ಕಿಳಿದಿರೋದರಿಂದ ಬಿಜೆಪಿಯ ಹರೀಶನ ಬಿಪಿಯೂ ಯದ್ವತದ್ವಾ ಏರತೊಡಗಿದೆ. ರಾಮಪ್ಪನಿಗೆ ಸ್ವಜಾತಿ ಕುರುಬರು ಮಾತ್ರವಲ್ಲದೇ ಮುಸ್ಲಿಮರು, ನಾಯಕರು, ದಲಿತರ ಮತಗಳೂ ಹರಿದುಬರುವ ಸಾಧ್ಯತೆಯಿದ್ದು ಅಜ್ಜ ಗೆಲುವಿನ ನಗೆ ಬೀರಬಲ್ಲರು.

ವಡ್ನಾಳ್ ರಾಜಣ್ಣ

ಚನ್ನಗಿರಿಯಲ್ಲಿ ತ್ರಿಕೋನ ಸ್ಪರ್ಧೆಯಿದೆ. ಕಾಂಗ್ರೆಸ್‍ನ ಹಾಲಿ ಶಾಸಕ ವಡ್ನಾಳು ರಾಜಣ್ಣ, ಬಿಜೆಪಿಯ ಮಾಡಾಳು ವಿರುಪಾಕ್ಷಪ್ಪ, ಜೆಡಿಯು ಮಹಿಮಾ ಪಟೇಲ್ ಆ ತ್ರಿವಳಿ ವೀರರು. ಇವರ ನಡುವೆ ಜೆಡಿಎಸ್‍ನ ಹೊದಿಗೆರೆ ರಮೇಶ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲ. ನಾಯಕ ಜಾತಿಯ ಹೊದಿಗೆರೆ ರಮೇಶನನ್ನು ಹೊರತುಪಡಿಸಿದರೆ ಉಳಿದ ಮೂವರೂ ಲಿಂಗಾಯತರು. ವಡ್ನಾಳು ರಾಜಣ್ಣನಿಗೆ ಜಾತಿ ಮತಗಳು ಕೈಕೊಡುವ ಸಾಧ್ಯತೆಯಿದ್ದು ಅವು ಮಾಡಾಳು ಮಾಡಾಳು ವಿರುಪಾಕ್ಷಪ್ಪನತ್ತ ಮುಖ ಮಾಡಿವೆ. ಆದರೆ ಈ ಮತಗಳ ಮೇಲೆ ಮಹಿಮಾ ಕೂಡಾ ದಾಳಿ ಮಾಡಬಹುದಾದ್ದರಿಂದ ಇನ್ನುಳಿದ ಸಮುದಾಯದ ಮತಗಳು ಯಾರತ್ತ ನುಗ್ಗಲಿವೆ ಎಂಬುದು ಸೋಲುಗೆಲುವನ್ನು ನಿರ್ಧರಿಸಲಿದೆ. ಸದ್ಯಕ್ಕಂತೂ ಬಿಜೆಪಿಯ ಮಾಡಾಳು ಮುಂಚೂಣಿಯಲ್ಲಿದ್ದಾರೆ.

ಜಗಳೂರಿನಲ್ಲಿ ಉದ್ಭವಿಸಿದ ಕಾಂಗ್ರೆಸ್ ಟಿಕೇಟ್ ಬಂಡಾಯದ ಯಡವಟ್ಟು ಬಿಜೆಪಿಯ ಎಸ್.ವಿ.ರಾಮಚಂದ್ರನಿಗೆ ಅನುಕೂಲ ಆಗಬಹುದು. ಮೊದಲು ಪುಷ್ಟಾಗೆ ಟಿಕೇಟ್ ಕೊಟ್ಟ ಕಾಂಗ್ರೆಸ್ ನಂತರ ನಿರ್ಧಾರದಿಂದ ಹಿಂದೆ ಸರಿದು ಹಾಲಿ ಶಾಸಕ ರಾಜೇಶನಿಗೆ ಬಿ ಫಾರಂ ದಯಪಾಲಿಸಿದೆ. ಈ ಕಣ್ಣಾಮುಚ್ಚಾಲೆಯಿಂದ ಸಿಟ್ಟಿಗೆದ್ದ ಪುಷ್ಟ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರೋದು ಕಾಂಗ್ರೆಸ್‍ಗೆ ದುಬಾರಿಯಾಗಲಿದೆ.

ಬಸವರಾಜ ನಾಯ್ಕ್

ಮಾಯಕೊಂಡದಲ್ಲಿ ಕಾಂಗ್ರೆಸ್‍ನ ಮೇಲುಗೈ ಕಾಣಿಸುತ್ತೆ. ಮಂತ್ರಿ ಆಂಜನೇಯರ ಅಳಿಯ ಬಸವರಾಜನನ್ನು ಕಾಂಗ್ರೆಸ್ ಅಖಾಡಕ್ಕಿಳಿಸಿದೆ. ಯಡ್ಯೂರಪ್ಪ ತನ್ನ ಭಂಟ ಲಿಂಗಪ್ಪನಿಗೆ ಟಿಕೇಟ್ ಕೊಡಿಸಿರುವುದರಿಂದ ಬೇಸತ್ತಿರುವ ಮಾಜಿ ಶಾಸಕ ಬಸವರಾಜ ನಾಯ್ಕ ಜೆಡಿಯು ಸೇರಿ ಕಣದಲ್ಲಿದ್ದಾನೆ. ಸಾಲದ್ದಕ್ಕೆ ಆನಂದಪ್ಪ ಎಂಬ ಮತ್ತೊಬ್ಬ ಅಭ್ಯರ್ಥಿಯೂ ಬಿಜೆಪಿ ಬಂಡಾಯಗಾರನಾಗಿ ಮತ ಬೇಟೆಯಲ್ಲಿ ತೊಡಗಿದ್ದಾನೆ. ಬಿಜೆಪಿಗೆ ಈ ಇಬ್ಬರ ಬಂಡಾಯ ದುಬಾರಿಯಾಗಲಿದೆ. ಮುಖ್ಯವಾಗಿ ಲಂಬಾಣಿ ಮತಗಳು ಬಿಜೆಪಿಯಿಂದ ದೂರ ಸರಿದಿವೆ. ಶಾಮನೂರು ಪಾಳೆಗಾರಿಕೆ ಕಾರಣಕ್ಕೆ ಒಂದಷ್ಟು ಲಿಂಗಾಯತ ಮತಗಳು ಕಾಂಗ್ರೆಸ್‍ಗೆ ಒಲಿಯಲಿವೆ. ಜೊತೆಗೆ ಕುರುಬ, ನಾಯಕ, ಮಾದಿಗ ಮೊದಲಾದ ಅಹಿಂದ ಮತಗಳೂ ಕೈಹಿಡಿಯಲಿವೆ. ಲಂಬಾಣಿ ಮತಗಳು ಬಸವರಾಜ ನಾಯ್ಕ ಮತ್ತು ಜೆಡಿಎಸ್‍ನ ಶೀಲಾ ನಾಯ್ಕ ನಡುವೆ ಹರಿದು ಹಂಚಿಹೋಗಲಿವೆ. ಬಿಜೆಪಿಯ ಲಿಂಗಪ್ಪನಿಗೆ ಸ್ವಜಾತಿಯ ಮಾದಿಗ ಮತಗಳು ಬೀಳೋದೂ ಡೌಟು. ಏನಿದ್ದರೂ ಯಡ್ಯೂರಪ್ಪನ ವಶೀಲಿಬಾಜಿಯ ಒಂದಷ್ಟು ಲಿಂಗಾಯತ ಮತಗಳಷ್ಟೇ ಗಟ್ಟಿ.

ರೇಣುಕಾಚಾರ್ಯ

ಹೊನ್ನಾಳಿಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೆಕ್-ಟು-ನೆಕ್ ಹಣಾಹಣಿಯಿದೆ. ಕಾಂಗ್ರೆಸ್ ಟಿಕೇಟ್ ಕೈತಪ್ಪಿದ ಕಾರಣಕ್ಕೆ ಕುರುಬರ ಎಚ್.ಬಿ.ಮಂಜಪ್ಪ ಆರಂಭದಲ್ಲಿ ಬಂಡಾಯವೆದ್ದರೂ ಈಗ ಹಾಲಿ ಶಾಸಕ ಶಾಂತನಗೌಡನ ಪರ ಲವಲವಿಕೆಯಿಂದ ಪ್ರಚಾರ ಮಾಡುತ್ತಿದ್ದಾನೆ. ಇನ್ನು ಬಿಜೆಪಿಯಿಂದ ಕಣದಲ್ಲಿರುವ ನರ್ಸ್ ರೇಣುಕಾಚಾರ್ಯ ಯುವಜನರು ಮತ್ತು ನೊಣಬ, ಬಣಜಿಗ ಲಿಂಗಾಯತರ ಮತಗಳನ್ನು ನಂಬಿ ಹೋರಾಟ ನಡೆಸಿದ್ದಾನೆ. ಕಾಂಗ್ರೆಸ್‍ಗೆ ಹೆಚ್ಚಿನ ಸಂಖ್ಯೆಯಲ್ಲಿರುವ ಸಾದರ ಲಿಂಗಾಯತರ ಜೊತೆಗೆ ಅಹಿಂದ ವರ್ಗದ ಮತಗಳೂ ಬೀಳುವುದರಿಂದ ಇಲ್ಲಿ ಈ ಸಲವೂ ರೇಣುಕಾರ್ಯನಿಗೆ ಕಷ್ಟವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...