Homeಮುಖಪುಟದೆಹಲಿ ಮಹಿಳೆಯರಿಗೆ ಪ್ರಯಾಣ ಉಚಿತ: ಸಮಾನತೆಯ ಹಾದಿಯಲ್ಲೊಂದು ಪರಿಣಾಮಕಾರಿ ಹೆಜ್ಜೆ

ದೆಹಲಿ ಮಹಿಳೆಯರಿಗೆ ಪ್ರಯಾಣ ಉಚಿತ: ಸಮಾನತೆಯ ಹಾದಿಯಲ್ಲೊಂದು ಪರಿಣಾಮಕಾರಿ ಹೆಜ್ಜೆ

ಕರ್ನಾಟಕದ ಬೆಂಗಳೂರಿನಲ್ಲೂ ವಾಹನಗಳ ದಟ್ಟಣೆ ಮಿತಿಮೀರಿದೆ ಹಾಗೂ ಬಸ್ ಮತ್ತು ಮೆಟ್ರೊ ಪ್ರಯಾಣದ ದರಗಳು ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚು. ಹಾಗಾಗಿ ಕರ್ನಾಟಕ ಸರಕಾರವೂ ಇಂತಹ ಒಂದು ಕ್ರಮವನ್ನು ಕೈಗೊಳ್ಳಲು ಇದು ಸಕಾಲ.

- Advertisement -
- Advertisement -

| ನ್ಯಾಯಪಥ ಸಂಪಾದಕೀಯ |

ಮೊನ್ನೆ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ದೆಹಲಿಯಲ್ಲಿ ಮಹಿಳೆಯರಿಗೆ ಬಸ್ ಹಾಗೂ ಮೆಟ್ರೊ ಪ್ರಯಾಣ ಉಚಿತಗೊಳಿಸಲು ದೆಹಲಿ ಸರಕಾರ ಯೋಜನೆ ರೂಪಿಸಲಿದೆ ಎಂದು ತಿಳಿಸಿದರು. ಇದು ಖಂಡಿತವಾಗಿಯೂ ಒಂದು ಸ್ವಾಗತಾರ್ಹ ಕ್ರಮ.

ಕಳೆದ ಹಲವು ದಶಕಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ನಮ್ಮ ದೇಶದಲ್ಲಿ ಮಹಿಳೆಯರ ಸ್ಥಿತಿ ಇನ್ನೂ ದುಸ್ತರವಾಗಿದೆ ಎನ್ನುವುದನ್ನು ಯಾರೂ ಅಲ್ಲಗಳೆಯಲಾರರು. ಎಲ್ಲಾ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆಯುವವರು ಬಾಲಕಿಯರೇ ಆಗಿದ್ದರೂ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಅನುಪಾತ ಇನ್ನೂ ಕಡಿಮೆ ಇದೆ. ಒಂದೇ ಕೆಲಸಕ್ಕೆ ಮಹಿಳೆಯರು ಪಡೆಯುವ ವೇತನ ಪುರುಷರು ಪಡೆಯುವ ವೇತನಕ್ಕಿಂತ ಕಡಿಮೆಯಾಗಿರುವುದೂ ವಾಸ್ತವ.

ಉದ್ಯೋಗಗಳಲ್ಲೂ ಮಹಿಳೆಯರ ಭಾಗವಹಿಸುವಿಕೆ ಪುರುಷರಿಗಿಂತ ತುಂಬಾ ಕಡಿಮೆಯಾಗಿದೆ. ಇದರೊಂದಿಗೆ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ವಲಯದಲ್ಲೂ ಮಹಿಳೆಯರ ಪ್ರಾತಿನಿಧ್ಯ ಕಡಿಮೆ. ಶಿಕ್ಷಣವನ್ನು ತೊರೆಯುವ ಮಕ್ಕಳಲ್ಲಿ ಹೆಚ್ಚಿನವರು ಬಾಲಕಿಯರೇ. ಇಂತಹ ಸನ್ನಿವೇಶದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಕ್ರಾಂತಿಕಾರಿಯಾದ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕ. ಆ ನಿಟ್ಟಿನಲ್ಲಿ ಆಗಬೇಕಾದ ನೂರಾರು ಕ್ರಮಗಳಲ್ಲಿ ದೆಹಲಿ ಬಸ್ ಮತ್ತು ಮೆಟ್ರೊ ಪ್ರಯಾಣವನ್ನು ಮಹಿಳೆಯರಿಗೆ ಉಚಿತಗೊಳಿಸುವಂತಹವು ಒಂದು.

ದೆಹಲಿಯಲ್ಲಿ ಕಳೆದ ವರ್ಷ ಬಸ್ ಮತ್ತು ಮೆಟ್ರೊ ಪ್ರಯಾಣದರವನ್ನು ಹೆಚ್ಚಿಸಿದಾಗ ಅದರಿಂದ ತೊಂದರೆಗೊಳಗಾದವರು ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ದಿನಕ್ಕೆ ಸರಾಸರಿ ಒಂದು ನೂರು ರೂಪಾಯಿಗಳನ್ನು ಪ್ರಯಾಣಕ್ಕೆ ಖರ್ಚು ಮಾಡುವುದು ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಈ ಕ್ರಮದಿಂದ ಆ ಹೊರೆ ಕಡಿಮೆಯಾಗಲಿದ್ದು, ಉಳಿತಾಯವಾಗುವ ಹಣವನ್ನು ತಮಗಾಗಿ, ತಮ್ಮ ಕುಟುಂಬಕ್ಕಾಗಿ ಬಳಸಲು ಸಹಕಾರಿಯಾಗಲಿದೆ. ಇದನ್ನು ಪುರುಷ ವರ್ಸಸ್ ಮಹಿಳೆ ಎಂದು ನೋಡಬಾರದು. ಪ್ರಯಾಣವನ್ನು ಉಚಿತವಾಗಿಸಿರುವುದು ಇಲ್ಲಿನ ಮಹಿಳೆಯರಿಗೇ ಹೊರತು ಅನ್ಯ ಗೃಹಗಳಿಂದ ಬಂದ ಜೀವಿಗಳಿಗಲ್ಲ. ಈ ಕ್ರಮದಿಂದ ಆಗುವ ಲಾಭ, ಅವರ ಕುಟುಂಬಕ್ಕೆ ಮತ್ತು ಇಡೀ ಸಮಾಜಕ್ಕೇ ಆಗಲಿದೆ.

ದೆಹಲಿಯಲ್ಲಿ ಮತ್ತು ದೇಶದ ಇತರೆಡೆಯಲ್ಲಿ ಮಹಿಳೆಯರ ಸುರಕ್ಷತೆ ಒಂದು ದೊಡ್ಡ ಸಮಸ್ಯೆಯಾಗಿದೆ. ಮಹಿಳೆಯರಿಗೆ ಸಾರ್ವಜನಿಕ ಸಾರಿಗೆಯೇ ಅತ್ಯಂತ ಸುರಕ್ಷಿತವಾದದ್ದು ಎನ್ನುವುದರಲ್ಲಿ ಸಂಶಯವಿಲ್ಲ. ಸಾರ್ವಜನಿಕ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚೆಚ್ಚು ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸಿ, ಅದನ್ನು ಇನ್ನಷ್ಟು ಸುರಕ್ಷಿತವಾಗಿಸುವಲ್ಲಿ ಸಹಕಾರಿಯಾಗಲಿದೆ. ಮಹಿಳೆಯರ ಆರ್ಥಿಕ ಸ್ವಾತಂತ್ರ ಇನ್ನೂ ಪುರುಷರಿಗೆ ಹೋಲಿಸುವಷ್ಟು ಇಲ್ಲವಾದುದರಿಂದ, ಒಂದು ಸಣ್ಣ ಸ್ವಾತಂತ್ರ್ಯವನ್ನೂ ದೆಹಲಿಯ ಮಹಿಳೆಯರು ಅನುಭವಿಸಲಿದ್ದಾರೆ.

ಈ ಕ್ರಮದಿಂದ ವರ್ಷಕ್ಕೆ 700 ಕೋಟಿಗಳಷ್ಟು ಹಣ ವ್ಯಯಿಸಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇತರ ಯೋಜನೆಗಳಿಗೆ ಮಾಡುವ ಖರ್ಚಿಗೆ ಹೋಲಿಸಿದರೆ ಇದು ದೊಡ್ಡ ಹೊರೆಯಾಗಲಾರದು ಮತ್ತು ಇಂತಹ ಕಲ್ಯಾಣ ಯೋಜನೆಗಳನ್ನು ರೂಪಿಸುವುದು ಸರಕಾರದ ಒಂದು ಪ್ರಮುಖ ಕರ್ತವ್ಯ. ಹಾಗೂ ಇಂತಹ ಕಲ್ಯಾಣ ಯೋಜನೆಗಳಿಂದ ಸಮಾಜದಲ್ಲಿ ಆಗುವ ಬದಲಾವಣೆಗಳಿಂದ ಒಟ್ಟಾರೆ ಆರ್ಥಿಕತೆಗೆ ಬಲ ಸಿಗುವುದೂ ಸಾಬೀತಾಗಿರುವ ಸತ್ಯ.

ಇದರೊಂದಿಗೆ, ದೇಶದ ಎಲ್ಲಾ ನಗರಗಳಲ್ಲಿ ವಾಹನಗಳ ದಟ್ಟಣೆ ನಿಭಾಯಿಸಲಾಗದಷ್ಟು ಹೆಚ್ಚುತ್ತಲೇ ಇದೆ. ಅದಕ್ಕಿರುವ ಒಂದೇ ಉತ್ತರ ಸಾರ್ವಜನಿಕ ಸಾರಿಗೆ. ಸದ್ಯ ದೆಹಲಿಯ ಮೆಟ್ರೋಗಳಲ್ಲಿ ಪ್ರಯಾಣಿಸುವ ಮಹಿಳೆಯರು 33%ರಷ್ಟಿದ್ದಾರೆ. ಈ ಕ್ರಮದಿಂದ ಇನ್ನಷ್ಟು ಮಹಿಳೆಯರು ಸಾರ್ವಜನಿಕ ಸಾರಿಗೆಯನ್ನು ಬಳಸಲಾರಂಭಿಸಿದರೆ ವಾಹನದಟ್ಟಣೆಯಲ್ಲಿ ಇಳಿಮುಖ ಕಾಣಬಹುದಾಗಿದೆ. ದೆಹಲಿಯು ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ಹೊಂದಿಲ್ಲವಾದುದರಿಂದ ಕೇಂದ್ರ ಸರಕಾರದ ಸಹಕಾರ ಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರಕಾರವೂ ಚುನಾವಣಾ ಲೆಕ್ಕಾಚಾರಗಳನ್ನು ಮಾಡದೇ ಸಂಪೂರ್ಣ ಸಹಕಾರ ನೀಡಬೇಕು. ಹಾಗೂ ಈ ಯೋಜನೆಯನ್ನು ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿ ನೋಡುವುದು ಸಮಂಜಸವಲ್ಲ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಯೋಜನೆಯೇ ಆದರೂ, ಅದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತಿದ್ದಲ್ಲಿ ಸ್ವಾಗತಿಸಬೇಕು.

ಕರ್ನಾಟಕದ ಬೆಂಗಳೂರಿನಲ್ಲೂ ವಾಹನಗಳ ದಟ್ಟಣೆ ಮಿತಿಮೀರಿದೆ ಹಾಗೂ ಬಸ್ ಮತ್ತು ಮೆಟ್ರೊ ಪ್ರಯಾಣದ ದರಗಳು ದೇಶದಲ್ಲೇ ಎಲ್ಲಕ್ಕಿಂತ ಹೆಚ್ಚು. ಬಸ್ ಪ್ರಯಾಣದರದ ಹೊರೆಯಿಂದಾಗಿ ಅನೇಕ ಮಹಿಳೆಯರು ಹಲವಾರು ಕಿಲೋಮೀಟರ್‍ಗಳಷ್ಟು ದೂರ ನಡೆದುಕೊಂಡೇ ಹೋಗಬೇಕಾದದ್ದನ್ನು ನಾವು ನೋಡಿದ್ದೇವೆ. ದುಬಾರಿ ಮೆಟ್ರೊ ಮತ್ತು ಬಸ್ ದರಗಳಿಂದ ಹಾಗೂ ವಾಹನದಟ್ಟಣೆಗಳಿಂದ ಆಗುವ ಸಂಕಷ್ಟಗಳನ್ನು ಬಗೆಹರಿಸಲೂ ಕರ್ನಾಟಕ ಸರಕಾರವೂ ಇಂತಹ ಒಂದು ಕ್ರಮವನ್ನು ಕೈಗೊಳ್ಳಲು ಇದು ಸಕಾಲ.

ಮೇಲೆ ಹೇಳಿದ ಈ ಎಲ್ಲಾ ತಾಂತ್ರಿಕ ಮತ್ತು ಇತರೆ ವಿಷಯಗಳಿಗೂ ಮಿಗಿಲಾದ ಪರಿಣಾಮಗಳನ್ನು ಸೃಷ್ಟಿಸುವ ಸಾಮಥ್ರ್ಯ ಈ ಯೋಜನೆಗಿದೆ. ದೇಶ ಎಷ್ಟೇ ಮುಂದುವರೆದಿದ್ದರೂ ಮಹಿಳೆಯರ ಸ್ವಾತಂತ್ರ್ಯಕ್ಕೆ ಇರುವ ಕಡಿವಾಣಗಳು ಕಡಿಮೆಯಾಗಿಲ್ಲ. ಹೆಚ್ಚಿನ ಮಹಿಳೆಯರ ಪ್ರತಿಯೊಂದು ಹೆಜ್ಜೆಗೂ ಆ ಮನೆಯ ಪುರುಷನ ಸಮ್ಮತಿ ಇರಲೇಬೇಕು. ಅನೇಕ ಮಹಿಳೆಯರಿಗೆ ಮನೆಯಲ್ಲಿ ಮಾತನಾಡುವ, ವಿಚಾರ ಮಾಡುವ ಅವಕಾಶವಿಲ್ಲ. ಇದರೊಂದಿಗೆ ಅವರಿಗೆ ಆರ್ಥಿಕ ಸ್ವಾವಲಂಬನೆ ಇಲ್ಲದಿದ್ದರೆ ಅವರ ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸುತ್ತದೆ. ನಮ್ಮ ಪುರುಷಪ್ರಧಾನ ಸಮಾಜ ಮಹಿಳೆಯರ ಸಬಲೀಕರಣದ ಪ್ರತಿಯೊಂದು ಹೆಜ್ಜೆಯನ್ನು ಏನಾದರೊಂದು ಕಾರಣ ನೀಡಿ ವಿರೋಧಿಸುತ್ತಲೇ ಇರುತ್ತದೆ. ಇಂತಹ ಸಮಯದಲ್ಲಿ ಇದೊಂದು ಪುಟ್ಟ ಹೆಜ್ಜೆಯಾದರೂ ಸ್ವಚ್ಛಂದವಾಗಿ ಹಾರಾಡಲು ರೆಕ್ಕೆಪುಕ್ಕಗಳನ್ನು ಬೆಳೆಸುವ ಪ್ರಯತ್ನ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...