Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...