Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...