Homeಅಂಕಣಗಳುಕುಟುಂಬ ರಾಜಕಾರಣ ಕೊನೆಯಾಗಲಿ

ಕುಟುಂಬ ರಾಜಕಾರಣ ಕೊನೆಯಾಗಲಿ

- Advertisement -
- Advertisement -

| ಎಚ್.ಎಸ್ ದೊರೆಸ್ವಾಮಿ |

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಇತ್ತೀಚೆಗೆ ಭೇಟಿಯಾದಾಗ ‘ಕುಟುಂಬ ರಾಜಕೀಯದ ಬಗೆಗೆ ತಲೆಕೆಡಿಸಿಕೊಳ್ಳಬೇಡಿ. ನಮ್ಮದೂ ಕುಟುಂಬ ರಾಜಕಾರಣ, ತಮಿಳುನಾಡಿನಲ್ಲಿ ಡಿಎಂಕೆಯದೂ ಕುಟುಂಬ ರಾಜಕಾರಣ, ಆಂಧ್ರ, ಹರಿಯಾಣ, ಮಹಾರಾಷ್ಟ್ರಗಳಲ್ಲಿ ಕೂಡ ಕುಟುಂಬ ರಾಜಕಾರಣ ನಡೆಯುತ್ತಿದೆ’ ಎಂದಿದ್ದರು. ಆದರೆ ಈಗ ಅದು ಬದಲಾಗಿದೆ. ರಾಹುಲ್ ಗಾಂಧಿಯವರಿಗೆ ‘ನೀವು ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಿರಿ’ ಎಂದು ಕಾಂಗ್ರೆಸ್ ಮುಖಂಡರು ಹೇಳಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು. ಆದರೆ ರಾಹುಲ್‍ಗಾಂಧಿಯವರು ಕಾಂಗ್ರೆಸ್ಸನ್ನು ಕುಟುಂಬ ರಾಜಕೀಯದಿಂದ ಪಾರು ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಅಧ್ಯಕ್ಷ ಪದವಿಗೆ ಬೇರೆಯವರನ್ನೇ ಆಯ್ಕೆ ಮಾಡಲಾಗುತ್ತದೆ. ಕುಟುಂಬ ರಾಜಕಾರಣ ಕೈಬಿಟ್ಟು ಸಮರ್ಥರಾದ ಒಬ್ಬ ನಾಯಕರನ್ನು ಕಾಂಗ್ರೆಸ್‍ನ ವರಿಷ್ಠರು ಕೂತು ಆಯ್ಕೆ ಮಾಡುತ್ತಾರೆ ಎಂಬ ಸಂತೋಷದ ಸುದ್ದಿಯನ್ನು ರಾಹುಲ್ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು.

ನೆಹ್ರೂ ಕುಟುಂಬದವರು ಕಾಂಗ್ರೆಸ್ಸನ್ನು ಕಬ್ಜಾ ಮಾಡಿದ್ದಾರೆ ಎಂಬ ಆಪಾದನೆ 30-40 ವರ್ಷಗಳಿಂದ ವಿರೋಧ ಪಕ್ಷಗಳಿಂದ ಕೇಳಿಬರುತ್ತಿದೆ. ಕುಟುಂಬ ರಾಜಕೀಯಕ್ಕೆ ಮತದಾರರು ಬೇಸತ್ತಿದ್ದರು. ಮೋದಿಯಂತೂ ನೆಹ್ರು ಮನೆತನದವರ ಕುಟುಂಬ ರಾಜಕೀಯವನ್ನು ಬಳಸಿಕೊಂಡು ಜನರಲ್ಲಿ ಕಾಂಗ್ರೆಸ್ ಬಗೆಗೆ ವಿಷ ಬೀಜ ಬಿತ್ತುವ ಕೆಲಸವನ್ನು 5 ವರ್ಷಗಳಿಂದ ಸತತವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನೇ ಬಂಡವಾಳ ಮಾಡಿಕೊಂಡು 2ನೇ ಅವಧಿಗೂ ಅಧಿಕಾರ ಪಡೆದುಕೊಂಡಿದ್ದಾರೆ.

ರಾಹುಲ್‍ಗಾಂಧಿಯವರ ಮನೆತನದ ರಾಜಕೀಯವನ್ನು ತೊರೆಯುವ ನಿರ್ಧಾರದಿಂದ ಮೋದಿಯವರ ಕೈಲಿದ್ದ ಮನೆತನದ ರಾಜಕೀಯದ ಅಸ್ತ್ರ, ತನ್ನ ಮೊನಚನ್ನು ಕಳೆದುಕೊಳ್ಳುತ್ತದೆ. ಮೋದಿಯವರ ಬಾಯನ್ನು ಕಟ್ಟಿಹಾಕುತ್ತದೆ. ಇದು ಕಾಂಗ್ರೆಸ್‍ನ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ.

ರಾಹುಲ್‍ಗಾಂಧಿಯವರ ಈ ನಿರ್ಧಾರದಿಂದ ಅವರು ಪ್ರಬುದ್ಧ ರಾಜಕೀಯ ನಾಯಕರು ಎಂಬುದು ಸಾಬೀತಾಗಿದೆ. ಈ ಮೂಲಕ ಕುಟುಂಬ ರಾಜಕೀಯ ನಡೆಸುವ ಇತರ ರಾಜಕೀಯ ಪಕ್ಷಗಳಿಗೂ ರಾಹುಲ್ ಎಚ್ಚರಿಕೆ ನೀಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಒಂದು ಮನೆತನದವರು ರಾಜಕೀಯವನ್ನು ಕಬ್ಜಾ ಮಾಡುವುದಕ್ಕೆ ಅವಕಾಶವಿಲ್ಲ. ಜನ ನಿಧಾನವಾಗಿಯಾದರೂ ದೇವೇಗೌಡರಿಗೆ ಮತ್ತು ರಾಹುಲ್‍ಗಾಂಧಿಯವರಿಗೆ ಮನೆತನ ರಾಜಕೀಯಕ್ಕೆ ನಾವು ವಿರೋಧಿಗಳು ಎಂಬುದನ್ನು ಚುನಾವಣೆಯಲ್ಲಿ ಅವರಿಬ್ಬರನ್ನೂ ಸೋಲಿಸುವ ಮೂಲಕ ಘೋಷಿಸಿದ್ದಾರೆ.

ರಾಹುಲ್‍ಗಾಂಧಿಯವರು ಜನತೆಯ ಆಕ್ರೋಶವನ್ನು ಅರ್ಥಮಾಡಿಕೊಂಡು ತಮ್ಮ ಕುಟುಂಬ ರಾಜಕೀಯದ ತತ್ವವನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ದೇವೇಗೌಡರು ಮನೆತನದ ರಾಜಕೀಯ ಮಾಡಿ ಸೋಲನ್ನು ಅನುಭವಿಸಿದ್ದರೂ ಅವರು ಕುಟುಂಬ ರಾಜಕೀಯದಿಂದ ಮುಕ್ತರಾಗುವ ಸೂಚನೆಗಳು ಕಾಣುತ್ತಿಲ್ಲ.

ಒಕ್ಕಲಿಗರ ಭಾಗ್ಯದಾತ ಎಂದು ಕುಟುಂಬ ರಾಜಕೀಯ ಮಾಡುತ್ತಿರುವ ದೇವೇಗೌಡರ ಕವಚ ಈ ಸಾರಿಯ ಲೋಕಸಭೆ ಚುನಾವಣೆ ವೇಳೆಯಲ್ಲಿ ಕಳಚಿಬಿತ್ತು. 7 ಸೀಟು ನೀಡಿದರೆ 3 ಸೀಟನ್ನು ಮನೆಗೆ ತೆಗೆದುಕೊಂಡು ಹೋಗಿದ್ದು ಒಕ್ಕಲಿಗ ಸಮುದಾಯದ ಭ್ರಮನಿರಸನಕ್ಕೆ ಕಾರಣವಾಯಿತು. ಗೌಡರು ಚುನಾವಣೆಗೆ ನಿಲ್ಲಿಸಿದ ಕುಟುಂಬದ ಮೂವರಲ್ಲಿ ಇಬ್ಬರು ಸೋತರು. ಸೋತವರಲ್ಲಿ ದೇವೇಗೌಡರೂ ಒಬ್ಬರು.

ದೇವೇಗೌಡರು ಇತ್ತೀಚಿನ ಸಾರ್ವಜನಿಕ ಸಭೆಯೊಂದರಲ್ಲಿ ಸೋಲು ನನಗೆ ಹೊಸದೇನಲ್ಲ ಎಂದಿದ್ದಾರೆ. ಈ ಸಾರಿ ಸೋತದ್ದಕ್ಕೆ ವಿಶೇಷ ಕಾರಣವಿದೆ. ಈ ಸಾರಿ ಅವರು ಸೋತದ್ದು ಅವರು ಕುಟುಂಬ ರಾಜಕಾರಣವನ್ನು ಖೇಚರಕ್ಕೆ ತೆಗೆದುಕೊಂಡು ಹೋದ ಕಾರಣಕ್ಕೆ. ಒಕ್ಕಲಿಗ ಮತದಾರರಿಗೆ ಇವರ ಕುಟುಂಬ ರಾಜಕಾರಣ ಮೊದಲ ಸಾರಿಗೆ ಅರಿವಿಗೆ ಬಂತು. ಆಕ್ರೋಶದಿಂದ ತಮ್ಮ ಮತಗಳನ್ನು ಕುಟುಂಬ ರಾಜಕಾರಣದ ವಿರುದ್ಧವಾಗಿ ಹಾಕಿದರು.

ದೇವೇಗೌಡರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಯ ದಿಟ್ಟ ನಿಲುವನ್ನು ಅರ್ಥಮಾಡಿಕೊಳ್ಳಬೇಕು. ಅದು ರಾಜಕೀಯ ಮುತ್ಸದ್ದಿತನ. ಕಾಂಗ್ರೆಸ್ ಮೊದಲುಗೊಂಡು ಎಲ್ಲಾ ರಾಜಕೀಯ ಪಕ್ಷಗಳು ಶಾಸಕರನ್ನು, ಪಾರ್ಲಿಮೆಂಟ್ ಸದಸ್ಯರನ್ನು ಆಯ್ಕೆಮಾಡುವಾಗ ಕ್ರಿಮಿನಲ್‍ಗಳನ್ನು, ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿರುವವರನ್ನು, ಭ್ರಷ್ಟರನ್ನು, ಭೂಗಳ್ಳರನ್ನು, ಪಾಳೆಗಾರಿಕೆ ಮನೆತನದವರನ್ನು ದೂರವಿಡಬೇಕು. ಸೋನಿಯಾಗಾಂಧಿಯವರ ಸುತ್ತಲೂ ಸಮಯ ಸಾಧಕರು, ವಂದಿಮಾಗಧರು, ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಸ್ವಾರ್ಥಸಾಧಿಸುವವರು ಸುತ್ತುಗಟ್ಟಿರುವುದು. ಇಂತಹದರಿಂದ ಅವರು ದೂರ ಉಳಿಯಬೇಕಾದ್ದರ ಅಗತ್ಯತೆ ಇದೆ. ಈ ಕೆಲಸವನ್ನು ರಾಹುಲ್ ಈ ಕೂಡಲೆ ಕೈಗೆತ್ತಿಕೊಳ್ಳಬೇಕು.

ಇಂದಿನ ಇಂದಿರಾ ಕಾಂಗ್ರೆಸ್ ಹಳೇ ಚಾಳಿಯನ್ನು ಬಿಟ್ಟು ಹೊಸ ರೀತಿಯ ಮೌಲ್ಯಾಧಾರಿತ ರಾಜಕೀಯವನ್ನು ಆರಂಭಿಸಲಿ ಎಂದು ಆಶಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...