Homeಕರ್ನಾಟಕ'ಬ್ರಾಹ್ಮಣ' ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

‘ಬ್ರಾಹ್ಮಣ’ ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

- Advertisement -
- Advertisement -

ನೀವು ಗೂಗಲ್‍ನಲ್ಲಿ ಸಾಕಷ್ಟು ಹುಡುಕಿದರೂ ಈ ಸುದ್ದಿ ಎರಡು ಕಡೆ ಬಿಟ್ಟರೆ ಎಲ್ಲೂ ಕಾಣುವುದಿಲ್ಲ. ಅದರಲ್ಲೂ ಮಾಧ್ಯಮಗಳ ಕ್ಯಾಮೆರಾದ ಮುಂದೆ ನಡೆದ ಈ ವಿದ್ಯಮಾನದ ವಿಡಿಯೋದ ತುಣುಕೂ ಸಹಾ ಇಂಟರ್‍ನೆಟ್‍ನಲ್ಲಿ ಸುಲಭಕ್ಕೆ ಸಿಗುವುದಿಲ್ಲ. ಆದರೆ ಸಮಕಾಲೀನ ಸಂಧರ್ಭದ ಬಹುಮುಖ್ಯ ಹೇಳಿಕೆಯಾದ ಈ ಸುದ್ದಿ ಮತ್ತು ಅದರ ಕುರಿತ ವಿಶ್ಲೇಷಣೆಯನ್ನು ಮಾಡದಿದ್ದರೆ ಅದು ಪತ್ರಿಕಾಧರ್ಮಕ್ಕೇ ಅಪಚಾರ.

ಟಿವಿ 18 ಮತ್ತು ಡೆಕ್ಕನ್ ನ್ಯೂಸ್‍ಗಳಲ್ಲಿ ಬಂದಿರುವ ಈ ಸುದ್ದಿಯ ವಿವರ ಕೆಳಕಂಡಂತಿದೆ.

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ, ಕನ್ನಡ ದೃಶ್ಯ ಮಾಧ್ಯಮಗಳ ಮೇಲೆ ಸಿಡಿಮಿಡಿಗೊಂಡ ಮಾಜಿ ಪ್ರಧಾನಿ, ಈ ರಾಜ್ಯದಲ್ಲಿ ಕನ್ನಡ ದೃಶ್ಯ ಮಾಧ್ಯಮಗಳು ಎಷ್ಟು ಉಪಕಾರ ಮಾಡುತ್ತಿವೆ, ಒಂದು ಪ್ರಾದೇಶಿಕ ಪಕ್ಷ ಉಳಿಯೋದಕ್ಕೆ ಎಷ್ಟು ಉಪಕಾರ ಮಾಡುತ್ತಿವೆ ನಿಮಗೆ ಧನ್ಯವಾದಗಳು. ನಾನು ಟಿವಿನೇ ನೋಡ್ಲಿಲ್ಲಾ ರೀ. ನಾನು ಭಾಷಣ ಮಾಡಿದ್ದನ್ನ ಬರೆಯಬೇಕು ಅಂತಾನೂ ಇಲ್ಲಾ ನೀವು ಬರೀರಿ ಇಲ್ಲಾ ಬಿಡಿ. ನನಗೆ 60 ವರ್ಷದ ರಾಜಕೀಯ ಜೀವನದಲ್ಲಿ ಇಷ್ಟು ಸಣ್ಣ ಮಟ್ಟಕ್ಕೆ ಟಿಬೇಟ್ ಮಾಡೋದನ್ನ ನಾನು ನೋಡಿಲ್ಲಾ ನಡೀರಿ ನಡೀರಿ. ಈ ದೇಶದ ಪ್ರಧಾನಿಯದು ಸಣ್ಣದು ಸಿಕ್ಕಲಿ ಅದು ಹೇಗೆ ಬರುತ್ತೆ? ನಾನು ಶೂದ್ರ ಅಷ್ಟೇನೇ, ಗೊತ್ತಿದೆ ನನಗೆ. ನಡೀರಿ ಎಂದು ಎದ್ದು ಮನೆಯೊಳಗೆ ಹೋದ ದೇವೇಗೌಡ. ಮಾಧ್ಯಮಗಳ ಮೇಲೆ ಬಾರೀ ಆಕ್ರೋಶಗೊಂಡ ದೇವೇಗೌಡ.
ಇದು ಸುದ್ದಿ. ಅವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಯಾವೊಂದು ಪತ್ರಿಕೆಯೂ ಇದನ್ನು ವರದಿ ಮಾಡಲಿಲ್ಲ. ಟಿವಿ 18 ಈ ಸುದ್ದಿಯನ್ನು ಹಾಕಿದ್ದರೂ, ಅದರೊಂದಿಗಿರುವ ದೇವೇಗೌಡರು ಮಾತಾಡುವ ವಿಡಿಯೋದಲ್ಲಿ ಈ ಭಾಗ ಇಲ್ಲ. ಆದರೆ, ಹಾಸನದಲ್ಲಿ ಗೌಡರು ಆಡಿದ ಈ ಮಾತನ್ನು ಅಲ್ಲಿನ ಎಲ್ಲಾ ವರದಿಗಾರರೂ ಕೇಳಿಸಿಕೊಂಡಿದ್ದಾರೆ, ರೆಕಾರ್ಡ್ ಸಹಾ ಮಾಡಿಕೊಂಡಿದ್ದಾರೆ.

ವಿಡಿಯೋ ನೋಡಿ

ಇರಲಿ, ಆದರೆ ದೇವೇಗೌಡರು ಹೇಳಿರುವ ಈ ಮಾತು ತಪ್ಪೇ? ಮಾಧ್ಯಮಗಳ ಮೇಲೆ ಈ ರೀತಿಯ ಜಾತಿ ಆರೋಪ ಮಾಡುವುದು ಸರಿಯೇ? ಕರ್ನಾಟಕದ ವಿವಿಧ ಮಾಧ್ಯಮ ಸಂಸ್ಥೆಗಳ ಮೇಲೆ ಯಾರ ಹಿಡಿತ ಇದೆ ಎಂದು ಅರಿಯಲು, ಹವ್ಯಕ ಬ್ರಾಹ್ಮಣರ ಸಮ್ಮೇಳನದಲ್ಲಿ ವಿಶ್ವೇಶ್ವರಭಟ್ ಮಾಡಿದ, ವೈರಲ್ ಆದ ಆಡಿಯೋ ಕೇಳಿದರೆ ಗೊತ್ತಾಗುತ್ತದೆ. ಕರ್ನಾಟಕದ ಪತ್ರಿಕಾ ಮಾಧ್ಯಮವನ್ನು ತಮ್ಮ ಕೈಯ್ಯಾರೆ ಹಾಳು ಮಾಡಿದ, ಅದನ್ನು ಬಿಜೆಪಿ ವಿರೋಧಿಗಳ ವಿರುದ್ಧ ಮಾಬ್ ಹಿಸ್ಟೀರಿಯಾ ಮೂಡಿಸಲು ಯತ್ನಿಸಿದವರು ಅವರು. ಇಂದು ಕನ್ನಡದ ಯಾವುದೇ ಮಾಧ್ಯಮ ಸಂಸ್ಥೆಗೆ ಹೋದರೆ ಅಲ್ಲೆಲ್ಲಾ ಹವ್ಯಕ ಬ್ರಾಹ್ಮಣ ಹುಡುಗರೇ ಕಾಣುತ್ತಾರೆ, ಇವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಅವರು ವಿವರವಾಗಿ ಮಾತನಾಡುತ್ತಾರೆ. ಕೆಳಹಂತದಲ್ಲಿ ಮಾತ್ರವಲ್ಲದೇ, ಕರ್ನಾಟಕದ ಇಂದಿನ ರಾಜ್ಯಮಟ್ಟದ ಹೆಚ್ಚಿನ ಪತ್ರಿಕೆಗಳು ಮತ್ತು ಚಾನೆಲ್‍ಗಳ ಮುಖ್ಯಸ್ಥರು ಬ್ರಾಹ್ಮಣರಾಗಿದ್ದಾರೆ. ಅವರಲ್ಲೂ ಶೇ.90ರಷ್ಟು ಹವ್ಯಕ ಬ್ರಾಹ್ಮಣರಾಗಿದ್ದಾರೆ.

ಹವ್ಯಕ ಬ್ರಾಹ್ಮಣರೆಂದರೆ ಗೊತ್ತಿರದವರಿಗೆ – ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿ ಪ್ರತಿನಿಧಿಸುವ ಜಾತಿ ಇದು. ಬ್ರಾಹ್ಮಣರಲ್ಲಿ ತೀರಾ ಇತ್ತೀಚಿನವರೆಗೂ ಕೃಷಿಯೇ ಪ್ರಧಾನ ಕಸುಬಾಗಿಸಿಕೊಂಡಿದ್ದ ಸಮುದಾಯವಿದು. ಇತ್ತೀಚೆಗೆ ಕಡಿಮೆಯಾಗುತ್ತಿದ್ದರೂ, ಈಗಲೂ ಕೃಷಿಯಲ್ಲಿ ತೊಡಗಿರುವವರ ಸಂಖ್ಯೆ ಗಣನೀಯವೇ ಆಗಿದೆ.
ಯಾವುದೋ ಸಾಂಧರ್ಭಿಕ ಅಥವಾ ಐತಿಹಾಸಿಕ ಕಾರಣಗಳಿಂದಾಗಿ ನಿರ್ದಿಷ್ಟ ಜಾತಿ ಮತ್ತು ಉಪಜಾತಿಗಳು ನಿರ್ದಿಷ್ಟ ಕ್ಷೇತ್ರವೊಂದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅದನ್ನು ಆ ಜಾತಿಯದ್ದೇ ತಪ್ಪು ಎನ್ನಲಾಗುವುದಿಲ್ಲ. ಆದರೆ, ಅವರು ಅಲ್ಲಿದ್ದು ಏನು ಮಾಡುತ್ತಿದ್ದಾರೆ ಎಂಬುದು ಹೆಚ್ಚು ಮುಖ್ಯವಾದುದು. ನಿಸ್ಸಂದೇಹವಾಗಿ ಹೇಳಬಹುದಾದ ಒಂದು ಸಂಗತಿಯೆಂದರೆ, ಬಹುಪಾಲು ಮಾಧ್ಯಮಗಳು ಶೂದ್ರ ರಾಜಕಾರಣಿಗಳು, ಶೂದ್ರ ರಾಜಕಾರಣವನ್ನು ಹಣಿಯುತ್ತಿವೆ. ಬಿಜೆಪಿಯಲ್ಲಿ ಬೇರೆ ಬೇರೆ ಸಮುದಾಯಗಳಿಗೆ ಸೇರಿದವರು ಇದ್ದಾರಾದರೂ, ಅದು ವೈದಿಕ ಶ್ರೇಷ್ಠತೆಯನ್ನು ಎತ್ತಿಹಿಡಿಯುವ ಸಿದ್ಧಾಂತ ಮತ್ತು ರಾಜಕಾರಣ ಮಾಡುತ್ತಿರುವುದರಿಂದ, ಶೇ.90ರಷ್ಟು ಅದರ ಪರವಾಗಿ ನಿಲ್ಲುತ್ತಾರೆ. ದಲಿತ ಮುಖ್ಯಮಂತ್ರಿಯ ಪ್ರಶ್ನೆಯನ್ನು ಎತ್ತುವುದೂ ಸಹಾ ಶೂದ್ರರಾದ ಸಿದ್ದರಾಮಯ್ಯನವರನ್ನು ಹಣಿಯಲೇ ಆಗಿರುತ್ತದೆ.

ತೀರಾ ಇತ್ತೀಚೆಗಿನ ಒಂದು ಉದಾಹರಣೆ ನೀಡುವುದಾದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಮೇಲೆ ‘ಮೀಟೂ’ ಆರೋಪಗಳು ಬಂದವು. ಸರ್ವಾಜನಿಕವಾಗಿ ಚರ್ಚೆಯಾಗಿದ್ದಕ್ಕಿಂತ ಹೆಚ್ಚು ಮಾಹಿತಿ ಈ ಮಾಧ್ಯಮಗಳಲ್ಲಿರುವವರ ಕೈಯ್ಯಲ್ಲಿ ಇತ್ತು. ಅದನ್ನೊಂದು ಸುದ್ದಿಯೇ ಅಲ್ಲ ಎಂಬಂತೆ ಪಕ್ಕಕ್ಕೆ ತಳ್ಳಿದ್ದಷ್ಟೇ ಅಲ್ಲದೇ, ಆತನ ವಿರುದ್ಧ ವರದಿ ಮಾಡಬಾರದೆಂಬ ಸಂವಿಧಾನ ವಿರೋಧಿ ತೀರ್ಪು ಬಂದ ಮೇಲೆ ಅದನ್ನು ಪ್ರಶ್ನಿಸಲೂ ಹೋಗಲಿಲ್ಲ. ಸ್ವಲ್ಪ ಕಾಲದ ನಂತರ ಇಂಡಿಯನ್ ಎಕ್ಸ್ ಪ್ರೆಸ್ ಸಂಪಾದಕೀಯ ತೀರ್ಪನ್ನು ಪ್ರಶ್ನಿಸಿತು, ಇನ್ನೂ ಒಂದು ವಾರದ ನಂತರ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡಾಗಳು ಬರೆದವು.

ಒಂದು ವೇಳೆ ಸದರಿ ವ್ಯಕ್ತಿ ಬ್ರಾಹ್ಮಣನಾಗಿರದೇ ಇದ್ದಲ್ಲಿ ಏನಾಗುತ್ತಿತ್ತು? ಆ ವ್ಯಕ್ತಿಯನ್ನು ಚುನಾವಣಾ ಕಣದಿಂದ ನಿವೃತ್ತಗೊಳಿಸುವ ಮಟ್ಟಿಗೆ ಕೂಗಾಟ ನಡೆದಿರುತ್ತಿತ್ತು. ಇಂತಹ ಒಂದಲ್ಲಾ, ಎರಡಲ್ಲಾ, ನೂರಲ್ಲಾ ಸಾವಿರ ಉದಾಹರಣೆಗಳನ್ನು ನೋಡಬಹುದು.

ಈ ಪ್ರಮಾಣದ ಜಾತಿ ರಾಜಕಾರಣವನ್ನು ಮಾಧ್ಯಮಗಳಲ್ಲಿ ಕುಳಿತಿರುವವರು ಮಾಡುತ್ತಿದ್ದಾರೆ. ಬಹಳ ಕ್ಷುದ್ರವಾದ ನಡವಳಿಕೆಯನ್ನು ಇವರೆಲ್ಲರೂ ತೋರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಬಹಳ ಅಪಾಯಕಾರಿ. ಈ ಕುರಿತು ಚರ್ಚೆ ನಡೆಯದಿದ್ದರೆ ಅದು ಇನ್ನೂ ಅಪಾಯಕಾರಿ. ನ್ಯಾಯಪಥ-ನಮ್ಮ ಗೌರಿ ಪತ್ರಿಕೆ ಮತ್ತು https://naanugauri.com ಈ ಚರ್ಚೆಯನ್ನು ಗಂಭೀರವಾಗಿ ಮತ್ತು ಆರೋಗ್ಯಕರವಾಗಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...