Homeಚಳವಳಿದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

ದೇಶದ ಗಮನ ಸೆಳೆಯಲು ಹೋದ ನಮ್ಮ ಗಮನ ಸೆಳೆದ ಒಂದು ಪ್ರತಿಭಟನೆ

- Advertisement -
- Advertisement -

ಸರೋವರ್ ಬೆಂಕಿಕೆರೆ |

ರೈತರ ಹೋರಾಟವು ಎಲ್ಲರ ಗಮನ ಸೆಳೆಯಿತು. ಅದಕ್ಕಾಗಿ ದೆಹಲಿಗೆ ಹೋಗಿದ್ದ ನಮಗೆ ಅದೇ ಜಂತರ್‌ಮಂತರ್‌ನಲ್ಲಿ ಇನ್ನೊಂದು ಹೋರಾಟವು ಗಮನ ಸೆಳೆಯಿತು. ಸರ್ಕಾರಗಳ ಕಣ್ಣು ಕಾಣಿಸದೇ ಇರಬಹುದು, ಅವರುಗಳ ಕಿವಿ ಕೇಳಿಸದೇ ಇರಬಹುದು. ಆದರೆ ಆಳದಲ್ಲಿ ಪ್ರಜ್ಞೆಯನ್ನು ಜಾಗೃತವಾಗಿರಿಸಿಕೊಂಡ ನಾಗರಿಕರು ಅವರ ಕಣ್ಣು, ಕಿವಿಗಳು ಊನವಾಗಿದ್ದರೂ, ಸಮಾಜವನ್ನು ಎಚ್ಚರಿಸುತ್ತಲೇ ಇರುತ್ತಾರೆ. ದೆಹಲಿಯ ರೈತ ಹೋರಾಟ ನಡೆದ ೨ ದಿನಗಳ ಬಳಿಕ ನಮಗೆ ಅಲ್ಲಿ ಕಂಡ ಸಂಗತಿಯಿದು. ಡಿ. 3ರಂದು ನೂರಾರು ಅಂಗವಿಕಲರು ಸಂಘಟಿತರಾಗಿ ಒಂದು ಪ್ರತಿಭಟನೆಯನ್ನು ನಡೆಸಿದರು. ಅವರಲ್ಲಿ ಅಂಧರೇ ಅತ್ಯಂತ ಹೆಚ್ಚು ಸಂಖ್ಯೆಯಲ್ಲಿದ್ದರು.

ಹೆಣ್ಣುಮಕ್ಕಳು ಬಳಸುವ ನ್ಯಾಪ್ಕಿನ್ ಮೇಲೆ ಹೆಚ್ಚಿನ ಜಿಎಸ್‌ಟಿ ತೆರಿಗೆ ವಿಧಿಸಿ ದೇಶದಾದ್ಯಂತ ಪ್ರತಿರೋಧದ ಬಂದ ನಂತರದಲ್ಲಿ ಸ್ವಲ್ಪ ಮಟ್ಟಿಗೆ ತೆರಿಗೆ ಇಳಿಸಿದ್ದು ನಮಗೆ ಗೊತ್ತಿತ್ತು. ಆದರೆ ಅದೇ ಸರ್ಕಾರವು ಸಾವಿರಾರು ಕೋಟಿ ರೂಗಳನ್ನು ಕೊಳ್ಳೆ ಹೊಡೆದು ದೇಶ ಬಿಟ್ಟಂತ ದರೋಡೆಕೋರರು, ತೆರಿಗೆ ಪಾವತಿಸದೆ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ತಿಂದು ತೇಗುತ್ತಿರುವ ಬಂಡವಾಳಶಾಹಿಗಳಿಗೆ ಬೆನ್ನೆಲುಬಾಗಿ ನಿಂತಿರುವುದೂ ಗೊತ್ತಿತ್ತು. ಆದರೆ, ಈ ಪ್ರತಿಭಟನೆಯಿಂದ ನಮಗೆ ಇನ್ನೊಂದು ಸಂಗತಿಯೂ ಗೊತ್ತಾಯಿತು. ಮಾನ ಮರ್ಯಾದೆಯಿಲ್ಲದ, ಪಂಚೇಂದ್ರಿಯಗಳಿಲ್ಲದ ಕೇಂದ್ರ ಸರ್ಕಾರವು ಅಂಗವಿಕಲರು ಬಳಸುವ ಉಪಕರಣಗಳ ಮೇಲೆ ತೆರಿಗೆ ಹೆಚ್ಚಿಸಿ 25% ಜಿಎಸ್‌ಟಿಅನ್ನು ವಿಧಿಸಿದೆ! ಅದೇ ಕಾರಣಕ್ಕೆ ಅವರು ಅಲ್ಲಿ ಸೇರಿದ್ದರು.

ಯುಪಿಎ ಆಡಳಿತದ ಸಂದರ್ಭದಿಂದ ಶುರುವಾದ ಜಾಬ್‌ಲೆಸ್ ಗ್ರೋಥ್‌ನಿಂದ ಜಾಬ್ ಲಾಸ್‌ಗ್ರೋಥ್‌ನತ್ತ ಭಾರತವು ಮುಖ ಮಾಡಿದೆ. ಈ ನಕಾರಾತ್ಮಕ ಬೆಳವಣಿಗೆಗೆ ಬಿಜೆಪಿ ಆಡಳಿತವೇ ಕಾರಣವೆಂಬುದು ನಮಗೆ ಗೊತ್ತಿತ್ತು. ನಿರುದ್ಯೋಗದ ವಿರುದ್ಧದ ಆಂದೋಲನದಲ್ಲಿ ತೊಡಗಿದ್ದ ನಮಗೆ ಅದರ ಒಳಹೊರಗುಗಳ ಅರಿವಿದೆ. ಆದರೆ ಈ ಅವಧಿಯಲ್ಲಿ ಎರಡು ವಿಶೇಷ ಸಮುದಾಯಗಳ ಕುರಿತು ನಮಗೆ ದೆಹಲಿಯಲ್ಲಿ ಅರಿವಿಗೆ ಬಂದಿತು. ನಿರುದ್ಯೋಗದ ಸಮಸ್ಯೆಯು ಓದಿಕೊಂಡಿರುವ ಸುಶಿಕ್ಷಿತ ಸಮುದಾಯದ ಜೊತೆಗೆ, ಹಳ್ಳಿಯಲ್ಲೇ ಉಳಿಯಬಯಸುವ ಯುವಜನರದ್ದೂ ಆಗಿರುವುದು ಎಲ್ಲರಿಗೂ ತಿಳಿದಿದೆ; ಉದ್ಯೋಗ ಹುಡುಕಿಕೊಳ್ಳಲು ಸಾಧ್ಯವಾಗದೇ ಸೆಕ್ಸ್‌ವರ್ಕ್ ಮತ್ತು ಭಿಕ್ಷಾಟನೆಗಿಳಿದಿರುವ ಹಿಜ್ರಾ ಸಮುದಾಯದ ಕಥೆ ಏನಾಗಿರಬಹುದು? ಹಾಗೆಯೇ ವಿಕಲಚೇತನರದ್ದು?

ಎಲ್ಲರಿಗೂ ಖುಷಿಯಿಂದ ಆಚರಣೆ ಮಾಡಲು ಒಂದು ದಿನವಿರುವಂತೆ (ಡಿ.3ರಂದು) ಯಾವುದೋ ಒಂದು ಕಾರ್ಯಕ್ರಮದಲ್ಲಿ ಅಂಗವಿಕಲರ ದಿನವನ್ನು ಸಂತಸದಿಂದ ಆಚರಣೆ ಮಾಡಬೇಕಿದ್ದವರು ಅಂದು ಪ್ರತಿಭಟನೆಗೆ ಧುಮುಕಿದ್ದರು. ದೆಹಲಿಯಲ್ಲಿ ಸಂಘಟಿತರಾಗಿದ್ದ ಅವರು ನೋವುಗಳನ್ನು ಅದುಮಿಟ್ಟುಕೊಂಡು ರೋಷಾವೇಶದಿಂದ ಕುದಿಯುತ್ತಿದ್ದರು. ನಮಗೆ ನಿಮ್ಮ ಕರುಣೆ ಬೇಡ, ಸ್ವಾವಲಂಬಿಯಾಗಿ ಘನತೆಯಿಂದ ನಾವು ಜೀವಿಸಲು ನಮ್ಮ ಕೈಗೆ ಉದ್ಯೋಗ ಕೊಡಿ, ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ ಎಂದು ತಮ್ಮ ಹಕ್ಕುಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳುತ್ತಿದ್ದರು. ಅಲ್ಲದೆ ಅಂಗವಿಕಲರ ಉಪಕರಣಗಳ ಮೇಲೆ ಹೆಚ್ಚಿಸಿರುವ ಜಿಎಸ್‌ಟಿ ತೆರಿಗೆಯನ್ನು ಕಡಿಮೆ ಮಾಡಿ ಎನ್ನುವುದು ಅವರ ಹಕ್ಕೊತ್ತಾಯವಾಗಿತ್ತು. ದೇಶದ ದೊಡ್ಡ ಸುದ್ದಿಯಾಗಬೇಕಿದ್ದ ಈ ಹೋರಾಟವು ದುರದೃಷ್ಟವಶಾತ್ ಬಿಜೆಪಿಯ ಕೈಗೊಂಬೆಯಾಗಿರುವ ಮಾಧ್ಯಮಗಳು ಜನರ ಜೀವನಕ್ಕೆ ಸಂಬಂಧವೇ ಇಲ್ಲದ ಯಾರ ಹೊಟ್ಟೆಯನ್ನು ತುಂಬಿಸದ ರಾಮಮಂದಿರ, ಕೋಮು ದ್ವೇಷದಂತಹ ವಿಚಾರಗಳು ಮತ್ತು ಸೆಲಬ್ರಿಟಿಗಳ ಮದುವೆಯಿಂದ ಹಿಡಿದು ಬಸುರಿ ಬಾಣಂತನದವರೆಗಿನ ಸುದ್ದಿಗಳಲ್ಲಿ ಮುಳುಗಿವೆ. ಕರ್ನಾಟಕದಿಂದ ದೆಹಲಿಯವರೆಗೆ ಇದೇ ಕಥೆ. ಒಂದು ಸಮಧಾನದ ವಿಚಾರವೆಂದರೆ, ನೋವುಣ್ಣುತ್ತಿರುವ ಸಮುದಾಯಗಳು ಸುಮ್ಮನೇ ಕೂತಿಲ್ಲ; ಬೀದಿಗಿಳಿಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...