Homeಮುಖಪುಟ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಬಿಬಿಸಿ’ ನಡೆಸಿದ ಸಂದರ್ಶನದ ಮೇಳೆ ಸಿಟ್ಟಾದ ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಸಂದರ್ಶಕರನ್ನೇ ಒಂದು ಗುಂಪಿನ ಏಜೆಂಟ್‌ ಎಂದು ಮೂದಲಿಸಿದ್ದಾರೆ. (ವಿಡಿಯೊ ನೋಡಿ)

- Advertisement -
- Advertisement -

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಅವರು ಬಿಬಿಸಿ ಸಂದರ್ಶನವನ್ನು ಮೊಟುಕುಗೊಳಿಸಿ ಸಂದರ್ಶನದ ದೃಶ್ಯಗಳನ್ನು ಡಿಲೀಟ್‌ ಮಾಡುವಂತೆ ಸೂಚಿಸಿರುವ ಘಟನೆ ನಡೆದಿದೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿಯಾಗಿ ಮಾಡಲಾದ ದ್ವೇಷ ಭಾಷಣಗಳ ಕುರಿತ ಪ್ರಶ್ನೆಗಳಿಗೆ ಕೋಪಗೊಂಡ ಕೇಶವ್‌ ಪ್ರಸಾದ್‌, ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಸಂದರ್ಶನದ ದೃಶ್ಯಗಳನ್ನು ಅಳಿಸಲು ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಮೌರ್ಯ ಅವರು ನಂತರದಲ್ಲಿ ಪ್ರತಿಕ್ರಿಯಿಸಿದ್ದು ಈ ಘಟನೆಯನ್ನು “ದುರದೃಷ್ಟಕರ ಘಟನೆ” ಎಂದು ಕರೆದ್ದಾರೆ.

ಧಾರ್ಮಿಕ ಸಮಾವೇಶದ ದ್ವೇಷ ಭಾಷಣಗಳ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪಕ್ಷದ ನಾಯಕರು ಮೌನ ತಾಳಿರುವುದನ್ನು ಮೌರ್ಯ ಅವರಲ್ಲಿ ಬಿಬಿಸಿ ಸಂದರ್ಶಕರು ಪ್ರಶ್ನಿಸುತ್ತಾರೆ.

ನಾಯಕರು ಇಂತಹ ಘೋಷಣೆಗಳ ವಿರುದ್ಧ ಮಾತನಾಡುವ ಮೂಲಕ ಜನರಿಗೆ ಧೈರ್ಯ ತುಂಬಬೇಕೇ ಎಂದು ಕೇಳಿದಾಗ ಮೌರ್ಯ ಅವರು ಪ್ರತಿಕ್ರಿಯಿಸಿ, “ನಾವು ನಮ್ಮನ್ನು ಸಾಬೀತುಪಡಿಸುವ ಅಗತ್ಯವಿಲ್ಲ. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಎಲ್ಲರ ಅಭಿವೃದ್ಧಿ ಮತ್ತು ಬೆಂಬಲ) ನಲ್ಲಿ ನಂಬಿಕೆ ಹೊಂದಿದ್ದೇವೆ. ತಮ್ಮ ವಿಚಾರಗಳನ್ನು ಹೇಳುವುದಕ್ಕೆ ಧಾರ್ಮಿಕ ಮುಖಂಡರಿಗೆ ಹಕ್ಕು ಇದೆ” ಎನ್ನುತ್ತಾರೆ.

ಮುಂದುವರಿದು, “ಹಿಂದೂ ಧಾರ್ಮಿಕ ಮುಖಂಡರನ್ನು ಮಾತ್ರ ಯಾಕೆ ಎತ್ತಿ ತೋರಿಸುತ್ತೀರಿ” ಎಂದು ಉಪಮುಖ್ಯಮಂತ್ರಿ ಸಂದರ್ಶಕರಲ್ಲಿ ಪ್ರಶ್ನಿಸುತ್ತಾರೆ.

“ಹಿಂದೂ ನಾಯಕರ ಬಗ್ಗೆ ಮಾತ್ರ ಏಕೆ ಕೇಳುತ್ತಿದ್ದೀರಿ? ಇತರ ಧಾರ್ಮಿಕ ಮುಖಂಡರು ಮಾಡಿದ ಕಮೆಂಟ್‌ಗಳ ಬಗ್ಗೆ ಯಾಕೆ ಮಾತನಾಡಲ್ಲ? 370ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಎಷ್ಟು ಮಂದಿ ಜಮ್ಮು ಮತ್ತು ಕಾಶ್ಮೀರವನ್ನು ತೊರೆಯಬೇಕಾಯಿತು, ನೀವು ಅದರ ಬಗ್ಗೆ ಏಕೆ ಮಾತನಾಡುವುದಿಲ್ಲ? ಧರ್ಮ ಸಂಸದ್ ಬಿಜೆಪಿ ಕಾರ್ಯಕ್ರಮವಲ್ಲ, ಧಾರ್ಮಿಕ ಮುಖಂಡರದ್ದು’’ ಎಂದು ತಿಳಿಸುತ್ತಾರೆ.

“ಸ್ವಾಮೀಜಿಗಳು ನಂಬಿದ್ದನ್ನು ಹೇಳಿದ್ದಾರೆ. ಇದು ರಾಜಕೀಯಕ್ಕೆ ಸಂಬಂಧಿಸಿಲ್ಲ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ನಾಯಕರೂ ಇದ್ದಾರೆ. ಅವರ ಬಗ್ಗೆಯೂ ಮಾತನಾಡಿ” ಎಂದು ಉಪಮುಖ್ಯಮಂತ್ರಿ ಒತ್ತಾಯಿಸುತ್ತಾರೆ.

ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆಯನ್ನು ಕೇಂದ್ರೀಕರಿಸಿ, “ಇಂತಹ ಭಾಷಣಗಳು ಚುನಾವಣೆಗೆ ಮುನ್ನ ವಾತಾವರಣವನ್ನು ಹಾಳುಮಾಡುತ್ತವೆಯಲ್ಲ?” ಎಂದು ಸಂದರ್ಶಕರು ಎಂದು ಕೇಳುತ್ತಾರೆ. ಜೊತೆಗೆ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಕೂಗಲಾದ ಘೋಷಣೆಗಳ ಆಧಾರದಲ್ಲಿ ದೇಶದ್ರೋಹದ ಆರೋಪವನ್ನು ಹೊರಿಸಿರುವುದರ ಕುರಿತೂ ಅವರು ಕೇಳುತ್ತಾರೆ.

“ದೇಶದ್ರೋಹ ಬೇರೆ ವಿಷಯ. ಆದರೆ ಇದು ಧರ್ಮ ಸಂಸದ್. ಆಗ ನಾವು ಹೇಳಬಹುದು- ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸೂರ್ಯ ನಮಸ್ಕಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಇಲ್ಲ” ಎಂದು ಮೌರ್ಯ ಉತ್ತರಿಸುತ್ತಾರೆ.

ವಿವಾದಾತ್ಮಕ ಧಾರ್ಮಿಕ ಸಮಾವೇಶದಲ್ಲಿ ಎದ್ದಿರುವ ನರಮೇಧದ ಕರೆಗಳ ಬಗ್ಗೆ ಕೇಳಿದಾಗ ಡಿಸಿಎಂ ಸಿಟ್ಟಿಗೆದ್ದರು. “ನೀವು ಯಾವ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ನನಗೆ ತಿಳಿದಿಲ್ಲ, ನೀವು ಚುನಾವಣೆಯ ಬಗ್ಗೆ ಕೇಳುತ್ತೀರಾ? ನೀವು ಪತ್ರಕರ್ತರಂತೆ ಮಾತನಾಡುತ್ತಿಲ್ಲ. ನೀವು ನಿರ್ದಿಷ್ಟ ಗುಂಪಿನ ಏಜೆಂಟರಂತೆ ಮಾತನಾಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಮೈಕ್‌ ಕಿತ್ತೆಸೆಯುತ್ತಾರೆ.

ಉತ್ತರ ಪ್ರದೇಶ ಮತ್ತು ಇನ್ನೂ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯು ಧರ್ಮ ಸಂಸದ್ ಬಗೆಗಿನ ಪ್ರಶ್ನೆಗಳನ್ನು ಎದುರಿಸುತ್ತಿದೆ. ಧರ್ಮ ಸಂಸತ್‌ನಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಧಾರ್ಮಿಕ ಮುಖಂಡರು, ಹಿಂಸಾಚಾರ ಮತ್ತು ನರಮೇಧಕ್ಕೆ ಕರೆಗಳನ್ನು ನೀಡುತ್ತಾರೆ. ಈ ಧಾರ್ಮಿಕ ಮುಖಂಡರು ಆಡಳಿತ ಪಕ್ಷದೊಂದಿಗೆ ಒಡನಾಟದಲ್ಲಿದ್ದಾರೆ.

ಪ್ರೀಮಿಯರ್ ಐಐಎಂ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ದ್ವೇಷ ಭಾಷಣಗಳ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಮೌನವು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತದೆ. ನಮ್ಮ ದೇಶದ ಏಕತೆ, ಸಮಗ್ರತೆಗೆ ಧಕ್ಕೆ ತರುತ್ತದೆ. ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಮ್ಮನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ವಿರುದ್ಧ ದೃಢವಾಗಿ ನಿಲ್ಲುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ” ಎಂದು ಬಹಿರಂಗ ಪತ್ರದಲ್ಲಿ ಕೋರಲಾಗಿದೆ.


ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...