Homeಮುಖಪುಟ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಬಿಬಿಸಿ’ ನಡೆಸಿದ ಸಂದರ್ಶನದ ಮೇಳೆ ಸಿಟ್ಟಾದ ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಸಂದರ್ಶಕರನ್ನೇ ಒಂದು ಗುಂಪಿನ ಏಜೆಂಟ್‌ ಎಂದು ಮೂದಲಿಸಿದ್ದಾರೆ. (ವಿಡಿಯೊ ನೋಡಿ)

- Advertisement -
- Advertisement -

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಅವರು ಬಿಬಿಸಿ ಸಂದರ್ಶನವನ್ನು ಮೊಟುಕುಗೊಳಿಸಿ ಸಂದರ್ಶನದ ದೃಶ್ಯಗಳನ್ನು ಡಿಲೀಟ್‌ ಮಾಡುವಂತೆ ಸೂಚಿಸಿರುವ ಘಟನೆ ನಡೆದಿದೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿಯಾಗಿ ಮಾಡಲಾದ ದ್ವೇಷ ಭಾಷಣಗಳ ಕುರಿತ ಪ್ರಶ್ನೆಗಳಿಗೆ ಕೋಪಗೊಂಡ ಕೇಶವ್‌ ಪ್ರಸಾದ್‌, ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಸಂದರ್ಶನದ ದೃಶ್ಯಗಳನ್ನು ಅಳಿಸಲು ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಮೌರ್ಯ ಅವರು ನಂತರದಲ್ಲಿ ಪ್ರತಿಕ್ರಿಯಿಸಿದ್ದು ಈ ಘಟನೆಯನ್ನು “ದುರದೃಷ್ಟಕರ ಘಟನೆ” ಎಂದು ಕರೆದ್ದಾರೆ.

ಧಾರ್ಮಿಕ ಸಮಾವೇಶದ ದ್ವೇಷ ಭಾಷಣಗಳ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪಕ್ಷದ ನಾಯಕರು ಮೌನ ತಾಳಿರುವುದನ್ನು ಮೌರ್ಯ ಅವರಲ್ಲಿ ಬಿಬಿಸಿ ಸಂದರ್ಶಕರು ಪ್ರಶ್ನಿಸುತ್ತಾರೆ.

ನಾಯಕರು ಇಂತಹ ಘೋಷಣೆಗಳ ವಿರುದ್ಧ ಮಾತನಾಡುವ ಮೂಲಕ ಜನರಿಗೆ ಧೈರ್ಯ ತುಂಬಬೇಕೇ ಎಂದು ಕೇಳಿದಾಗ ಮೌರ್ಯ ಅವರು ಪ್ರತಿಕ್ರಿಯಿಸಿ, “ನಾವು ನಮ್ಮನ್ನು ಸಾಬೀತುಪಡಿಸುವ ಅಗತ್ಯವಿಲ್ಲ. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಎಲ್ಲರ ಅಭಿವೃದ್ಧಿ ಮತ್ತು ಬೆಂಬಲ) ನಲ್ಲಿ ನಂಬಿಕೆ ಹೊಂದಿದ್ದೇವೆ. ತಮ್ಮ ವಿಚಾರಗಳನ್ನು ಹೇಳುವುದಕ್ಕೆ ಧಾರ್ಮಿಕ ಮುಖಂಡರಿಗೆ ಹಕ್ಕು ಇದೆ” ಎನ್ನುತ್ತಾರೆ.

ಮುಂದುವರಿದು, “ಹಿಂದೂ ಧಾರ್ಮಿಕ ಮುಖಂಡರನ್ನು ಮಾತ್ರ ಯಾಕೆ ಎತ್ತಿ ತೋರಿಸುತ್ತೀರಿ” ಎಂದು ಉಪಮುಖ್ಯಮಂತ್ರಿ ಸಂದರ್ಶಕರಲ್ಲಿ ಪ್ರಶ್ನಿಸುತ್ತಾರೆ.

“ಹಿಂದೂ ನಾಯಕರ ಬಗ್ಗೆ ಮಾತ್ರ ಏಕೆ ಕೇಳುತ್ತಿದ್ದೀರಿ? ಇತರ ಧಾರ್ಮಿಕ ಮುಖಂಡರು ಮಾಡಿದ ಕಮೆಂಟ್‌ಗಳ ಬಗ್ಗೆ ಯಾಕೆ ಮಾತನಾಡಲ್ಲ? 370ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಎಷ್ಟು ಮಂದಿ ಜಮ್ಮು ಮತ್ತು ಕಾಶ್ಮೀರವನ್ನು ತೊರೆಯಬೇಕಾಯಿತು, ನೀವು ಅದರ ಬಗ್ಗೆ ಏಕೆ ಮಾತನಾಡುವುದಿಲ್ಲ? ಧರ್ಮ ಸಂಸದ್ ಬಿಜೆಪಿ ಕಾರ್ಯಕ್ರಮವಲ್ಲ, ಧಾರ್ಮಿಕ ಮುಖಂಡರದ್ದು’’ ಎಂದು ತಿಳಿಸುತ್ತಾರೆ.

“ಸ್ವಾಮೀಜಿಗಳು ನಂಬಿದ್ದನ್ನು ಹೇಳಿದ್ದಾರೆ. ಇದು ರಾಜಕೀಯಕ್ಕೆ ಸಂಬಂಧಿಸಿಲ್ಲ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ನಾಯಕರೂ ಇದ್ದಾರೆ. ಅವರ ಬಗ್ಗೆಯೂ ಮಾತನಾಡಿ” ಎಂದು ಉಪಮುಖ್ಯಮಂತ್ರಿ ಒತ್ತಾಯಿಸುತ್ತಾರೆ.

ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆಯನ್ನು ಕೇಂದ್ರೀಕರಿಸಿ, “ಇಂತಹ ಭಾಷಣಗಳು ಚುನಾವಣೆಗೆ ಮುನ್ನ ವಾತಾವರಣವನ್ನು ಹಾಳುಮಾಡುತ್ತವೆಯಲ್ಲ?” ಎಂದು ಸಂದರ್ಶಕರು ಎಂದು ಕೇಳುತ್ತಾರೆ. ಜೊತೆಗೆ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಕೂಗಲಾದ ಘೋಷಣೆಗಳ ಆಧಾರದಲ್ಲಿ ದೇಶದ್ರೋಹದ ಆರೋಪವನ್ನು ಹೊರಿಸಿರುವುದರ ಕುರಿತೂ ಅವರು ಕೇಳುತ್ತಾರೆ.

“ದೇಶದ್ರೋಹ ಬೇರೆ ವಿಷಯ. ಆದರೆ ಇದು ಧರ್ಮ ಸಂಸದ್. ಆಗ ನಾವು ಹೇಳಬಹುದು- ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸೂರ್ಯ ನಮಸ್ಕಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಇಲ್ಲ” ಎಂದು ಮೌರ್ಯ ಉತ್ತರಿಸುತ್ತಾರೆ.

ವಿವಾದಾತ್ಮಕ ಧಾರ್ಮಿಕ ಸಮಾವೇಶದಲ್ಲಿ ಎದ್ದಿರುವ ನರಮೇಧದ ಕರೆಗಳ ಬಗ್ಗೆ ಕೇಳಿದಾಗ ಡಿಸಿಎಂ ಸಿಟ್ಟಿಗೆದ್ದರು. “ನೀವು ಯಾವ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ನನಗೆ ತಿಳಿದಿಲ್ಲ, ನೀವು ಚುನಾವಣೆಯ ಬಗ್ಗೆ ಕೇಳುತ್ತೀರಾ? ನೀವು ಪತ್ರಕರ್ತರಂತೆ ಮಾತನಾಡುತ್ತಿಲ್ಲ. ನೀವು ನಿರ್ದಿಷ್ಟ ಗುಂಪಿನ ಏಜೆಂಟರಂತೆ ಮಾತನಾಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಮೈಕ್‌ ಕಿತ್ತೆಸೆಯುತ್ತಾರೆ.

ಉತ್ತರ ಪ್ರದೇಶ ಮತ್ತು ಇನ್ನೂ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯು ಧರ್ಮ ಸಂಸದ್ ಬಗೆಗಿನ ಪ್ರಶ್ನೆಗಳನ್ನು ಎದುರಿಸುತ್ತಿದೆ. ಧರ್ಮ ಸಂಸತ್‌ನಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಧಾರ್ಮಿಕ ಮುಖಂಡರು, ಹಿಂಸಾಚಾರ ಮತ್ತು ನರಮೇಧಕ್ಕೆ ಕರೆಗಳನ್ನು ನೀಡುತ್ತಾರೆ. ಈ ಧಾರ್ಮಿಕ ಮುಖಂಡರು ಆಡಳಿತ ಪಕ್ಷದೊಂದಿಗೆ ಒಡನಾಟದಲ್ಲಿದ್ದಾರೆ.

ಪ್ರೀಮಿಯರ್ ಐಐಎಂ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ದ್ವೇಷ ಭಾಷಣಗಳ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಮೌನವು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತದೆ. ನಮ್ಮ ದೇಶದ ಏಕತೆ, ಸಮಗ್ರತೆಗೆ ಧಕ್ಕೆ ತರುತ್ತದೆ. ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಮ್ಮನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ವಿರುದ್ಧ ದೃಢವಾಗಿ ನಿಲ್ಲುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ” ಎಂದು ಬಹಿರಂಗ ಪತ್ರದಲ್ಲಿ ಕೋರಲಾಗಿದೆ.


ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....