Homeಅಂಕಣಗಳುಧಾರವಾಡ: ನಕಲಿ ಗೋವಿಗೆ ಧಾಡಸಿ ‘ಬಸವ’ನ ಠಕ್ಕರ್!

ಧಾರವಾಡ: ನಕಲಿ ಗೋವಿಗೆ ಧಾಡಸಿ ‘ಬಸವ’ನ ಠಕ್ಕರ್!

- Advertisement -
- Advertisement -

ಪಿ.ಕೆ.ಮಲ್ಲನಗೌಡ |

ನೋಡಲು ಗೋವಿನಂತಿರುವ ಧಾರವಾಡ ಸಂಸದ ಪ್ರಹ್ಲಾದ್ ಜೋಷಿಯವರಿಗೆ ಎದುರಾಗಿ ಧಾಡಸಿ ‘ಬಸವ’ ವಿನಯ ಕುಲಕರ್ಣಿ ಠಕ್ಕರ್ ಕೊಡುತ್ತಿದ್ದಾರೆ. ‘ಹಿಂದುತ್ವ’ದ ಪ್ರತಿಪಾದಕ ಜೋಷಿ ಕೆಲಸ ಮಾಡಿದ್ದಕ್ಕಿಂತ ಪ್ರಚಾರಕ್ಕೆ ಹಾತೊರೆದದ್ದೇ ಹೆಚ್ಚು. ಮೂರು ಸಲ ಸಂಸದರಾದೂ ಈಗಲೂ ಅವರು ಮೋದಿ ಮುಖವಾಡದಲ್ಲಿ ಮತ ಬೇಡುತ್ತಿದ್ದಾರೆ. ಈಗ ಯಾವ ಅಧಿಕಾರವೂ ಇಲ್ಲದ ವಿನಯ ಕುಲಕರ್ಣಿ ಈ ಸಲ ಗೆಲ್ಲಲು ಎಲ್ಲ ಮಾರ್ಗಗಳಲ್ಲೂ ಪ್ರಯ್ನಿಸುತ್ತಿದ್ದಾರೆ.

joshi

ಮೂರು ಸಲ ಸಂಸದರಾಗಿರುವ ಜೋಷಿ ಬಗ್ಗೆ ಜನಕ್ಕೆ ಭ್ರಮನಿರಸವಾಗಿದೆ. ಬಿಜೆಪಿಯ ಸ್ಥಳಿಯ ನಾಯಕರನ್ನು ತುಳಿದ ಆರೋಪವನ್ನು ಎದುರಿಸುತ್ತಿರುವ ಜೋಷಿಗೆ ಈ ಸಲ ಪಕ್ಷದೊಳಗೇ ಸಾಕಷ್ಟು ವಿರೋಧವಿದೆ. ರಂಗಾ ಬದ್ದಿ, ದತ್ತಾ ಡೋರ್ಲೆ, ರಾಜೇಂದ್ರ ಗೋಖಲೆ, ಮಹೇಶ ತೆಂಗಿನಕಾಯಿ-ಇವರೆಲ್ಲ ಜೋಷಿಯ ಸ್ವಾರ್ಥಕ್ಕೆ ತಮ್ಮ ರಾಜಕೀಯ ಜೀವನದಲ್ಲಿ ಹಿನ್ನಡೆ ಅನುಭವಿಸಿದವರು.
ತಮ್ಮ ಸೋಲಿಗೆ ಜೋಷಿಯೇ ಕಾರಣವೆಂದು ಅತೃಪ್ತಿ ವ್ಯಕ್ತಪಡಿಸುತ್ತಲೇ ಬಂದಿರುವ ಬಿಜೆಪಿ ಮಾಜಿ ಶಾಸಕ ಚಿಕ್ಕನಗೌಡರ್ ಜೋಷಿ ಸೋಲಲೆಂದೇ ಬಯಸಿದ್ದಾರೆ. ಚಿಕ್ಕನಗೌಡರ್ ಮಗಳು ನಿನ್ನೆಯಷ್ಟೇ ಜೋಷಿ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿಗೆ ಈ ಸಲ ಲಿಂಗಾಯತ/ವೀರಶೈವ ಸಮುದಾಯ ದೊಡ್ಡ ಏಟು ನೀಡಲಿದೆ. ಬಿಜೆಪಿಗೆ ಇಲ್ಲ ಸಾಕಷ್ಟು ಕೇಡರ್ಸ್ ಇದ್ದರೂ ಜೋಷಿಗೆ ಜನರನ್ನು ಎದುರಿಸುವುದು ಕಷ್ಟವಾಗುತ್ತಿದೆ.
ಇನ್ನೊಂದು ಕಡೆ ಕಾಂಗ್ರೆಸ್‍ನ ವಿನಯ ಕುಲಕರ್ಣಿ ಬಿರುಸಾದ ಪ್ರಚಾರದಲ್ಲಿ ತೊಡಗಿ ಎಲ್ಲ ಸಮುದಾಯಗಳನ್ನು ತಲುಪುತ್ತಿದ್ದಾರೆ.

vinay

ವಿನಯಗೆ ಇಲ್ಲಿ ಅಭಿಮಾನಿ ಪಡೆಯೂ ಇದ್ದು, ಅದು ಅಗ್ರೆಸಿವ್ ಕೂಡ ಆಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈ ಸಲ ಕಾಂಗ್ರೆಸ್‍ನಲ್ಲಿ ಒಗ್ಗಟ್ಟು ಕಂಡು ಬಂದಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಐ.ಜಿ. ಸನದಿ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಕಲಘಟಗಿಯಿಂದ ಸೋತಿದ್ದ ಸಂತೋಷ ಲಾಡ್ ವಿನಯ್ ಪರವಾಗಿ ಬೃಹತ್ ರ್ಯಾಲಿ ಮಾಡಿದ್ದಾರೆ. ಇಲ್ಲಿ ಜೆಡಿಎಸ್‍ಗೂ ಒಂದು ಮಟ್ಟದ ನೆಲೆಯಿದೆ. ಜೆಡಿಎಸ್‍ನ ಬಸವರಾಜ ಹೊರಟ್ಟಿ, ಕೋನರಡ್ಡಿ ಮತ್ತು ಹಲವು ಕಾರ್ಪೋರೇಟರುಗಳು ವಿನಯ ಪರ ಕೆಲಸ ಮಾಡುತ್ತಿದ್ದಾರೆ.
ಈ ಸಲ ಇತರ ಸಮುದಾಯಗಳ ಜೊತೆಗೆ ಲಿಂಗಾಯತ ಸಮೂಹ ವಿನಯ ಕುಲಕರ್ಣಿ ಪರ ನಿಂತಂತೆ ಕಾಣುತ್ತಿದೆ. ಹೀಗಾಗಿ ಜೋಷಿಗೆ ಇದು ಅತಿ ಕಷ್ಟದ ಚುನಾವಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...