Homeಮುಖಪುಟನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

ನಮ್ಮ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕಿಂತ ದುರ್ಬಲವಾಗಬಾರದು: ಒಂದು ಆಶಯ

- Advertisement -
- Advertisement -

ನೀಲಗಾರ |

ಕೆಲವು ವರ್ಷಗಳ ಕೆಳಗೆ ಪಾಕಿಸ್ತಾನದ ಕವಿಯೊಬ್ಬರು ನಮ್ಮ ದೇಶದಂತೆ ನೀವಾಗಬೇಡಿ ಎಂದು ಭಾರತವನ್ನು ಉದ್ದೇಶಿಸಿ ಬಹಳ ನೋವಿನಿಂದ ಕೂಡಿದ ಕವಿತೆಯೊಂದನ್ನು ಬರೆದಿದ್ದರು.

ನಮ್ಮದೇ ಸೋದರಿ ದೇಶ, ಇಂದಲ್ಲಾ ನಾಳೆ ಒಂದೇ ಆಗಬೇಕಿರುವ ನೆರೆಯ ದೇಶವು ಅತ್ಯಂತ ಅರಾಜಕವಾದ ಪರಿಸ್ಥಿತಿಯಲ್ಲಿರುವುದು ನಮಗೆಲ್ಲರಿಗೂ ಗೊತ್ತು. ಸೈನ್ಯ, ಇಂಟೆಲಿಜೆನ್ಸ್ ಸಂಸ್ಥೆ, ಮತೀಯವಾದಿಗಳು, ಅಮೆರಿಕಾ ಮತ್ತು ಭ್ರಷ್ಟ ರಾಜಕಾರಣಿಗಳು ಇವೆಲ್ಲದರ ಮಧ್ಯೆ ನಲುಗುತ್ತಿರುವ ಜನಸಾಮಾನ್ಯರು  ಇದೇ ಪಾಕಿಸ್ತಾನ. ಹಾಗಾಗಿಯೇ ಭಯೋತ್ಪಾದಕರನ್ನೂ ಮಟ್ಟ ಹಾಕಲಾಗದ ದುಸ್ಥಿತಿ. ಬಹುಶಃ ಇದೇ ಆ ಕವಿಯ ಮನದಾಳದಲ್ಲಿದ್ದದ್ದು.

ಆದರೆ, ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳು ದುಃಖಕರವಾಗಿದೆ. ನಮ್ಮ ದೇಶದ ಸಿಆರ್‌ಪಿಎಫ್ ಮೇಲೆ ಭಯೋತ್ಪಾದಕ ದಾಳಿ ನಡೆದು ಸುಮಾರು 40ಕ್ಕೂ ಹೆಚ್ಚು ಯೋಧರು ಸಾವಿಗೀಡಾಗುತ್ತಾರೆ. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಸರ್ವಪಕ್ಷ ಸಭೆ ಕರೆಯುತ್ತದೆ – ಪ್ರಧಾನಮಂತ್ರಿಯೇ ಅದರಲ್ಲಿ ಪಾಲ್ಗೊಳ್ಳದೇ ಪಕ್ಷದ ಪರ ಪ್ರಚಾರ ಮಾಡಲು ಹೋಗುತ್ತಾರೆ.

ಆ ನಂತರ ಭಾರತದ ವಾಯುಪಡೆಯು ಪಾಕಿಸ್ತಾನದ ಮೇಲೆ ದಾಳಿ ನಡೆಸುತ್ತದೆ. ಉದ್ವಿಗ್ನ ವಾತಾವರಣ ಹೆಚ್ಚಾಗುತ್ತಾ ಹೋಗುತ್ತದೆ. ಇನ್ನೊಂದು ಸರ್ವಪಕ್ಷ ಸಭೆ ನಡೆಯುತ್ತದೆ. ಆಗಲೂ ಪ್ರಧಾನಿ ಗೈರುಹಾಜರು. ಅವರು ಪ್ರತಿನಿತ್ಯ ಚುನಾವಣೆಯ ಸಿದ್ಧತೆಯಲ್ಲೇ ಹೆಚ್ಚು ತೊಡಗಿರುವುದು ಕಂಡು ಬರುತ್ತದೆ.

ಇದೇ ಅವಧಿಯಲ್ಲಿ ಪಾಕಿಸ್ತಾನದ ಇಮ್ರಾನ್‌ಖಾನ್ ಅವರು ಮಾಡಿದ ಭಾಷಣವೊಂದು ಎಲ್ಲೆಡೆ ಚರ್ಚೆಯಲ್ಲಿದೆ. ಆ ಭಾಷಣ ಮಾಡಿದ್ದು ಎಲ್ಲಿ ಗೊತ್ತೇ? ಸಂಸತ್ತಿನಲ್ಲಿ. ಅದೂ ಸಹಾ, ಈ ಸನ್ನಿವೇಶದಲ್ಲಿ ದೇಶದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲೆಂದೇ ಕರೆದ ವಿಶೇಷ ಅಧಿವೇಶನ. ಅಲ್ಲಿಯೇ ಭಾರತದ ಜೊತೆಗೆ ಶಾಂತಿ ಹಸ್ತವನ್ನು ಚಾಚುವ ಉದ್ದೇಶದಿಂದ ನಾವು ಪೈಲಟ್ ಅಭಿನಂದನ್‌ರನ್ನು ಬಿಡುಗಡೆ ಮಾಡುತ್ತೇವೆ ಎಂದು ಇಮ್ರಾನ್‌ಖಾನ್ ಹೇಳಿದಾಗ, ಇಡೀ ಸಂಸತ್ತು ಮೇಜುತಟ್ಟಿ ಅದನ್ನು ಅನುಮೋದಿಸುತ್ತದೆ.

ಫೆ.28ರಂದು ನಡೆದ ಪ್ರಧಾನಿ ಮೋದಿಯವರ ಚುನಾವಣಾ ಪ್ರಚಾರದ ಬಿಜೆಪಿ ಜಾಹೀರಾತು

ಅಭಿನಂದನ್‌ರ ಬಿಡುಗಡೆಯ ಸಂದೇಶ ಹೊರಬಂದ ಕೆಲ ಹೊತ್ತಿನಲ್ಲಿ ಪಂಜಾಬಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನಿ ಮೋದಿಯವರಲ್ಲಿ ಒಂದು ಕೋರಿಕೆ ಮುಂದಿಡುತ್ತಾರೆ. ಅಭಿನಂದನ್ ದೇಶದೊಳಕ್ಕೆ ಬರುವುದು ವಾಘಾ ಗಡಿಯಿಂದ. ವಾಘಾ ಆ ಕಡೆಯ ಪಂಜಾಬ್‌ನಲ್ಲಿದ್ದರೆ, ಈ ಕಡೆಗೆ ಭಾರತದ ಪಂಜಾಬಿನ ಅಟ್ಟಾರಿ ಇದೆ. ಅಮೃತಸರ ಮತ್ತು ಲಾಹೋರ್ ನಡುವಿನ ದೂರ ಕೇವಲ 58 ಕಿ.ಮೀ. ತಾನು ಖುದ್ದಾಗಿ ಹೋಗಿ ಅಭಿನಂದನ್‌ರನ್ನು ಕರೆತರುತ್ತೇನೆ ಎಂದು ಅಮರಿಂದರ್ ಕೋರಿಕೆ.

ಇದಕ್ಕೆ ಕಾರಣವಿದೆ. ಅವರು ಕ್ಯಾಪ್ಟನ್ ಅಮರಿಂದರ್. ಸ್ವತಃ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದವರು. ಜೊತೆಗೆ ಈ ಸದ್ಯ ವಾಘಾ-ಅಟ್ಟಾರಿ ಬಾರ್ಡರ್ ಬರುವ ಪಂಜಾಬಿನ ಮುಖ್ಯಮಂತ್ರಿ. ಅಭಿನಂದನ್ ಮತ್ತು ಅವರ ತಂದೆಯು  ಶಿಕ್ಷಣ ಹಾಗೂ ತರಬೇತಿ ಪಡೆದುಕೊಂಡ ನ್ಯಾಷನಲ್ ಡಿಫೆನ್ಸ್ ಅಕ್ಯಾಡೆಮಿಯಲ್ಲೇ ಅಮರಿಂದರ್ ಸಿಂಗ್ ಸಹಾ ತರಬೇತಿ ಪಡೆದುಕೊಂಡಿದ್ದರು. ಜೊತೆಗೆ ಈ ಮನವಿ ಮಾಡಿಕೊಳ್ಳುವ ಹೊತ್ತಿನಲ್ಲಿ ಅಮರಿಂದರ್ ಸಿಂಗ್ ಅದೇ ಪ್ರದೇಶದಲ್ಲಿದ್ದರು. ಒಂದು ವೇಳೆ ಕ್ಯಾಪ್ಟನ್ ಅಮರಿಂದರ್ ಅವರು ವ್ಯಕ್ತಿಗತ ಇಮೇಜ್ ಹೆಚ್ಚಿಸಿಕೊಳ್ಳಲೆಂದೇ ಈ ಪ್ರಸ್ತಾಪ ಮುಂದಿಟ್ಟಿದ್ದಾರೆಂದುಕೊಳ್ಳಿ.

ಆದರೂ, ದೇಶದ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ದೇಶದ ಪ್ರಧಾನಿಗೆ ಇದೊಂದು ಅವಕಾಶವಾಗಿತ್ತು. ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಾಜಿ ಸೈನಿಕರಾದ ಅಮರಿಂದರ್‌ರನ್ನು ಅದಕ್ಕೆ ಕಳಿಸುವುದಕ್ಕಿಂತ ಒಳ್ಳೆಯ ನಡೆ ಇನ್ನೇನಾಗಿರಲು ಸಾಧ್ಯವಿತ್ತು?

ಆದರೆ ಮೋದಿಯವರು ಅಂಥಾ ಪ್ರಬುದ್ಧ ನಡೆಯನ್ನು ತೋರಲೇ ಇಲ್ಲ. ನಮ್ಮದೇ ದೇಶದ ಪ್ರಧಾನಿ ಹುದ್ದೆಯನ್ನು ಹೀಗಳೆಯುವುದು ಯಾರಿಗೂ ಇಷ್ಟವಿಲ್ಲದ ಸಂಗತಿ, ಆದರೆ ಪುಲ್ವಾಮಾ ಘಟನೆಯ ತರುವಾಯ ಪಾಕಿಸ್ತಾನದ ಪ್ರಧಾನಿ ವ್ಯವಹರಿಸಿದ ರೀತಿಗೂ ನಮ್ಮ ಭಾರತದ ಪ್ರಧಾನಿಯಾಗಿ ಮೋದಿಯವರು ತೋರಿದ ರಾಜಕೀಯ ಪ್ರೇರಿತ ನಡವಳಿಕೆಗಳಿಗೂ ಹೋಲಿಕೆ ಮಾಡಿದರೆ ನಿಜಕ್ಕೂ ಭಾರತೀಯರು ವಿಷಾದಗೊಳ್ಳಬೇಕಾಗಿ ಬಂದಿದೆ.

ಫೆಬ್ರವರಿ 28ರಂದು ಗುಜರಾತಿನಲ್ಲಿ ಕಾಂಗ್ರೆಸ್ ಪಕ್ಷವು `ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ (ಸಿಡ್ಬ್ಲುಸಿ) ಯ ಸಭೆ ಆಯೋಜಿಸಿತ್ತು. ಕಳೆದ ಆರು ದಶಕಗಳ (60 ವರ್ಷಗಳ) ನಂತರ ಈ ಅತಿದೊಡ್ಡ ಸಭೆ ನಡೆಸಲು ಕಾಂಗ್ರೆಸ್ ಯೋಜಿಸಿಕೊಂಡಿತ್ತು. ಜೊತೆಗೆ ಚುನಾವಣಾ ಪ್ರಚಾರಕ್ಕಾಗಿ `ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡುವುದೂ ಅದರ ಭಾಗವಾಗಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ್ದರಿಂದ ದೇಶದ ಭದ್ರತೆಗೆ ಒತ್ತು ಕೊಟ್ಟು ಕಾಂಗ್ರೆಸ್ ಆ ಸಭೆಗಳನ್ನು ಮುಂದಕ್ಕೂಡಿತು.

ಆದರೆ ಪ್ರಧಾನಿಯಾಗಿ ಮೋದಿಯವರು ಪುಲ್ವಾಮಾ ಘಟನೆಯ ತರುವಾಯ ನಿರಂತರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಆ ಭಯೋತ್ಪಾದಕ ದಾಳಿ ನಡೆದ ಸುದ್ದಿ ನಡೆದ ಮೇಲೂ ಮೋದಿಯವರು ಜಿಮ್ ಕಾರ್ಬೆಟ್  ನ್ಯಾಶನಲ್ ಪಾರ್ಕಿನಲ್ಲಿ ಜಾಹಿರಾತೊಂದರ ಶೂಟಿಂಗ್ ಮುಂದುವರೆಸಿದರು ಎಂಬ ಆಪಾದನೆ ಸುಳ್ಳೋ ನಿಜವೋ ಎಂದು ಇತ್ಯರ್ಥಗೊಳ್ಳುವ ಮೊದಲೇ ಅವರು ಝಾಂಸಿಯೂ ಒಳಗೊಂಡಂತೆ ಬೇರೆಬೇರೆ ಕಡೆ ಪಕ್ಷದ ಪರವಾಗಿ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿ ದೇಶದ ಭದ್ರತೆಗೆ ಸಂಬಂಧಿಸಿದ ವಿಚಾರವನ್ನು ರಾಜಕೀಯ ವೇದಿಕೆಯಲ್ಲಿ ಸರಕಾಗಿಸಿಕೊಂಡು ಮಾತನಾಡಿದರು. ಯಾವ ಆತಂಕವೂ ಇಲ್ಲದಂತೆ `ಖೇಲೊ ಇಂಡಿಯಾ’ ಆಪ್ ಬಿಡುಗಡೆ ಮಾಡಿದರು.

ಫೆಬ್ರವರಿ 28ರಂದು ವಿಶ್ವದ ಅತಿದೊಡ್ಡ ವೀಡಿಯೋ ಕಾನ್ಫರೆನ್ಸ್ ಮೂಲಕ `ಮೇರಾ ಬೂತ್ ಸಬ್ ಸೇ ಮಜಬೂತ್’ ಎಂಬ ಕಾರ್ಯಕ್ರಮದಲ್ಲಿ ಭಾಗಿಯಾಗಿ ಚುನಾವಣಾ ಪ್ರಚಾರ ಮಾಡಿದರು. ದೇಶದ ರಾಜಕಾರಣಿಗಳಲ್ಲೆ ಅತಿಹೆಚ್ಚು ಸೋಶಿಯಲ್ ಮೀಡಿಯಾ ಬಳಸುವ, ಫಾಲೋವರ್ ಗಳನ್ನು ಹೊಂದಿರುವ ರಾಜಕಾರಣಿ ಅಂದ್ರೆ ಮೋದಿಯವರು. ಟ್ವೀಟ್ಟರ್ ನಲ್ಲಿ ನಾಲ್ಕೂವರೆ ಕೋಟಿಗೂ ಹೆಚ್ಚು ಫಾಲೋವರ್.ಗಳನ್ನು ಹೊಂದಿದ್ದಾರೆ. ಆದರೆ ಪುಲ್ವಾಮಾ ಘಟನೆಯ ನಂತರ ಟ್ವಿಟ್ಟರ್ ನಲ್ಲೂ ಅವರು ಬಿಜೆಪಿ ರಾಜಕೀಯ ಪ್ರಚಾರಗಳನ್ನು ಹೆಚ್ಚಾಗಿ ಟ್ವೀಟ್ ಮಾಡಿದ್ದಾರೆಯೇ ವಿನಾಃ ಆತಂಕದ ಸ್ಥಿತಿಯಲ್ಲಿ ದೇಶಕ್ಕೆ ಅಗತ್ಯವಿರುವ ನಾಯಕತ್ವದ ಮಾತುಗಳು ಅವರಿಂದ ಟ್ಟೀಟುಗೊಂಡಿಲ್ಲ.

ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವುದಕ್ಕೆಂದೇ ವಿಶೇಷ ಅಧಿವೇಶನ ಕರೆದು ವಿರೋಧ ಪಕ್ಷಗಳನ್ನೂ ಸಹಮತಕ್ಕೆ ತೆಗೆದುಕೊಂಡು ಸಮತೂಕದ ಮಾತುಗಳನ್ನಾಡುವ ಇಮ್ರಾನ್ ಖಾನ್ ಜಿನೆವಾ ಒಪ್ಪಂದವನ್ನು ಗೌರವಿಸಿ ತನ್ನ ವಶದಲ್ಲಿದ್ದ ಭಾರತದ ಕಮಾಂಡರ್ ಅಬಿನಂದನ್ ಬಿಡುಗಡೆಯನ್ನು ಸಂಸತ್ತಿನಲ್ಲೇ ಘೋಷಿಸುವಾಗ ಒಂದು ಆಶಯವಂತೂ ಭಾರತದ ಶಾಂತಿಪ್ರಿಯತೆ ಮತ್ತು ಸೌಹಾರ್ದತೆಯನ್ನು ಗೌರವಿಸುವ ನಿಜವಾದ ದೇಶಪ್ರೇಮಿಗಳಲ್ಲ ಮನಸಿನಲ್ಲಿ ಪುಟಿದೇಳುತ್ತಿರುತ್ತದೆ.  ಅದು, ಮೋದಿಯವರ ಕಾಲದಲ್ಲಿ ಭಾರತ ಪಾಕಿಸ್ತಾನದಂತಾಗದಿರಲಿ, ದೇಶದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲಿ ಎಂಬುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...