Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...