Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...