Homeಕರ್ನಾಟಕಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

- Advertisement -
- Advertisement -

| ಎನ್.ಗೌಡ |

ದೇವೇಗೌಡರ ರಾಜಕೀಯ ಗ್ರಾಫ್ ಅತ್ಯಂತ ಪಾತಾಳಕ್ಕಿಳಿದ ಹಲವು ಸಂದರ್ಭಗಳು ಕಳೆದ ನಾಲ್ಕು ದಶಕಗಳಲ್ಲಿ ಬಂದು ಹೋಗಿವೆ. ಆದರೆ, ಅವರು ಮತ್ತೆ ಮತ್ತೆ ಫೀನಿಕ್ಸ್ (ಧೂಳಿನಿಂದ ಮೇಲೆದ್ದು ಬರುತ್ತೇನೆ ಎಂದು ವಿದಾಯ ಭಾಷಣದಲ್ಲಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಅಬ್ಬರಿಸಿದ್ದರು)ನಂತೆ ಮೇಲೇಳುತ್ತಾ ಬರುತ್ತಾರೆ. ಹಾಗೆ ಮೇಲೆದ್ದು ಬರುವಾಗ ಅವರಿಗೆ ಸಾಥ್ ಕೊಟ್ಟ ಕೆಲವು ನಿರ್ದಿಷ್ಟ ಭಾಗಗಳಿವೆ. ನಿಧಾನಕ್ಕೆ ಅಂತಹ ಕ್ಷೇತ್ರಗಳ ಮೇಲೆ ಅವರ ಹಿಡಿತವೂ ಹೆಚ್ಚಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಸಹಾ ಅವುಗಳಲ್ಲಿ ಒಂದು. ಭೌಗೋಳಿಕವಾಗಿ ಒಂದು ಕಡೆಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮತ್ತು ಹೊಳೆನರಸೀಪುರ ತಾಲೂಕುಗಳಿಗೆ ಅದು ಹೊಂದಿಕೊಂಡಿರುವುದೂ ಅದಕ್ಕೆ ಕಾರಣವಿರಬಹುದು. ಇದೇ ಕ್ಷೇತ್ರದ ಎಂಎಲ್‍ಎ ಕೆ.ಸಿ.ನಾರಾಯಣಗೌಡ ಈಗ ರಾಜೀನಾಮೆ ಕೊಟ್ಟು ಮುಂಬೈನ ಸೋಫಿಟೆಲ್ ಸೇರಿಕೊಂಡಿರುವವರಲ್ಲಿ ಒಬ್ಬರು.

ಕೆ.ಆರ್.ಪೇಟೆ ಕೃಷ್ಣ ಅವರು ಈ ಕ್ಷೇತ್ರದಲ್ಲಿ ಸಾಕಷ್ಟು ಕಾಲ ದೇವೇಗೌಡರ ಪಕ್ಷವನ್ನು ಪ್ರತಿನಿಧಿಸಿದ್ದ ಹಿರಿಯ ರಾಜಕಾರಣಿ. ಒಮ್ಮೆ ಸಂಸತ್ ಸದಸ್ಯರೂ (ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ) ಆಗಿದ್ದ ಅವರು 2004ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಧಿಕಾರಕ್ಕೆ ಬಂದಾಗ ಸ್ಪೀಕರ್ ಆಗಿದ್ದರು. ನಂತರದ ಜೆಡಿಎಸ್-ಬಿಜೆಪಿ ಮೈತ್ರಿಯನ್ನೂ (ದೇವೇಗೌಡರ ಸೂಚನೆಗಳಿಗನುಗುಣವಾಗಿ) ಸ್ಪೀಕರ್ ಆಗಿ ನಿಭಾಯಿಸಿದ್ದರು. 2008ರಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಕೆ.ಬಿ.ಚಂದ್ರಶೇಖರ್ ಎದುರು ಸೋತಿದ್ದರು. ಕೇವಲ 3,500 ಮತಗಳಿಂದ ಸೋತಿದ್ದರಿಂದ ನಂತರದ ಸಾಲಿನಲ್ಲಿ, ಅಂದರೆ 2013ರಲ್ಲೂ ತಮಗೇ ಟಿಕೆಟ್ ಎಂದು ಕೃಷ್ಣ ಭಾವಿಸಿದ್ದು ಸಹಜವಾಗಿತ್ತು. ಆದರೆ ಮುಂಬೈನಲ್ಲಿ ಹೋಟೆಲ್ ಮತ್ತಿತರ ಬಿಸಿನೆಸ್ ಮಾಡಿಕೊಂಡಿದ್ದ ಕೆ.ಸಿ.ನಾರಾಯಣಗೌಡರು ಅಷ್ಟು ಹೊತ್ತಿಗೆ ಕೆ.ಆರ್.ಪೇಟೆಯಲ್ಲಿ ‘ಸಮಾಜ ಸೇವೆ’ ಶುರು ಹಚ್ಚಿಕೊಂಡಿದ್ದರು.

ಹಣದ ಕುಳಗಳಿಗೆ ಮೊದಲ ಆದ್ಯತೆ ಕೊಡುವ ದೇವೇಗೌಡರ ಮನದಿಂಗಿತ ಅರಿವಾಗತೊಡಗಿ ಕೃಷ್ಣರಿಗೆ ಆತಂಕ ಶುರುವಾಯಿತು. ‘ಏನು ಮಾಡೋಣ ಗುರುಗಳೇ, ನಮಗೂ ಚುನಾವಣೆ ನಡೆಸಲು ಹಣದ ಅಗತ್ಯ ಇರುತ್ತೆ. ಬಹಳ ಕಷ್ಟದಲ್ಲಿದ್ದೇವೆ’ ಎಂದರು ದೊಡ್ಡಗೌಡರು. ಪ್ರಾಮಾಣಿಕತೆ ಮತ್ತಿತರ ಸಾರ್ವಜನಿಕ ಮೌಲ್ಯಗಳನ್ನು ಇನ್ನೂ ಉಳಿಸಿಕೊಂಡಿದ್ದ ಕೃಷ್ಣರಿಗೆ ಬೇರೆ ದಾರಿಯಿರಲಿಲ್ಲ. ದೇವೇಗೌಡರ ಬಳಿ ಹೋಗಿ ‘ನಾನು ಅನ್ಯಾಯದ ಹಣ ಸಂಪಾದನೆ ಮಾಡಿಲ್ಲ; ನನ್ನದೊಂದು ಸೈಟ್ ಇದೆ. ಅದನ್ನು ಮಾರಿ ಎಷ್ಟು ಹಣ ಬರುತ್ತೋ ಅಷ್ಟನ್ನು ಕೊಡುತ್ತೇನೆ’ ಎಂದರು. ‘ಸರಿ ನೋಡೋಣ’ ಎಂದ ದೊಡ್ಡಗೌಡರು, ಟಿಕೆಟ್ ಕೊಟ್ಟಿದ್ದು ಕೆ.ಸಿ.ನಾರಾಯಣಗೌಡರಿಗೆ!

ಬೇಸತ್ತ ಕೃಷ್ಣ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್‍ನ ಪಾರಂಪರಿಕ ಓಟ್‍ಬ್ಯಾಂಕ್ ಮತ್ತು ತಮ್ಮ ಕುಟುಂಬದ ಹಿಡಿತ ಎರಡನ್ನೂ ಹೊಂದಿದ್ದ ಕೆಬಿಸಿ ಎರಡನೇ ಸ್ಥಾನಕ್ಕೆ ಬಂದರು. 30,000 ಮತಗಳನ್ನು ಪಡೆದ ಕೃಷ್ಣ ಅವರು ಮೂರನೇ ಸ್ಥಾನದಲ್ಲಿದ್ದರು. ಹೀಗಿದ್ದೂ ಜೆಡಿಎಸ್ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆದ್ದರು. ಇದು ದೇವೇಗೌಡರು ಮತ್ತು ಅವರ ಪಕ್ಷಕ್ಕೆ ಕೆ.ಆರ್.ಪೇಟೆ ಮತದಾರರು ತೋರಿದ ನಿಷ್ಠೆಯ ಪ್ರತೀಕವಾಗಿತ್ತು. ಅದು 2018ರ ಚುನಾವಣೆಯಲ್ಲೂ ಎದ್ದು ಕಂಡಿತು.

ಈ ಸಾರಿ ಕೆ.ಸಿ.ಎನ್.ಗೆ ಟಿಕೆಟ್ ಇಲ್ಲ ಎಂಬ ಸಂದೇಶ ಹರಿದಾಡಲು ಆರಂಭವಾಯಿತು. ಅದಕ್ಕೆ ತಕ್ಕಂತೆ ಟಿಕೆಟ್ ಹಂಚಿಕೆಯ ಮೊದಲ ಪಟ್ಟಿಗಳಲ್ಲಿ ಕೆ.ಆರ್.ಪೇಟೆ ಕ್ಷೇತ್ರದ ಅಭ್ಯರ್ಥಿಯ ಘೋಷಣೆಯೂ ಆಗಲಿಲ್ಲ. ಅನಿವಾರ್ಯವಾಗಿ ಮತ್ತೊಮ್ಮೆ ಕಪ್ಪ ಸಲ್ಲಿಸಿ ನಾರಾಯಣಗೌಡರು ಟಿಕೆಟ್ ಪಡೆದುಕೊಂಡರು. ತಾನು ಭ್ರಷ್ಟಾಚಾರ ಮಾಡಲಿಲ್ಲ, ಪಕ್ಷಕ್ಕೆ ನಿಷ್ಠನಾಗಿದ್ದೆ, ಇದ್ದುದರಲ್ಲಿ ಚೆನ್ನಾಗಿ ಕೆಲಸ ಮಾಡಿದ್ದೇನೆ, ನನ್ನಂಥವನಿಗೆ ಹೀಗೆ ಮಾಡಿದರಲ್ಲಾ ಎಂಬ ಸಿಟ್ಟು ನಾರಾಯಣಗೌಡರಲ್ಲಿ ಹುಟ್ಟಿಕೊಂಡು ಬೆಳೆದು ಇದೀಗ ಅದು ಬಂಡಾಯವೇಳುವವರೆಗೆ ಕೊಂಡೊಯ್ದಿದೆ. ಏಕೆಂದರೆ, ಸ್ವತಃ ದುಡ್ಡಿನ ಕುಳವಾದ ಗೌಡರಿಗೆ ಬಿಜೆಪಿಯ 30 ಕೋಟಿ ಆಸೆ ಹುಟ್ಟಿಸಿರಲಾರದು. ಆದರೆ ನಾರಾಯಣಗೌಡರು ಮರೆಯುತ್ತಿರುವ ಒಂದು ವಿಷಯವಿದೆ. ಈ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕೃಷ್ಣ ಅವರೂ ಕೆ.ಬಿ.ಸಿಗೇ ಬೆಂಬಲಿಸಿದ್ದರೂ, ನಾರಾಯಣಗೌಡರು 17,000ಕ್ಕೂ ಹೆಚ್ಚು ಅಂತರದಿಂದ ಗೆಲ್ಲಲು ಜೆಡಿಎಸ್ ಟಿಕೆಟ್ಟೇ ಕಾರಣ. ದೇವೇಗೌಡರು ಕೆ.ಆರ್.ಪೇಟೆಯವರಿಗೆ ಅದೇನು ಮಾಯ ಮಾಡಿದ್ದಾರೋ ಗೊತ್ತಿಲ್ಲ ಎಂದು ಜನ ಆಡಿಕೊಳ್ಳುವ ಹಾಗೆ ಫಲಿತಾಂಶ ಬಂದಿತು.

ಬಹುಶಃ ಇದೇ ಪರಿಸ್ಥಿತಿ ಎಚ್.ವಿಶ್ವನಾಥ್‍ರಿಗೂ ಉಂಟಾಗಬಹುದು. ಏಕೆಂದರೆ ಕೆ.ಆರ್.ನಗರದಲ್ಲಿ ಮತ್ತೆ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಸ್ಥಿತಿ ಇದ್ದ ವಿಶ್ವನಾಥ್‍ರಿಗೆ ಜಿಟಿಡಿ ಪ್ರತಿನಿಧಿಸುತ್ತಿದ್ದ ಹುಣಸೂರನ್ನು ದೇವೇಗೌಡರು ಕೊಡಿಸಿದ್ದರು. ಇನ್ನೊಬ್ಬ ಜೆಡಿಎಸ್ ಶಾಸಕ ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯರ ಪರಿಸ್ಥಿತಿ ಮಾತ್ರ ಭಿನ್ನ ಇರಬಹುದು. ನಗರ ಪ್ರದೇಶದಲ್ಲಿ ಬಿಜೆಪಿಗೆ ಸೇರಿದರೆ ಅನುಕೂಲವೂ ಉಂಟಾಗಬಹುದು. ಆದರೆ ಜೆಡಿಎಸ್‍ನ ಬೆಂಬಲ ಇಲ್ಲದೇ ಎಚ್.ವಿಶ್ವನಾಥ್ ಮತ್ತೆ ಹುಣಸೂರಿನಲ್ಲಿ ಗೆಲ್ಲುವುದು ಅನುಮಾನ.

ಕೆ.ಆರ್.ಪೇಟೆಯ ವಿಚಾರದಲ್ಲಿ ಅಂತಹ ಯಾವ ಅನುಮಾನವೂ ಇಲ್ಲ ಎಂಬುದು ಮಂಡ್ಯ ಜಿಲ್ಲೆಯ ರಾಜಕಾರಣ ಗೊತ್ತಿದ್ದವರ ಅನಿಸಿಕೆ. ಮೊನ್ನಿನ ಲೋಕಸಭಾ ಚುನಾವಣೆಯ ಅಲೆಯ ಸ್ವರೂಪ ಬೇರೆ ಇತ್ತು. ಅದನ್ನು ಇಟ್ಟುಕೊಂಡು ‘ದೇವೇಗೌಡರ ಕುಟುಂಬಕ್ಕೆ ಅವಮಾನ ಮಾಡಿದ’ ನಾರಾಯಣಗೌಡರನ್ನು ಕೆ.ಆರ್.ಪೇಟೆಯ ಜನರು ಬಿಜೆಪಿ ಅಭ್ಯರ್ಥಿಯನ್ನಾಗಿ ಗೆಲ್ಲಿಸುವುದು ಸಾಧ್ಯವೇ ಇಲ್ಲ ಎಂಬುದು ಸ್ಥಳೀಯರ ಅನಿಸಿಕೆ. ಅಲ್ಲಿಗೆ ನಾರಾಯಣಗೌಡರ ರಾಜಕಾರಣ ಮುಗಿಯಿತೇ ಎಂಬ ಪ್ರಶ್ನೆಗೆ ಮುಂದಿನ ತಿಂಗಳುಗಳು ಉತ್ತರ ನೀಡುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...