Homeಕರ್ನಾಟಕಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

- Advertisement -
- Advertisement -

| ಎನ್.ಗೌಡ |

ದೇವೇಗೌಡರ ರಾಜಕೀಯ ಗ್ರಾಫ್ ಅತ್ಯಂತ ಪಾತಾಳಕ್ಕಿಳಿದ ಹಲವು ಸಂದರ್ಭಗಳು ಕಳೆದ ನಾಲ್ಕು ದಶಕಗಳಲ್ಲಿ ಬಂದು ಹೋಗಿವೆ. ಆದರೆ, ಅವರು ಮತ್ತೆ ಮತ್ತೆ ಫೀನಿಕ್ಸ್ (ಧೂಳಿನಿಂದ ಮೇಲೆದ್ದು ಬರುತ್ತೇನೆ ಎಂದು ವಿದಾಯ ಭಾಷಣದಲ್ಲಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಅಬ್ಬರಿಸಿದ್ದರು)ನಂತೆ ಮೇಲೇಳುತ್ತಾ ಬರುತ್ತಾರೆ. ಹಾಗೆ ಮೇಲೆದ್ದು ಬರುವಾಗ ಅವರಿಗೆ ಸಾಥ್ ಕೊಟ್ಟ ಕೆಲವು ನಿರ್ದಿಷ್ಟ ಭಾಗಗಳಿವೆ. ನಿಧಾನಕ್ಕೆ ಅಂತಹ ಕ್ಷೇತ್ರಗಳ ಮೇಲೆ ಅವರ ಹಿಡಿತವೂ ಹೆಚ್ಚಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಸಹಾ ಅವುಗಳಲ್ಲಿ ಒಂದು. ಭೌಗೋಳಿಕವಾಗಿ ಒಂದು ಕಡೆಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮತ್ತು ಹೊಳೆನರಸೀಪುರ ತಾಲೂಕುಗಳಿಗೆ ಅದು ಹೊಂದಿಕೊಂಡಿರುವುದೂ ಅದಕ್ಕೆ ಕಾರಣವಿರಬಹುದು. ಇದೇ ಕ್ಷೇತ್ರದ ಎಂಎಲ್‍ಎ ಕೆ.ಸಿ.ನಾರಾಯಣಗೌಡ ಈಗ ರಾಜೀನಾಮೆ ಕೊಟ್ಟು ಮುಂಬೈನ ಸೋಫಿಟೆಲ್ ಸೇರಿಕೊಂಡಿರುವವರಲ್ಲಿ ಒಬ್ಬರು.

ಕೆ.ಆರ್.ಪೇಟೆ ಕೃಷ್ಣ ಅವರು ಈ ಕ್ಷೇತ್ರದಲ್ಲಿ ಸಾಕಷ್ಟು ಕಾಲ ದೇವೇಗೌಡರ ಪಕ್ಷವನ್ನು ಪ್ರತಿನಿಧಿಸಿದ್ದ ಹಿರಿಯ ರಾಜಕಾರಣಿ. ಒಮ್ಮೆ ಸಂಸತ್ ಸದಸ್ಯರೂ (ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ) ಆಗಿದ್ದ ಅವರು 2004ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಧಿಕಾರಕ್ಕೆ ಬಂದಾಗ ಸ್ಪೀಕರ್ ಆಗಿದ್ದರು. ನಂತರದ ಜೆಡಿಎಸ್-ಬಿಜೆಪಿ ಮೈತ್ರಿಯನ್ನೂ (ದೇವೇಗೌಡರ ಸೂಚನೆಗಳಿಗನುಗುಣವಾಗಿ) ಸ್ಪೀಕರ್ ಆಗಿ ನಿಭಾಯಿಸಿದ್ದರು. 2008ರಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಕೆ.ಬಿ.ಚಂದ್ರಶೇಖರ್ ಎದುರು ಸೋತಿದ್ದರು. ಕೇವಲ 3,500 ಮತಗಳಿಂದ ಸೋತಿದ್ದರಿಂದ ನಂತರದ ಸಾಲಿನಲ್ಲಿ, ಅಂದರೆ 2013ರಲ್ಲೂ ತಮಗೇ ಟಿಕೆಟ್ ಎಂದು ಕೃಷ್ಣ ಭಾವಿಸಿದ್ದು ಸಹಜವಾಗಿತ್ತು. ಆದರೆ ಮುಂಬೈನಲ್ಲಿ ಹೋಟೆಲ್ ಮತ್ತಿತರ ಬಿಸಿನೆಸ್ ಮಾಡಿಕೊಂಡಿದ್ದ ಕೆ.ಸಿ.ನಾರಾಯಣಗೌಡರು ಅಷ್ಟು ಹೊತ್ತಿಗೆ ಕೆ.ಆರ್.ಪೇಟೆಯಲ್ಲಿ ‘ಸಮಾಜ ಸೇವೆ’ ಶುರು ಹಚ್ಚಿಕೊಂಡಿದ್ದರು.

ಹಣದ ಕುಳಗಳಿಗೆ ಮೊದಲ ಆದ್ಯತೆ ಕೊಡುವ ದೇವೇಗೌಡರ ಮನದಿಂಗಿತ ಅರಿವಾಗತೊಡಗಿ ಕೃಷ್ಣರಿಗೆ ಆತಂಕ ಶುರುವಾಯಿತು. ‘ಏನು ಮಾಡೋಣ ಗುರುಗಳೇ, ನಮಗೂ ಚುನಾವಣೆ ನಡೆಸಲು ಹಣದ ಅಗತ್ಯ ಇರುತ್ತೆ. ಬಹಳ ಕಷ್ಟದಲ್ಲಿದ್ದೇವೆ’ ಎಂದರು ದೊಡ್ಡಗೌಡರು. ಪ್ರಾಮಾಣಿಕತೆ ಮತ್ತಿತರ ಸಾರ್ವಜನಿಕ ಮೌಲ್ಯಗಳನ್ನು ಇನ್ನೂ ಉಳಿಸಿಕೊಂಡಿದ್ದ ಕೃಷ್ಣರಿಗೆ ಬೇರೆ ದಾರಿಯಿರಲಿಲ್ಲ. ದೇವೇಗೌಡರ ಬಳಿ ಹೋಗಿ ‘ನಾನು ಅನ್ಯಾಯದ ಹಣ ಸಂಪಾದನೆ ಮಾಡಿಲ್ಲ; ನನ್ನದೊಂದು ಸೈಟ್ ಇದೆ. ಅದನ್ನು ಮಾರಿ ಎಷ್ಟು ಹಣ ಬರುತ್ತೋ ಅಷ್ಟನ್ನು ಕೊಡುತ್ತೇನೆ’ ಎಂದರು. ‘ಸರಿ ನೋಡೋಣ’ ಎಂದ ದೊಡ್ಡಗೌಡರು, ಟಿಕೆಟ್ ಕೊಟ್ಟಿದ್ದು ಕೆ.ಸಿ.ನಾರಾಯಣಗೌಡರಿಗೆ!

ಬೇಸತ್ತ ಕೃಷ್ಣ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್‍ನ ಪಾರಂಪರಿಕ ಓಟ್‍ಬ್ಯಾಂಕ್ ಮತ್ತು ತಮ್ಮ ಕುಟುಂಬದ ಹಿಡಿತ ಎರಡನ್ನೂ ಹೊಂದಿದ್ದ ಕೆಬಿಸಿ ಎರಡನೇ ಸ್ಥಾನಕ್ಕೆ ಬಂದರು. 30,000 ಮತಗಳನ್ನು ಪಡೆದ ಕೃಷ್ಣ ಅವರು ಮೂರನೇ ಸ್ಥಾನದಲ್ಲಿದ್ದರು. ಹೀಗಿದ್ದೂ ಜೆಡಿಎಸ್ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆದ್ದರು. ಇದು ದೇವೇಗೌಡರು ಮತ್ತು ಅವರ ಪಕ್ಷಕ್ಕೆ ಕೆ.ಆರ್.ಪೇಟೆ ಮತದಾರರು ತೋರಿದ ನಿಷ್ಠೆಯ ಪ್ರತೀಕವಾಗಿತ್ತು. ಅದು 2018ರ ಚುನಾವಣೆಯಲ್ಲೂ ಎದ್ದು ಕಂಡಿತು.

ಈ ಸಾರಿ ಕೆ.ಸಿ.ಎನ್.ಗೆ ಟಿಕೆಟ್ ಇಲ್ಲ ಎಂಬ ಸಂದೇಶ ಹರಿದಾಡಲು ಆರಂಭವಾಯಿತು. ಅದಕ್ಕೆ ತಕ್ಕಂತೆ ಟಿಕೆಟ್ ಹಂಚಿಕೆಯ ಮೊದಲ ಪಟ್ಟಿಗಳಲ್ಲಿ ಕೆ.ಆರ್.ಪೇಟೆ ಕ್ಷೇತ್ರದ ಅಭ್ಯರ್ಥಿಯ ಘೋಷಣೆಯೂ ಆಗಲಿಲ್ಲ. ಅನಿವಾರ್ಯವಾಗಿ ಮತ್ತೊಮ್ಮೆ ಕಪ್ಪ ಸಲ್ಲಿಸಿ ನಾರಾಯಣಗೌಡರು ಟಿಕೆಟ್ ಪಡೆದುಕೊಂಡರು. ತಾನು ಭ್ರಷ್ಟಾಚಾರ ಮಾಡಲಿಲ್ಲ, ಪಕ್ಷಕ್ಕೆ ನಿಷ್ಠನಾಗಿದ್ದೆ, ಇದ್ದುದರಲ್ಲಿ ಚೆನ್ನಾಗಿ ಕೆಲಸ ಮಾಡಿದ್ದೇನೆ, ನನ್ನಂಥವನಿಗೆ ಹೀಗೆ ಮಾಡಿದರಲ್ಲಾ ಎಂಬ ಸಿಟ್ಟು ನಾರಾಯಣಗೌಡರಲ್ಲಿ ಹುಟ್ಟಿಕೊಂಡು ಬೆಳೆದು ಇದೀಗ ಅದು ಬಂಡಾಯವೇಳುವವರೆಗೆ ಕೊಂಡೊಯ್ದಿದೆ. ಏಕೆಂದರೆ, ಸ್ವತಃ ದುಡ್ಡಿನ ಕುಳವಾದ ಗೌಡರಿಗೆ ಬಿಜೆಪಿಯ 30 ಕೋಟಿ ಆಸೆ ಹುಟ್ಟಿಸಿರಲಾರದು. ಆದರೆ ನಾರಾಯಣಗೌಡರು ಮರೆಯುತ್ತಿರುವ ಒಂದು ವಿಷಯವಿದೆ. ಈ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕೃಷ್ಣ ಅವರೂ ಕೆ.ಬಿ.ಸಿಗೇ ಬೆಂಬಲಿಸಿದ್ದರೂ, ನಾರಾಯಣಗೌಡರು 17,000ಕ್ಕೂ ಹೆಚ್ಚು ಅಂತರದಿಂದ ಗೆಲ್ಲಲು ಜೆಡಿಎಸ್ ಟಿಕೆಟ್ಟೇ ಕಾರಣ. ದೇವೇಗೌಡರು ಕೆ.ಆರ್.ಪೇಟೆಯವರಿಗೆ ಅದೇನು ಮಾಯ ಮಾಡಿದ್ದಾರೋ ಗೊತ್ತಿಲ್ಲ ಎಂದು ಜನ ಆಡಿಕೊಳ್ಳುವ ಹಾಗೆ ಫಲಿತಾಂಶ ಬಂದಿತು.

ಬಹುಶಃ ಇದೇ ಪರಿಸ್ಥಿತಿ ಎಚ್.ವಿಶ್ವನಾಥ್‍ರಿಗೂ ಉಂಟಾಗಬಹುದು. ಏಕೆಂದರೆ ಕೆ.ಆರ್.ನಗರದಲ್ಲಿ ಮತ್ತೆ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಸ್ಥಿತಿ ಇದ್ದ ವಿಶ್ವನಾಥ್‍ರಿಗೆ ಜಿಟಿಡಿ ಪ್ರತಿನಿಧಿಸುತ್ತಿದ್ದ ಹುಣಸೂರನ್ನು ದೇವೇಗೌಡರು ಕೊಡಿಸಿದ್ದರು. ಇನ್ನೊಬ್ಬ ಜೆಡಿಎಸ್ ಶಾಸಕ ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯರ ಪರಿಸ್ಥಿತಿ ಮಾತ್ರ ಭಿನ್ನ ಇರಬಹುದು. ನಗರ ಪ್ರದೇಶದಲ್ಲಿ ಬಿಜೆಪಿಗೆ ಸೇರಿದರೆ ಅನುಕೂಲವೂ ಉಂಟಾಗಬಹುದು. ಆದರೆ ಜೆಡಿಎಸ್‍ನ ಬೆಂಬಲ ಇಲ್ಲದೇ ಎಚ್.ವಿಶ್ವನಾಥ್ ಮತ್ತೆ ಹುಣಸೂರಿನಲ್ಲಿ ಗೆಲ್ಲುವುದು ಅನುಮಾನ.

ಕೆ.ಆರ್.ಪೇಟೆಯ ವಿಚಾರದಲ್ಲಿ ಅಂತಹ ಯಾವ ಅನುಮಾನವೂ ಇಲ್ಲ ಎಂಬುದು ಮಂಡ್ಯ ಜಿಲ್ಲೆಯ ರಾಜಕಾರಣ ಗೊತ್ತಿದ್ದವರ ಅನಿಸಿಕೆ. ಮೊನ್ನಿನ ಲೋಕಸಭಾ ಚುನಾವಣೆಯ ಅಲೆಯ ಸ್ವರೂಪ ಬೇರೆ ಇತ್ತು. ಅದನ್ನು ಇಟ್ಟುಕೊಂಡು ‘ದೇವೇಗೌಡರ ಕುಟುಂಬಕ್ಕೆ ಅವಮಾನ ಮಾಡಿದ’ ನಾರಾಯಣಗೌಡರನ್ನು ಕೆ.ಆರ್.ಪೇಟೆಯ ಜನರು ಬಿಜೆಪಿ ಅಭ್ಯರ್ಥಿಯನ್ನಾಗಿ ಗೆಲ್ಲಿಸುವುದು ಸಾಧ್ಯವೇ ಇಲ್ಲ ಎಂಬುದು ಸ್ಥಳೀಯರ ಅನಿಸಿಕೆ. ಅಲ್ಲಿಗೆ ನಾರಾಯಣಗೌಡರ ರಾಜಕಾರಣ ಮುಗಿಯಿತೇ ಎಂಬ ಪ್ರಶ್ನೆಗೆ ಮುಂದಿನ ತಿಂಗಳುಗಳು ಉತ್ತರ ನೀಡುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...