Homeಕರ್ನಾಟಕಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

- Advertisement -
- Advertisement -

| ಎನ್.ಗೌಡ |

ದೇವೇಗೌಡರ ರಾಜಕೀಯ ಗ್ರಾಫ್ ಅತ್ಯಂತ ಪಾತಾಳಕ್ಕಿಳಿದ ಹಲವು ಸಂದರ್ಭಗಳು ಕಳೆದ ನಾಲ್ಕು ದಶಕಗಳಲ್ಲಿ ಬಂದು ಹೋಗಿವೆ. ಆದರೆ, ಅವರು ಮತ್ತೆ ಮತ್ತೆ ಫೀನಿಕ್ಸ್ (ಧೂಳಿನಿಂದ ಮೇಲೆದ್ದು ಬರುತ್ತೇನೆ ಎಂದು ವಿದಾಯ ಭಾಷಣದಲ್ಲಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಅಬ್ಬರಿಸಿದ್ದರು)ನಂತೆ ಮೇಲೇಳುತ್ತಾ ಬರುತ್ತಾರೆ. ಹಾಗೆ ಮೇಲೆದ್ದು ಬರುವಾಗ ಅವರಿಗೆ ಸಾಥ್ ಕೊಟ್ಟ ಕೆಲವು ನಿರ್ದಿಷ್ಟ ಭಾಗಗಳಿವೆ. ನಿಧಾನಕ್ಕೆ ಅಂತಹ ಕ್ಷೇತ್ರಗಳ ಮೇಲೆ ಅವರ ಹಿಡಿತವೂ ಹೆಚ್ಚಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಸಹಾ ಅವುಗಳಲ್ಲಿ ಒಂದು. ಭೌಗೋಳಿಕವಾಗಿ ಒಂದು ಕಡೆಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮತ್ತು ಹೊಳೆನರಸೀಪುರ ತಾಲೂಕುಗಳಿಗೆ ಅದು ಹೊಂದಿಕೊಂಡಿರುವುದೂ ಅದಕ್ಕೆ ಕಾರಣವಿರಬಹುದು. ಇದೇ ಕ್ಷೇತ್ರದ ಎಂಎಲ್‍ಎ ಕೆ.ಸಿ.ನಾರಾಯಣಗೌಡ ಈಗ ರಾಜೀನಾಮೆ ಕೊಟ್ಟು ಮುಂಬೈನ ಸೋಫಿಟೆಲ್ ಸೇರಿಕೊಂಡಿರುವವರಲ್ಲಿ ಒಬ್ಬರು.

ಕೆ.ಆರ್.ಪೇಟೆ ಕೃಷ್ಣ ಅವರು ಈ ಕ್ಷೇತ್ರದಲ್ಲಿ ಸಾಕಷ್ಟು ಕಾಲ ದೇವೇಗೌಡರ ಪಕ್ಷವನ್ನು ಪ್ರತಿನಿಧಿಸಿದ್ದ ಹಿರಿಯ ರಾಜಕಾರಣಿ. ಒಮ್ಮೆ ಸಂಸತ್ ಸದಸ್ಯರೂ (ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ) ಆಗಿದ್ದ ಅವರು 2004ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಧಿಕಾರಕ್ಕೆ ಬಂದಾಗ ಸ್ಪೀಕರ್ ಆಗಿದ್ದರು. ನಂತರದ ಜೆಡಿಎಸ್-ಬಿಜೆಪಿ ಮೈತ್ರಿಯನ್ನೂ (ದೇವೇಗೌಡರ ಸೂಚನೆಗಳಿಗನುಗುಣವಾಗಿ) ಸ್ಪೀಕರ್ ಆಗಿ ನಿಭಾಯಿಸಿದ್ದರು. 2008ರಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಕೆ.ಬಿ.ಚಂದ್ರಶೇಖರ್ ಎದುರು ಸೋತಿದ್ದರು. ಕೇವಲ 3,500 ಮತಗಳಿಂದ ಸೋತಿದ್ದರಿಂದ ನಂತರದ ಸಾಲಿನಲ್ಲಿ, ಅಂದರೆ 2013ರಲ್ಲೂ ತಮಗೇ ಟಿಕೆಟ್ ಎಂದು ಕೃಷ್ಣ ಭಾವಿಸಿದ್ದು ಸಹಜವಾಗಿತ್ತು. ಆದರೆ ಮುಂಬೈನಲ್ಲಿ ಹೋಟೆಲ್ ಮತ್ತಿತರ ಬಿಸಿನೆಸ್ ಮಾಡಿಕೊಂಡಿದ್ದ ಕೆ.ಸಿ.ನಾರಾಯಣಗೌಡರು ಅಷ್ಟು ಹೊತ್ತಿಗೆ ಕೆ.ಆರ್.ಪೇಟೆಯಲ್ಲಿ ‘ಸಮಾಜ ಸೇವೆ’ ಶುರು ಹಚ್ಚಿಕೊಂಡಿದ್ದರು.

ಹಣದ ಕುಳಗಳಿಗೆ ಮೊದಲ ಆದ್ಯತೆ ಕೊಡುವ ದೇವೇಗೌಡರ ಮನದಿಂಗಿತ ಅರಿವಾಗತೊಡಗಿ ಕೃಷ್ಣರಿಗೆ ಆತಂಕ ಶುರುವಾಯಿತು. ‘ಏನು ಮಾಡೋಣ ಗುರುಗಳೇ, ನಮಗೂ ಚುನಾವಣೆ ನಡೆಸಲು ಹಣದ ಅಗತ್ಯ ಇರುತ್ತೆ. ಬಹಳ ಕಷ್ಟದಲ್ಲಿದ್ದೇವೆ’ ಎಂದರು ದೊಡ್ಡಗೌಡರು. ಪ್ರಾಮಾಣಿಕತೆ ಮತ್ತಿತರ ಸಾರ್ವಜನಿಕ ಮೌಲ್ಯಗಳನ್ನು ಇನ್ನೂ ಉಳಿಸಿಕೊಂಡಿದ್ದ ಕೃಷ್ಣರಿಗೆ ಬೇರೆ ದಾರಿಯಿರಲಿಲ್ಲ. ದೇವೇಗೌಡರ ಬಳಿ ಹೋಗಿ ‘ನಾನು ಅನ್ಯಾಯದ ಹಣ ಸಂಪಾದನೆ ಮಾಡಿಲ್ಲ; ನನ್ನದೊಂದು ಸೈಟ್ ಇದೆ. ಅದನ್ನು ಮಾರಿ ಎಷ್ಟು ಹಣ ಬರುತ್ತೋ ಅಷ್ಟನ್ನು ಕೊಡುತ್ತೇನೆ’ ಎಂದರು. ‘ಸರಿ ನೋಡೋಣ’ ಎಂದ ದೊಡ್ಡಗೌಡರು, ಟಿಕೆಟ್ ಕೊಟ್ಟಿದ್ದು ಕೆ.ಸಿ.ನಾರಾಯಣಗೌಡರಿಗೆ!

ಬೇಸತ್ತ ಕೃಷ್ಣ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್‍ನ ಪಾರಂಪರಿಕ ಓಟ್‍ಬ್ಯಾಂಕ್ ಮತ್ತು ತಮ್ಮ ಕುಟುಂಬದ ಹಿಡಿತ ಎರಡನ್ನೂ ಹೊಂದಿದ್ದ ಕೆಬಿಸಿ ಎರಡನೇ ಸ್ಥಾನಕ್ಕೆ ಬಂದರು. 30,000 ಮತಗಳನ್ನು ಪಡೆದ ಕೃಷ್ಣ ಅವರು ಮೂರನೇ ಸ್ಥಾನದಲ್ಲಿದ್ದರು. ಹೀಗಿದ್ದೂ ಜೆಡಿಎಸ್ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆದ್ದರು. ಇದು ದೇವೇಗೌಡರು ಮತ್ತು ಅವರ ಪಕ್ಷಕ್ಕೆ ಕೆ.ಆರ್.ಪೇಟೆ ಮತದಾರರು ತೋರಿದ ನಿಷ್ಠೆಯ ಪ್ರತೀಕವಾಗಿತ್ತು. ಅದು 2018ರ ಚುನಾವಣೆಯಲ್ಲೂ ಎದ್ದು ಕಂಡಿತು.

ಈ ಸಾರಿ ಕೆ.ಸಿ.ಎನ್.ಗೆ ಟಿಕೆಟ್ ಇಲ್ಲ ಎಂಬ ಸಂದೇಶ ಹರಿದಾಡಲು ಆರಂಭವಾಯಿತು. ಅದಕ್ಕೆ ತಕ್ಕಂತೆ ಟಿಕೆಟ್ ಹಂಚಿಕೆಯ ಮೊದಲ ಪಟ್ಟಿಗಳಲ್ಲಿ ಕೆ.ಆರ್.ಪೇಟೆ ಕ್ಷೇತ್ರದ ಅಭ್ಯರ್ಥಿಯ ಘೋಷಣೆಯೂ ಆಗಲಿಲ್ಲ. ಅನಿವಾರ್ಯವಾಗಿ ಮತ್ತೊಮ್ಮೆ ಕಪ್ಪ ಸಲ್ಲಿಸಿ ನಾರಾಯಣಗೌಡರು ಟಿಕೆಟ್ ಪಡೆದುಕೊಂಡರು. ತಾನು ಭ್ರಷ್ಟಾಚಾರ ಮಾಡಲಿಲ್ಲ, ಪಕ್ಷಕ್ಕೆ ನಿಷ್ಠನಾಗಿದ್ದೆ, ಇದ್ದುದರಲ್ಲಿ ಚೆನ್ನಾಗಿ ಕೆಲಸ ಮಾಡಿದ್ದೇನೆ, ನನ್ನಂಥವನಿಗೆ ಹೀಗೆ ಮಾಡಿದರಲ್ಲಾ ಎಂಬ ಸಿಟ್ಟು ನಾರಾಯಣಗೌಡರಲ್ಲಿ ಹುಟ್ಟಿಕೊಂಡು ಬೆಳೆದು ಇದೀಗ ಅದು ಬಂಡಾಯವೇಳುವವರೆಗೆ ಕೊಂಡೊಯ್ದಿದೆ. ಏಕೆಂದರೆ, ಸ್ವತಃ ದುಡ್ಡಿನ ಕುಳವಾದ ಗೌಡರಿಗೆ ಬಿಜೆಪಿಯ 30 ಕೋಟಿ ಆಸೆ ಹುಟ್ಟಿಸಿರಲಾರದು. ಆದರೆ ನಾರಾಯಣಗೌಡರು ಮರೆಯುತ್ತಿರುವ ಒಂದು ವಿಷಯವಿದೆ. ಈ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕೃಷ್ಣ ಅವರೂ ಕೆ.ಬಿ.ಸಿಗೇ ಬೆಂಬಲಿಸಿದ್ದರೂ, ನಾರಾಯಣಗೌಡರು 17,000ಕ್ಕೂ ಹೆಚ್ಚು ಅಂತರದಿಂದ ಗೆಲ್ಲಲು ಜೆಡಿಎಸ್ ಟಿಕೆಟ್ಟೇ ಕಾರಣ. ದೇವೇಗೌಡರು ಕೆ.ಆರ್.ಪೇಟೆಯವರಿಗೆ ಅದೇನು ಮಾಯ ಮಾಡಿದ್ದಾರೋ ಗೊತ್ತಿಲ್ಲ ಎಂದು ಜನ ಆಡಿಕೊಳ್ಳುವ ಹಾಗೆ ಫಲಿತಾಂಶ ಬಂದಿತು.

ಬಹುಶಃ ಇದೇ ಪರಿಸ್ಥಿತಿ ಎಚ್.ವಿಶ್ವನಾಥ್‍ರಿಗೂ ಉಂಟಾಗಬಹುದು. ಏಕೆಂದರೆ ಕೆ.ಆರ್.ನಗರದಲ್ಲಿ ಮತ್ತೆ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಸ್ಥಿತಿ ಇದ್ದ ವಿಶ್ವನಾಥ್‍ರಿಗೆ ಜಿಟಿಡಿ ಪ್ರತಿನಿಧಿಸುತ್ತಿದ್ದ ಹುಣಸೂರನ್ನು ದೇವೇಗೌಡರು ಕೊಡಿಸಿದ್ದರು. ಇನ್ನೊಬ್ಬ ಜೆಡಿಎಸ್ ಶಾಸಕ ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯರ ಪರಿಸ್ಥಿತಿ ಮಾತ್ರ ಭಿನ್ನ ಇರಬಹುದು. ನಗರ ಪ್ರದೇಶದಲ್ಲಿ ಬಿಜೆಪಿಗೆ ಸೇರಿದರೆ ಅನುಕೂಲವೂ ಉಂಟಾಗಬಹುದು. ಆದರೆ ಜೆಡಿಎಸ್‍ನ ಬೆಂಬಲ ಇಲ್ಲದೇ ಎಚ್.ವಿಶ್ವನಾಥ್ ಮತ್ತೆ ಹುಣಸೂರಿನಲ್ಲಿ ಗೆಲ್ಲುವುದು ಅನುಮಾನ.

ಕೆ.ಆರ್.ಪೇಟೆಯ ವಿಚಾರದಲ್ಲಿ ಅಂತಹ ಯಾವ ಅನುಮಾನವೂ ಇಲ್ಲ ಎಂಬುದು ಮಂಡ್ಯ ಜಿಲ್ಲೆಯ ರಾಜಕಾರಣ ಗೊತ್ತಿದ್ದವರ ಅನಿಸಿಕೆ. ಮೊನ್ನಿನ ಲೋಕಸಭಾ ಚುನಾವಣೆಯ ಅಲೆಯ ಸ್ವರೂಪ ಬೇರೆ ಇತ್ತು. ಅದನ್ನು ಇಟ್ಟುಕೊಂಡು ‘ದೇವೇಗೌಡರ ಕುಟುಂಬಕ್ಕೆ ಅವಮಾನ ಮಾಡಿದ’ ನಾರಾಯಣಗೌಡರನ್ನು ಕೆ.ಆರ್.ಪೇಟೆಯ ಜನರು ಬಿಜೆಪಿ ಅಭ್ಯರ್ಥಿಯನ್ನಾಗಿ ಗೆಲ್ಲಿಸುವುದು ಸಾಧ್ಯವೇ ಇಲ್ಲ ಎಂಬುದು ಸ್ಥಳೀಯರ ಅನಿಸಿಕೆ. ಅಲ್ಲಿಗೆ ನಾರಾಯಣಗೌಡರ ರಾಜಕಾರಣ ಮುಗಿಯಿತೇ ಎಂಬ ಪ್ರಶ್ನೆಗೆ ಮುಂದಿನ ತಿಂಗಳುಗಳು ಉತ್ತರ ನೀಡುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...