Homeಕರ್ನಾಟಕಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡರ ರಾಜಕೀಯ ಮುಗಿದಂತೆ

- Advertisement -
- Advertisement -

| ಎನ್.ಗೌಡ |

ದೇವೇಗೌಡರ ರಾಜಕೀಯ ಗ್ರಾಫ್ ಅತ್ಯಂತ ಪಾತಾಳಕ್ಕಿಳಿದ ಹಲವು ಸಂದರ್ಭಗಳು ಕಳೆದ ನಾಲ್ಕು ದಶಕಗಳಲ್ಲಿ ಬಂದು ಹೋಗಿವೆ. ಆದರೆ, ಅವರು ಮತ್ತೆ ಮತ್ತೆ ಫೀನಿಕ್ಸ್ (ಧೂಳಿನಿಂದ ಮೇಲೆದ್ದು ಬರುತ್ತೇನೆ ಎಂದು ವಿದಾಯ ಭಾಷಣದಲ್ಲಿ ಪ್ರಧಾನಿ ದೇವೇಗೌಡರು ಸಂಸತ್ತಿನಲ್ಲಿ ಅಬ್ಬರಿಸಿದ್ದರು)ನಂತೆ ಮೇಲೇಳುತ್ತಾ ಬರುತ್ತಾರೆ. ಹಾಗೆ ಮೇಲೆದ್ದು ಬರುವಾಗ ಅವರಿಗೆ ಸಾಥ್ ಕೊಟ್ಟ ಕೆಲವು ನಿರ್ದಿಷ್ಟ ಭಾಗಗಳಿವೆ. ನಿಧಾನಕ್ಕೆ ಅಂತಹ ಕ್ಷೇತ್ರಗಳ ಮೇಲೆ ಅವರ ಹಿಡಿತವೂ ಹೆಚ್ಚಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಸಹಾ ಅವುಗಳಲ್ಲಿ ಒಂದು. ಭೌಗೋಳಿಕವಾಗಿ ಒಂದು ಕಡೆಗೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮತ್ತು ಹೊಳೆನರಸೀಪುರ ತಾಲೂಕುಗಳಿಗೆ ಅದು ಹೊಂದಿಕೊಂಡಿರುವುದೂ ಅದಕ್ಕೆ ಕಾರಣವಿರಬಹುದು. ಇದೇ ಕ್ಷೇತ್ರದ ಎಂಎಲ್‍ಎ ಕೆ.ಸಿ.ನಾರಾಯಣಗೌಡ ಈಗ ರಾಜೀನಾಮೆ ಕೊಟ್ಟು ಮುಂಬೈನ ಸೋಫಿಟೆಲ್ ಸೇರಿಕೊಂಡಿರುವವರಲ್ಲಿ ಒಬ್ಬರು.

ಕೆ.ಆರ್.ಪೇಟೆ ಕೃಷ್ಣ ಅವರು ಈ ಕ್ಷೇತ್ರದಲ್ಲಿ ಸಾಕಷ್ಟು ಕಾಲ ದೇವೇಗೌಡರ ಪಕ್ಷವನ್ನು ಪ್ರತಿನಿಧಿಸಿದ್ದ ಹಿರಿಯ ರಾಜಕಾರಣಿ. ಒಮ್ಮೆ ಸಂಸತ್ ಸದಸ್ಯರೂ (ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ) ಆಗಿದ್ದ ಅವರು 2004ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಧಿಕಾರಕ್ಕೆ ಬಂದಾಗ ಸ್ಪೀಕರ್ ಆಗಿದ್ದರು. ನಂತರದ ಜೆಡಿಎಸ್-ಬಿಜೆಪಿ ಮೈತ್ರಿಯನ್ನೂ (ದೇವೇಗೌಡರ ಸೂಚನೆಗಳಿಗನುಗುಣವಾಗಿ) ಸ್ಪೀಕರ್ ಆಗಿ ನಿಭಾಯಿಸಿದ್ದರು. 2008ರಲ್ಲಿ ವಿಧಾನಸಭೆ ಚುನಾವಣೆ ನಡೆದಾಗ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಕೆ.ಬಿ.ಚಂದ್ರಶೇಖರ್ ಎದುರು ಸೋತಿದ್ದರು. ಕೇವಲ 3,500 ಮತಗಳಿಂದ ಸೋತಿದ್ದರಿಂದ ನಂತರದ ಸಾಲಿನಲ್ಲಿ, ಅಂದರೆ 2013ರಲ್ಲೂ ತಮಗೇ ಟಿಕೆಟ್ ಎಂದು ಕೃಷ್ಣ ಭಾವಿಸಿದ್ದು ಸಹಜವಾಗಿತ್ತು. ಆದರೆ ಮುಂಬೈನಲ್ಲಿ ಹೋಟೆಲ್ ಮತ್ತಿತರ ಬಿಸಿನೆಸ್ ಮಾಡಿಕೊಂಡಿದ್ದ ಕೆ.ಸಿ.ನಾರಾಯಣಗೌಡರು ಅಷ್ಟು ಹೊತ್ತಿಗೆ ಕೆ.ಆರ್.ಪೇಟೆಯಲ್ಲಿ ‘ಸಮಾಜ ಸೇವೆ’ ಶುರು ಹಚ್ಚಿಕೊಂಡಿದ್ದರು.

ಹಣದ ಕುಳಗಳಿಗೆ ಮೊದಲ ಆದ್ಯತೆ ಕೊಡುವ ದೇವೇಗೌಡರ ಮನದಿಂಗಿತ ಅರಿವಾಗತೊಡಗಿ ಕೃಷ್ಣರಿಗೆ ಆತಂಕ ಶುರುವಾಯಿತು. ‘ಏನು ಮಾಡೋಣ ಗುರುಗಳೇ, ನಮಗೂ ಚುನಾವಣೆ ನಡೆಸಲು ಹಣದ ಅಗತ್ಯ ಇರುತ್ತೆ. ಬಹಳ ಕಷ್ಟದಲ್ಲಿದ್ದೇವೆ’ ಎಂದರು ದೊಡ್ಡಗೌಡರು. ಪ್ರಾಮಾಣಿಕತೆ ಮತ್ತಿತರ ಸಾರ್ವಜನಿಕ ಮೌಲ್ಯಗಳನ್ನು ಇನ್ನೂ ಉಳಿಸಿಕೊಂಡಿದ್ದ ಕೃಷ್ಣರಿಗೆ ಬೇರೆ ದಾರಿಯಿರಲಿಲ್ಲ. ದೇವೇಗೌಡರ ಬಳಿ ಹೋಗಿ ‘ನಾನು ಅನ್ಯಾಯದ ಹಣ ಸಂಪಾದನೆ ಮಾಡಿಲ್ಲ; ನನ್ನದೊಂದು ಸೈಟ್ ಇದೆ. ಅದನ್ನು ಮಾರಿ ಎಷ್ಟು ಹಣ ಬರುತ್ತೋ ಅಷ್ಟನ್ನು ಕೊಡುತ್ತೇನೆ’ ಎಂದರು. ‘ಸರಿ ನೋಡೋಣ’ ಎಂದ ದೊಡ್ಡಗೌಡರು, ಟಿಕೆಟ್ ಕೊಟ್ಟಿದ್ದು ಕೆ.ಸಿ.ನಾರಾಯಣಗೌಡರಿಗೆ!

ಬೇಸತ್ತ ಕೃಷ್ಣ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕಾಂಗ್ರೆಸ್‍ನ ಪಾರಂಪರಿಕ ಓಟ್‍ಬ್ಯಾಂಕ್ ಮತ್ತು ತಮ್ಮ ಕುಟುಂಬದ ಹಿಡಿತ ಎರಡನ್ನೂ ಹೊಂದಿದ್ದ ಕೆಬಿಸಿ ಎರಡನೇ ಸ್ಥಾನಕ್ಕೆ ಬಂದರು. 30,000 ಮತಗಳನ್ನು ಪಡೆದ ಕೃಷ್ಣ ಅವರು ಮೂರನೇ ಸ್ಥಾನದಲ್ಲಿದ್ದರು. ಹೀಗಿದ್ದೂ ಜೆಡಿಎಸ್ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಗೆದ್ದರು. ಇದು ದೇವೇಗೌಡರು ಮತ್ತು ಅವರ ಪಕ್ಷಕ್ಕೆ ಕೆ.ಆರ್.ಪೇಟೆ ಮತದಾರರು ತೋರಿದ ನಿಷ್ಠೆಯ ಪ್ರತೀಕವಾಗಿತ್ತು. ಅದು 2018ರ ಚುನಾವಣೆಯಲ್ಲೂ ಎದ್ದು ಕಂಡಿತು.

ಈ ಸಾರಿ ಕೆ.ಸಿ.ಎನ್.ಗೆ ಟಿಕೆಟ್ ಇಲ್ಲ ಎಂಬ ಸಂದೇಶ ಹರಿದಾಡಲು ಆರಂಭವಾಯಿತು. ಅದಕ್ಕೆ ತಕ್ಕಂತೆ ಟಿಕೆಟ್ ಹಂಚಿಕೆಯ ಮೊದಲ ಪಟ್ಟಿಗಳಲ್ಲಿ ಕೆ.ಆರ್.ಪೇಟೆ ಕ್ಷೇತ್ರದ ಅಭ್ಯರ್ಥಿಯ ಘೋಷಣೆಯೂ ಆಗಲಿಲ್ಲ. ಅನಿವಾರ್ಯವಾಗಿ ಮತ್ತೊಮ್ಮೆ ಕಪ್ಪ ಸಲ್ಲಿಸಿ ನಾರಾಯಣಗೌಡರು ಟಿಕೆಟ್ ಪಡೆದುಕೊಂಡರು. ತಾನು ಭ್ರಷ್ಟಾಚಾರ ಮಾಡಲಿಲ್ಲ, ಪಕ್ಷಕ್ಕೆ ನಿಷ್ಠನಾಗಿದ್ದೆ, ಇದ್ದುದರಲ್ಲಿ ಚೆನ್ನಾಗಿ ಕೆಲಸ ಮಾಡಿದ್ದೇನೆ, ನನ್ನಂಥವನಿಗೆ ಹೀಗೆ ಮಾಡಿದರಲ್ಲಾ ಎಂಬ ಸಿಟ್ಟು ನಾರಾಯಣಗೌಡರಲ್ಲಿ ಹುಟ್ಟಿಕೊಂಡು ಬೆಳೆದು ಇದೀಗ ಅದು ಬಂಡಾಯವೇಳುವವರೆಗೆ ಕೊಂಡೊಯ್ದಿದೆ. ಏಕೆಂದರೆ, ಸ್ವತಃ ದುಡ್ಡಿನ ಕುಳವಾದ ಗೌಡರಿಗೆ ಬಿಜೆಪಿಯ 30 ಕೋಟಿ ಆಸೆ ಹುಟ್ಟಿಸಿರಲಾರದು. ಆದರೆ ನಾರಾಯಣಗೌಡರು ಮರೆಯುತ್ತಿರುವ ಒಂದು ವಿಷಯವಿದೆ. ಈ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕೃಷ್ಣ ಅವರೂ ಕೆ.ಬಿ.ಸಿಗೇ ಬೆಂಬಲಿಸಿದ್ದರೂ, ನಾರಾಯಣಗೌಡರು 17,000ಕ್ಕೂ ಹೆಚ್ಚು ಅಂತರದಿಂದ ಗೆಲ್ಲಲು ಜೆಡಿಎಸ್ ಟಿಕೆಟ್ಟೇ ಕಾರಣ. ದೇವೇಗೌಡರು ಕೆ.ಆರ್.ಪೇಟೆಯವರಿಗೆ ಅದೇನು ಮಾಯ ಮಾಡಿದ್ದಾರೋ ಗೊತ್ತಿಲ್ಲ ಎಂದು ಜನ ಆಡಿಕೊಳ್ಳುವ ಹಾಗೆ ಫಲಿತಾಂಶ ಬಂದಿತು.

ಬಹುಶಃ ಇದೇ ಪರಿಸ್ಥಿತಿ ಎಚ್.ವಿಶ್ವನಾಥ್‍ರಿಗೂ ಉಂಟಾಗಬಹುದು. ಏಕೆಂದರೆ ಕೆ.ಆರ್.ನಗರದಲ್ಲಿ ಮತ್ತೆ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಸ್ಥಿತಿ ಇದ್ದ ವಿಶ್ವನಾಥ್‍ರಿಗೆ ಜಿಟಿಡಿ ಪ್ರತಿನಿಧಿಸುತ್ತಿದ್ದ ಹುಣಸೂರನ್ನು ದೇವೇಗೌಡರು ಕೊಡಿಸಿದ್ದರು. ಇನ್ನೊಬ್ಬ ಜೆಡಿಎಸ್ ಶಾಸಕ ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯರ ಪರಿಸ್ಥಿತಿ ಮಾತ್ರ ಭಿನ್ನ ಇರಬಹುದು. ನಗರ ಪ್ರದೇಶದಲ್ಲಿ ಬಿಜೆಪಿಗೆ ಸೇರಿದರೆ ಅನುಕೂಲವೂ ಉಂಟಾಗಬಹುದು. ಆದರೆ ಜೆಡಿಎಸ್‍ನ ಬೆಂಬಲ ಇಲ್ಲದೇ ಎಚ್.ವಿಶ್ವನಾಥ್ ಮತ್ತೆ ಹುಣಸೂರಿನಲ್ಲಿ ಗೆಲ್ಲುವುದು ಅನುಮಾನ.

ಕೆ.ಆರ್.ಪೇಟೆಯ ವಿಚಾರದಲ್ಲಿ ಅಂತಹ ಯಾವ ಅನುಮಾನವೂ ಇಲ್ಲ ಎಂಬುದು ಮಂಡ್ಯ ಜಿಲ್ಲೆಯ ರಾಜಕಾರಣ ಗೊತ್ತಿದ್ದವರ ಅನಿಸಿಕೆ. ಮೊನ್ನಿನ ಲೋಕಸಭಾ ಚುನಾವಣೆಯ ಅಲೆಯ ಸ್ವರೂಪ ಬೇರೆ ಇತ್ತು. ಅದನ್ನು ಇಟ್ಟುಕೊಂಡು ‘ದೇವೇಗೌಡರ ಕುಟುಂಬಕ್ಕೆ ಅವಮಾನ ಮಾಡಿದ’ ನಾರಾಯಣಗೌಡರನ್ನು ಕೆ.ಆರ್.ಪೇಟೆಯ ಜನರು ಬಿಜೆಪಿ ಅಭ್ಯರ್ಥಿಯನ್ನಾಗಿ ಗೆಲ್ಲಿಸುವುದು ಸಾಧ್ಯವೇ ಇಲ್ಲ ಎಂಬುದು ಸ್ಥಳೀಯರ ಅನಿಸಿಕೆ. ಅಲ್ಲಿಗೆ ನಾರಾಯಣಗೌಡರ ರಾಜಕಾರಣ ಮುಗಿಯಿತೇ ಎಂಬ ಪ್ರಶ್ನೆಗೆ ಮುಂದಿನ ತಿಂಗಳುಗಳು ಉತ್ತರ ನೀಡುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...