Homeಕರ್ನಾಟಕನೆರೆಪರಿಹಾರ ವಿಳಂಬಕ್ಕೆ ಮೋದಿ ಎದುರೆ ಸಿಎಂ ಯಡಿಯೂರಪ್ಪ ಅಸಮಾಧಾನ

ನೆರೆಪರಿಹಾರ ವಿಳಂಬಕ್ಕೆ ಮೋದಿ ಎದುರೆ ಸಿಎಂ ಯಡಿಯೂರಪ್ಪ ಅಸಮಾಧಾನ

- Advertisement -
- Advertisement -

ಪ್ರವಾಹದಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು ನಾಲ್ಕು ಬಾರಿ ಹೋಗಿ ಪ್ರಧಾನಿಯನ್ನು ಬೇಟಿ ಮಾಡಿದರೂ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು.

ತುಮಕೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರೈತ ಸಮಾವೇಶದಲ್ಲಿ ಮೊದಲಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ 3 ಲಕ್ಷ ಮನೆಗಳು ಬಿದ್ದುಹೋಗಿವೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ನೆರೆ ಹಾವಳಿಯಿಂದ 30 ಸಾವಿರ ಕೋಟಿ ನಷ್ಟವಾಗಿದೆ. ಮೊದಲ ಕಂತಿನ 1200 ಕೋಟಿ ಹಣವನ್ನು ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ಅಳಲು ತೋಡಿಕೊಂಡರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಬಂದು ಲಕ್ಷಾಂತರ ಹೆಕ್ಟೇರ್ ನಲ್ಲಿ ಬೆಳೆದಿದ್ದ ಬೆಳೆ ನೀರಿನಲ್ಲಿ ಕೊಚ್ಚಿ ಹೋಯಿತು. ಮನೆಗಳು ಕಳೆದುಕೊಂಡಿದ್ದರು. ರೈತರು ತೊಂದರೆಗೊಳಗಾಗಿದ್ದರು. ಇದನ್ನು ಪ್ರಧಾನಿಗಳ ಗಮನಕ್ಕೆ ತರಲು ನಾಲ್ಕು ಬಾರಿ ದೆಹಲಿಗೆ ಹೋದೆವು. ಪ್ರಧಾನಿಗಳಿಗೆ ಮನವಿ ಮಾಡಿದೆವು. ಆದರೂ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ನಯವಾಗಿಯೇ ಅಸಮಾಧಾನ ಹೊರಹಾಕಿದರು.

ನೀರಾವರಿ ಯೋಜನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಸುಮಾರು 6 ಸಾವಿರ ನೀರಾವರಿ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಇದಕ್ಕೆ ಸಾಕಷ್ಟು ಹಣ ಬೇಕು. ಹಾಗಾಗಿ ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಪೂರ್ವಕ ಮನವಿ ಮಾಡಿದರು.

ಬೆಂಗಳೂರಿನ ರಾಜಭವನದಲ್ಲಿ ಮತ್ತೊಮ್ಮೆ ಲಿಖಿತ ಮನವಿ ನೀಡಿ ಪ್ರಧಾನಿಗಳನ್ನು ಮನವಿ ಮಾಡುತ್ತೇವೆ. ಹಣದ ಅಗತ್ಯವಿದೆ ಎಂಬುದನ್ನು ಪ್ರಧಾನಿಗಳಿಗೆ ಮನವರಿಕೆ ಮಾಡುತ್ತೇವೆ. ಎಂದು ಹೇಳಿದರು.

ಪ್ರಧಾನಿ ಮೋದಿ ಮಠದಲ್ಲಿ ಧ್ಯಾನ ಮಾಡುತ್ತಾರೆ ಎಂದಿದ್ದರು. ಆದರೆ ಪ್ರಧಾನಿ ಧ್ಯಾನವನ್ನೇ ಮಾಡಲಿಲ್ಲ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ ಎಂದಿದ್ದರು. ಬೆಂಗಳೂರಿನಿಂದ ಪ್ರಧಾನಿಗಳನ್ನು ಪ್ರಶ್ನೆ ಕೇಳಲೆಂದು ವಿದ್ಯಾರ್ಥಿನಿಯರು ಬಂದಿದ್ದರು. ಆದರೆ ಪ್ರಧಾನಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಗೋಜಿಗೆ ಹೋಗಲಿಲ್ಲ. ರಾಜಕೀಯ ಭಾಷಣ ಮಾಡಿದರು.

ಪ್ರಧಾನಿಗಳು ರೈತ ಸಮಾವೇಶದಲ್ಲಿ ಕನಿಷ್ಟ ಬೆಂಬಲ ಬೆಲೆಯ ಜೊತೆಗೆ ಒಂದೂವರೆ ಪಟ್ಟು ಆದಾಯವನ್ನು ರೈತರಿಗೆ ಸಿಗಬೇಕೆಂಬ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದರು.

ಕರ್ನಾಟಕ, ಕೇರಳ, ತಮಿಳುನಾಡು, ಆಂದ್ರಪ್ರದೇಶ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ಶಕ್ತಿಯನ್ನು ಹೊಂದಿದೆ. ಕಾಫಿ, ಚಹ, ರಬ್ಬರ್, ಅರಿಶಿಣ ಬೆಳೆಗೆ ಪ್ರಸಿದ್ದಿಯಾಗಿದೆ. ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಆಗುತ್ತಿದೆ. ಇದನ್ನು ರಫ್ತು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮೋದಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

    • ಯಡಿಯೂರಪ್ಪ ನವರೆ ರಾಜ್ಯದ ಅಭಿವೃದ್ಧಿ ಪರ ಕೆಲಸ ಮಾಡಿದರೆ ರಾಜ್ಯದ ಜನ ನಿಮ್ಮನ್ನು ಬೆಂಬಲಿಸುತ್ತಾರೆ .ಇಲ್ಲವಾದರೆ ದಿಕ್ಕರಿಸುತ್ತಾರೆ ಇದು ನಿಮಗೆ ಕೊನೆಯ ಅವಕಾಶ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...