Homeಅಂಕಣಗಳುನಾವು ದಕ್ಷಿಣ ಭಾರತೀಯರು ಕಪಿಗಳಾ?

ನಾವು ದಕ್ಷಿಣ ಭಾರತೀಯರು ಕಪಿಗಳಾ?

- Advertisement -
- Advertisement -

ಗೌರಿ ಲಂಕೇಶ್ |

ರಾಮಸೇತುವಿನ ಸುತ್ತ ನಡೆಯುವ ವಾದವಿವಾದಗಳಲ್ಲಿ ನನ್ನದೊಂದು ಪ್ರಶ್ನೆಗೆ ಯಾರಾದರೂ ಉತ್ತರ ನೀಡುತ್ತಾರಾ? ಪ್ರಶ್ನೆ ಏನೆಂದರೆ ರಾಮ ಸೇತುವನ್ನು ರಾಮನೇ ಕಟ್ಟಿದ್ದು-ನಂಬಿಕೆ/ಪುರಾಣ/ಚರಿತ್ರೆ ಅಥವಾ ಇನ್ನಾವುದೋ ಕಾಗಕ್ಕ-ಗುಬ್ಬಕ್ಕ ಕತೆಯ ಪ್ರಕಾರ ಎಂಬುದನ್ನು ಸತ್ಯ ಎಂದು ಒಪ್ಪಿಕೊಳ್ಳುವುದಾದರೆ, ಅದೇ ಪ್ರಕರಣ ಕುರಿತಂತೆ ನಾವು ದಕ್ಷಿಣ ಭಾರತದ ಜನ ವಾನರರು-ಅಂದರೆ ಕಪಿಗಳು, ಮಂಗಗಳು ಎಂಬುದನ್ನು ಒಪ್ಪಿಕೊಳ್ಳಬೇಕಲ್ಲವೇ?

ಈ ಪ್ರಶ್ನೆ ಯಾಕೆಂದರೆ ರಾಮಾಯಣದ ಪ್ರಕಾರ ರಾಮನ ಸೈನ್ಯದಲ್ಲಿ ಇದ್ದದ್ದು ಕಪಿಗಳು. ಆ ಕಾಲದಲ್ಲೇ ರಾಮ ಆದರ್ಶ ಪುರುಷನಾಗಿದ್ದರೂ, ಏಕಪತ್ನಿವ್ರತಸ್ಥನಾಗಿದ್ದರೂ ದಕ್ಷಿಣ ಭಾರತದ ‘ಜನ’ ಇನ್ನೂ ಮಂಗಗಳಾಗಿಯೇ ಉಳಿದಿದ್ದರಲ್ಲದೆ, ಪಕ್ಕಾ ಕಾಡುಪ್ರಾಣಿಗಳಂತೆ ಜೀವಿಸುತ್ತಿದ್ದರು. ಒಬ್ಬರ ಹೆಂಡಂದಿರನ್ನು ಇನ್ನೊಬ್ಬರು ಲಪಟಾಯಿಸುತ್ತಿದ್ದರು, ವಿವೇಚನಾ ಶಕ್ತಿ ಇಲ್ಲದವರಾಗಿದ್ದರು!

ಕತೆ, ಪುರಾಣ, ಚರಿತ್ರೆ, ಇತಿಹಾಸ, ವಿಜ್ಞಾನ ಇವುಗಳ ನಡುವಿನ ವ್ಯತ್ಯಾಸವನ್ನು ಅರಿಯದ ಜನ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮನ ವಾನರ ಸೈನ್ಯ ಈ ಸೇತುವೆಯನ್ನು ನಿರ್ಮಿಸಿತ್ತು’ ಎಂದು ವಾದಿಸುತ್ತಾರಲ್ಲವೆ, ಬೀದಿಗಿಳಿದು ಮಂಗಗಳಂತೆ ವರ್ತಿಸುತ್ತಾರೆ.
ಎಲ್ಲಾ ಧರ್ಮಗಳಲ್ಲೂ ಅತಿಶಯೋಕ್ತಿ ಎನಿಸುವ ಮೆಟಫರ್‌ಗಳಿರುತ್ತವೆ. ಅಥವಾ ಆ ಧರ್ಮ ಜನಿಸಿದ್ದ ಕಾಲದ ಮರ್ತಮಾನದಲ್ಲಿ ಮನುಷ್ಯನ ಅರಿವಿಗೆ ಬಂದಿರುವ ಮಾಹಿತಿಯನ್ನು ಆಧರಿಸಿ ಹಲವು ಕತೆಗಳನ್ನು, ನೀತಿಪಾಠಗಳನ್ನು ಕಟ್ಟಿ ಕೊಡುತ್ತವಲ್ಲದೆ ಮನುಷ್ಯನ ಕಲ್ಪನೆಗೆ ಅರೋಪಿಸಿ ದೈವಶಕ್ತಿಯ ಬಗ್ಗೆ ನಂಬಿಕೆ ಜನಿಸುವಂತೆ ಮಾಡಿರಲಾಗುತ್ತದೆ.

ಉದಾಹರಣೆಗೆ ಕ್ರೈಸ್ತ ಧರ್ಮ ಎರಡು ಸಾವಿರ ವರ್ಷಗಳ ಹಿಂದೆ ಜನಿಸಿದಾಗ ಮಾನವನ ವಿಕಸನದ ಬಗ್ಗೆ ಗೊತ್ತಿರಲಿಲ್ಲ. ಆದ್ದರಿಂದ ಆ ಧರ್ಮದಲ್ಲಿ ಈಡನ್ ಗಾರ್ಡನ್‌ನ ಕಲ್ಪನೆ ಇದೆಯಲ್ಲದೆ, ಭೂಮಿ ಚಪ್ಪಟೆ ಆಗಿದೆ ಎಂದೂ, ಅದರ ಸುತ್ತ ಸೂರ್ಯನೆ ಚಲಿಸುತ್ತಾನೆಂದೂ ಅದರ ಧರ್ಮಗ್ರಂಥ ಬೈಬಲ್‌ನಲ್ಲಿ ದಾಖಲಿಸಲಾಗಿದೆ. ಅಂದಮಾತ್ರಕ್ಕೆ ಇವತ್ತು ಸತ್ಯ ಎಂದು ಸಾಬೀತುಪಡಿಸಲಾಗಿರುವ ಚಾರ್ಲ್ಸ್ ಡಾರ್ವಿನ್‌ನ ವಿಕಾಸವಾದವನ್ನು, ಕೊಪರ್ ನಿಕಸ್‌ನ ಸೌರ ಮಂಡಲದ ರೂಪವನ್ನು ನಿರಾಕರಿಸಲಾಗುತ್ತದೆಯೇ?

ಅಂದಹಾಗೆ ಹದಿನಾರನೇ ಶತಮಾನದಲ್ಲಿ ಕೊಪರ್‌ನಿಕಸ್ ಮತ್ತು 19ನೇ ಶತಮಾನದಲ್ಲಿ ಚಾರ್ಲ್ಸ್ ಡಾರ್ವಿನ್ ಇಬ್ಬರೂ ಅಂದಿನ ಮೂಲಭೂತವಾದಿ ಕ್ರೈಸ್ತರ ನಿಂದನೆಗೆ ಗುರಿಯಾಗಿದ್ದರು. ನಮ್ಮ ವಿಪರ್ಯಾಸ ಎಂತಹದ್ದೆಂದರೆ ಇವತ್ತು 21ನೇ ಶತಮಾನದಲ್ಲಿ ವೈಜ್ಞಾನಿಕವಾಗಿ ಲಭ್ಯವಿರುವ ಸಾಕ್ಷ್ಯಯಗಳನ್ನು ಆಧರಿಸಿ ರಾಮಸೇತುವನ್ನು ರಾಮನಾಗಲಿ, ಕಪಿಸೈನ್ಯವಾಗಲಿ ನಿರ್ಮಿಸಿದ್ದಲ್ಲ ಎಂದು ಹೇಳಿದರೆ ‘ಹಿಂದೂ ನಂಬಿಕೆಗಳಿಗೆ ಅವಮಾನ’ ಎಂದು ಕೂಗಾಡುವವರು, ಪ್ರತಿಭಟನೆಗೆ ಇಳಿಯುವವರು ನಮ್ಮ ಸುತ್ತಲೂ ಇದ್ದಾರೆ.
ಹೋಗಲಿ, ಇಲ್ಲಿಯವರೆಗೂ ಲಭ್ಯವಾಗಿರುವ ಮಾಹಿತಿ ಏನನ್ನು ಹೇಳುತ್ತದೆ ಎಂಬುದಕ್ಕೆ ಹಲವು ಅಂಕಿಅಂಶಗಳನ್ನು ಗಮನಿಸೋಣ. ಭೂಖಂಡ ಚದುರುವಿಕೆ ಸಂಭವಿಸಿ ಇಂದಿನ ವಿವಿಧ ಖಂಡಗಳು ನಿರ್ಮಿತವಾಗಿದ್ದು ಸುಮಾರು 2,00,000,000 ವರ್ಷಗಳ ಹಿಂದೆ. ಅಷ್ಟೇ ಅಲ್ಲ, ಆಧುನಿಕ ಮಾನವ ರೂಪಗೊಂಡಿದ್ದೂ 1,00,000 ವರ್ಷಗಳ ಹಿಂದೆ. ಅದರಲ್ಲೂ ತೀರಾ ಇತ್ತೀಚೆಗೆ ಎನಿಸುವ 10,000 ವರ್ಷಗಳ ಹಿಂದಷ್ಟೇ ಆತ ಕಾಡುಪ್ರಾಣಿಯಂತೆ ಜೀವಿಸುವುದನ್ನು ನಿಲ್ಲಿಸಿ ಕೃಷಿಕನಾಗಿದ್ದು. ಅಂದರೆ ಹತ್ತು ಸಾವಿರ ವರ್ಷಗಳಷ್ಟು ಹಿಂದೆ ಭೂಮಿಯ ಮೇಲೆ ರಾಜರು, ರಾಜವಂಶಗಳು, ಇಂಥದ್ದು ಯಾವುದೂ ಇರಲಿಲ್ಲ.

ಭಾರತದ ಬಗ್ಗೆ ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಮಧ್ಯೆಪ್ರದೇಶದ ಭೀಮ್‌ಬೆಟ್ಟ ಎಂಬಲ್ಲಿ ಲಭ್ಯವಾಗಿರುವ ಮಾಹಿತಿಯ ಪ್ರಕರ 9,000 ವರ್ಷಗಳ ಹಿಂದೆ ಇಲ್ಲಿ ಕಾಡುಮಾನವ ವಾಸಿಸುತ್ತಿದ್ದ, ಅದಕ್ಕಿಂತ ಪುರಾತನ ಕಾಲದಲ್ಲಿ ಇಲ್ಲಿ ಮಾನವ ಇದ್ದನೆಂಬುದಕ್ಕೆ ಯಾವುದೇ ಪುರಾವೆಗಳೂ ಸಿಕ್ಕಿಲ್ಲ. ಅಷ್ಟು ಮಾತ್ರವಲ್ಲ, ಹರಪ್ಪ ನಾಗರಿಕತೆ ಇದ್ದದ್ದು ಸುಮಾರು 4,000 ವರ್ಷಗಳ ಹಿಂದೆ; ಋಗ್ವೇದ ರಷಿತವಾಗಿದ್ದು 3.000 ವರ್ಷಗಳ ಹಿಂದೆ, ರಾಮಾರಣವನ್ನು ವಾಲ್ಮೀಕಿ ರಚಿಸಿದ್ದು 2,300 ವರ್ಚಗಳ ಕೆಳಗೆ. ತುಳಸಿದಾಸ ತನ್ನ ರಾಮಚರಿತ ಮಾನಸ ಸೃಷ್ಟಿಸಿದ್ದು 400 ವರ್ಷಗಳ ಹಿಂದೆ.

ಈ ಎಲ್ಲಾ ಅಂಕಿ, ಅಂಶಗಳನ್ನು ಗಣನೆಗೆ ತೆಗೆದುಕೊಂಡು ನೋಡಿದಾಗ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮ ಈ ಸೇತುವೆಯನ್ನು ನಿರ್ಮಿಸಿದ್ದ’ ಎಂದು ಚೆಡ್ಡಿಗಳು ಅರಚುತ್ತಿರುವುದು ಎಷ್ಟು ಹಾಸ್ಯಾಸ್ಪದವಾಗಿ ಕಾಣಿಸುತ್ತದಲ್ಲವೇ?!

26 ಸೆಪ್ಟೆಂಬರ್, 2007 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...