Homeಅಂಕಣಗಳುನಾವು ದಕ್ಷಿಣ ಭಾರತೀಯರು ಕಪಿಗಳಾ?

ನಾವು ದಕ್ಷಿಣ ಭಾರತೀಯರು ಕಪಿಗಳಾ?

- Advertisement -
- Advertisement -

ಗೌರಿ ಲಂಕೇಶ್ |

ರಾಮಸೇತುವಿನ ಸುತ್ತ ನಡೆಯುವ ವಾದವಿವಾದಗಳಲ್ಲಿ ನನ್ನದೊಂದು ಪ್ರಶ್ನೆಗೆ ಯಾರಾದರೂ ಉತ್ತರ ನೀಡುತ್ತಾರಾ? ಪ್ರಶ್ನೆ ಏನೆಂದರೆ ರಾಮ ಸೇತುವನ್ನು ರಾಮನೇ ಕಟ್ಟಿದ್ದು-ನಂಬಿಕೆ/ಪುರಾಣ/ಚರಿತ್ರೆ ಅಥವಾ ಇನ್ನಾವುದೋ ಕಾಗಕ್ಕ-ಗುಬ್ಬಕ್ಕ ಕತೆಯ ಪ್ರಕಾರ ಎಂಬುದನ್ನು ಸತ್ಯ ಎಂದು ಒಪ್ಪಿಕೊಳ್ಳುವುದಾದರೆ, ಅದೇ ಪ್ರಕರಣ ಕುರಿತಂತೆ ನಾವು ದಕ್ಷಿಣ ಭಾರತದ ಜನ ವಾನರರು-ಅಂದರೆ ಕಪಿಗಳು, ಮಂಗಗಳು ಎಂಬುದನ್ನು ಒಪ್ಪಿಕೊಳ್ಳಬೇಕಲ್ಲವೇ?

ಈ ಪ್ರಶ್ನೆ ಯಾಕೆಂದರೆ ರಾಮಾಯಣದ ಪ್ರಕಾರ ರಾಮನ ಸೈನ್ಯದಲ್ಲಿ ಇದ್ದದ್ದು ಕಪಿಗಳು. ಆ ಕಾಲದಲ್ಲೇ ರಾಮ ಆದರ್ಶ ಪುರುಷನಾಗಿದ್ದರೂ, ಏಕಪತ್ನಿವ್ರತಸ್ಥನಾಗಿದ್ದರೂ ದಕ್ಷಿಣ ಭಾರತದ ‘ಜನ’ ಇನ್ನೂ ಮಂಗಗಳಾಗಿಯೇ ಉಳಿದಿದ್ದರಲ್ಲದೆ, ಪಕ್ಕಾ ಕಾಡುಪ್ರಾಣಿಗಳಂತೆ ಜೀವಿಸುತ್ತಿದ್ದರು. ಒಬ್ಬರ ಹೆಂಡಂದಿರನ್ನು ಇನ್ನೊಬ್ಬರು ಲಪಟಾಯಿಸುತ್ತಿದ್ದರು, ವಿವೇಚನಾ ಶಕ್ತಿ ಇಲ್ಲದವರಾಗಿದ್ದರು!

ಕತೆ, ಪುರಾಣ, ಚರಿತ್ರೆ, ಇತಿಹಾಸ, ವಿಜ್ಞಾನ ಇವುಗಳ ನಡುವಿನ ವ್ಯತ್ಯಾಸವನ್ನು ಅರಿಯದ ಜನ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮನ ವಾನರ ಸೈನ್ಯ ಈ ಸೇತುವೆಯನ್ನು ನಿರ್ಮಿಸಿತ್ತು’ ಎಂದು ವಾದಿಸುತ್ತಾರಲ್ಲವೆ, ಬೀದಿಗಿಳಿದು ಮಂಗಗಳಂತೆ ವರ್ತಿಸುತ್ತಾರೆ.
ಎಲ್ಲಾ ಧರ್ಮಗಳಲ್ಲೂ ಅತಿಶಯೋಕ್ತಿ ಎನಿಸುವ ಮೆಟಫರ್‌ಗಳಿರುತ್ತವೆ. ಅಥವಾ ಆ ಧರ್ಮ ಜನಿಸಿದ್ದ ಕಾಲದ ಮರ್ತಮಾನದಲ್ಲಿ ಮನುಷ್ಯನ ಅರಿವಿಗೆ ಬಂದಿರುವ ಮಾಹಿತಿಯನ್ನು ಆಧರಿಸಿ ಹಲವು ಕತೆಗಳನ್ನು, ನೀತಿಪಾಠಗಳನ್ನು ಕಟ್ಟಿ ಕೊಡುತ್ತವಲ್ಲದೆ ಮನುಷ್ಯನ ಕಲ್ಪನೆಗೆ ಅರೋಪಿಸಿ ದೈವಶಕ್ತಿಯ ಬಗ್ಗೆ ನಂಬಿಕೆ ಜನಿಸುವಂತೆ ಮಾಡಿರಲಾಗುತ್ತದೆ.

ಉದಾಹರಣೆಗೆ ಕ್ರೈಸ್ತ ಧರ್ಮ ಎರಡು ಸಾವಿರ ವರ್ಷಗಳ ಹಿಂದೆ ಜನಿಸಿದಾಗ ಮಾನವನ ವಿಕಸನದ ಬಗ್ಗೆ ಗೊತ್ತಿರಲಿಲ್ಲ. ಆದ್ದರಿಂದ ಆ ಧರ್ಮದಲ್ಲಿ ಈಡನ್ ಗಾರ್ಡನ್‌ನ ಕಲ್ಪನೆ ಇದೆಯಲ್ಲದೆ, ಭೂಮಿ ಚಪ್ಪಟೆ ಆಗಿದೆ ಎಂದೂ, ಅದರ ಸುತ್ತ ಸೂರ್ಯನೆ ಚಲಿಸುತ್ತಾನೆಂದೂ ಅದರ ಧರ್ಮಗ್ರಂಥ ಬೈಬಲ್‌ನಲ್ಲಿ ದಾಖಲಿಸಲಾಗಿದೆ. ಅಂದಮಾತ್ರಕ್ಕೆ ಇವತ್ತು ಸತ್ಯ ಎಂದು ಸಾಬೀತುಪಡಿಸಲಾಗಿರುವ ಚಾರ್ಲ್ಸ್ ಡಾರ್ವಿನ್‌ನ ವಿಕಾಸವಾದವನ್ನು, ಕೊಪರ್ ನಿಕಸ್‌ನ ಸೌರ ಮಂಡಲದ ರೂಪವನ್ನು ನಿರಾಕರಿಸಲಾಗುತ್ತದೆಯೇ?

ಅಂದಹಾಗೆ ಹದಿನಾರನೇ ಶತಮಾನದಲ್ಲಿ ಕೊಪರ್‌ನಿಕಸ್ ಮತ್ತು 19ನೇ ಶತಮಾನದಲ್ಲಿ ಚಾರ್ಲ್ಸ್ ಡಾರ್ವಿನ್ ಇಬ್ಬರೂ ಅಂದಿನ ಮೂಲಭೂತವಾದಿ ಕ್ರೈಸ್ತರ ನಿಂದನೆಗೆ ಗುರಿಯಾಗಿದ್ದರು. ನಮ್ಮ ವಿಪರ್ಯಾಸ ಎಂತಹದ್ದೆಂದರೆ ಇವತ್ತು 21ನೇ ಶತಮಾನದಲ್ಲಿ ವೈಜ್ಞಾನಿಕವಾಗಿ ಲಭ್ಯವಿರುವ ಸಾಕ್ಷ್ಯಯಗಳನ್ನು ಆಧರಿಸಿ ರಾಮಸೇತುವನ್ನು ರಾಮನಾಗಲಿ, ಕಪಿಸೈನ್ಯವಾಗಲಿ ನಿರ್ಮಿಸಿದ್ದಲ್ಲ ಎಂದು ಹೇಳಿದರೆ ‘ಹಿಂದೂ ನಂಬಿಕೆಗಳಿಗೆ ಅವಮಾನ’ ಎಂದು ಕೂಗಾಡುವವರು, ಪ್ರತಿಭಟನೆಗೆ ಇಳಿಯುವವರು ನಮ್ಮ ಸುತ್ತಲೂ ಇದ್ದಾರೆ.
ಹೋಗಲಿ, ಇಲ್ಲಿಯವರೆಗೂ ಲಭ್ಯವಾಗಿರುವ ಮಾಹಿತಿ ಏನನ್ನು ಹೇಳುತ್ತದೆ ಎಂಬುದಕ್ಕೆ ಹಲವು ಅಂಕಿಅಂಶಗಳನ್ನು ಗಮನಿಸೋಣ. ಭೂಖಂಡ ಚದುರುವಿಕೆ ಸಂಭವಿಸಿ ಇಂದಿನ ವಿವಿಧ ಖಂಡಗಳು ನಿರ್ಮಿತವಾಗಿದ್ದು ಸುಮಾರು 2,00,000,000 ವರ್ಷಗಳ ಹಿಂದೆ. ಅಷ್ಟೇ ಅಲ್ಲ, ಆಧುನಿಕ ಮಾನವ ರೂಪಗೊಂಡಿದ್ದೂ 1,00,000 ವರ್ಷಗಳ ಹಿಂದೆ. ಅದರಲ್ಲೂ ತೀರಾ ಇತ್ತೀಚೆಗೆ ಎನಿಸುವ 10,000 ವರ್ಷಗಳ ಹಿಂದಷ್ಟೇ ಆತ ಕಾಡುಪ್ರಾಣಿಯಂತೆ ಜೀವಿಸುವುದನ್ನು ನಿಲ್ಲಿಸಿ ಕೃಷಿಕನಾಗಿದ್ದು. ಅಂದರೆ ಹತ್ತು ಸಾವಿರ ವರ್ಷಗಳಷ್ಟು ಹಿಂದೆ ಭೂಮಿಯ ಮೇಲೆ ರಾಜರು, ರಾಜವಂಶಗಳು, ಇಂಥದ್ದು ಯಾವುದೂ ಇರಲಿಲ್ಲ.

ಭಾರತದ ಬಗ್ಗೆ ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಮಧ್ಯೆಪ್ರದೇಶದ ಭೀಮ್‌ಬೆಟ್ಟ ಎಂಬಲ್ಲಿ ಲಭ್ಯವಾಗಿರುವ ಮಾಹಿತಿಯ ಪ್ರಕರ 9,000 ವರ್ಷಗಳ ಹಿಂದೆ ಇಲ್ಲಿ ಕಾಡುಮಾನವ ವಾಸಿಸುತ್ತಿದ್ದ, ಅದಕ್ಕಿಂತ ಪುರಾತನ ಕಾಲದಲ್ಲಿ ಇಲ್ಲಿ ಮಾನವ ಇದ್ದನೆಂಬುದಕ್ಕೆ ಯಾವುದೇ ಪುರಾವೆಗಳೂ ಸಿಕ್ಕಿಲ್ಲ. ಅಷ್ಟು ಮಾತ್ರವಲ್ಲ, ಹರಪ್ಪ ನಾಗರಿಕತೆ ಇದ್ದದ್ದು ಸುಮಾರು 4,000 ವರ್ಷಗಳ ಹಿಂದೆ; ಋಗ್ವೇದ ರಷಿತವಾಗಿದ್ದು 3.000 ವರ್ಷಗಳ ಹಿಂದೆ, ರಾಮಾರಣವನ್ನು ವಾಲ್ಮೀಕಿ ರಚಿಸಿದ್ದು 2,300 ವರ್ಚಗಳ ಕೆಳಗೆ. ತುಳಸಿದಾಸ ತನ್ನ ರಾಮಚರಿತ ಮಾನಸ ಸೃಷ್ಟಿಸಿದ್ದು 400 ವರ್ಷಗಳ ಹಿಂದೆ.

ಈ ಎಲ್ಲಾ ಅಂಕಿ, ಅಂಶಗಳನ್ನು ಗಣನೆಗೆ ತೆಗೆದುಕೊಂಡು ನೋಡಿದಾಗ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮ ಈ ಸೇತುವೆಯನ್ನು ನಿರ್ಮಿಸಿದ್ದ’ ಎಂದು ಚೆಡ್ಡಿಗಳು ಅರಚುತ್ತಿರುವುದು ಎಷ್ಟು ಹಾಸ್ಯಾಸ್ಪದವಾಗಿ ಕಾಣಿಸುತ್ತದಲ್ಲವೇ?!

26 ಸೆಪ್ಟೆಂಬರ್, 2007 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...