Homeಅಂಕಣಗಳುನಾವು ದಕ್ಷಿಣ ಭಾರತೀಯರು ಕಪಿಗಳಾ?

ನಾವು ದಕ್ಷಿಣ ಭಾರತೀಯರು ಕಪಿಗಳಾ?

- Advertisement -
- Advertisement -

ಗೌರಿ ಲಂಕೇಶ್ |

ರಾಮಸೇತುವಿನ ಸುತ್ತ ನಡೆಯುವ ವಾದವಿವಾದಗಳಲ್ಲಿ ನನ್ನದೊಂದು ಪ್ರಶ್ನೆಗೆ ಯಾರಾದರೂ ಉತ್ತರ ನೀಡುತ್ತಾರಾ? ಪ್ರಶ್ನೆ ಏನೆಂದರೆ ರಾಮ ಸೇತುವನ್ನು ರಾಮನೇ ಕಟ್ಟಿದ್ದು-ನಂಬಿಕೆ/ಪುರಾಣ/ಚರಿತ್ರೆ ಅಥವಾ ಇನ್ನಾವುದೋ ಕಾಗಕ್ಕ-ಗುಬ್ಬಕ್ಕ ಕತೆಯ ಪ್ರಕಾರ ಎಂಬುದನ್ನು ಸತ್ಯ ಎಂದು ಒಪ್ಪಿಕೊಳ್ಳುವುದಾದರೆ, ಅದೇ ಪ್ರಕರಣ ಕುರಿತಂತೆ ನಾವು ದಕ್ಷಿಣ ಭಾರತದ ಜನ ವಾನರರು-ಅಂದರೆ ಕಪಿಗಳು, ಮಂಗಗಳು ಎಂಬುದನ್ನು ಒಪ್ಪಿಕೊಳ್ಳಬೇಕಲ್ಲವೇ?

ಈ ಪ್ರಶ್ನೆ ಯಾಕೆಂದರೆ ರಾಮಾಯಣದ ಪ್ರಕಾರ ರಾಮನ ಸೈನ್ಯದಲ್ಲಿ ಇದ್ದದ್ದು ಕಪಿಗಳು. ಆ ಕಾಲದಲ್ಲೇ ರಾಮ ಆದರ್ಶ ಪುರುಷನಾಗಿದ್ದರೂ, ಏಕಪತ್ನಿವ್ರತಸ್ಥನಾಗಿದ್ದರೂ ದಕ್ಷಿಣ ಭಾರತದ ‘ಜನ’ ಇನ್ನೂ ಮಂಗಗಳಾಗಿಯೇ ಉಳಿದಿದ್ದರಲ್ಲದೆ, ಪಕ್ಕಾ ಕಾಡುಪ್ರಾಣಿಗಳಂತೆ ಜೀವಿಸುತ್ತಿದ್ದರು. ಒಬ್ಬರ ಹೆಂಡಂದಿರನ್ನು ಇನ್ನೊಬ್ಬರು ಲಪಟಾಯಿಸುತ್ತಿದ್ದರು, ವಿವೇಚನಾ ಶಕ್ತಿ ಇಲ್ಲದವರಾಗಿದ್ದರು!

ಕತೆ, ಪುರಾಣ, ಚರಿತ್ರೆ, ಇತಿಹಾಸ, ವಿಜ್ಞಾನ ಇವುಗಳ ನಡುವಿನ ವ್ಯತ್ಯಾಸವನ್ನು ಅರಿಯದ ಜನ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮನ ವಾನರ ಸೈನ್ಯ ಈ ಸೇತುವೆಯನ್ನು ನಿರ್ಮಿಸಿತ್ತು’ ಎಂದು ವಾದಿಸುತ್ತಾರಲ್ಲವೆ, ಬೀದಿಗಿಳಿದು ಮಂಗಗಳಂತೆ ವರ್ತಿಸುತ್ತಾರೆ.
ಎಲ್ಲಾ ಧರ್ಮಗಳಲ್ಲೂ ಅತಿಶಯೋಕ್ತಿ ಎನಿಸುವ ಮೆಟಫರ್‌ಗಳಿರುತ್ತವೆ. ಅಥವಾ ಆ ಧರ್ಮ ಜನಿಸಿದ್ದ ಕಾಲದ ಮರ್ತಮಾನದಲ್ಲಿ ಮನುಷ್ಯನ ಅರಿವಿಗೆ ಬಂದಿರುವ ಮಾಹಿತಿಯನ್ನು ಆಧರಿಸಿ ಹಲವು ಕತೆಗಳನ್ನು, ನೀತಿಪಾಠಗಳನ್ನು ಕಟ್ಟಿ ಕೊಡುತ್ತವಲ್ಲದೆ ಮನುಷ್ಯನ ಕಲ್ಪನೆಗೆ ಅರೋಪಿಸಿ ದೈವಶಕ್ತಿಯ ಬಗ್ಗೆ ನಂಬಿಕೆ ಜನಿಸುವಂತೆ ಮಾಡಿರಲಾಗುತ್ತದೆ.

ಉದಾಹರಣೆಗೆ ಕ್ರೈಸ್ತ ಧರ್ಮ ಎರಡು ಸಾವಿರ ವರ್ಷಗಳ ಹಿಂದೆ ಜನಿಸಿದಾಗ ಮಾನವನ ವಿಕಸನದ ಬಗ್ಗೆ ಗೊತ್ತಿರಲಿಲ್ಲ. ಆದ್ದರಿಂದ ಆ ಧರ್ಮದಲ್ಲಿ ಈಡನ್ ಗಾರ್ಡನ್‌ನ ಕಲ್ಪನೆ ಇದೆಯಲ್ಲದೆ, ಭೂಮಿ ಚಪ್ಪಟೆ ಆಗಿದೆ ಎಂದೂ, ಅದರ ಸುತ್ತ ಸೂರ್ಯನೆ ಚಲಿಸುತ್ತಾನೆಂದೂ ಅದರ ಧರ್ಮಗ್ರಂಥ ಬೈಬಲ್‌ನಲ್ಲಿ ದಾಖಲಿಸಲಾಗಿದೆ. ಅಂದಮಾತ್ರಕ್ಕೆ ಇವತ್ತು ಸತ್ಯ ಎಂದು ಸಾಬೀತುಪಡಿಸಲಾಗಿರುವ ಚಾರ್ಲ್ಸ್ ಡಾರ್ವಿನ್‌ನ ವಿಕಾಸವಾದವನ್ನು, ಕೊಪರ್ ನಿಕಸ್‌ನ ಸೌರ ಮಂಡಲದ ರೂಪವನ್ನು ನಿರಾಕರಿಸಲಾಗುತ್ತದೆಯೇ?

ಅಂದಹಾಗೆ ಹದಿನಾರನೇ ಶತಮಾನದಲ್ಲಿ ಕೊಪರ್‌ನಿಕಸ್ ಮತ್ತು 19ನೇ ಶತಮಾನದಲ್ಲಿ ಚಾರ್ಲ್ಸ್ ಡಾರ್ವಿನ್ ಇಬ್ಬರೂ ಅಂದಿನ ಮೂಲಭೂತವಾದಿ ಕ್ರೈಸ್ತರ ನಿಂದನೆಗೆ ಗುರಿಯಾಗಿದ್ದರು. ನಮ್ಮ ವಿಪರ್ಯಾಸ ಎಂತಹದ್ದೆಂದರೆ ಇವತ್ತು 21ನೇ ಶತಮಾನದಲ್ಲಿ ವೈಜ್ಞಾನಿಕವಾಗಿ ಲಭ್ಯವಿರುವ ಸಾಕ್ಷ್ಯಯಗಳನ್ನು ಆಧರಿಸಿ ರಾಮಸೇತುವನ್ನು ರಾಮನಾಗಲಿ, ಕಪಿಸೈನ್ಯವಾಗಲಿ ನಿರ್ಮಿಸಿದ್ದಲ್ಲ ಎಂದು ಹೇಳಿದರೆ ‘ಹಿಂದೂ ನಂಬಿಕೆಗಳಿಗೆ ಅವಮಾನ’ ಎಂದು ಕೂಗಾಡುವವರು, ಪ್ರತಿಭಟನೆಗೆ ಇಳಿಯುವವರು ನಮ್ಮ ಸುತ್ತಲೂ ಇದ್ದಾರೆ.
ಹೋಗಲಿ, ಇಲ್ಲಿಯವರೆಗೂ ಲಭ್ಯವಾಗಿರುವ ಮಾಹಿತಿ ಏನನ್ನು ಹೇಳುತ್ತದೆ ಎಂಬುದಕ್ಕೆ ಹಲವು ಅಂಕಿಅಂಶಗಳನ್ನು ಗಮನಿಸೋಣ. ಭೂಖಂಡ ಚದುರುವಿಕೆ ಸಂಭವಿಸಿ ಇಂದಿನ ವಿವಿಧ ಖಂಡಗಳು ನಿರ್ಮಿತವಾಗಿದ್ದು ಸುಮಾರು 2,00,000,000 ವರ್ಷಗಳ ಹಿಂದೆ. ಅಷ್ಟೇ ಅಲ್ಲ, ಆಧುನಿಕ ಮಾನವ ರೂಪಗೊಂಡಿದ್ದೂ 1,00,000 ವರ್ಷಗಳ ಹಿಂದೆ. ಅದರಲ್ಲೂ ತೀರಾ ಇತ್ತೀಚೆಗೆ ಎನಿಸುವ 10,000 ವರ್ಷಗಳ ಹಿಂದಷ್ಟೇ ಆತ ಕಾಡುಪ್ರಾಣಿಯಂತೆ ಜೀವಿಸುವುದನ್ನು ನಿಲ್ಲಿಸಿ ಕೃಷಿಕನಾಗಿದ್ದು. ಅಂದರೆ ಹತ್ತು ಸಾವಿರ ವರ್ಷಗಳಷ್ಟು ಹಿಂದೆ ಭೂಮಿಯ ಮೇಲೆ ರಾಜರು, ರಾಜವಂಶಗಳು, ಇಂಥದ್ದು ಯಾವುದೂ ಇರಲಿಲ್ಲ.

ಭಾರತದ ಬಗ್ಗೆ ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಮಧ್ಯೆಪ್ರದೇಶದ ಭೀಮ್‌ಬೆಟ್ಟ ಎಂಬಲ್ಲಿ ಲಭ್ಯವಾಗಿರುವ ಮಾಹಿತಿಯ ಪ್ರಕರ 9,000 ವರ್ಷಗಳ ಹಿಂದೆ ಇಲ್ಲಿ ಕಾಡುಮಾನವ ವಾಸಿಸುತ್ತಿದ್ದ, ಅದಕ್ಕಿಂತ ಪುರಾತನ ಕಾಲದಲ್ಲಿ ಇಲ್ಲಿ ಮಾನವ ಇದ್ದನೆಂಬುದಕ್ಕೆ ಯಾವುದೇ ಪುರಾವೆಗಳೂ ಸಿಕ್ಕಿಲ್ಲ. ಅಷ್ಟು ಮಾತ್ರವಲ್ಲ, ಹರಪ್ಪ ನಾಗರಿಕತೆ ಇದ್ದದ್ದು ಸುಮಾರು 4,000 ವರ್ಷಗಳ ಹಿಂದೆ; ಋಗ್ವೇದ ರಷಿತವಾಗಿದ್ದು 3.000 ವರ್ಷಗಳ ಹಿಂದೆ, ರಾಮಾರಣವನ್ನು ವಾಲ್ಮೀಕಿ ರಚಿಸಿದ್ದು 2,300 ವರ್ಚಗಳ ಕೆಳಗೆ. ತುಳಸಿದಾಸ ತನ್ನ ರಾಮಚರಿತ ಮಾನಸ ಸೃಷ್ಟಿಸಿದ್ದು 400 ವರ್ಷಗಳ ಹಿಂದೆ.

ಈ ಎಲ್ಲಾ ಅಂಕಿ, ಅಂಶಗಳನ್ನು ಗಣನೆಗೆ ತೆಗೆದುಕೊಂಡು ನೋಡಿದಾಗ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮ ಈ ಸೇತುವೆಯನ್ನು ನಿರ್ಮಿಸಿದ್ದ’ ಎಂದು ಚೆಡ್ಡಿಗಳು ಅರಚುತ್ತಿರುವುದು ಎಷ್ಟು ಹಾಸ್ಯಾಸ್ಪದವಾಗಿ ಕಾಣಿಸುತ್ತದಲ್ಲವೇ?!

26 ಸೆಪ್ಟೆಂಬರ್, 2007 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....