Homeಅಂಕಣಗಳುನಾವು ದಕ್ಷಿಣ ಭಾರತೀಯರು ಕಪಿಗಳಾ?

ನಾವು ದಕ್ಷಿಣ ಭಾರತೀಯರು ಕಪಿಗಳಾ?

- Advertisement -
- Advertisement -

ಗೌರಿ ಲಂಕೇಶ್ |

ರಾಮಸೇತುವಿನ ಸುತ್ತ ನಡೆಯುವ ವಾದವಿವಾದಗಳಲ್ಲಿ ನನ್ನದೊಂದು ಪ್ರಶ್ನೆಗೆ ಯಾರಾದರೂ ಉತ್ತರ ನೀಡುತ್ತಾರಾ? ಪ್ರಶ್ನೆ ಏನೆಂದರೆ ರಾಮ ಸೇತುವನ್ನು ರಾಮನೇ ಕಟ್ಟಿದ್ದು-ನಂಬಿಕೆ/ಪುರಾಣ/ಚರಿತ್ರೆ ಅಥವಾ ಇನ್ನಾವುದೋ ಕಾಗಕ್ಕ-ಗುಬ್ಬಕ್ಕ ಕತೆಯ ಪ್ರಕಾರ ಎಂಬುದನ್ನು ಸತ್ಯ ಎಂದು ಒಪ್ಪಿಕೊಳ್ಳುವುದಾದರೆ, ಅದೇ ಪ್ರಕರಣ ಕುರಿತಂತೆ ನಾವು ದಕ್ಷಿಣ ಭಾರತದ ಜನ ವಾನರರು-ಅಂದರೆ ಕಪಿಗಳು, ಮಂಗಗಳು ಎಂಬುದನ್ನು ಒಪ್ಪಿಕೊಳ್ಳಬೇಕಲ್ಲವೇ?

ಈ ಪ್ರಶ್ನೆ ಯಾಕೆಂದರೆ ರಾಮಾಯಣದ ಪ್ರಕಾರ ರಾಮನ ಸೈನ್ಯದಲ್ಲಿ ಇದ್ದದ್ದು ಕಪಿಗಳು. ಆ ಕಾಲದಲ್ಲೇ ರಾಮ ಆದರ್ಶ ಪುರುಷನಾಗಿದ್ದರೂ, ಏಕಪತ್ನಿವ್ರತಸ್ಥನಾಗಿದ್ದರೂ ದಕ್ಷಿಣ ಭಾರತದ ‘ಜನ’ ಇನ್ನೂ ಮಂಗಗಳಾಗಿಯೇ ಉಳಿದಿದ್ದರಲ್ಲದೆ, ಪಕ್ಕಾ ಕಾಡುಪ್ರಾಣಿಗಳಂತೆ ಜೀವಿಸುತ್ತಿದ್ದರು. ಒಬ್ಬರ ಹೆಂಡಂದಿರನ್ನು ಇನ್ನೊಬ್ಬರು ಲಪಟಾಯಿಸುತ್ತಿದ್ದರು, ವಿವೇಚನಾ ಶಕ್ತಿ ಇಲ್ಲದವರಾಗಿದ್ದರು!

ಕತೆ, ಪುರಾಣ, ಚರಿತ್ರೆ, ಇತಿಹಾಸ, ವಿಜ್ಞಾನ ಇವುಗಳ ನಡುವಿನ ವ್ಯತ್ಯಾಸವನ್ನು ಅರಿಯದ ಜನ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮನ ವಾನರ ಸೈನ್ಯ ಈ ಸೇತುವೆಯನ್ನು ನಿರ್ಮಿಸಿತ್ತು’ ಎಂದು ವಾದಿಸುತ್ತಾರಲ್ಲವೆ, ಬೀದಿಗಿಳಿದು ಮಂಗಗಳಂತೆ ವರ್ತಿಸುತ್ತಾರೆ.
ಎಲ್ಲಾ ಧರ್ಮಗಳಲ್ಲೂ ಅತಿಶಯೋಕ್ತಿ ಎನಿಸುವ ಮೆಟಫರ್‌ಗಳಿರುತ್ತವೆ. ಅಥವಾ ಆ ಧರ್ಮ ಜನಿಸಿದ್ದ ಕಾಲದ ಮರ್ತಮಾನದಲ್ಲಿ ಮನುಷ್ಯನ ಅರಿವಿಗೆ ಬಂದಿರುವ ಮಾಹಿತಿಯನ್ನು ಆಧರಿಸಿ ಹಲವು ಕತೆಗಳನ್ನು, ನೀತಿಪಾಠಗಳನ್ನು ಕಟ್ಟಿ ಕೊಡುತ್ತವಲ್ಲದೆ ಮನುಷ್ಯನ ಕಲ್ಪನೆಗೆ ಅರೋಪಿಸಿ ದೈವಶಕ್ತಿಯ ಬಗ್ಗೆ ನಂಬಿಕೆ ಜನಿಸುವಂತೆ ಮಾಡಿರಲಾಗುತ್ತದೆ.

ಉದಾಹರಣೆಗೆ ಕ್ರೈಸ್ತ ಧರ್ಮ ಎರಡು ಸಾವಿರ ವರ್ಷಗಳ ಹಿಂದೆ ಜನಿಸಿದಾಗ ಮಾನವನ ವಿಕಸನದ ಬಗ್ಗೆ ಗೊತ್ತಿರಲಿಲ್ಲ. ಆದ್ದರಿಂದ ಆ ಧರ್ಮದಲ್ಲಿ ಈಡನ್ ಗಾರ್ಡನ್‌ನ ಕಲ್ಪನೆ ಇದೆಯಲ್ಲದೆ, ಭೂಮಿ ಚಪ್ಪಟೆ ಆಗಿದೆ ಎಂದೂ, ಅದರ ಸುತ್ತ ಸೂರ್ಯನೆ ಚಲಿಸುತ್ತಾನೆಂದೂ ಅದರ ಧರ್ಮಗ್ರಂಥ ಬೈಬಲ್‌ನಲ್ಲಿ ದಾಖಲಿಸಲಾಗಿದೆ. ಅಂದಮಾತ್ರಕ್ಕೆ ಇವತ್ತು ಸತ್ಯ ಎಂದು ಸಾಬೀತುಪಡಿಸಲಾಗಿರುವ ಚಾರ್ಲ್ಸ್ ಡಾರ್ವಿನ್‌ನ ವಿಕಾಸವಾದವನ್ನು, ಕೊಪರ್ ನಿಕಸ್‌ನ ಸೌರ ಮಂಡಲದ ರೂಪವನ್ನು ನಿರಾಕರಿಸಲಾಗುತ್ತದೆಯೇ?

ಅಂದಹಾಗೆ ಹದಿನಾರನೇ ಶತಮಾನದಲ್ಲಿ ಕೊಪರ್‌ನಿಕಸ್ ಮತ್ತು 19ನೇ ಶತಮಾನದಲ್ಲಿ ಚಾರ್ಲ್ಸ್ ಡಾರ್ವಿನ್ ಇಬ್ಬರೂ ಅಂದಿನ ಮೂಲಭೂತವಾದಿ ಕ್ರೈಸ್ತರ ನಿಂದನೆಗೆ ಗುರಿಯಾಗಿದ್ದರು. ನಮ್ಮ ವಿಪರ್ಯಾಸ ಎಂತಹದ್ದೆಂದರೆ ಇವತ್ತು 21ನೇ ಶತಮಾನದಲ್ಲಿ ವೈಜ್ಞಾನಿಕವಾಗಿ ಲಭ್ಯವಿರುವ ಸಾಕ್ಷ್ಯಯಗಳನ್ನು ಆಧರಿಸಿ ರಾಮಸೇತುವನ್ನು ರಾಮನಾಗಲಿ, ಕಪಿಸೈನ್ಯವಾಗಲಿ ನಿರ್ಮಿಸಿದ್ದಲ್ಲ ಎಂದು ಹೇಳಿದರೆ ‘ಹಿಂದೂ ನಂಬಿಕೆಗಳಿಗೆ ಅವಮಾನ’ ಎಂದು ಕೂಗಾಡುವವರು, ಪ್ರತಿಭಟನೆಗೆ ಇಳಿಯುವವರು ನಮ್ಮ ಸುತ್ತಲೂ ಇದ್ದಾರೆ.
ಹೋಗಲಿ, ಇಲ್ಲಿಯವರೆಗೂ ಲಭ್ಯವಾಗಿರುವ ಮಾಹಿತಿ ಏನನ್ನು ಹೇಳುತ್ತದೆ ಎಂಬುದಕ್ಕೆ ಹಲವು ಅಂಕಿಅಂಶಗಳನ್ನು ಗಮನಿಸೋಣ. ಭೂಖಂಡ ಚದುರುವಿಕೆ ಸಂಭವಿಸಿ ಇಂದಿನ ವಿವಿಧ ಖಂಡಗಳು ನಿರ್ಮಿತವಾಗಿದ್ದು ಸುಮಾರು 2,00,000,000 ವರ್ಷಗಳ ಹಿಂದೆ. ಅಷ್ಟೇ ಅಲ್ಲ, ಆಧುನಿಕ ಮಾನವ ರೂಪಗೊಂಡಿದ್ದೂ 1,00,000 ವರ್ಷಗಳ ಹಿಂದೆ. ಅದರಲ್ಲೂ ತೀರಾ ಇತ್ತೀಚೆಗೆ ಎನಿಸುವ 10,000 ವರ್ಷಗಳ ಹಿಂದಷ್ಟೇ ಆತ ಕಾಡುಪ್ರಾಣಿಯಂತೆ ಜೀವಿಸುವುದನ್ನು ನಿಲ್ಲಿಸಿ ಕೃಷಿಕನಾಗಿದ್ದು. ಅಂದರೆ ಹತ್ತು ಸಾವಿರ ವರ್ಷಗಳಷ್ಟು ಹಿಂದೆ ಭೂಮಿಯ ಮೇಲೆ ರಾಜರು, ರಾಜವಂಶಗಳು, ಇಂಥದ್ದು ಯಾವುದೂ ಇರಲಿಲ್ಲ.

ಭಾರತದ ಬಗ್ಗೆ ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಮಧ್ಯೆಪ್ರದೇಶದ ಭೀಮ್‌ಬೆಟ್ಟ ಎಂಬಲ್ಲಿ ಲಭ್ಯವಾಗಿರುವ ಮಾಹಿತಿಯ ಪ್ರಕರ 9,000 ವರ್ಷಗಳ ಹಿಂದೆ ಇಲ್ಲಿ ಕಾಡುಮಾನವ ವಾಸಿಸುತ್ತಿದ್ದ, ಅದಕ್ಕಿಂತ ಪುರಾತನ ಕಾಲದಲ್ಲಿ ಇಲ್ಲಿ ಮಾನವ ಇದ್ದನೆಂಬುದಕ್ಕೆ ಯಾವುದೇ ಪುರಾವೆಗಳೂ ಸಿಕ್ಕಿಲ್ಲ. ಅಷ್ಟು ಮಾತ್ರವಲ್ಲ, ಹರಪ್ಪ ನಾಗರಿಕತೆ ಇದ್ದದ್ದು ಸುಮಾರು 4,000 ವರ್ಷಗಳ ಹಿಂದೆ; ಋಗ್ವೇದ ರಷಿತವಾಗಿದ್ದು 3.000 ವರ್ಷಗಳ ಹಿಂದೆ, ರಾಮಾರಣವನ್ನು ವಾಲ್ಮೀಕಿ ರಚಿಸಿದ್ದು 2,300 ವರ್ಚಗಳ ಕೆಳಗೆ. ತುಳಸಿದಾಸ ತನ್ನ ರಾಮಚರಿತ ಮಾನಸ ಸೃಷ್ಟಿಸಿದ್ದು 400 ವರ್ಷಗಳ ಹಿಂದೆ.

ಈ ಎಲ್ಲಾ ಅಂಕಿ, ಅಂಶಗಳನ್ನು ಗಣನೆಗೆ ತೆಗೆದುಕೊಂಡು ನೋಡಿದಾಗ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮ ಈ ಸೇತುವೆಯನ್ನು ನಿರ್ಮಿಸಿದ್ದ’ ಎಂದು ಚೆಡ್ಡಿಗಳು ಅರಚುತ್ತಿರುವುದು ಎಷ್ಟು ಹಾಸ್ಯಾಸ್ಪದವಾಗಿ ಕಾಣಿಸುತ್ತದಲ್ಲವೇ?!

26 ಸೆಪ್ಟೆಂಬರ್, 2007 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...