Homeಅಂಕಣಗಳುನಾವು ದಕ್ಷಿಣ ಭಾರತೀಯರು ಕಪಿಗಳಾ?

ನಾವು ದಕ್ಷಿಣ ಭಾರತೀಯರು ಕಪಿಗಳಾ?

- Advertisement -
- Advertisement -

ಗೌರಿ ಲಂಕೇಶ್ |

ರಾಮಸೇತುವಿನ ಸುತ್ತ ನಡೆಯುವ ವಾದವಿವಾದಗಳಲ್ಲಿ ನನ್ನದೊಂದು ಪ್ರಶ್ನೆಗೆ ಯಾರಾದರೂ ಉತ್ತರ ನೀಡುತ್ತಾರಾ? ಪ್ರಶ್ನೆ ಏನೆಂದರೆ ರಾಮ ಸೇತುವನ್ನು ರಾಮನೇ ಕಟ್ಟಿದ್ದು-ನಂಬಿಕೆ/ಪುರಾಣ/ಚರಿತ್ರೆ ಅಥವಾ ಇನ್ನಾವುದೋ ಕಾಗಕ್ಕ-ಗುಬ್ಬಕ್ಕ ಕತೆಯ ಪ್ರಕಾರ ಎಂಬುದನ್ನು ಸತ್ಯ ಎಂದು ಒಪ್ಪಿಕೊಳ್ಳುವುದಾದರೆ, ಅದೇ ಪ್ರಕರಣ ಕುರಿತಂತೆ ನಾವು ದಕ್ಷಿಣ ಭಾರತದ ಜನ ವಾನರರು-ಅಂದರೆ ಕಪಿಗಳು, ಮಂಗಗಳು ಎಂಬುದನ್ನು ಒಪ್ಪಿಕೊಳ್ಳಬೇಕಲ್ಲವೇ?

ಈ ಪ್ರಶ್ನೆ ಯಾಕೆಂದರೆ ರಾಮಾಯಣದ ಪ್ರಕಾರ ರಾಮನ ಸೈನ್ಯದಲ್ಲಿ ಇದ್ದದ್ದು ಕಪಿಗಳು. ಆ ಕಾಲದಲ್ಲೇ ರಾಮ ಆದರ್ಶ ಪುರುಷನಾಗಿದ್ದರೂ, ಏಕಪತ್ನಿವ್ರತಸ್ಥನಾಗಿದ್ದರೂ ದಕ್ಷಿಣ ಭಾರತದ ‘ಜನ’ ಇನ್ನೂ ಮಂಗಗಳಾಗಿಯೇ ಉಳಿದಿದ್ದರಲ್ಲದೆ, ಪಕ್ಕಾ ಕಾಡುಪ್ರಾಣಿಗಳಂತೆ ಜೀವಿಸುತ್ತಿದ್ದರು. ಒಬ್ಬರ ಹೆಂಡಂದಿರನ್ನು ಇನ್ನೊಬ್ಬರು ಲಪಟಾಯಿಸುತ್ತಿದ್ದರು, ವಿವೇಚನಾ ಶಕ್ತಿ ಇಲ್ಲದವರಾಗಿದ್ದರು!

ಕತೆ, ಪುರಾಣ, ಚರಿತ್ರೆ, ಇತಿಹಾಸ, ವಿಜ್ಞಾನ ಇವುಗಳ ನಡುವಿನ ವ್ಯತ್ಯಾಸವನ್ನು ಅರಿಯದ ಜನ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮನ ವಾನರ ಸೈನ್ಯ ಈ ಸೇತುವೆಯನ್ನು ನಿರ್ಮಿಸಿತ್ತು’ ಎಂದು ವಾದಿಸುತ್ತಾರಲ್ಲವೆ, ಬೀದಿಗಿಳಿದು ಮಂಗಗಳಂತೆ ವರ್ತಿಸುತ್ತಾರೆ.
ಎಲ್ಲಾ ಧರ್ಮಗಳಲ್ಲೂ ಅತಿಶಯೋಕ್ತಿ ಎನಿಸುವ ಮೆಟಫರ್‌ಗಳಿರುತ್ತವೆ. ಅಥವಾ ಆ ಧರ್ಮ ಜನಿಸಿದ್ದ ಕಾಲದ ಮರ್ತಮಾನದಲ್ಲಿ ಮನುಷ್ಯನ ಅರಿವಿಗೆ ಬಂದಿರುವ ಮಾಹಿತಿಯನ್ನು ಆಧರಿಸಿ ಹಲವು ಕತೆಗಳನ್ನು, ನೀತಿಪಾಠಗಳನ್ನು ಕಟ್ಟಿ ಕೊಡುತ್ತವಲ್ಲದೆ ಮನುಷ್ಯನ ಕಲ್ಪನೆಗೆ ಅರೋಪಿಸಿ ದೈವಶಕ್ತಿಯ ಬಗ್ಗೆ ನಂಬಿಕೆ ಜನಿಸುವಂತೆ ಮಾಡಿರಲಾಗುತ್ತದೆ.

ಉದಾಹರಣೆಗೆ ಕ್ರೈಸ್ತ ಧರ್ಮ ಎರಡು ಸಾವಿರ ವರ್ಷಗಳ ಹಿಂದೆ ಜನಿಸಿದಾಗ ಮಾನವನ ವಿಕಸನದ ಬಗ್ಗೆ ಗೊತ್ತಿರಲಿಲ್ಲ. ಆದ್ದರಿಂದ ಆ ಧರ್ಮದಲ್ಲಿ ಈಡನ್ ಗಾರ್ಡನ್‌ನ ಕಲ್ಪನೆ ಇದೆಯಲ್ಲದೆ, ಭೂಮಿ ಚಪ್ಪಟೆ ಆಗಿದೆ ಎಂದೂ, ಅದರ ಸುತ್ತ ಸೂರ್ಯನೆ ಚಲಿಸುತ್ತಾನೆಂದೂ ಅದರ ಧರ್ಮಗ್ರಂಥ ಬೈಬಲ್‌ನಲ್ಲಿ ದಾಖಲಿಸಲಾಗಿದೆ. ಅಂದಮಾತ್ರಕ್ಕೆ ಇವತ್ತು ಸತ್ಯ ಎಂದು ಸಾಬೀತುಪಡಿಸಲಾಗಿರುವ ಚಾರ್ಲ್ಸ್ ಡಾರ್ವಿನ್‌ನ ವಿಕಾಸವಾದವನ್ನು, ಕೊಪರ್ ನಿಕಸ್‌ನ ಸೌರ ಮಂಡಲದ ರೂಪವನ್ನು ನಿರಾಕರಿಸಲಾಗುತ್ತದೆಯೇ?

ಅಂದಹಾಗೆ ಹದಿನಾರನೇ ಶತಮಾನದಲ್ಲಿ ಕೊಪರ್‌ನಿಕಸ್ ಮತ್ತು 19ನೇ ಶತಮಾನದಲ್ಲಿ ಚಾರ್ಲ್ಸ್ ಡಾರ್ವಿನ್ ಇಬ್ಬರೂ ಅಂದಿನ ಮೂಲಭೂತವಾದಿ ಕ್ರೈಸ್ತರ ನಿಂದನೆಗೆ ಗುರಿಯಾಗಿದ್ದರು. ನಮ್ಮ ವಿಪರ್ಯಾಸ ಎಂತಹದ್ದೆಂದರೆ ಇವತ್ತು 21ನೇ ಶತಮಾನದಲ್ಲಿ ವೈಜ್ಞಾನಿಕವಾಗಿ ಲಭ್ಯವಿರುವ ಸಾಕ್ಷ್ಯಯಗಳನ್ನು ಆಧರಿಸಿ ರಾಮಸೇತುವನ್ನು ರಾಮನಾಗಲಿ, ಕಪಿಸೈನ್ಯವಾಗಲಿ ನಿರ್ಮಿಸಿದ್ದಲ್ಲ ಎಂದು ಹೇಳಿದರೆ ‘ಹಿಂದೂ ನಂಬಿಕೆಗಳಿಗೆ ಅವಮಾನ’ ಎಂದು ಕೂಗಾಡುವವರು, ಪ್ರತಿಭಟನೆಗೆ ಇಳಿಯುವವರು ನಮ್ಮ ಸುತ್ತಲೂ ಇದ್ದಾರೆ.
ಹೋಗಲಿ, ಇಲ್ಲಿಯವರೆಗೂ ಲಭ್ಯವಾಗಿರುವ ಮಾಹಿತಿ ಏನನ್ನು ಹೇಳುತ್ತದೆ ಎಂಬುದಕ್ಕೆ ಹಲವು ಅಂಕಿಅಂಶಗಳನ್ನು ಗಮನಿಸೋಣ. ಭೂಖಂಡ ಚದುರುವಿಕೆ ಸಂಭವಿಸಿ ಇಂದಿನ ವಿವಿಧ ಖಂಡಗಳು ನಿರ್ಮಿತವಾಗಿದ್ದು ಸುಮಾರು 2,00,000,000 ವರ್ಷಗಳ ಹಿಂದೆ. ಅಷ್ಟೇ ಅಲ್ಲ, ಆಧುನಿಕ ಮಾನವ ರೂಪಗೊಂಡಿದ್ದೂ 1,00,000 ವರ್ಷಗಳ ಹಿಂದೆ. ಅದರಲ್ಲೂ ತೀರಾ ಇತ್ತೀಚೆಗೆ ಎನಿಸುವ 10,000 ವರ್ಷಗಳ ಹಿಂದಷ್ಟೇ ಆತ ಕಾಡುಪ್ರಾಣಿಯಂತೆ ಜೀವಿಸುವುದನ್ನು ನಿಲ್ಲಿಸಿ ಕೃಷಿಕನಾಗಿದ್ದು. ಅಂದರೆ ಹತ್ತು ಸಾವಿರ ವರ್ಷಗಳಷ್ಟು ಹಿಂದೆ ಭೂಮಿಯ ಮೇಲೆ ರಾಜರು, ರಾಜವಂಶಗಳು, ಇಂಥದ್ದು ಯಾವುದೂ ಇರಲಿಲ್ಲ.

ಭಾರತದ ಬಗ್ಗೆ ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಮಧ್ಯೆಪ್ರದೇಶದ ಭೀಮ್‌ಬೆಟ್ಟ ಎಂಬಲ್ಲಿ ಲಭ್ಯವಾಗಿರುವ ಮಾಹಿತಿಯ ಪ್ರಕರ 9,000 ವರ್ಷಗಳ ಹಿಂದೆ ಇಲ್ಲಿ ಕಾಡುಮಾನವ ವಾಸಿಸುತ್ತಿದ್ದ, ಅದಕ್ಕಿಂತ ಪುರಾತನ ಕಾಲದಲ್ಲಿ ಇಲ್ಲಿ ಮಾನವ ಇದ್ದನೆಂಬುದಕ್ಕೆ ಯಾವುದೇ ಪುರಾವೆಗಳೂ ಸಿಕ್ಕಿಲ್ಲ. ಅಷ್ಟು ಮಾತ್ರವಲ್ಲ, ಹರಪ್ಪ ನಾಗರಿಕತೆ ಇದ್ದದ್ದು ಸುಮಾರು 4,000 ವರ್ಷಗಳ ಹಿಂದೆ; ಋಗ್ವೇದ ರಷಿತವಾಗಿದ್ದು 3.000 ವರ್ಷಗಳ ಹಿಂದೆ, ರಾಮಾರಣವನ್ನು ವಾಲ್ಮೀಕಿ ರಚಿಸಿದ್ದು 2,300 ವರ್ಚಗಳ ಕೆಳಗೆ. ತುಳಸಿದಾಸ ತನ್ನ ರಾಮಚರಿತ ಮಾನಸ ಸೃಷ್ಟಿಸಿದ್ದು 400 ವರ್ಷಗಳ ಹಿಂದೆ.

ಈ ಎಲ್ಲಾ ಅಂಕಿ, ಅಂಶಗಳನ್ನು ಗಣನೆಗೆ ತೆಗೆದುಕೊಂಡು ನೋಡಿದಾಗ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮ ಈ ಸೇತುವೆಯನ್ನು ನಿರ್ಮಿಸಿದ್ದ’ ಎಂದು ಚೆಡ್ಡಿಗಳು ಅರಚುತ್ತಿರುವುದು ಎಷ್ಟು ಹಾಸ್ಯಾಸ್ಪದವಾಗಿ ಕಾಣಿಸುತ್ತದಲ್ಲವೇ?!

26 ಸೆಪ್ಟೆಂಬರ್, 2007 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...