Homeಮುಖಪುಟನಾವು ಹಿಂಸೆ, ಗಲಭೆ ಬೆಂಬಲಿಸುವುದಿಲ್ಲ.. ಜಮಾ ಮಸೀದಿಯಲ್ಲಿ ಮೊಳಗಿತು ಶಾಂತಿಯ ಮಂತ್ರ..

ನಾವು ಹಿಂಸೆ, ಗಲಭೆ ಬೆಂಬಲಿಸುವುದಿಲ್ಲ.. ಜಮಾ ಮಸೀದಿಯಲ್ಲಿ ಮೊಳಗಿತು ಶಾಂತಿಯ ಮಂತ್ರ..

- Advertisement -
- Advertisement -

ನವದೆಹಲಿಯ ಜಮಾ ಮಸೀದಿಯಲ್ಲಿ ಸಿಎಎ ಮತ್ತು ಎನ್ಆರ್ ಸಿ ವಿರುದ್ಧ ಘೋಷಣೆಗಳು ಮೊಳಗಿದವು. ನಾವು ಹಿಂಸೆ, ಗಲಭೆ ಬೆಂಬಲಿಸುವವರು ಅಲ್ಲ, ಪ್ರಚೋದಿಸುವವರೂ ಅಲ್ಲ. ನಾವು ಶಾಂತಿಪ್ರಿಯರು ಎಂದು ಗಾಂಧಿಯ ಮಾರ್ಗದಲ್ಲಿ ಪ್ರತಿಭಟನೆ  ನಡೆಸಿದರು. ಹಿಂಸೆ, ವಿಭಜನೆ, ಆತಂಕ ಸೃಷ್ಟಿಸುವುದು ಮಹನೀಯರ ಲಕ್ಷಣವಾಗಿರಲಿಲ್ಲ ಎಂದು ಸಾರಿದರು.

ಕಾಂಗ್ರೆಸ್ ನಾಯಕಿ ಅಲ್ಕಾ ಲಂಬಾ ಮಾತನಾಡಿ, ದೇಶದಲ್ಲಿ ನಿರುದ್ಯೋಗ ಸಮಸ್ಯೆ ಜನರನ್ನು ಕಾಡುತ್ತಿದೆ. ಈ ಸಮಸ್ಯೆ ಬಗೆಹರಿಸುವುದು ಬಿಟ್ಟು ಪ್ರಧಾನಿ ನರೇದ್ರ ಮೋದಿ ಮತ್ತೊಮ್ಮೆ ಜನರನ್ನು ಸರದಿಯ ಸಾಲಿನಲ್ಲಿ ನಿಲ್ಲುವಂತೆ ಮಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಎನ್ ಪಿಎ, ಎನ್ಆರ್ ಸಿ ಮತ್ತು ಸಿಎಎ ಇನ್ನೊಂದು ನೋಟು ಅಮಾನ್ಯೀಕರಣ. ಪ್ರಧಾನಿಗಳು ವಾಸ್ತವ ಪರಿಸ್ಥಿತಿಯ ಬಗ್ಗೆ ಮಾತನಾಡಲಿ. ಅದು ಬಿಟ್ಟು ಜನರನ್ನು ಕ್ಯೂನಲ್ಲಿ ನಿಲ್ಲುವಂತೆ ಮಾಡುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವವರು, ಎನ್ಆರ್ ಸಿ, ಸಿಎಎ ಅವಶ್ಯಕತೆ ಇದೆಯೇ ಎಂಬ ಬಗ್ಗೆ ಪ್ರಶ್ನಿಸಬೇಕು. ದೊಡ್ಡ ದನಿಯಲ್ಲಿ ಕೇಳಬೇಕು. ಪ್ರಜಾಪ್ರಭುತ್ವ ಮತ್ತು ಸಂವಿಧಾನದಲ್ಲಿ ವ್ಯಕ್ತಪಡಿಸಿರುವ ಆಶಯಗಳಿಗೆ ಧಕ್ಕೆ ಉಂಟಾಗುತ್ತಿರುವ ಸಂದರ್ಭದಲ್ಲಿ ಪ್ರತಿಯೊಬ್ಬರೂ ಕೇಂದ್ರದ ಜನವಿರೋಧಿ ನೀತಿಗಳನ್ನು ಖಂಡಿಸಬೇಕು ಎಂದು ಕರೆ ನೀಡಿದರು.

ಜಮಾ ಮಸೀದಿಯಲ್ಲಿ ಕೇಂದ್ರ ಸರ್ಕಾರದ ಸಿಎಎ, ಎನ್ಆರ್ ಸಿ ಹೊಸ ಕಾಯ್ದೆಗಳ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಹಾಕಿದರು. ಯಾವುದೇ ಕಾರಣಕ್ಕೂ ಈ ಕಾಯ್ದೆಗಳನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು. ದೇಶಕ್ಕೆ ಎನ್ ಆರ್ ಸಿ, ಸಿಎಎ, ಎನ್ ಪಿಎ ಬೇಕಾಗಿಲ್ಲ. ಉದ್ಯೋಗ ಬೇಕು. ಜನರಿಗೆ ಶಾಂತಿ ನೆಮ್ಮದಿಯ ಅವಶ್ಯಕತೆ ಇದೆ. ಸಂವಿಧಾನ ಉಳಿಸಿ ಭಾರತ ವಿಭಿಸುವುದಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

ಮಾಜಿ ಶಾಸಕ ಶೋಯಿಬ್ ಇಕ್ಬಾಲ್ ಮಾತನಾಡಿ ನಮ್ಮದು ಅಹಿಂಸಾತ್ಮಕ ಹೋರಾಟ. ನಮಗೆ ಹಿಂಸಾ ವಾದದಲ್ಲಿ ನಂಬಿಕೆ ಇಲ್ಲ. ಅಹಿಂಸೆಯ ನೆಲೆಯಲ್ಲಿ ಶಾಂತಿಯುತ ಹೋರಾಟ ಮುಂದುವರಿಸುತ್ತೇವೆ. ಆದರೆ ಕೆಲವರು ನಮ್ಮ ಶಾಂತಿಯುತ ಪ್ರತಿಭಟನೆಯನ್ನು ಕದಡುತ್ತಿದ್ದಾರೆ. ಶಾಂತಿ ಕದಡುವವರು ನಮ್ಮ ಸಂಘಟನೆಗೆ ಸೇರಿದವರಲ್ಲ. ಅವರು ಹೋರಾಟವನ್ನು ದಿಕ್ಕುತಪ್ಪಿಸುವವರು. ಅವರ ಬಗ್ಗೆ ಎಚ್ಚರ ಬೇಕು. ನಾವು ಹಿಂಸೆಯನ್ನು ಇಷ್ಟಪಡುವುದಿಲ್ಲ. ಗಲಭೆಯನ್ನು ಪ್ರಚೋದಿಸುವುದಿಲ್ಲ. ನಾವು ಶಾಂತಿಪ್ರಿಯರು ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...